Homeಮುಖಪುಟರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ...

ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

- Advertisement -
- Advertisement -

ಯುಎಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯ ಹೊಸ ವರದಿಯ ಪ್ರಕಾರ, 2018 ರ ಜನವರಿಯಲ್ಲಿ ಮಹಾರಾಷ್ಟ್ರದ ಭೀಮಾ-ಕೋರೆಗಾಂವ್‌ನಲ್ಲಿ ಹಿಂಸಾಚಾರ ನಡೆದ ಕೆಲವು ದಿನಗಳ ನಂತರ ಕಾರ್ಯಕರ್ತ ರೋಣಾ ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ಹ್ಯಾಕರ್ 22 “ದೋಷಾರೋಪಣೆ” ಫೈಲ್‌ಗಳನ್ನು ಸೇರಿಸಿದ್ದಾನೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಈ ಫೈಲ್‌ಗಳನ್ನು 15 ನವೆಂಬರ್ 2018 ರಿಂದ, ಆರಂಭದಲ್ಲಿ ಪುಣೆ ಪೊಲೀಸರು ಮತ್ತು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಮುಖ ಸಾಕ್ಷಿಯಾಗಿ ಉಲ್ಲೇಖಿಸಲಾಗಿದೆ. ಈ ಸಾಕ್ಷ್ಯಗಳನ್ನೇ ಬಳಸಿಕೊಂಡು ರೋಣಾ ವಿಲ್ಸನ್ ಮತ್ತು ವಕೀಲರು, ಶಿಕ್ಷಣ ತಜ್ಞರು ಮತ್ತು ಕಲಾವಿದರು ಸೇರಿದಂತೆ ಇತರ 15 ಜನರನ್ನು ಎರಡು ವರ್ಷಗಳಿಂದ ಜಾಮೀನು ಇಲ್ಲದೆ ಬಂಧಿಸಿ ಜೈಲಿಗೆ ಹಾಕಲಾಗಿದೆ.

ವಿಲ್ಸನ್‌ನ ಕಂಪ್ಯೂಟರ್‌ನಲ್ಲಿ ಅವರಾಗಲಿ ಅಥವಾ ಬೇರೆಯವರಾಗಲಿ ಫೈಲ್‌ಗಳನ್ನು ಸೃಷ್ಟಿಸಿಲ್ಲ, ಅದನ್ನು ಒಪನ್ ಮಾಡಿಲ್ಲ ಮತ್ತು ಬಳಸಿಲ್ಲ. ಆದರೆ ಅವುಗಳನ್ನು ಸೇರಿಸಲು ಹ್ಯಾಕರ್ ಸಾಫ್ಟ್‌ವೇರ್ ಬಳಸಿದ್ದಾರೆ ಎಂದು ಆರ್ಸೆನಲ್ ಕನ್ಸಲ್ಟಿಂಗ್‌ನ ಹೊಸ ವರದಿ ತಿಳಿಸಿದೆ. ನ್ಯಾಯಾಲಯದ ಆದೇಶದ ನಂತರ 2019 ರ ನವೆಂಬರ್‌ನಲ್ಲಿ ವಿಲ್ಸನ್ ಅವರ ಕಂಪ್ಯೂಟರ್‌ನ ಎಲೆಕ್ಟ್ರಾನಿಕ್ ನಕಲನ್ನು ಪೊಲೀಸರಿಂದ ಪಡೆದು ಆರ್ಸೆನಲ್ ಕನ್ಸಲ್ಟಿಂಗ್ ವಿಶ್ಲೇಷಣೆ ನಡೆಸಿ ಈ ತೀರ್ಮಾನಕ್ಕೆ ಬಂದಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯ ಆರ್ಸೆನಲ್ ಕನ್ಸಲ್ಟಿಂಗ್‌ “ಸಾಮಾಜಿಕ ಕಾರ್ಯಕರ್ತರಾದ ರೋನಾ ವಿಲ್ಸನ್ ಅವರ ಬಂಧನಕ್ಕೂ ಮೊದಲು, ಹ್ಯಾಕರ್‌ ಅವರ ಲ್ಯಾಪ್‌ಟಾಪ್‌ಗೆ ಪ್ರವೇಶ ಪಡೆದು ಮಾಲ್‌ವೇರ್‌‌ ಬಳಸಿ ಹತ್ತು ಪತ್ರಗಳನ್ನು ಸೇರಿಸಿದ್ದನು, ನಿರಂತರ ಎಲೆಕ್ಟ್ರಾನಿಕ್ ಬೇಹುಗಾರಿಕೆ ನಡೆಸಲಾಗಿತ್ತು ಎಂದು ಫೆಬ್ರವರಿ 2021 ರಲ್ಲಿ ಅದು ತನ್ನ ಮೊದಲ ವರದಿಯಲ್ಲಿ ತಿಳಿಸಿತ್ತು. ಎರಡನೆ ವರದಿಯು ಅದರ ಮುಂದುವರಿದ ಅಧ್ಯಯನದ ಭಾಗವಾಗಿದೆ.

