Homeಮುಖಪುಟರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ...

ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

- Advertisement -
- Advertisement -

ಯುಎಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯ ಹೊಸ ವರದಿಯ ಪ್ರಕಾರ, 2018 ರ ಜನವರಿಯಲ್ಲಿ ಮಹಾರಾಷ್ಟ್ರದ ಭೀಮಾ-ಕೋರೆಗಾಂವ್‌ನಲ್ಲಿ ಹಿಂಸಾಚಾರ ನಡೆದ ಕೆಲವು ದಿನಗಳ ನಂತರ ಕಾರ್ಯಕರ್ತ ರೋಣಾ ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ಹ್ಯಾಕರ್ 22 “ದೋಷಾರೋಪಣೆ” ಫೈಲ್‌ಗಳನ್ನು ಸೇರಿಸಿದ್ದಾನೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಈ ಫೈಲ್‌ಗಳನ್ನು 15 ನವೆಂಬರ್ 2018 ರಿಂದ, ಆರಂಭದಲ್ಲಿ ಪುಣೆ ಪೊಲೀಸರು ಮತ್ತು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಮುಖ ಸಾಕ್ಷಿಯಾಗಿ ಉಲ್ಲೇಖಿಸಲಾಗಿದೆ. ಈ ಸಾಕ್ಷ್ಯಗಳನ್ನೇ ಬಳಸಿಕೊಂಡು ರೋಣಾ ವಿಲ್ಸನ್ ಮತ್ತು ವಕೀಲರು, ಶಿಕ್ಷಣ ತಜ್ಞರು ಮತ್ತು ಕಲಾವಿದರು ಸೇರಿದಂತೆ ಇತರ 15 ಜನರನ್ನು ಎರಡು ವರ್ಷಗಳಿಂದ ಜಾಮೀನು ಇಲ್ಲದೆ ಬಂಧಿಸಿ ಜೈಲಿಗೆ ಹಾಕಲಾಗಿದೆ.

ವಿಲ್ಸನ್‌ನ ಕಂಪ್ಯೂಟರ್‌ನಲ್ಲಿ ಅವರಾಗಲಿ ಅಥವಾ ಬೇರೆಯವರಾಗಲಿ ಫೈಲ್‌ಗಳನ್ನು ಸೃಷ್ಟಿಸಿಲ್ಲ, ಅದನ್ನು ಒಪನ್ ಮಾಡಿಲ್ಲ ಮತ್ತು ಬಳಸಿಲ್ಲ. ಆದರೆ ಅವುಗಳನ್ನು ಸೇರಿಸಲು ಹ್ಯಾಕರ್ ಸಾಫ್ಟ್‌ವೇರ್ ಬಳಸಿದ್ದಾರೆ ಎಂದು ಆರ್ಸೆನಲ್ ಕನ್ಸಲ್ಟಿಂಗ್‌ನ ಹೊಸ ವರದಿ ತಿಳಿಸಿದೆ. ನ್ಯಾಯಾಲಯದ ಆದೇಶದ ನಂತರ 2019 ರ ನವೆಂಬರ್‌ನಲ್ಲಿ ವಿಲ್ಸನ್ ಅವರ ಕಂಪ್ಯೂಟರ್‌ನ ಎಲೆಕ್ಟ್ರಾನಿಕ್ ನಕಲನ್ನು ಪೊಲೀಸರಿಂದ ಪಡೆದು ಆರ್ಸೆನಲ್ ಕನ್ಸಲ್ಟಿಂಗ್ ವಿಶ್ಲೇಷಣೆ ನಡೆಸಿ ಈ ತೀರ್ಮಾನಕ್ಕೆ ಬಂದಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯ ಆರ್ಸೆನಲ್ ಕನ್ಸಲ್ಟಿಂಗ್‌ “ಸಾಮಾಜಿಕ ಕಾರ್ಯಕರ್ತರಾದ ರೋನಾ ವಿಲ್ಸನ್ ಅವರ ಬಂಧನಕ್ಕೂ ಮೊದಲು, ಹ್ಯಾಕರ್‌ ಅವರ ಲ್ಯಾಪ್‌ಟಾಪ್‌ಗೆ ಪ್ರವೇಶ ಪಡೆದು ಮಾಲ್‌ವೇರ್‌‌ ಬಳಸಿ ಹತ್ತು ಪತ್ರಗಳನ್ನು ಸೇರಿಸಿದ್ದನು, ನಿರಂತರ ಎಲೆಕ್ಟ್ರಾನಿಕ್ ಬೇಹುಗಾರಿಕೆ ನಡೆಸಲಾಗಿತ್ತು ಎಂದು ಫೆಬ್ರವರಿ 2021 ರಲ್ಲಿ ಅದು ತನ್ನ ಮೊದಲ ವರದಿಯಲ್ಲಿ ತಿಳಿಸಿತ್ತು. ಎರಡನೆ ವರದಿಯು ಅದರ ಮುಂದುವರಿದ ಅಧ್ಯಯನದ ಭಾಗವಾಗಿದೆ.

