Homeಅಂತರಾಷ್ಟ್ರೀಯಹೈಟಿ ದೇಶದ ಅಧ್ಯಕ್ಷ ಜೊವೆನೆಲ್ ಮೊಯೆಸ್‌ ಬರ್ಬರ ಹತ್ಯೆ

ಹೈಟಿ ದೇಶದ ಅಧ್ಯಕ್ಷ ಜೊವೆನೆಲ್ ಮೊಯೆಸ್‌ ಬರ್ಬರ ಹತ್ಯೆ

- Advertisement -
- Advertisement -

ಹೈಟಿ ದೇಶದ ಅಧ್ಯಕ್ಷ ಜೊವೆನೆಲ್ ಮೊಯೆಸ್‌ ಅವರನ್ನು ದುಷ್ಕರ್ಮಿಗಳು ಇಂದು ಗುಂಡಿಕ್ಕಿ ಸಾಯಿಸಿದ್ದಾರೆ. ರಾಜಧಾನಿ ಪೋರ್ಟ್ ಎವ್‌ ಪ್ರಿನ್ಸ್‌ ನಗರದ  ಅಧ್ಯಕ್ಷರ ಖಾಸಗಿ ನಿವಾಸದಲ್ಲಿ ಅಲ್ಲಿಯ ಕಾಲಮಾನ ಮಂಗಳವಾರ ಮಧ್ಯರಾತ್ರಿ 1 ಗಂಟೆ ಹೊತ್ತಿಗೆ ಹತ್ಯೆ ನಡೆದಿದೆ.  ಅಧ್ಯಕ್ಷ ಮೋಯೆಸ್‌ ಹತ್ಯೆಯಯನ್ನು ಹೈಟಿ ಸರ್ಕಾರ ಅಧಿಕೃತವಾಗಿ ಘೋಷಿಸಿದ್ದು ರಾಷ್ಟ್ರಾಧ್ಯಕ್ಷರ ಸಾವಿನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬಾರದೆಂದು  ನಿಯೋಜಿತ ಪ್ರಧಾನಿ ಮನವಿ ಮಾಡಿದ್ದಾರೆ. ಮೊಯೆಸ್‌ ಪತ್ನಿ ಮತ್ತು ದೇಶದ  ಪ್ರಥಮ ಮಹಿಳೆ ಮಾರ್ಟಿನ್ ಮೊಯೆಸ್‌ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಖಾಸಗಿ ಕಮಾಂಡೋಗಳ ಗುಂಪೊಂದು ಕೆರಿಬಿಯ್ ದೇಶದ ಅಧ್ಯಕ್ಷರ ನಿವಾಸಕ್ಕೆ ನುಗ್ಗಿ ಗುಂಡಿನ ದಾಳಿ ನಡೆಸಿ ಅಧ್ಯಕ್ಷರ ಹತ್ಯೆಗೈದಿದೆ ಎಂದು ಪತ್ರಕರ್ತ ಮೈಕೆಲ್ ಡೀಬರ್ಟ್ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ‘ ಹಂತಕರಲ್ಲಿ ಕೆಲವರು ಸ್ಪ್ಯಾನಿಷ್ ಭಾಷೆಯಲ್ಲಿ ಮಾತನಾಡುತ್ತಿದ್ದರು’ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ರಾಷ್ಟ್ರಾಧ್ಯಕ್ಷರ ಹತ್ಯೆ ಖಂಡಿಸಿ ಹೈಟಿ ಪ್ರಧಾನಿ ಡಾ. ಕ್ಲೌಡ್ ಜೋಸೆಫ್ ಹೇಳಿಕೆ ನೀಡಿದ್ದು ಸಾರ್ವಜನಿಕರಲ್ಲಿ ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ದೇಶದ ಭದ್ರತಾ ಪರಿಸ್ಥಿತಿಗೆ ಯಾವುದೇ ಆತಂಕವಿಲ್ಲ. ಹೈಟಿ ರಾಷ್ಟ್ರೀಯ ಪೊಲೀಸ್ ಮತ್ತು ಹೈಟಿ ಸಶಸ್ತ್ರ ಪಡೆಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ.. ಹಂತಕರ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪ್ರಧಾನಿ ಪ್ರಕಟಣೆ ಹೊರಡಿಸಿದ್ದಾರೆ.

ಈ ವರ್ಷ ಫೆಬ್ರುವರಿಯಲ್ಲಿ ಜೊವೆನೆಲ್ ಮೊಯೆಸ್‌ ಅವರ ಹತ್ಯೆಗೆ ಪ್ರಯತ್ನ ನಡೆದಿತ್ತು. ಪ್ರತಿಪಕ್ಷ ನಾಯಕರ ಬೆಂಬಲವಿರುವ ಓರ್ವ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ, ಕೆಲವರು ತನ್ನನ್ನು ಕೊಲ್ಲಲು ಮತ್ತು ಸರ್ಕಾರ ಉರುಳಿಸಲು ಯತ್ನಿಸಿದ್ದರು ಎಂದು ಜೊವೆನೆಲ್ ಮೋಯೆಸ್‌ ಆರೋಪಿಸಿದ್ದರು. ಈ ಸಂಬಂಧ ಓರ್ವ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ ಹತ್ಯೆಗ ಯತ್ನಿಸಿದ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಫೆಬ್ರುವರಿಯಲ್ಲಿ ಬಂಧಿತ ಸುಪ್ರೀಂಕೋರ್ಟ್ ನ್ಯಾಯಾಧೀಶ ಯವಿಕೆಲ್ ಡಬ್ರೆಜಿಲ್, ಮೊಯೆಸ್​ ಅವರನ್ನು ಕೆಳಗಿಳಿಸಿ ತಾತ್ಕಾಲಿಕ ಅಧ್ಯಕ್ಷರಾಗಲು ಸಿದ್ದತೆ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...