Homeಮುಖಪುಟಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ...

ಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ ಬಹಿರಂಗ

ಸ್ಟಾನ್‌ಸ್ವಾಮಿಯವರು ಕಸ್ಟಡಿಯಲ್ಲೇ ಸಾವಿಗೀಡಾಗಿದ್ದರು. ವರದಿ ಹೊರಬಿದ್ದ ಬಳಿಕ ರಾಜಕಾರಣಿಗಳು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿಯವರ ಡಿವೈಸ್‌ನೊಳಗೆ ಹ್ಯಾಕರ್‌ ನಕಲಿ ದಾಖಲೆಗಳನ್ನು ತುರುಕಿದ್ದಾನೆ ಎಂಬ ವರದಿಯು ಬೆಳಕಿಗೆ ಬಂದ ಬಳಿಕ ಹಲವಾರು ರಾಜಕಾರಣಿಗಳು, ಶಿಕ್ಷಣ ತಜ್ಞರು, ಹೋರಾಟಗಾರರು ಮತ್ತು ಸಾಮಾಜಿಕ ಸಂಘಟನೆಗಳ ಮುಖಂಡರು ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. “ಇದು ನ್ಯಾಯ ವ್ಯವಸ್ಥೆಗೆ ಕಳಂಕ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಪ್ರಜಾಪ್ರಭುತ್ವದ ದೇಶವು ತನ್ನದೇ ಆದ ರೀತಿಯಲ್ಲಿ ವರ್ತಿಸುತ್ತದೆಯೇ?” ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಅನೀಸ್ ಸೋಜ್ ಟ್ವೀಟ್ ಮಾಡಿದ್ದಾರೆ. “ನ್ಯಾಯಾಲಯಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದು ಅವರು ಮಾಡಬಹುದಾದ ಅತ್ಯುತ್ತಮ ಕಾರ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮಿಯವರ ಕುರಿತ ತನಿಖಾ ವರದಿಯನ್ನು ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಸಂಸ್ಥೆ ಆರ್ಸೆನಲ್ ಕನ್ಸಲ್ಟಿಂಗ್ ಬಿಡುಗಡೆ ಮಾಡಿದೆ. ಇತರ ಆರೋಪಿಗಳಾದ ಸುರೇಂದ್ರ ಗ್ಯಾಡ್ಲಿಂಗ್ ಮತ್ತು ರೋನಾ ವಿಲ್ಸನ್ ಅವರ ಬಗ್ಗೆ ಇದೇ ರೀತಿಯ ಸಂಗತಿಗಳನ್ನು ಈ ಹಿಂದೆ ಇದೇ ಸಂಸ್ಥೆ ಹೊರಗೆಡವಿತ್ತು.

ಜೂನ್ 2019ರಲ್ಲಿ ಅವರ ಡಿವೈಸ್‌ಅನ್ನು ಪೊಲೀಸರು ವಶಪಡಿಸಿಕೊಳ್ಳುವವರೆಗೆ ಸುಮಾರು ಐದು ವರ್ಷಗಳಿಂದ ಸ್ವಾಮಿಯವರ ಮೇಲೆ ಇಂತಹದೊಂದು ಪಿತೂರಿ ನಡೆದಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಹೊರಗೆಡವಿದೆ. ಆ ಅವಧಿಯಲ್ಲಿ, ಸ್ಟಾನ್‌ ಸ್ವಾಮಿಯವರ ಕಂಪ್ಯೂಟರ್‌ನ ಮೇಲೆ ಹ್ಯಾಕರ್‌ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದನು. ಡಜನ್‌ಗಟ್ಟಲೆ ಫೈಲ್‌ಗಳನ್ನು ಗುಪ್ತವಾಗಿ ಇರಿಸಿದನು. ಇದು ಸ್ವಾಮಿಯವರ ಗಮನಕ್ಕೆ ಬಂದಿರಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಬಂಧಿಸಲ್ಪಟ್ಟ ಸುಮಾರು ಒಂಬತ್ತು ತಿಂಗಳ ನಂತರ, ಕಳೆದ ವರ್ಷ ಜುಲೈ 5ರಂದು ಸ್ವಾಮಿಯವರು ಮುಂಬೈ ಆಸ್ಪತ್ರೆಯಲ್ಲಿ ಕಸ್ಟಡಿಯಲ್ಲಿದ್ದಾಗಲೇ ನಿಧನರಾಗಿದ್ದರು. 84 ವರ್ಷದ ಅವರು ಪಾರ್ಕಿನ್ಸನ್ ಕಾಯಿಲೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮುಂಬೈನ ತಲೋಜಾ ಜೈಲಿನಲ್ಲಿ ಕರೋನವೈರಸ್ ಸೋಂಕಿಗೆ ಒಳಗಾಗಿದ್ದರು.

ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಆರ್ಸೆನಲ್ ಕನ್ಸಲ್ಟಿಂಗ್‌ಗೆ ಭಾರತದ ಕ್ರಿಶ್ಚಿಯನ್ ಸಂಸ್ಥೆ ಜೆಸ್ಯೂಟ್ಸ್ ಮಂಗಳವಾರ ಧನ್ಯವಾದ ಸಲ್ಲಿಸಿದೆ.

