Homeಮುಖಪುಟರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ...

ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

- Advertisement -
- Advertisement -

ಯುಎಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯ ಹೊಸ ವರದಿಯ ಪ್ರಕಾರ, 2018 ರ ಜನವರಿಯಲ್ಲಿ ಮಹಾರಾಷ್ಟ್ರದ ಭೀಮಾ-ಕೋರೆಗಾಂವ್‌ನಲ್ಲಿ ಹಿಂಸಾಚಾರ ನಡೆದ ಕೆಲವು ದಿನಗಳ ನಂತರ ಕಾರ್ಯಕರ್ತ ರೋಣಾ ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ಹ್ಯಾಕರ್ 22 “ದೋಷಾರೋಪಣೆ” ಫೈಲ್‌ಗಳನ್ನು ಸೇರಿಸಿದ್ದಾನೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಈ ಫೈಲ್‌ಗಳನ್ನು 15 ನವೆಂಬರ್ 2018 ರಿಂದ, ಆರಂಭದಲ್ಲಿ ಪುಣೆ ಪೊಲೀಸರು ಮತ್ತು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಮುಖ ಸಾಕ್ಷಿಯಾಗಿ ಉಲ್ಲೇಖಿಸಲಾಗಿದೆ. ಈ ಸಾಕ್ಷ್ಯಗಳನ್ನೇ ಬಳಸಿಕೊಂಡು ರೋಣಾ ವಿಲ್ಸನ್ ಮತ್ತು ವಕೀಲರು, ಶಿಕ್ಷಣ ತಜ್ಞರು ಮತ್ತು ಕಲಾವಿದರು ಸೇರಿದಂತೆ ಇತರ 15 ಜನರನ್ನು ಎರಡು ವರ್ಷಗಳಿಂದ ಜಾಮೀನು ಇಲ್ಲದೆ ಬಂಧಿಸಿ ಜೈಲಿಗೆ ಹಾಕಲಾಗಿದೆ.

ವಿಲ್ಸನ್‌ನ ಕಂಪ್ಯೂಟರ್‌ನಲ್ಲಿ ಅವರಾಗಲಿ ಅಥವಾ ಬೇರೆಯವರಾಗಲಿ ಫೈಲ್‌ಗಳನ್ನು ಸೃಷ್ಟಿಸಿಲ್ಲ, ಅದನ್ನು ಒಪನ್ ಮಾಡಿಲ್ಲ ಮತ್ತು ಬಳಸಿಲ್ಲ. ಆದರೆ ಅವುಗಳನ್ನು ಸೇರಿಸಲು ಹ್ಯಾಕರ್ ಸಾಫ್ಟ್‌ವೇರ್ ಬಳಸಿದ್ದಾರೆ ಎಂದು ಆರ್ಸೆನಲ್ ಕನ್ಸಲ್ಟಿಂಗ್‌ನ ಹೊಸ ವರದಿ ತಿಳಿಸಿದೆ. ನ್ಯಾಯಾಲಯದ ಆದೇಶದ ನಂತರ 2019 ರ ನವೆಂಬರ್‌ನಲ್ಲಿ ವಿಲ್ಸನ್ ಅವರ ಕಂಪ್ಯೂಟರ್‌ನ ಎಲೆಕ್ಟ್ರಾನಿಕ್ ನಕಲನ್ನು ಪೊಲೀಸರಿಂದ ಪಡೆದು ಆರ್ಸೆನಲ್ ಕನ್ಸಲ್ಟಿಂಗ್ ವಿಶ್ಲೇಷಣೆ ನಡೆಸಿ ಈ ತೀರ್ಮಾನಕ್ಕೆ ಬಂದಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯ ಆರ್ಸೆನಲ್ ಕನ್ಸಲ್ಟಿಂಗ್‌ “ಸಾಮಾಜಿಕ ಕಾರ್ಯಕರ್ತರಾದ ರೋನಾ ವಿಲ್ಸನ್ ಅವರ ಬಂಧನಕ್ಕೂ ಮೊದಲು, ಹ್ಯಾಕರ್‌ ಅವರ ಲ್ಯಾಪ್‌ಟಾಪ್‌ಗೆ ಪ್ರವೇಶ ಪಡೆದು ಮಾಲ್‌ವೇರ್‌‌ ಬಳಸಿ ಹತ್ತು ಪತ್ರಗಳನ್ನು ಸೇರಿಸಿದ್ದನು, ನಿರಂತರ ಎಲೆಕ್ಟ್ರಾನಿಕ್ ಬೇಹುಗಾರಿಕೆ ನಡೆಸಲಾಗಿತ್ತು ಎಂದು ಫೆಬ್ರವರಿ 2021 ರಲ್ಲಿ ಅದು ತನ್ನ ಮೊದಲ ವರದಿಯಲ್ಲಿ ತಿಳಿಸಿತ್ತು. ಎರಡನೆ ವರದಿಯು ಅದರ ಮುಂದುವರಿದ ಅಧ್ಯಯನದ ಭಾಗವಾಗಿದೆ.

