Homeಮುಖಪುಟಹಾದಿಯಾ ಅಕ್ರಮ ಬಂಧನ ಆರೋಪ: ಪೊಲೀಸ್ ಕ್ರಮದ ಮಾಹಿತಿ ಕೇಳಿದ ಕೇರಳ ಹೈಕೋರ್ಟ್‌

ಹಾದಿಯಾ ಅಕ್ರಮ ಬಂಧನ ಆರೋಪ: ಪೊಲೀಸ್ ಕ್ರಮದ ಮಾಹಿತಿ ಕೇಳಿದ ಕೇರಳ ಹೈಕೋರ್ಟ್‌

- Advertisement -
- Advertisement -

“ನನ್ನ ಮಗಳು ಹಾದಿಯಾಳನ್ನು ಆಕೆಯ ಪತಿ ಶಫಿನ್ ಜಹಾನ್ ಮತ್ತು ಇತರರು ಅಕ್ರಮವಾಗಿ ಬಂಧಿಸಿಟ್ಟಿದ್ದಾರೆ” ಎಂದು ಆರೋಪಿಸಿ ಹಾದಿಯಾ ತಂದೆ ಅಶೋಕನ್ ನೀಡಿದ ದೂರಿನ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಕೇರಳ ಹೈಕೋರ್ಟ್‌ ಆದೇಶಿಸಿದೆ ಎಂದು Bar and Bench ವರದಿ ಮಾಡಿದೆ.

ಅಶೋಕನ್ ಅವರು ಇನ್ಸ್‌ಪೆಕ್ಟರ್ ಜನರಲ್‌ಗೆ ದೂರು ಸಲ್ಲಿಸಿದ ನಂತರ ಪೊಲೀಸರು ಕೈಗೊಂಡ ಕ್ರಮಗಳ ಬಗ್ಗೆ ವಿವರಗಳನ್ನು ಪಡೆಯುವಂತೆ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಸಿ ಪ್ರದೀಪ್ ಕುಮಾರ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.

“ಕಳೆದ ಒಂದು ತಿಂಗಳಿನಿಂದ ನನ್ನ ಮಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಆಕೆ ಮಲಪ್ಪುರಂನಲ್ಲಿ ನಡೆಸುತ್ತಿದ್ದ ಹೊಮಿಯೋ ಕ್ಲೀನಿಕ್ ಕೂಡ ಬಾಗಿಲು ಮುಚ್ಚಿದೆ”. ಹಾಗಾಗಿ ಆಕೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಹೇಬಿಯಸ್ ಕಾರ್ಪಸ್ ರಿಟ್ ಹೊರಡಿಸಲು ಅಶೋಕನ್ ಕೋರಿದ್ದಾರೆ.

ತನ್ನ ದೂರಿನಲ್ಲಿ, “ಹಾದಿಯಾ ಮತ್ತು ಶಫಿನ್ ಜಹಾನ್ ಮದುವೆ ಕೇವಲ ಕಾಗದದಲ್ಲಿ ಮಾತ್ರ ಇತ್ತು. ಅವರ ನಡುವೆ ಯಾವುದೇ ವೈವಾಹಿಕ ಸಂಬಂಧವಿರಲಿಲ್ಲ. ವೈದ್ಯೆಯಾಗಿದ್ದ ಹಾದಿಯಾ ನಡೆಸುತ್ತಿದ್ದ ಕ್ಲೀನಿಕ್ ಕೂಡ ಮುಚ್ಚಲಾಗಿದೆ. ಆಕೆ, ಮಾನಸಿಕ ಮತ್ತು ದೈಹಿಕ ಅನಾರೋಗ್ಯದಿಂದ ಬಳಲುತ್ತಿದ್ದಳು” ಎಂದು ಅಶೋಕನ್ ಹೇಳಿದ್ದಾರೆ.

ಯಾರು ಈ ಹಾದಿಯಾ?

2016ರಲ್ಲಿ ಹೋಮಿಯೋಪಥಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಹಿಂದೂ ಹುಡುಗಿ ಹಾದಿಯಾ(ಅಖಿಲಾ ಅಶೋಕ್), ಶಫೀನ್ ಜಹಾನ್ ಎಂಬಾತನ್ನು ಪ್ರೀತಿಸಿ, ಇಸ್ಲಾಮ್‌ಗೆ ಮತಾಂತರಗೊಂಡು ಮದುವೆಯಾಗಿದ್ದರು. ಹಾದಿಯಾಳ ಪೋಷಕರು ಇದೊಂದು ‘ಲವ್ ಜಿಹಾದ್ ಕೇಸ್’ ಎಂದು ಆರೋಪಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯನ್ನು ಪೋಷಕರ ಸುಪರ್ದಿಗೆ ಒಪ್ಪಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಹಾದಿಯಾ ಪತಿ ಶಫೀನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಮೂಲಕ ಈ ಪ್ರಕರಣ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಹಾದಿಯಾ ಮತ್ತು ಆಕೆಯ ಪತಿಯ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಅವರ ಮದುವೆಯನ್ನು ಊರ್ಜಿತಗೊಳಿಸಿತ್ತು. ಹಾದಿಯಾಗೆ ಆಕೆಯ ಇಚ್ಚೆಯಂತೆ ಬಾಳಬಹುದು ಎಂದಿತ್ತು.

ಪತಿಗೆ ವಿಚ್ಚೇದನ ಕೊಟ್ಟು ಎರಡನೇ ಮದುವೆಯಾದ ಹಾದಿಯಾ?

ಕಳೆದ ಕೆಲ ದಿನಗಳ ಹಿಂದೆ ತನ್ನ ಪತಿ ಶಫೀನ್ ಜಹಾನ್‌ಗೆ ವಿಚ್ಚೇದನ ಕೊಟ್ಟು ಹಾದಿಯಾ ಮುಸ್ಲಿಂ ವ್ಯಕ್ತಿಯನ್ನೇ ಎರಡನೇ ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಮಗಳು ನಾಪತ್ತೆಯಾಗಿದ್ದಾಳೆ. ಆಕೆಯನ್ನು ಪತಿ ಶಫೀನ್ ಜಹಾನ್ ಮತ್ತು ಇತರರು ಬಂಧಿಸಿಟ್ಟಿದ್ದಾರೆ ಎಂದು ತಂದೆ ಅಶೋಕನ್ ದೂರು ನೀಡಿದ್ದಾರೆ. ಹಾದಿಯಾಳ ಎರಡನೇ ಮದುವೆ ಕುರಿತು ಖಚಿತ ಮಾಹಿತಿ ದೊರೆತಿಲ್ಲ.

ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ: ಜಯಸುಖ್ ಪಟೇಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...