ಎರಡನೆಯ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿದೆ. ವಿಲ್ಸನ್‌ರ ಕಂಪ್ಯೂಟರ್‌ನಲ್ಲಿನ ಫೈಲ್‌ಗಳಲ್ಲಿರುವ ಅಂಶಗಳ ಕಾನೂನುಬದ್ಧ ಸಂವಾದದ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಆ 24 ಫೈಲ್‌ಗಳಲ್ಲಿ 22 ಫೈಲ್‌ಗಳನ್ನು ನೇರವಾಗಿ ಸೇರಿಸಲಾಗಿದೆ ಮತ್ತು ಮೊದಲನೆ ವರದಿಯಲ್ಲಿನ ಹ್ಯಾಕರ್‌ನನ್ನು ಗುರುತಿಸಲಾಗಿದೆ ಎನ್ನಲಾಗಿದೆ.

ಹೆಚ್ಚುವರಿಯಾಗಿ ಸೇರಿಸಲಾಗಿರುವ 24 ಫೈಲ್‌ಗಳಲ್ಲಿ ಹೆಚ್ಚಾಗಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸದಸ್ಯರ ನಡುವಿನ ಉದ್ದೇಶಿತ ಪತ್ರವ್ಯವಹಾರ, ಹಣ ವರ್ಗಾವಣೆಯ ಕುರಿತು ಚರ್ಚೆಗಳು, ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೇಗೆ ಸುಧಾರಿಸುವುದು, ಪಕ್ಷದ ಸದಸ್ಯರು ಪರಸ್ಪರ ಸಂವಹನ ನಡೆಸುವಲ್ಲಿ ಎದುರಾಗುವ ತೊಂದರೆಗಳು, ರಾಜ್ಯ ದೌರ್ಜನ್ಯದ ಬಗ್ಗೆ ಕಾಳಜಿಗಳು ಮತ್ತು ಕೆಲವು ಮಾವೋವಾದಿ ಗೆರಿಲ್ಲಾಗಳ ಛಾಯಾಚಿತ್ರಗಳು ಇವೆ ಎಂದು ಆರ್ಟಿಕಲ್ 14 ವರದಿ ಮಾಡಿದೆ.

ಈ ಕುರಿತು ಎನ್‌ಐಎ ವಕ್ತಾರರಾದ ಜಯಾ ರಾಯ್‌ರವರನ್ನು ಆರ್ಟಿಕಲ್ 14 ದೂರವಾಣಿ ಮೂಲಕ ಸಂಪರ್ಕಿಸಿದಾಗ, “ನಮ್ಮ ತನಿಖೆ ಪೂರ್ಣಗೊಂಡಿದೆ. ನಾವು ಖಾಸಗಿ ಲ್ಯಾಬ್‌ಗಳಿಂದ ಬರುವ ವರದಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ನಮ್ಮ ವಿಧಿವಿಜ್ಞಾನ ಪರೀಕ್ಷೆಗೆ ಆರ್‌ಎಫ್‌ಎಸ್‌ಎಲ್ (ಪ್ರಾದೇಶಿಕ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ) ಮತ್ತು ಸಿಎಫ್‌ಎಸ್ಎಲ್ (ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯ) ದಂತೆ ಅಧಿಸೂಚಿತ ಪ್ರಯೋಗಾಲಯಗಳಿವೆ” ಎಂದು ತಿಳಿಸಿದ್ದಾರೆ.