ಎರಡನೆಯ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿದೆ. ವಿಲ್ಸನ್‌ರ ಕಂಪ್ಯೂಟರ್‌ನಲ್ಲಿನ ಫೈಲ್‌ಗಳಲ್ಲಿರುವ ಅಂಶಗಳ ಕಾನೂನುಬದ್ಧ ಸಂವಾದದ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಆ 24 ಫೈಲ್‌ಗಳಲ್ಲಿ 22 ಫೈಲ್‌ಗಳನ್ನು ನೇರವಾಗಿ ಸೇರಿಸಲಾಗಿದೆ ಮತ್ತು ಮೊದಲನೆ ವರದಿಯಲ್ಲಿನ ಹ್ಯಾಕರ್‌ನನ್ನು ಗುರುತಿಸಲಾಗಿದೆ ಎನ್ನಲಾಗಿದೆ.

ಹೆಚ್ಚುವರಿಯಾಗಿ ಸೇರಿಸಲಾಗಿರುವ 24 ಫೈಲ್‌ಗಳಲ್ಲಿ ಹೆಚ್ಚಾಗಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸದಸ್ಯರ ನಡುವಿನ ಉದ್ದೇಶಿತ ಪತ್ರವ್ಯವಹಾರ, ಹಣ ವರ್ಗಾವಣೆಯ ಕುರಿತು ಚರ್ಚೆಗಳು, ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೇಗೆ ಸುಧಾರಿಸುವುದು, ಪಕ್ಷದ ಸದಸ್ಯರು ಪರಸ್ಪರ ಸಂವಹನ ನಡೆಸುವಲ್ಲಿ ಎದುರಾಗುವ ತೊಂದರೆಗಳು, ರಾಜ್ಯ ದೌರ್ಜನ್ಯದ ಬಗ್ಗೆ ಕಾಳಜಿಗಳು ಮತ್ತು ಕೆಲವು ಮಾವೋವಾದಿ ಗೆರಿಲ್ಲಾಗಳ ಛಾಯಾಚಿತ್ರಗಳು ಇವೆ ಎಂದು ಆರ್ಟಿಕಲ್ 14 ವರದಿ ಮಾಡಿದೆ.

ಈ ಕುರಿತು ಎನ್‌ಐಎ ವಕ್ತಾರರಾದ ಜಯಾ ರಾಯ್‌ರವರನ್ನು ಆರ್ಟಿಕಲ್ 14 ದೂರವಾಣಿ ಮೂಲಕ ಸಂಪರ್ಕಿಸಿದಾಗ, “ನಮ್ಮ ತನಿಖೆ ಪೂರ್ಣಗೊಂಡಿದೆ. ನಾವು ಖಾಸಗಿ ಲ್ಯಾಬ್‌ಗಳಿಂದ ಬರುವ ವರದಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ನಮ್ಮ ವಿಧಿವಿಜ್ಞಾನ ಪರೀಕ್ಷೆಗೆ ಆರ್‌ಎಫ್‌ಎಸ್‌ಎಲ್ (ಪ್ರಾದೇಶಿಕ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ) ಮತ್ತು ಸಿಎಫ್‌ಎಸ್ಎಲ್ (ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯ) ದಂತೆ ಅಧಿಸೂಚಿತ ಪ್ರಯೋಗಾಲಯಗಳಿವೆ” ಎಂದು ತಿಳಿಸಿದ್ದಾರೆ.