ಎರಡನೆಯ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿದೆ. ವಿಲ್ಸನ್‌ರ ಕಂಪ್ಯೂಟರ್‌ನಲ್ಲಿನ ಫೈಲ್‌ಗಳಲ್ಲಿರುವ ಅಂಶಗಳ ಕಾನೂನುಬದ್ಧ ಸಂವಾದದ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಆ 24 ಫೈಲ್‌ಗಳಲ್ಲಿ 22 ಫೈಲ್‌ಗಳನ್ನು ನೇರವಾಗಿ ಸೇರಿಸಲಾಗಿದೆ ಮತ್ತು ಮೊದಲನೆ ವರದಿಯಲ್ಲಿನ ಹ್ಯಾಕರ್‌ನನ್ನು ಗುರುತಿಸಲಾಗಿದೆ ಎನ್ನಲಾಗಿದೆ.

ಹೆಚ್ಚುವರಿಯಾಗಿ ಸೇರಿಸಲಾಗಿರುವ 24 ಫೈಲ್‌ಗಳಲ್ಲಿ ಹೆಚ್ಚಾಗಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸದಸ್ಯರ ನಡುವಿನ ಉದ್ದೇಶಿತ ಪತ್ರವ್ಯವಹಾರ, ಹಣ ವರ್ಗಾವಣೆಯ ಕುರಿತು ಚರ್ಚೆಗಳು, ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೇಗೆ ಸುಧಾರಿಸುವುದು, ಪಕ್ಷದ ಸದಸ್ಯರು ಪರಸ್ಪರ ಸಂವಹನ ನಡೆಸುವಲ್ಲಿ ಎದುರಾಗುವ ತೊಂದರೆಗಳು, ರಾಜ್ಯ ದೌರ್ಜನ್ಯದ ಬಗ್ಗೆ ಕಾಳಜಿಗಳು ಮತ್ತು ಕೆಲವು ಮಾವೋವಾದಿ ಗೆರಿಲ್ಲಾಗಳ ಛಾಯಾಚಿತ್ರಗಳು ಇವೆ ಎಂದು ಆರ್ಟಿಕಲ್ 14 ವರದಿ ಮಾಡಿದೆ.

ಈ ಕುರಿತು ಎನ್‌ಐಎ ವಕ್ತಾರರಾದ ಜಯಾ ರಾಯ್‌ರವರನ್ನು ಆರ್ಟಿಕಲ್ 14 ದೂರವಾಣಿ ಮೂಲಕ ಸಂಪರ್ಕಿಸಿದಾಗ, “ನಮ್ಮ ತನಿಖೆ ಪೂರ್ಣಗೊಂಡಿದೆ. ನಾವು ಖಾಸಗಿ ಲ್ಯಾಬ್‌ಗಳಿಂದ ಬರುವ ವರದಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ನಮ್ಮ ವಿಧಿವಿಜ್ಞಾನ ಪರೀಕ್ಷೆಗೆ ಆರ್‌ಎಫ್‌ಎಸ್‌ಎಲ್ (ಪ್ರಾದೇಶಿಕ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ) ಮತ್ತು ಸಿಎಫ್‌ಎಸ್ಎಲ್ (ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯ) ದಂತೆ ಅಧಿಸೂಚಿತ ಪ್ರಯೋಗಾಲಯಗಳಿವೆ” ಎಂದು ತಿಳಿಸಿದ್ದಾರೆ.

