Homeಮುಖಪುಟಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ...

ಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ ಬಹಿರಂಗ

ಸ್ಟಾನ್‌ಸ್ವಾಮಿಯವರು ಕಸ್ಟಡಿಯಲ್ಲೇ ಸಾವಿಗೀಡಾಗಿದ್ದರು. ವರದಿ ಹೊರಬಿದ್ದ ಬಳಿಕ ರಾಜಕಾರಣಿಗಳು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿಯವರ ಡಿವೈಸ್‌ನೊಳಗೆ ಹ್ಯಾಕರ್‌ ನಕಲಿ ದಾಖಲೆಗಳನ್ನು ತುರುಕಿದ್ದಾನೆ ಎಂಬ ವರದಿಯು ಬೆಳಕಿಗೆ ಬಂದ ಬಳಿಕ ಹಲವಾರು ರಾಜಕಾರಣಿಗಳು, ಶಿಕ್ಷಣ ತಜ್ಞರು, ಹೋರಾಟಗಾರರು ಮತ್ತು ಸಾಮಾಜಿಕ ಸಂಘಟನೆಗಳ ಮುಖಂಡರು ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. “ಇದು ನ್ಯಾಯ ವ್ಯವಸ್ಥೆಗೆ ಕಳಂಕ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಪ್ರಜಾಪ್ರಭುತ್ವದ ದೇಶವು ತನ್ನದೇ ಆದ ರೀತಿಯಲ್ಲಿ ವರ್ತಿಸುತ್ತದೆಯೇ?” ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಅನೀಸ್ ಸೋಜ್ ಟ್ವೀಟ್ ಮಾಡಿದ್ದಾರೆ. “ನ್ಯಾಯಾಲಯಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದು ಅವರು ಮಾಡಬಹುದಾದ ಅತ್ಯುತ್ತಮ ಕಾರ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮಿಯವರ ಕುರಿತ ತನಿಖಾ ವರದಿಯನ್ನು ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಸಂಸ್ಥೆ ಆರ್ಸೆನಲ್ ಕನ್ಸಲ್ಟಿಂಗ್ ಬಿಡುಗಡೆ ಮಾಡಿದೆ. ಇತರ ಆರೋಪಿಗಳಾದ ಸುರೇಂದ್ರ ಗ್ಯಾಡ್ಲಿಂಗ್ ಮತ್ತು ರೋನಾ ವಿಲ್ಸನ್ ಅವರ ಬಗ್ಗೆ ಇದೇ ರೀತಿಯ ಸಂಗತಿಗಳನ್ನು ಈ ಹಿಂದೆ ಇದೇ ಸಂಸ್ಥೆ ಹೊರಗೆಡವಿತ್ತು.

ಜೂನ್ 2019ರಲ್ಲಿ ಅವರ ಡಿವೈಸ್‌ಅನ್ನು ಪೊಲೀಸರು ವಶಪಡಿಸಿಕೊಳ್ಳುವವರೆಗೆ ಸುಮಾರು ಐದು ವರ್ಷಗಳಿಂದ ಸ್ವಾಮಿಯವರ ಮೇಲೆ ಇಂತಹದೊಂದು ಪಿತೂರಿ ನಡೆದಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಹೊರಗೆಡವಿದೆ. ಆ ಅವಧಿಯಲ್ಲಿ, ಸ್ಟಾನ್‌ ಸ್ವಾಮಿಯವರ ಕಂಪ್ಯೂಟರ್‌ನ ಮೇಲೆ ಹ್ಯಾಕರ್‌ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದನು. ಡಜನ್‌ಗಟ್ಟಲೆ ಫೈಲ್‌ಗಳನ್ನು ಗುಪ್ತವಾಗಿ ಇರಿಸಿದನು. ಇದು ಸ್ವಾಮಿಯವರ ಗಮನಕ್ಕೆ ಬಂದಿರಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಬಂಧಿಸಲ್ಪಟ್ಟ ಸುಮಾರು ಒಂಬತ್ತು ತಿಂಗಳ ನಂತರ, ಕಳೆದ ವರ್ಷ ಜುಲೈ 5ರಂದು ಸ್ವಾಮಿಯವರು ಮುಂಬೈ ಆಸ್ಪತ್ರೆಯಲ್ಲಿ ಕಸ್ಟಡಿಯಲ್ಲಿದ್ದಾಗಲೇ ನಿಧನರಾಗಿದ್ದರು. 84 ವರ್ಷದ ಅವರು ಪಾರ್ಕಿನ್ಸನ್ ಕಾಯಿಲೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮುಂಬೈನ ತಲೋಜಾ ಜೈಲಿನಲ್ಲಿ ಕರೋನವೈರಸ್ ಸೋಂಕಿಗೆ ಒಳಗಾಗಿದ್ದರು.

ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಆರ್ಸೆನಲ್ ಕನ್ಸಲ್ಟಿಂಗ್‌ಗೆ ಭಾರತದ ಕ್ರಿಶ್ಚಿಯನ್ ಸಂಸ್ಥೆ ಜೆಸ್ಯೂಟ್ಸ್ ಮಂಗಳವಾರ ಧನ್ಯವಾದ ಸಲ್ಲಿಸಿದೆ.