15 ಸಾಮಾಜಿಕ ಕಾರ್ಯಕರ್ತರ ಮತ್ತು ಹೋರಾಟಗಾರರ ವಿರುದ್ಧದ ಈ ಭಯೋತ್ಪಾದನಾ ಪ್ರಕರಣವು ಹಲವು ವರ್ಷಗಳವರೆಗೆ ಎಳೆಯುವ ಸಾಧ್ಯತೆಯಿದ್ದರೂ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವತ್ತ ವಕೀಲರು ಗಮನ ಹರಿಸಿದ್ದಾರೆ. ಉದ್ದೇಶಪೂರ್ವಕವಾಗಿ ಡಿಜಿಟಲ್ ಸಾಕ್ಷ್ಯಗಳನ್ನು ಹ್ಯಾಕರ್‌ ಮೂಲಕ ಹೋರಾಟಗಾರರ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಸೇರಿಸಿ ಸಾಕ್ಷಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ವಾದಕ್ಕೆ ವಿಲ್ಸನ್ ಅವರ ವಕೀಲರು ಎರಡನೇ ಆರ್ಸೆನಲ್ ವರದಿಯನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಕೇಂದ್ರ ಸರ್ಕಾರವು ಈ ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿದೆ. ಅವರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ನ್ಯಾಯಲಯದ ವಿಚಾರಣೆಯಿಲ್ಲದೆ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇಡಲಾಗಿದೆ. ಸಾಮಾಜಿಕ ಕಾರ್ಯಕರ್ತರ ಈ ಬಂಧನವನ್ನು ಮಾನವ ಹಕ್ಕುಗಳ ಗುಂಪುಗಳು ಮತ್ತು ಕಾನೂನು ತಜ್ಞರು,  ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಕೇಂದ್ರ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯ ಪ್ರಯತ್ನವೆಂದು ಆರೋಪಿಸಿದ್ದಾರೆ.

ಪೊಲೀಸರು ಕಾರ್ಯಕರ್ತರು ಮತ್ತು ಕಾರ್ಯಕ್ರಮದ ಸಂಘಟಕರ ಮೇಲೆ ದಾಳಿ ನಡೆಸಿ ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಮತ್ತು ಇತರ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ಚಾರ್ಜ್‌ಶೀಟ್‌ನ ಪ್ರಕಾರ, ಭೀಮಾ ಕೋರೆಗಾಂವ್ ಕಾರ್ಯಕ್ರಮದ ಮುಖ್ಯ ಸಂಘಟಕರಲ್ಲಿ ಒಬ್ಬರಾದ ಸುಧೀರ್ ಧವಾಲೆ ಅವರೊಂದಿಗೆ ಸಂವಹನ ನಡೆಸಿದ್ದರಿಂದ ಪೊಲೀಸರು ರೋನಾ ವಿಲ್ಸನ್ ಮತ್ತು ವಕೀಲ ಸುರೇಂದ್ರ ಗ್ಯಾಡ್ಲಿಂಗ್ ಅವರ ಮೇಲೆ ದಾಳಿ ನಡೆಸಿದ್ದಾರೆ.

ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ದೊರೆತ ಫೈಲ್‌ಗಳು ಆತನ ವಿರುದ್ಧ, ವಕೀಲ-ಕಾರ್ಯಕರ್ತ ಸುಧಾ ಭಾರದ್ವಾಜ್, ಕವಿ ವರವರ ರಾವ್ ಮತ್ತು ಇತರರ ವಿರುದ್ಧ ಸಲ್ಲಿಸಿದ ಸಾಕ್ಷ್ಯಗಳಲ್ಲಿ ಸೇರಿವೆ.

ಕೃಪೆ: ಆರ್ಟಿಕಲ್ 14


ಇದನ್ನೂ ಓದಿ: ಹೊಸ ವಿಧಿವಿಜ್ಞಾನ ವರದಿ ಬಹಿರಂಗ; ರೋನಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...