Homeಮುಖಪುಟಹಾದಿಯಾ ಅಕ್ರಮ ಬಂಧನ ಆರೋಪ: ಪೊಲೀಸ್ ಕ್ರಮದ ಮಾಹಿತಿ ಕೇಳಿದ ಕೇರಳ ಹೈಕೋರ್ಟ್‌

ಹಾದಿಯಾ ಅಕ್ರಮ ಬಂಧನ ಆರೋಪ: ಪೊಲೀಸ್ ಕ್ರಮದ ಮಾಹಿತಿ ಕೇಳಿದ ಕೇರಳ ಹೈಕೋರ್ಟ್‌

- Advertisement -
- Advertisement -

“ನನ್ನ ಮಗಳು ಹಾದಿಯಾಳನ್ನು ಆಕೆಯ ಪತಿ ಶಫಿನ್ ಜಹಾನ್ ಮತ್ತು ಇತರರು ಅಕ್ರಮವಾಗಿ ಬಂಧಿಸಿಟ್ಟಿದ್ದಾರೆ” ಎಂದು ಆರೋಪಿಸಿ ಹಾದಿಯಾ ತಂದೆ ಅಶೋಕನ್ ನೀಡಿದ ದೂರಿನ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಕೇರಳ ಹೈಕೋರ್ಟ್‌ ಆದೇಶಿಸಿದೆ ಎಂದು Bar and Bench ವರದಿ ಮಾಡಿದೆ.

ಅಶೋಕನ್ ಅವರು ಇನ್ಸ್‌ಪೆಕ್ಟರ್ ಜನರಲ್‌ಗೆ ದೂರು ಸಲ್ಲಿಸಿದ ನಂತರ ಪೊಲೀಸರು ಕೈಗೊಂಡ ಕ್ರಮಗಳ ಬಗ್ಗೆ ವಿವರಗಳನ್ನು ಪಡೆಯುವಂತೆ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಸಿ ಪ್ರದೀಪ್ ಕುಮಾರ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.

“ಕಳೆದ ಒಂದು ತಿಂಗಳಿನಿಂದ ನನ್ನ ಮಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಆಕೆ ಮಲಪ್ಪುರಂನಲ್ಲಿ ನಡೆಸುತ್ತಿದ್ದ ಹೊಮಿಯೋ ಕ್ಲೀನಿಕ್ ಕೂಡ ಬಾಗಿಲು ಮುಚ್ಚಿದೆ”. ಹಾಗಾಗಿ ಆಕೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಹೇಬಿಯಸ್ ಕಾರ್ಪಸ್ ರಿಟ್ ಹೊರಡಿಸಲು ಅಶೋಕನ್ ಕೋರಿದ್ದಾರೆ.

ತನ್ನ ದೂರಿನಲ್ಲಿ, “ಹಾದಿಯಾ ಮತ್ತು ಶಫಿನ್ ಜಹಾನ್ ಮದುವೆ ಕೇವಲ ಕಾಗದದಲ್ಲಿ ಮಾತ್ರ ಇತ್ತು. ಅವರ ನಡುವೆ ಯಾವುದೇ ವೈವಾಹಿಕ ಸಂಬಂಧವಿರಲಿಲ್ಲ. ವೈದ್ಯೆಯಾಗಿದ್ದ ಹಾದಿಯಾ ನಡೆಸುತ್ತಿದ್ದ ಕ್ಲೀನಿಕ್ ಕೂಡ ಮುಚ್ಚಲಾಗಿದೆ. ಆಕೆ, ಮಾನಸಿಕ ಮತ್ತು ದೈಹಿಕ ಅನಾರೋಗ್ಯದಿಂದ ಬಳಲುತ್ತಿದ್ದಳು” ಎಂದು ಅಶೋಕನ್ ಹೇಳಿದ್ದಾರೆ.

ಯಾರು ಈ ಹಾದಿಯಾ?

2016ರಲ್ಲಿ ಹೋಮಿಯೋಪಥಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಹಿಂದೂ ಹುಡುಗಿ ಹಾದಿಯಾ(ಅಖಿಲಾ ಅಶೋಕ್), ಶಫೀನ್ ಜಹಾನ್ ಎಂಬಾತನ್ನು ಪ್ರೀತಿಸಿ, ಇಸ್ಲಾಮ್‌ಗೆ ಮತಾಂತರಗೊಂಡು ಮದುವೆಯಾಗಿದ್ದರು. ಹಾದಿಯಾಳ ಪೋಷಕರು ಇದೊಂದು ‘ಲವ್ ಜಿಹಾದ್ ಕೇಸ್’ ಎಂದು ಆರೋಪಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯನ್ನು ಪೋಷಕರ ಸುಪರ್ದಿಗೆ ಒಪ್ಪಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಹಾದಿಯಾ ಪತಿ ಶಫೀನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಮೂಲಕ ಈ ಪ್ರಕರಣ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಹಾದಿಯಾ ಮತ್ತು ಆಕೆಯ ಪತಿಯ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಅವರ ಮದುವೆಯನ್ನು ಊರ್ಜಿತಗೊಳಿಸಿತ್ತು. ಹಾದಿಯಾಗೆ ಆಕೆಯ ಇಚ್ಚೆಯಂತೆ ಬಾಳಬಹುದು ಎಂದಿತ್ತು.

ಪತಿಗೆ ವಿಚ್ಚೇದನ ಕೊಟ್ಟು ಎರಡನೇ ಮದುವೆಯಾದ ಹಾದಿಯಾ?

ಕಳೆದ ಕೆಲ ದಿನಗಳ ಹಿಂದೆ ತನ್ನ ಪತಿ ಶಫೀನ್ ಜಹಾನ್‌ಗೆ ವಿಚ್ಚೇದನ ಕೊಟ್ಟು ಹಾದಿಯಾ ಮುಸ್ಲಿಂ ವ್ಯಕ್ತಿಯನ್ನೇ ಎರಡನೇ ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಮಗಳು ನಾಪತ್ತೆಯಾಗಿದ್ದಾಳೆ. ಆಕೆಯನ್ನು ಪತಿ ಶಫೀನ್ ಜಹಾನ್ ಮತ್ತು ಇತರರು ಬಂಧಿಸಿಟ್ಟಿದ್ದಾರೆ ಎಂದು ತಂದೆ ಅಶೋಕನ್ ದೂರು ನೀಡಿದ್ದಾರೆ. ಹಾದಿಯಾಳ ಎರಡನೇ ಮದುವೆ ಕುರಿತು ಖಚಿತ ಮಾಹಿತಿ ದೊರೆತಿಲ್ಲ.

ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ: ಜಯಸುಖ್ ಪಟೇಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...