15 ಸಾಮಾಜಿಕ ಕಾರ್ಯಕರ್ತರ ಮತ್ತು ಹೋರಾಟಗಾರರ ವಿರುದ್ಧದ ಈ ಭಯೋತ್ಪಾದನಾ ಪ್ರಕರಣವು ಹಲವು ವರ್ಷಗಳವರೆಗೆ ಎಳೆಯುವ ಸಾಧ್ಯತೆಯಿದ್ದರೂ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವತ್ತ ವಕೀಲರು ಗಮನ ಹರಿಸಿದ್ದಾರೆ. ಉದ್ದೇಶಪೂರ್ವಕವಾಗಿ ಡಿಜಿಟಲ್ ಸಾಕ್ಷ್ಯಗಳನ್ನು ಹ್ಯಾಕರ್‌ ಮೂಲಕ ಹೋರಾಟಗಾರರ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಸೇರಿಸಿ ಸಾಕ್ಷಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ವಾದಕ್ಕೆ ವಿಲ್ಸನ್ ಅವರ ವಕೀಲರು ಎರಡನೇ ಆರ್ಸೆನಲ್ ವರದಿಯನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಕೇಂದ್ರ ಸರ್ಕಾರವು ಈ ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿದೆ. ಅವರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ನ್ಯಾಯಲಯದ ವಿಚಾರಣೆಯಿಲ್ಲದೆ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇಡಲಾಗಿದೆ. ಸಾಮಾಜಿಕ ಕಾರ್ಯಕರ್ತರ ಈ ಬಂಧನವನ್ನು ಮಾನವ ಹಕ್ಕುಗಳ ಗುಂಪುಗಳು ಮತ್ತು ಕಾನೂನು ತಜ್ಞರು,  ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಕೇಂದ್ರ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯ ಪ್ರಯತ್ನವೆಂದು ಆರೋಪಿಸಿದ್ದಾರೆ.

ಪೊಲೀಸರು ಕಾರ್ಯಕರ್ತರು ಮತ್ತು ಕಾರ್ಯಕ್ರಮದ ಸಂಘಟಕರ ಮೇಲೆ ದಾಳಿ ನಡೆಸಿ ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಮತ್ತು ಇತರ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ಚಾರ್ಜ್‌ಶೀಟ್‌ನ ಪ್ರಕಾರ, ಭೀಮಾ ಕೋರೆಗಾಂವ್ ಕಾರ್ಯಕ್ರಮದ ಮುಖ್ಯ ಸಂಘಟಕರಲ್ಲಿ ಒಬ್ಬರಾದ ಸುಧೀರ್ ಧವಾಲೆ ಅವರೊಂದಿಗೆ ಸಂವಹನ ನಡೆಸಿದ್ದರಿಂದ ಪೊಲೀಸರು ರೋನಾ ವಿಲ್ಸನ್ ಮತ್ತು ವಕೀಲ ಸುರೇಂದ್ರ ಗ್ಯಾಡ್ಲಿಂಗ್ ಅವರ ಮೇಲೆ ದಾಳಿ ನಡೆಸಿದ್ದಾರೆ.

ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ದೊರೆತ ಫೈಲ್‌ಗಳು ಆತನ ವಿರುದ್ಧ, ವಕೀಲ-ಕಾರ್ಯಕರ್ತ ಸುಧಾ ಭಾರದ್ವಾಜ್, ಕವಿ ವರವರ ರಾವ್ ಮತ್ತು ಇತರರ ವಿರುದ್ಧ ಸಲ್ಲಿಸಿದ ಸಾಕ್ಷ್ಯಗಳಲ್ಲಿ ಸೇರಿವೆ.

ಕೃಪೆ: ಆರ್ಟಿಕಲ್ 14


ಇದನ್ನೂ ಓದಿ: ಹೊಸ ವಿಧಿವಿಜ್ಞಾನ ವರದಿ ಬಹಿರಂಗ; ರೋನಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...