Homeಮುಖಪುಟಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ...

ಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ ಬಹಿರಂಗ

ಸ್ಟಾನ್‌ಸ್ವಾಮಿಯವರು ಕಸ್ಟಡಿಯಲ್ಲೇ ಸಾವಿಗೀಡಾಗಿದ್ದರು. ವರದಿ ಹೊರಬಿದ್ದ ಬಳಿಕ ರಾಜಕಾರಣಿಗಳು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿಯವರ ಡಿವೈಸ್‌ನೊಳಗೆ ಹ್ಯಾಕರ್‌ ನಕಲಿ ದಾಖಲೆಗಳನ್ನು ತುರುಕಿದ್ದಾನೆ ಎಂಬ ವರದಿಯು ಬೆಳಕಿಗೆ ಬಂದ ಬಳಿಕ ಹಲವಾರು ರಾಜಕಾರಣಿಗಳು, ಶಿಕ್ಷಣ ತಜ್ಞರು, ಹೋರಾಟಗಾರರು ಮತ್ತು ಸಾಮಾಜಿಕ ಸಂಘಟನೆಗಳ ಮುಖಂಡರು ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. “ಇದು ನ್ಯಾಯ ವ್ಯವಸ್ಥೆಗೆ ಕಳಂಕ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಪ್ರಜಾಪ್ರಭುತ್ವದ ದೇಶವು ತನ್ನದೇ ಆದ ರೀತಿಯಲ್ಲಿ ವರ್ತಿಸುತ್ತದೆಯೇ?” ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಅನೀಸ್ ಸೋಜ್ ಟ್ವೀಟ್ ಮಾಡಿದ್ದಾರೆ. “ನ್ಯಾಯಾಲಯಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದು ಅವರು ಮಾಡಬಹುದಾದ ಅತ್ಯುತ್ತಮ ಕಾರ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮಿಯವರ ಕುರಿತ ತನಿಖಾ ವರದಿಯನ್ನು ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಸಂಸ್ಥೆ ಆರ್ಸೆನಲ್ ಕನ್ಸಲ್ಟಿಂಗ್ ಬಿಡುಗಡೆ ಮಾಡಿದೆ. ಇತರ ಆರೋಪಿಗಳಾದ ಸುರೇಂದ್ರ ಗ್ಯಾಡ್ಲಿಂಗ್ ಮತ್ತು ರೋನಾ ವಿಲ್ಸನ್ ಅವರ ಬಗ್ಗೆ ಇದೇ ರೀತಿಯ ಸಂಗತಿಗಳನ್ನು ಈ ಹಿಂದೆ ಇದೇ ಸಂಸ್ಥೆ ಹೊರಗೆಡವಿತ್ತು.

ಜೂನ್ 2019ರಲ್ಲಿ ಅವರ ಡಿವೈಸ್‌ಅನ್ನು ಪೊಲೀಸರು ವಶಪಡಿಸಿಕೊಳ್ಳುವವರೆಗೆ ಸುಮಾರು ಐದು ವರ್ಷಗಳಿಂದ ಸ್ವಾಮಿಯವರ ಮೇಲೆ ಇಂತಹದೊಂದು ಪಿತೂರಿ ನಡೆದಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಹೊರಗೆಡವಿದೆ. ಆ ಅವಧಿಯಲ್ಲಿ, ಸ್ಟಾನ್‌ ಸ್ವಾಮಿಯವರ ಕಂಪ್ಯೂಟರ್‌ನ ಮೇಲೆ ಹ್ಯಾಕರ್‌ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದನು. ಡಜನ್‌ಗಟ್ಟಲೆ ಫೈಲ್‌ಗಳನ್ನು ಗುಪ್ತವಾಗಿ ಇರಿಸಿದನು. ಇದು ಸ್ವಾಮಿಯವರ ಗಮನಕ್ಕೆ ಬಂದಿರಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಬಂಧಿಸಲ್ಪಟ್ಟ ಸುಮಾರು ಒಂಬತ್ತು ತಿಂಗಳ ನಂತರ, ಕಳೆದ ವರ್ಷ ಜುಲೈ 5ರಂದು ಸ್ವಾಮಿಯವರು ಮುಂಬೈ ಆಸ್ಪತ್ರೆಯಲ್ಲಿ ಕಸ್ಟಡಿಯಲ್ಲಿದ್ದಾಗಲೇ ನಿಧನರಾಗಿದ್ದರು. 84 ವರ್ಷದ ಅವರು ಪಾರ್ಕಿನ್ಸನ್ ಕಾಯಿಲೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮುಂಬೈನ ತಲೋಜಾ ಜೈಲಿನಲ್ಲಿ ಕರೋನವೈರಸ್ ಸೋಂಕಿಗೆ ಒಳಗಾಗಿದ್ದರು.

ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಆರ್ಸೆನಲ್ ಕನ್ಸಲ್ಟಿಂಗ್‌ಗೆ ಭಾರತದ ಕ್ರಿಶ್ಚಿಯನ್ ಸಂಸ್ಥೆ ಜೆಸ್ಯೂಟ್ಸ್ ಮಂಗಳವಾರ ಧನ್ಯವಾದ ಸಲ್ಲಿಸಿದೆ.

