Homeಮುಖಪುಟಹಾದಿಯಾ ಅಕ್ರಮ ಬಂಧನ ಆರೋಪ: ಪೊಲೀಸ್ ಕ್ರಮದ ಮಾಹಿತಿ ಕೇಳಿದ ಕೇರಳ ಹೈಕೋರ್ಟ್‌

ಹಾದಿಯಾ ಅಕ್ರಮ ಬಂಧನ ಆರೋಪ: ಪೊಲೀಸ್ ಕ್ರಮದ ಮಾಹಿತಿ ಕೇಳಿದ ಕೇರಳ ಹೈಕೋರ್ಟ್‌

- Advertisement -
- Advertisement -

“ನನ್ನ ಮಗಳು ಹಾದಿಯಾಳನ್ನು ಆಕೆಯ ಪತಿ ಶಫಿನ್ ಜಹಾನ್ ಮತ್ತು ಇತರರು ಅಕ್ರಮವಾಗಿ ಬಂಧಿಸಿಟ್ಟಿದ್ದಾರೆ” ಎಂದು ಆರೋಪಿಸಿ ಹಾದಿಯಾ ತಂದೆ ಅಶೋಕನ್ ನೀಡಿದ ದೂರಿನ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಕೇರಳ ಹೈಕೋರ್ಟ್‌ ಆದೇಶಿಸಿದೆ ಎಂದು Bar and Bench ವರದಿ ಮಾಡಿದೆ.

ಅಶೋಕನ್ ಅವರು ಇನ್ಸ್‌ಪೆಕ್ಟರ್ ಜನರಲ್‌ಗೆ ದೂರು ಸಲ್ಲಿಸಿದ ನಂತರ ಪೊಲೀಸರು ಕೈಗೊಂಡ ಕ್ರಮಗಳ ಬಗ್ಗೆ ವಿವರಗಳನ್ನು ಪಡೆಯುವಂತೆ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಸಿ ಪ್ರದೀಪ್ ಕುಮಾರ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.

“ಕಳೆದ ಒಂದು ತಿಂಗಳಿನಿಂದ ನನ್ನ ಮಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಆಕೆ ಮಲಪ್ಪುರಂನಲ್ಲಿ ನಡೆಸುತ್ತಿದ್ದ ಹೊಮಿಯೋ ಕ್ಲೀನಿಕ್ ಕೂಡ ಬಾಗಿಲು ಮುಚ್ಚಿದೆ”. ಹಾಗಾಗಿ ಆಕೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಹೇಬಿಯಸ್ ಕಾರ್ಪಸ್ ರಿಟ್ ಹೊರಡಿಸಲು ಅಶೋಕನ್ ಕೋರಿದ್ದಾರೆ.

ತನ್ನ ದೂರಿನಲ್ಲಿ, “ಹಾದಿಯಾ ಮತ್ತು ಶಫಿನ್ ಜಹಾನ್ ಮದುವೆ ಕೇವಲ ಕಾಗದದಲ್ಲಿ ಮಾತ್ರ ಇತ್ತು. ಅವರ ನಡುವೆ ಯಾವುದೇ ವೈವಾಹಿಕ ಸಂಬಂಧವಿರಲಿಲ್ಲ. ವೈದ್ಯೆಯಾಗಿದ್ದ ಹಾದಿಯಾ ನಡೆಸುತ್ತಿದ್ದ ಕ್ಲೀನಿಕ್ ಕೂಡ ಮುಚ್ಚಲಾಗಿದೆ. ಆಕೆ, ಮಾನಸಿಕ ಮತ್ತು ದೈಹಿಕ ಅನಾರೋಗ್ಯದಿಂದ ಬಳಲುತ್ತಿದ್ದಳು” ಎಂದು ಅಶೋಕನ್ ಹೇಳಿದ್ದಾರೆ.

ಯಾರು ಈ ಹಾದಿಯಾ?

2016ರಲ್ಲಿ ಹೋಮಿಯೋಪಥಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಹಿಂದೂ ಹುಡುಗಿ ಹಾದಿಯಾ(ಅಖಿಲಾ ಅಶೋಕ್), ಶಫೀನ್ ಜಹಾನ್ ಎಂಬಾತನ್ನು ಪ್ರೀತಿಸಿ, ಇಸ್ಲಾಮ್‌ಗೆ ಮತಾಂತರಗೊಂಡು ಮದುವೆಯಾಗಿದ್ದರು. ಹಾದಿಯಾಳ ಪೋಷಕರು ಇದೊಂದು ‘ಲವ್ ಜಿಹಾದ್ ಕೇಸ್’ ಎಂದು ಆರೋಪಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯನ್ನು ಪೋಷಕರ ಸುಪರ್ದಿಗೆ ಒಪ್ಪಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಹಾದಿಯಾ ಪತಿ ಶಫೀನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಮೂಲಕ ಈ ಪ್ರಕರಣ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಹಾದಿಯಾ ಮತ್ತು ಆಕೆಯ ಪತಿಯ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಅವರ ಮದುವೆಯನ್ನು ಊರ್ಜಿತಗೊಳಿಸಿತ್ತು. ಹಾದಿಯಾಗೆ ಆಕೆಯ ಇಚ್ಚೆಯಂತೆ ಬಾಳಬಹುದು ಎಂದಿತ್ತು.

ಪತಿಗೆ ವಿಚ್ಚೇದನ ಕೊಟ್ಟು ಎರಡನೇ ಮದುವೆಯಾದ ಹಾದಿಯಾ?

ಕಳೆದ ಕೆಲ ದಿನಗಳ ಹಿಂದೆ ತನ್ನ ಪತಿ ಶಫೀನ್ ಜಹಾನ್‌ಗೆ ವಿಚ್ಚೇದನ ಕೊಟ್ಟು ಹಾದಿಯಾ ಮುಸ್ಲಿಂ ವ್ಯಕ್ತಿಯನ್ನೇ ಎರಡನೇ ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಮಗಳು ನಾಪತ್ತೆಯಾಗಿದ್ದಾಳೆ. ಆಕೆಯನ್ನು ಪತಿ ಶಫೀನ್ ಜಹಾನ್ ಮತ್ತು ಇತರರು ಬಂಧಿಸಿಟ್ಟಿದ್ದಾರೆ ಎಂದು ತಂದೆ ಅಶೋಕನ್ ದೂರು ನೀಡಿದ್ದಾರೆ. ಹಾದಿಯಾಳ ಎರಡನೇ ಮದುವೆ ಕುರಿತು ಖಚಿತ ಮಾಹಿತಿ ದೊರೆತಿಲ್ಲ.

ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ: ಜಯಸುಖ್ ಪಟೇಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...