“ನಾವು ಭಾರತದ ಜೆಸ್ಯೂಟ್‌ಗಳು. ಬಡವರ ಹಕ್ಕುಗಳ ರಕ್ಷಣೆಗಾಗಿ ಹೋರಾಡಿ ವಿವಿಧ ಜೈಲುಗಳಲ್ಲಿ ಕೊಳೆಯುತ್ತಿರುವವರೊಂದಿಗೆ, ವಿಶೇಷವಾಗಿ ಬಿಕೆ 16 [ಭೀಮಾ ಕೋರೆಗಾಂವ್] ಪ್ರಕರಣದಲ್ಲಿ ಆಧಾರವಿಲ್ಲದೆ ಬಂಧನದಲ್ಲಿ ಇರುವವರೊಂದಿಗೆ  ಇರುತ್ತೇವೆ. ಬಡವರಿಗೆ ಮತ್ತು ಅಂಚಿನಲ್ಲಿರುವವರಿಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ” ಎಂದು ಸಂಸ್ಥೆ ತಿಳಿಸಿದೆ.

“ಸ್ವಾಮಿಯವರು ಸಾಂಸ್ಥಿಕ ಹತ್ಯೆಗೆ ಬಲಿಯಾಗಿರುವುದನ್ನು ಮರೆಯಬಾರದು” ಎಂದು ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಟ್ವೀಟ್ ಮಾಡಿದೆ.

“ಹ್ಯಾಕಿಂಗ್ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಪಷ್ಟ ನಿಲುವು ತಾಳುತ್ತದೆಯೇ? ನ್ಯಾಯಾಲಯಗಳು ಫೋರೆನ್ಸಿಕ್ ವಿಶ್ಲೇಷಣೆಯನ್ನು ಪರಿಗಣಿಸುತ್ತವೆಯೇ” ಎಂದು ಪತ್ರಕರ್ತ ರಾಜದೀಪ್ ಸರ್ದೇಸಾಯಿ ಪ್ರಶ್ನಿಸಿದ್ದಾರೆ.

ಇತಿಹಾಸಕಾರ ಆಡ್ರೆ ಟ್ರುಶ್ಕೆ ಟ್ವೀಟ್ ಮಾಡಿದ್ದು, “ದೀನದಲಿತರಿಗಾಗಿ ಹೋರಾಡಿದ, ಇಳಿವಯಸ್ಸಿನ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಪಾದ್ರಿಯ ವಿರುದ್ಧ ಪುರಾವೆಗಳನ್ನು ಭಾರತೀಯ ಸರ್ಕಾರ ಸೃಷ್ಟಿಮಾಡಿದೆ. ಆ ಸುಳ್ಳು ಸಾಕ್ಷಿಗಳ ಆಧಾರದಲ್ಲಿ ಅವರನ್ನು ಜೈಲಿಗೆ ಹಾಕಲಾಯಿತು. ಅವರು ಸಾಯುವವರೆಗೂ ವೈದ್ಯಕೀಯ ಸೇವೆಯಿಂದ ವಂಚಿತರಾದರು” ಎಂದು ವಿಷಾದಿಸಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, “ಬಹಿರಂಗಗೊಂಡಿರುವ ಸಂಗತಿಯು ಆತಂಕಾರಿಯಾಗಿದೆ ಮತ್ತು ಭಯಾನಕವಾಗಿದೆ” ಎಂದು ಬಣ್ಣಿಸಿದ್ದಾರೆ.

“ಈ ರೀತಿಯಾಗಿ ಸಾಕ್ಷಿಗಳನ್ನು ತುರುಕುವುದು ಸಾಧ್ಯವಾದರೆ, ಸರ್ಕಾರವು ಎಲ್ಲಾ ರೀತಿಯ ಆರೋಪಗಳ ಮೇಲೆ ಅನೇಕ ಜನರನ್ನು ಕಂಬಿ ಹಿಂದೆ ಹಾಕಬಹುದು” ಎಂದು ಅವರು ಟೀಕಿಸಿದ್ದಾರೆ. “ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಲ್ಲಿದ್ದಾಗ ಸ್ಟಾನ್ ಸ್ವಾಮಿ ಸಾವನ್ನಪ್ಪಿದ್ದಾರೆ. ಇತರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ನ್ಯಾಯಾಲಯಗಳು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸ್ವಾಮಿಯವರ ಕಂಪ್ಯೂಟರ್‌ನಿಂದ 24,000 ಫೈಲ್‌ಗಳು ಮತ್ತು ಫೋಲ್ಡರ್‌ಗಳನ್ನು ತನ್ನ ಸರ್ವರ್‌ಗೆ ನಕಲಿಸಲು ಹ್ಯಾಕರ್‌‌ WinSCP ಸಾಧನ ಬಳಿಸಿದ್ದಾನೆ” ಎಂದು ಆರ್ಸೆನಲ್ ಕನ್ಸಲ್ಟಿಂಗ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...