“ನಾವು ಭಾರತದ ಜೆಸ್ಯೂಟ್‌ಗಳು. ಬಡವರ ಹಕ್ಕುಗಳ ರಕ್ಷಣೆಗಾಗಿ ಹೋರಾಡಿ ವಿವಿಧ ಜೈಲುಗಳಲ್ಲಿ ಕೊಳೆಯುತ್ತಿರುವವರೊಂದಿಗೆ, ವಿಶೇಷವಾಗಿ ಬಿಕೆ 16 [ಭೀಮಾ ಕೋರೆಗಾಂವ್] ಪ್ರಕರಣದಲ್ಲಿ ಆಧಾರವಿಲ್ಲದೆ ಬಂಧನದಲ್ಲಿ ಇರುವವರೊಂದಿಗೆ  ಇರುತ್ತೇವೆ. ಬಡವರಿಗೆ ಮತ್ತು ಅಂಚಿನಲ್ಲಿರುವವರಿಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ” ಎಂದು ಸಂಸ್ಥೆ ತಿಳಿಸಿದೆ.

“ಸ್ವಾಮಿಯವರು ಸಾಂಸ್ಥಿಕ ಹತ್ಯೆಗೆ ಬಲಿಯಾಗಿರುವುದನ್ನು ಮರೆಯಬಾರದು” ಎಂದು ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಟ್ವೀಟ್ ಮಾಡಿದೆ.

“ಹ್ಯಾಕಿಂಗ್ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಪಷ್ಟ ನಿಲುವು ತಾಳುತ್ತದೆಯೇ? ನ್ಯಾಯಾಲಯಗಳು ಫೋರೆನ್ಸಿಕ್ ವಿಶ್ಲೇಷಣೆಯನ್ನು ಪರಿಗಣಿಸುತ್ತವೆಯೇ” ಎಂದು ಪತ್ರಕರ್ತ ರಾಜದೀಪ್ ಸರ್ದೇಸಾಯಿ ಪ್ರಶ್ನಿಸಿದ್ದಾರೆ.

ಇತಿಹಾಸಕಾರ ಆಡ್ರೆ ಟ್ರುಶ್ಕೆ ಟ್ವೀಟ್ ಮಾಡಿದ್ದು, “ದೀನದಲಿತರಿಗಾಗಿ ಹೋರಾಡಿದ, ಇಳಿವಯಸ್ಸಿನ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಪಾದ್ರಿಯ ವಿರುದ್ಧ ಪುರಾವೆಗಳನ್ನು ಭಾರತೀಯ ಸರ್ಕಾರ ಸೃಷ್ಟಿಮಾಡಿದೆ. ಆ ಸುಳ್ಳು ಸಾಕ್ಷಿಗಳ ಆಧಾರದಲ್ಲಿ ಅವರನ್ನು ಜೈಲಿಗೆ ಹಾಕಲಾಯಿತು. ಅವರು ಸಾಯುವವರೆಗೂ ವೈದ್ಯಕೀಯ ಸೇವೆಯಿಂದ ವಂಚಿತರಾದರು” ಎಂದು ವಿಷಾದಿಸಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, “ಬಹಿರಂಗಗೊಂಡಿರುವ ಸಂಗತಿಯು ಆತಂಕಾರಿಯಾಗಿದೆ ಮತ್ತು ಭಯಾನಕವಾಗಿದೆ” ಎಂದು ಬಣ್ಣಿಸಿದ್ದಾರೆ.

“ಈ ರೀತಿಯಾಗಿ ಸಾಕ್ಷಿಗಳನ್ನು ತುರುಕುವುದು ಸಾಧ್ಯವಾದರೆ, ಸರ್ಕಾರವು ಎಲ್ಲಾ ರೀತಿಯ ಆರೋಪಗಳ ಮೇಲೆ ಅನೇಕ ಜನರನ್ನು ಕಂಬಿ ಹಿಂದೆ ಹಾಕಬಹುದು” ಎಂದು ಅವರು ಟೀಕಿಸಿದ್ದಾರೆ. “ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಲ್ಲಿದ್ದಾಗ ಸ್ಟಾನ್ ಸ್ವಾಮಿ ಸಾವನ್ನಪ್ಪಿದ್ದಾರೆ. ಇತರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ನ್ಯಾಯಾಲಯಗಳು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸ್ವಾಮಿಯವರ ಕಂಪ್ಯೂಟರ್‌ನಿಂದ 24,000 ಫೈಲ್‌ಗಳು ಮತ್ತು ಫೋಲ್ಡರ್‌ಗಳನ್ನು ತನ್ನ ಸರ್ವರ್‌ಗೆ ನಕಲಿಸಲು ಹ್ಯಾಕರ್‌‌ WinSCP ಸಾಧನ ಬಳಿಸಿದ್ದಾನೆ” ಎಂದು ಆರ್ಸೆನಲ್ ಕನ್ಸಲ್ಟಿಂಗ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...