Homeಮುಖಪುಟಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

ಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

- Advertisement -
- Advertisement -

ಹೈಟಿ ದೇಶದ ಸಿಟಿ ಸೋಲೈಲ್ ಪ್ರದೇಶದ ಗ್ಯಾಂಗ್‌ಸ್ಟರ್ ಒಬ್ಬ ತನ್ನ ಮಗು ಅಸ್ವಸ್ಥನಾಗಲು ಕೊಳಗೇರಿ ಪ್ರದೇಶದ ಜನರು ವಾಮಾಚಾರ ಮಾಡಿದ್ದಾರೆ ಎಂದು ಆರೋಪಿಸಿ ನಡೆಸಿದ ಹತ್ಯಾಕಾಂಡದಲ್ಲಿ ಸುಮಾರು 200 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಾರ್ಫ್ ಜೆರೆಮಿ ಗ್ಯಾಂಗ್‌ನ ನಾಯಕ ಮೊನೆಲ್‌ ಮಿಕಾನೊ ಫೆಲಿಕ್ಸ್‌ ತನ್ನ ಮಗು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಂತೆ ಕೊಳಗೇರಿ ಪ್ರದೇಶದ ಜನ ವಾಮಾಚಾರದ ಮೂಲಕ ಮಗುವಿಗೆ ಹಾನಿ ಮಾಡಲು ಯತ್ನಿಸಿದ್ದಾರೆ ಎಂದು ಹತ್ಯಾಕಾಂಡಕ್ಕೆ ಆದೇಶಿಸಿದ್ದಾನೆ. ಆ ಬಳಿಕ ಆತನ ತಂಡ ಸುಮಾರು 110 ಜನರನ್ನು ಹತ್ಯೆ ಮಾಡಿದೆ ಎಂದು ನಾಗರಿಕ ಸಂಘಟನೆ ಶಾಂತಿ ಮತ್ತು ಅಭಿವೃದ್ಧಿ ಸಮಿತಿ (ಸಿಪಿಡಿ) ತಿಳಿಸಿದೆ.

ಕಳೆದ ಶುಕ್ರವಾರ ಮತ್ತು ಶನಿವಾರ ಗ್ಯಾಂಗ್‌ಸ್ಟರ್ ಗುಂಪು ನಡೆಸಿದ ಹತ್ಯಾಕಾಂಡದಲ್ಲಿ ಬಲಿಯಾದ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಇತರರನ್ನು ರಕ್ಷಿಸಲು ಪ್ರಯತ್ನಿಸಿದ ಕೆಲವು ಯುವಕರು ಕೂಡ ಸಂಘರ್ಷದಲ್ಲಿ ಗಾಯಗೊಂಡಿದ್ದಾರೆ ಎಂದು ಸಿಪಿಡಿ ಹೇಳಿದೆ.

ಗ್ಯಾಂಗ್‌ಸ್ಟರ್ ಗುಂಪು 184 ಜನರನ್ನು ಹತ್ಯೆ ಮಾಡಿದೆ ಎಂದು ಯುಎನ್ ಹಕ್ಕುಗಳ ಆಯುಕ್ತ ವೋಲ್ಕರ್ ಟರ್ಕ್ ಹೇಳಿದ್ದಾರೆ. ಈ ಘಟನೆ ಈ ವರ್ಷದಲ್ಲಿ ಹತ್ಯೆಯಾದವರ ಸಂಖ್ಯೆಯನ್ನು 5 ಸಾವಿರಕ್ಕೆ ಏರಿಸಿದೆ ಎಂದು ತಿಳಿಸಿದ್ದಾರೆ.

ಗ್ಯಾಂಗ್‌ಸ್ಟರ್ ಗುಂಪು ನೂರಕ್ಕೂ ಹೆಚ್ಚು ಜನರನ್ನು ಕಗ್ಗೊಲೆ ಮಾಡಿದೆ. ಅವರ ದೇಹಗಳನ್ನು ವಿರೂಪಗೊಳಿಸಿ ಬೀದಿಯಲ್ಲಿ ಸುಟ್ಟು ಹಾಕಿದೆ ಎಂದು ವಿಶ್ವಾಸಾರ್ಹ ಮೂಲಗಳನ್ನು ಉಲ್ಲೇಖಿಸಿ ದಿ ಗಾರ್ಡಿಯನ್ ವರದಿ ಮಾಡಿದೆ.

ಹೈಟಿಯು ದಶಕಗಳ ಅಸ್ಥಿರತೆಯಿಂದ ಬಳಲುತ್ತಿದೆ. ಕಳೆದ ಫೆಬ್ರವರಿಯಲ್ಲಿ ಸಶಸ್ತ್ರ ಗುಂಪುಗಳು ಪ್ರಧಾನಿ ಏರಿಯಲ್ ಹೆನ್ರಿಯನ್ನು ಪದಚ್ಯುತಗೊಳಿಸಲು ರಾಜಧಾನಿ ಪೋರ್ಟ್-ಔ-ಪ್ರಿನ್ಸ್‌ನಲ್ಲಿ ಸಂಘಟಿತ ದಾಳಿಗಳನ್ನು ಪ್ರಾರಂಭಿಸಿದಾಗ ಪರಿಸ್ಥಿತಿಯು ಉಲ್ಬಣಗೊಂಡಿತ್ತು.

ಪೋರ್ಟ್-ಔ-ಪ್ರಿನ್ಸ್‌ನಲ್ಲಿ ಯುಎಸ್‌ ಮತ್ತು ಯುಎನ್‌ ಬೆಂಬಲಿತ ಕೀನ್ಯಾ ನೇತೃತ್ವದ ಪೊಲೀಸ್ ಪಡೆ ಕಾರ್ಯಾಚರಣೆ ನಡೆಸುತ್ತಿದ್ದರೂ, ಸಶಸ್ತ್ರ ಗುಂಪು ನಗರದ ಶೇ.80ರಷ್ಟು ನಿಯಂತ್ರಣ ಹೊಂದಿದೆ. ಇದರಿಂದ ಸಂಘರ್ಷ, ಹಿಂಸಾಚಾರ ನಡೆಯುತ್ತಲೇ ಇರುತ್ತದೆ.

ವಿಶ್ವಸಂಸ್ಥೆಯ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್‌ ಅಕ್ಟೋಬರ್‌ನಲ್ಲಿ ನೀಡಿದ ಅಂಕಿ ಅಂಶಗಳ ಪ್ರಕಾರ, ಹೈಟಿಯಲ್ಲಿ 700,000 ಕ್ಕಿಂತ ಹೆಚ್ಚು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ. ಅವರಲ್ಲಿ ಅರ್ಧದಷ್ಟು ಮಕ್ಕಳು ಇದ್ದಾರೆ.

ಇದನ್ನೂ ಓದಿ : ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...