Homeಮುಖಪುಟಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

ಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

- Advertisement -
- Advertisement -

ಹೈಟಿ ದೇಶದ ಸಿಟಿ ಸೋಲೈಲ್ ಪ್ರದೇಶದ ಗ್ಯಾಂಗ್‌ಸ್ಟರ್ ಒಬ್ಬ ತನ್ನ ಮಗು ಅಸ್ವಸ್ಥನಾಗಲು ಕೊಳಗೇರಿ ಪ್ರದೇಶದ ಜನರು ವಾಮಾಚಾರ ಮಾಡಿದ್ದಾರೆ ಎಂದು ಆರೋಪಿಸಿ ನಡೆಸಿದ ಹತ್ಯಾಕಾಂಡದಲ್ಲಿ ಸುಮಾರು 200 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಾರ್ಫ್ ಜೆರೆಮಿ ಗ್ಯಾಂಗ್‌ನ ನಾಯಕ ಮೊನೆಲ್‌ ಮಿಕಾನೊ ಫೆಲಿಕ್ಸ್‌ ತನ್ನ ಮಗು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಂತೆ ಕೊಳಗೇರಿ ಪ್ರದೇಶದ ಜನ ವಾಮಾಚಾರದ ಮೂಲಕ ಮಗುವಿಗೆ ಹಾನಿ ಮಾಡಲು ಯತ್ನಿಸಿದ್ದಾರೆ ಎಂದು ಹತ್ಯಾಕಾಂಡಕ್ಕೆ ಆದೇಶಿಸಿದ್ದಾನೆ. ಆ ಬಳಿಕ ಆತನ ತಂಡ ಸುಮಾರು 110 ಜನರನ್ನು ಹತ್ಯೆ ಮಾಡಿದೆ ಎಂದು ನಾಗರಿಕ ಸಂಘಟನೆ ಶಾಂತಿ ಮತ್ತು ಅಭಿವೃದ್ಧಿ ಸಮಿತಿ (ಸಿಪಿಡಿ) ತಿಳಿಸಿದೆ.

ಕಳೆದ ಶುಕ್ರವಾರ ಮತ್ತು ಶನಿವಾರ ಗ್ಯಾಂಗ್‌ಸ್ಟರ್ ಗುಂಪು ನಡೆಸಿದ ಹತ್ಯಾಕಾಂಡದಲ್ಲಿ ಬಲಿಯಾದ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಇತರರನ್ನು ರಕ್ಷಿಸಲು ಪ್ರಯತ್ನಿಸಿದ ಕೆಲವು ಯುವಕರು ಕೂಡ ಸಂಘರ್ಷದಲ್ಲಿ ಗಾಯಗೊಂಡಿದ್ದಾರೆ ಎಂದು ಸಿಪಿಡಿ ಹೇಳಿದೆ.

ಗ್ಯಾಂಗ್‌ಸ್ಟರ್ ಗುಂಪು 184 ಜನರನ್ನು ಹತ್ಯೆ ಮಾಡಿದೆ ಎಂದು ಯುಎನ್ ಹಕ್ಕುಗಳ ಆಯುಕ್ತ ವೋಲ್ಕರ್ ಟರ್ಕ್ ಹೇಳಿದ್ದಾರೆ. ಈ ಘಟನೆ ಈ ವರ್ಷದಲ್ಲಿ ಹತ್ಯೆಯಾದವರ ಸಂಖ್ಯೆಯನ್ನು 5 ಸಾವಿರಕ್ಕೆ ಏರಿಸಿದೆ ಎಂದು ತಿಳಿಸಿದ್ದಾರೆ.

ಗ್ಯಾಂಗ್‌ಸ್ಟರ್ ಗುಂಪು ನೂರಕ್ಕೂ ಹೆಚ್ಚು ಜನರನ್ನು ಕಗ್ಗೊಲೆ ಮಾಡಿದೆ. ಅವರ ದೇಹಗಳನ್ನು ವಿರೂಪಗೊಳಿಸಿ ಬೀದಿಯಲ್ಲಿ ಸುಟ್ಟು ಹಾಕಿದೆ ಎಂದು ವಿಶ್ವಾಸಾರ್ಹ ಮೂಲಗಳನ್ನು ಉಲ್ಲೇಖಿಸಿ ದಿ ಗಾರ್ಡಿಯನ್ ವರದಿ ಮಾಡಿದೆ.

ಹೈಟಿಯು ದಶಕಗಳ ಅಸ್ಥಿರತೆಯಿಂದ ಬಳಲುತ್ತಿದೆ. ಕಳೆದ ಫೆಬ್ರವರಿಯಲ್ಲಿ ಸಶಸ್ತ್ರ ಗುಂಪುಗಳು ಪ್ರಧಾನಿ ಏರಿಯಲ್ ಹೆನ್ರಿಯನ್ನು ಪದಚ್ಯುತಗೊಳಿಸಲು ರಾಜಧಾನಿ ಪೋರ್ಟ್-ಔ-ಪ್ರಿನ್ಸ್‌ನಲ್ಲಿ ಸಂಘಟಿತ ದಾಳಿಗಳನ್ನು ಪ್ರಾರಂಭಿಸಿದಾಗ ಪರಿಸ್ಥಿತಿಯು ಉಲ್ಬಣಗೊಂಡಿತ್ತು.

ಪೋರ್ಟ್-ಔ-ಪ್ರಿನ್ಸ್‌ನಲ್ಲಿ ಯುಎಸ್‌ ಮತ್ತು ಯುಎನ್‌ ಬೆಂಬಲಿತ ಕೀನ್ಯಾ ನೇತೃತ್ವದ ಪೊಲೀಸ್ ಪಡೆ ಕಾರ್ಯಾಚರಣೆ ನಡೆಸುತ್ತಿದ್ದರೂ, ಸಶಸ್ತ್ರ ಗುಂಪು ನಗರದ ಶೇ.80ರಷ್ಟು ನಿಯಂತ್ರಣ ಹೊಂದಿದೆ. ಇದರಿಂದ ಸಂಘರ್ಷ, ಹಿಂಸಾಚಾರ ನಡೆಯುತ್ತಲೇ ಇರುತ್ತದೆ.

ವಿಶ್ವಸಂಸ್ಥೆಯ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್‌ ಅಕ್ಟೋಬರ್‌ನಲ್ಲಿ ನೀಡಿದ ಅಂಕಿ ಅಂಶಗಳ ಪ್ರಕಾರ, ಹೈಟಿಯಲ್ಲಿ 700,000 ಕ್ಕಿಂತ ಹೆಚ್ಚು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ. ಅವರಲ್ಲಿ ಅರ್ಧದಷ್ಟು ಮಕ್ಕಳು ಇದ್ದಾರೆ.

ಇದನ್ನೂ ಓದಿ : ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...