Homeಮುಖಪುಟಹಾದಿಯಾ ಅಕ್ರಮ ಬಂಧನದಲ್ಲಿಲ್ಲ: ತಂದೆ ಅಶೋಕನ್ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌

ಹಾದಿಯಾ ಅಕ್ರಮ ಬಂಧನದಲ್ಲಿಲ್ಲ: ತಂದೆ ಅಶೋಕನ್ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌

- Advertisement -
- Advertisement -

ಕಳೆದ ತಿಂಗಳಿನಿಂದ ನನ್ನ ಮಗಳು ನಾಪತ್ತೆಯಾಗಿದ್ದು, ಆಕೆಯನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ಡಾ. ಹಾದಿಯಾ (ಅಖಿಲಾ) ಅವರ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕೇರಳ ಹೈಕೋರ್ಟ್ ಇಂದು(ಡಿ.15) ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಸಿ.ಪ್ರದೀಪ್ ಕುಮಾರ್ ಅವರನ್ನೊಳಗೊಂಡ ಕೇರಳ ಹೈಕೋರ್ಟ್‌ ವಿಭಾಗೀಯ ಪೀಠವು, ಹಾದಿಯಾ ಯಾವುದೇ ಅಕ್ರಮ ಬಂಧನದಲ್ಲಿಲ್ಲ. ಆಕೆ ತನ್ನ ಜೀವನವನ್ನು ಮುಕ್ತವಾಗಿ ನಡೆಸುತ್ತಿದ್ದಾರೆ ಎಂದು ಹೇಳಿದ್ದು, ಹೀಗಾಗಿ ಆಕೆಯ ತಂದೆಯ ಹೇಬಿಯಸ್ ಕಾರ್ಪಸ್ ಅರ್ಜಿ ಮುಂದುವರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಹಾದಿಯಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಹೇಳಿಕೆಯನ್ನು ಆಧರಿಸಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. “ತಾನು ಗಂಡನಿಂದ ವಿಚ್ಛೇದನ ಪಡೆದು ಮತ್ತೆ ಮದುವೆಯಾಗಿದ್ದೇನೆ. ಪ್ರಸ್ತುತ ತಿರುವನಂತಪುರದಲ್ಲಿ ವಾಸಿಸುತ್ತಿದ್ದೇನೆ ಎಂದು ಹಾದಿಯಾ ತಿಳಿಸಿದ್ದಾಗಿ ನ್ಯಾಯಾಲಯ ಹೇಳಿದೆ. ತಾನು ಪೋಷಕರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ತೋರಿಸಲು ಕರೆ ದಾಖಲೆಗಳ ಪುರಾವೆಯನ್ನು ಹಾದಿಯಾ ಸಲ್ಲಿಸಿದ್ದಾರೆ. ಇದಲ್ಲದೆ, ಆಕೆ ತನ್ನ ಪ್ರಸ್ತುತ ವಿಳಾಸದ ವಿವರ ಮತ್ತು ಸಂಪರ್ಕ ವಿವರಗಳನ್ನು ಕೂಡ ನೀಡಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.

“ನನ್ನ ಮಗಳು ಹಾದಿಯಾಳನ್ನು ಆಕೆಯ ಪತಿ ಶಫಿನ್ ಜಹಾನ್ ಮತ್ತು ಇತರರು ಅಕ್ರಮವಾಗಿ ಬಂಧಿಸಿಟ್ಟಿದ್ದಾರೆ” ಎಂದು ಆರೋಪಿಸಿ ಹಾದಿಯಾ ತಂದೆ ಅಶೋಕನ್ ದೂರು ನೀಡಿದ್ದರು.