15 ಸಾಮಾಜಿಕ ಕಾರ್ಯಕರ್ತರ ಮತ್ತು ಹೋರಾಟಗಾರರ ವಿರುದ್ಧದ ಈ ಭಯೋತ್ಪಾದನಾ ಪ್ರಕರಣವು ಹಲವು ವರ್ಷಗಳವರೆಗೆ ಎಳೆಯುವ ಸಾಧ್ಯತೆಯಿದ್ದರೂ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವತ್ತ ವಕೀಲರು ಗಮನ ಹರಿಸಿದ್ದಾರೆ. ಉದ್ದೇಶಪೂರ್ವಕವಾಗಿ ಡಿಜಿಟಲ್ ಸಾಕ್ಷ್ಯಗಳನ್ನು ಹ್ಯಾಕರ್‌ ಮೂಲಕ ಹೋರಾಟಗಾರರ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಸೇರಿಸಿ ಸಾಕ್ಷಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ವಾದಕ್ಕೆ ವಿಲ್ಸನ್ ಅವರ ವಕೀಲರು ಎರಡನೇ ಆರ್ಸೆನಲ್ ವರದಿಯನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಕೇಂದ್ರ ಸರ್ಕಾರವು ಈ ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿದೆ. ಅವರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ನ್ಯಾಯಲಯದ ವಿಚಾರಣೆಯಿಲ್ಲದೆ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇಡಲಾಗಿದೆ. ಸಾಮಾಜಿಕ ಕಾರ್ಯಕರ್ತರ ಈ ಬಂಧನವನ್ನು ಮಾನವ ಹಕ್ಕುಗಳ ಗುಂಪುಗಳು ಮತ್ತು ಕಾನೂನು ತಜ್ಞರು,  ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಕೇಂದ್ರ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯ ಪ್ರಯತ್ನವೆಂದು ಆರೋಪಿಸಿದ್ದಾರೆ.

ಪೊಲೀಸರು ಕಾರ್ಯಕರ್ತರು ಮತ್ತು ಕಾರ್ಯಕ್ರಮದ ಸಂಘಟಕರ ಮೇಲೆ ದಾಳಿ ನಡೆಸಿ ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಮತ್ತು ಇತರ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ಚಾರ್ಜ್‌ಶೀಟ್‌ನ ಪ್ರಕಾರ, ಭೀಮಾ ಕೋರೆಗಾಂವ್ ಕಾರ್ಯಕ್ರಮದ ಮುಖ್ಯ ಸಂಘಟಕರಲ್ಲಿ ಒಬ್ಬರಾದ ಸುಧೀರ್ ಧವಾಲೆ ಅವರೊಂದಿಗೆ ಸಂವಹನ ನಡೆಸಿದ್ದರಿಂದ ಪೊಲೀಸರು ರೋನಾ ವಿಲ್ಸನ್ ಮತ್ತು ವಕೀಲ ಸುರೇಂದ್ರ ಗ್ಯಾಡ್ಲಿಂಗ್ ಅವರ ಮೇಲೆ ದಾಳಿ ನಡೆಸಿದ್ದಾರೆ.

ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ದೊರೆತ ಫೈಲ್‌ಗಳು ಆತನ ವಿರುದ್ಧ, ವಕೀಲ-ಕಾರ್ಯಕರ್ತ ಸುಧಾ ಭಾರದ್ವಾಜ್, ಕವಿ ವರವರ ರಾವ್ ಮತ್ತು ಇತರರ ವಿರುದ್ಧ ಸಲ್ಲಿಸಿದ ಸಾಕ್ಷ್ಯಗಳಲ್ಲಿ ಸೇರಿವೆ.

ಕೃಪೆ: ಆರ್ಟಿಕಲ್ 14


ಇದನ್ನೂ ಓದಿ: ಹೊಸ ವಿಧಿವಿಜ್ಞಾನ ವರದಿ ಬಹಿರಂಗ; ರೋನಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...