“ನಾವು ಭಾರತದ ಜೆಸ್ಯೂಟ್‌ಗಳು. ಬಡವರ ಹಕ್ಕುಗಳ ರಕ್ಷಣೆಗಾಗಿ ಹೋರಾಡಿ ವಿವಿಧ ಜೈಲುಗಳಲ್ಲಿ ಕೊಳೆಯುತ್ತಿರುವವರೊಂದಿಗೆ, ವಿಶೇಷವಾಗಿ ಬಿಕೆ 16 [ಭೀಮಾ ಕೋರೆಗಾಂವ್] ಪ್ರಕರಣದಲ್ಲಿ ಆಧಾರವಿಲ್ಲದೆ ಬಂಧನದಲ್ಲಿ ಇರುವವರೊಂದಿಗೆ  ಇರುತ್ತೇವೆ. ಬಡವರಿಗೆ ಮತ್ತು ಅಂಚಿನಲ್ಲಿರುವವರಿಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ” ಎಂದು ಸಂಸ್ಥೆ ತಿಳಿಸಿದೆ.

“ಸ್ವಾಮಿಯವರು ಸಾಂಸ್ಥಿಕ ಹತ್ಯೆಗೆ ಬಲಿಯಾಗಿರುವುದನ್ನು ಮರೆಯಬಾರದು” ಎಂದು ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಟ್ವೀಟ್ ಮಾಡಿದೆ.

“ಹ್ಯಾಕಿಂಗ್ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಪಷ್ಟ ನಿಲುವು ತಾಳುತ್ತದೆಯೇ? ನ್ಯಾಯಾಲಯಗಳು ಫೋರೆನ್ಸಿಕ್ ವಿಶ್ಲೇಷಣೆಯನ್ನು ಪರಿಗಣಿಸುತ್ತವೆಯೇ” ಎಂದು ಪತ್ರಕರ್ತ ರಾಜದೀಪ್ ಸರ್ದೇಸಾಯಿ ಪ್ರಶ್ನಿಸಿದ್ದಾರೆ.

ಇತಿಹಾಸಕಾರ ಆಡ್ರೆ ಟ್ರುಶ್ಕೆ ಟ್ವೀಟ್ ಮಾಡಿದ್ದು, “ದೀನದಲಿತರಿಗಾಗಿ ಹೋರಾಡಿದ, ಇಳಿವಯಸ್ಸಿನ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಪಾದ್ರಿಯ ವಿರುದ್ಧ ಪುರಾವೆಗಳನ್ನು ಭಾರತೀಯ ಸರ್ಕಾರ ಸೃಷ್ಟಿಮಾಡಿದೆ. ಆ ಸುಳ್ಳು ಸಾಕ್ಷಿಗಳ ಆಧಾರದಲ್ಲಿ ಅವರನ್ನು ಜೈಲಿಗೆ ಹಾಕಲಾಯಿತು. ಅವರು ಸಾಯುವವರೆಗೂ ವೈದ್ಯಕೀಯ ಸೇವೆಯಿಂದ ವಂಚಿತರಾದರು” ಎಂದು ವಿಷಾದಿಸಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, “ಬಹಿರಂಗಗೊಂಡಿರುವ ಸಂಗತಿಯು ಆತಂಕಾರಿಯಾಗಿದೆ ಮತ್ತು ಭಯಾನಕವಾಗಿದೆ” ಎಂದು ಬಣ್ಣಿಸಿದ್ದಾರೆ.

“ಈ ರೀತಿಯಾಗಿ ಸಾಕ್ಷಿಗಳನ್ನು ತುರುಕುವುದು ಸಾಧ್ಯವಾದರೆ, ಸರ್ಕಾರವು ಎಲ್ಲಾ ರೀತಿಯ ಆರೋಪಗಳ ಮೇಲೆ ಅನೇಕ ಜನರನ್ನು ಕಂಬಿ ಹಿಂದೆ ಹಾಕಬಹುದು” ಎಂದು ಅವರು ಟೀಕಿಸಿದ್ದಾರೆ. “ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಲ್ಲಿದ್ದಾಗ ಸ್ಟಾನ್ ಸ್ವಾಮಿ ಸಾವನ್ನಪ್ಪಿದ್ದಾರೆ. ಇತರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ನ್ಯಾಯಾಲಯಗಳು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸ್ವಾಮಿಯವರ ಕಂಪ್ಯೂಟರ್‌ನಿಂದ 24,000 ಫೈಲ್‌ಗಳು ಮತ್ತು ಫೋಲ್ಡರ್‌ಗಳನ್ನು ತನ್ನ ಸರ್ವರ್‌ಗೆ ನಕಲಿಸಲು ಹ್ಯಾಕರ್‌‌ WinSCP ಸಾಧನ ಬಳಿಸಿದ್ದಾನೆ” ಎಂದು ಆರ್ಸೆನಲ್ ಕನ್ಸಲ್ಟಿಂಗ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...