“ಕಳೆದ ಒಂದು ತಿಂಗಳಿನಿಂದ ನನ್ನ ಮಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಆಕೆ ಮಲಪ್ಪುರಂನಲ್ಲಿ ನಡೆಸುತ್ತಿದ್ದ ಹೊಮಿಯೋ ಕ್ಲೀನಿಕ್ ಕೂಡ ಬಾಗಿಲು ಮುಚ್ಚಿದೆ”. ಹಾಗಾಗಿ ಆಕೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಹೇಬಿಯಸ್ ಕಾರ್ಪಸ್ ರಿಟ್ ಹೊರಡಿಸಲು ಅಶೋಕನ್ ಕೋರಿದ್ದರು.

ಅಶೋಕನ್ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣ ಸಂಬಂಧ ಪೊಲೀಸರು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕೇಳಿತ್ತು.

ಯಾರು ಈ ಹಾದಿಯಾ?

2016ರಲ್ಲಿ ಹೋಮಿಯೋಪಥಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಹಿಂದೂ ಹುಡುಗಿ ಹಾದಿಯಾ(ಅಖಿಲಾ ಅಶೋಕ್), ಶಫೀನ್ ಜಹಾನ್ ಎಂಬಾತನ್ನು ಪ್ರೀತಿಸಿ, ಇಸ್ಲಾಮ್‌ಗೆ ಮತಾಂತರಗೊಂಡು ಮದುವೆಯಾಗಿದ್ದರು. ಹಾದಿಯಾಳ ಪೋಷಕರು ಇದೊಂದು ‘ಲವ್ ಜಿಹಾದ್ ಕೇಸ್’ ಎಂದು ಆರೋಪಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯನ್ನು ಪೋಷಕರ ಸುಪರ್ದಿಗೆ ಒಪ್ಪಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಹಾದಿಯಾ ಪತಿ ಶಫೀನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಮೂಲಕ ಈ ಪ್ರಕರಣ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಹಾದಿಯಾ ಮತ್ತು ಆಕೆಯ ಪತಿಯ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಅವರ ಮದುವೆಯನ್ನು ಊರ್ಜಿತಗೊಳಿಸಿತ್ತು. ಹಾದಿಯಾಗೆ ಆಕೆಯ ಇಚ್ಚೆಯಂತೆ ಬಾಳಬಹುದು ಎಂದಿತ್ತು.

ಪತಿಗೆ ವಿಚ್ಚೇದನ ಕೊಟ್ಟು ಎರಡನೇ ಮದುವೆಯಾದ ಹಾದಿಯಾ

ಕಳೆದ ಕೆಲ ದಿನಗಳ ಹಿಂದೆ ತನ್ನ ಪತಿ ಶಫೀನ್ ಜಹಾನ್‌ಗೆ ವಿಚ್ಚೇದನ ಕೊಟ್ಟು ಹಾದಿಯಾ ಮುಸ್ಲಿಂ ವ್ಯಕ್ತಿಯನ್ನೇ ಎರಡನೇ ಮದುವೆಯಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬೆನ್ನಲ್ಲೇ ಮಗಳು ನಾಪತ್ತೆಯಾಗಿದ್ದಾಳೆ. ಆಕೆಯನ್ನು ಪತಿ ಶಫೀನ್ ಜಹಾನ್ ಮತ್ತು ಇತರರು ಬಂಧಿಸಿಟ್ಟಿದ್ದಾರೆ ಎಂದು ತಂದೆ ಅಶೋಕನ್ ದೂರು ನೀಡಿದ್ದರು. ಇದೀಗ ನ್ಯಾಯಾಲಯಕ್ಕೆ ಹಾದಿಯಾ ಕೊಟ್ಟ ಹೇಳಿಕೆಯಲ್ಲಿ ಆಕೆ ಮೊದಲ ಪತಿಗೆ ವಿಚ್ಚೇದನ ಕೊಟ್ಟು ಎರಡನೇ ಮದುವೆಯಾಗಿರುವುದು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: 24 ಗಂಟೆಯೊಳಗೆ ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲೀಟ್ ಮಾಡುವಂತೆ ಡಿ. ರೂಪಾಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...