Homeಮುಖಪುಟಹಲಾಲ್ ಉತ್ಪನ್ನಗಳ ನಿಷೇಧ: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್‌ ನೊಟೀಸ್‌

ಹಲಾಲ್ ಉತ್ಪನ್ನಗಳ ನಿಷೇಧ: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್‌ ನೊಟೀಸ್‌

- Advertisement -
- Advertisement -

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ವಿತರಣೆ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರಕ್ಕೆ ವಿವರಣೆ ಕೋರಿ ಸುಪ್ರೀಂಕೋರ್ಟ್‌ ನೊಟೀಸ್‌ ಜಾರಿಗೊಳಿಸಿದೆ.

ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಜಮಿಯತ್ ಉಲಮಾ-ಎ-ಮಹಾರಾಷ್ಟ್ರ ಸಂಘಟನೆ, ಉತ್ತರಪ್ರದೇಶ ಸರಕಾರ ಹಲಾಲ್‌ ಉತ್ಪನ್ನಗಳ ಮಾರಾಟ, ತಯಾರಿಕೆ, ಸಂಗ್ರಹಣೆ  ನಿಷೇಧಿಸಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಹಲಾಲ್-ಪ್ರಮಾಣೀಕೃತ ಉತ್ಪನ್ನಗಳ ಕುರಿತು ನವೆಂಬರ್ 18ರಂದು ಉತ್ತರಪ್ರದೇಶ ಸರಕಾರ ಆದೇಶಿಸಿತ್ತು. ಆದೇಶವು ವಿವಾದಕ್ಕೆ ಕಾರಣವಾಗಿತ್ತು. ಹಲಾಲ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲು ರಾಜ್ಯಾದ್ಯಂತ ಮಾಲ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಹಲಾಲ್‌ ಉತ್ಪನ್ನಗಳ ನಿಷೇಧವು ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಇದು ಚಿಲ್ಲರೆ ವ್ಯಾಪಾರಿಗಳಿಗೆ ಗೊಂದಲವನ್ನು ಉಂಟುಮಾಡುವ ಮತ್ತು ಕಾನೂನುಬದ್ಧ ವ್ಯಾಪಾರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿತ್ತು.

ನಾವು ಆರ್ಟಿಕಲ್ 32 ರ ಅಡಿಯಲ್ಲಿ ಅದನ್ನು ಏಕೆ ಪರಿಗಣಿಸಬೇಕು? ಎಂದು ವಿಚಾರಣೆಯ ಆರಂಭದಲ್ಲಿ ನ್ಯಾಯಮೂರ್ತಿ ಗವಾಯಿ ಅವರು ಹಲಾಲ್ ಇಂಡಿಯಾವನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಿದ್ಧಾರ್ಥ್ ಅಗರ್ವಾಲ್ ಅವರಿಗೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು ಹಲಾಲ್ ನಿಷೇಧದಿಂದಾಗುವ ವ್ಯಾಪಾರ ಮತ್ತು ವಾಣಿಜ್ಯದ ಮೇಲೆ ಅದರ ಪ್ರಭಾವವನ್ನು ಉಲ್ಲೇಖಿಸಿದ್ದಾರೆ. ಒಂದು ನಿರ್ದಿಷ್ಟ ಆದೇಶವನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ, ಆ ತಡೆಯಾಜ್ಞೆಯು ದೇಶಾದ್ಯಂತ ಅನ್ವಯಿಸುತ್ತದೆ ಎಂದು ಕೋರ್ಟ್‌ ಹೇಳಿದೆ.

ಈ ಸ್ವರೂಪದ ಅಧಿಸೂಚನೆಯನ್ನು ನೀಡಬಹುದೇ ಮತ್ತು ಎರಡನೆಯದಾಗಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳ ಘಟಕಗಳನ್ನು ಕಾನೂನು ಕ್ರಮಕ್ಕೆ ಒಳಪಡಿಸಬಹುದೇ ಎಂಬುದರ ಕುರಿತು ನಿಮ್ಮ ಗಮನವು ಅಗತ್ಯವಿದೆ ಎಂದು ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.

ಜಮಿಯತ್ ಉಲಮಾ-ಎ-ಮಹಾರಾಷ್ಟ್ರವನ್ನು ಪ್ರತಿನಿಧಿಸುವ ಹಿರಿಯ ವಕೀಲ ರಾಜು ರಾಮಚಂದ್ರನ್ ಅವರು ಉತ್ತರ ಪ್ರದೇಶ ಸರಕಾರದ ನಿಷೇಧ ಆದೇಶವು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾದಿಸಿದರು.

ಆರ್ಟಿಕಲ್ 32 ರ ಅಡಿಯಲ್ಲಿ ಅರ್ಜಿಗಳನ್ನು ಪರಿಗಣಿಸಲು ಆರಂಭದಲ್ಲಿ ಕೋರ್ಟ್‌ ಮುಂದಾಗದಿದ್ದರೂ, ಪೀಠವು ಅಂತಿಮವಾಗಿ ನೋಟಿಸ್ ನೀಡಲು ನಿರ್ಧರಿಸಿತು. ನ್ಯಾಯಮೂರ್ತಿ ಗವಾಯಿ ಅವರು ಈ ಬಗ್ಗೆ ಉತ್ತರಪ್ರದೇಶ ಸರಕಾರಕ್ಕೆ ನೊಟೀಸ್ ಜಾರಿ ಮಾಡಿದ್ದಾರೆ.  ಆದರೆ ಆದೇಶಕ್ಕೆ ತಡೆ ನೀಡಲು ಕೋರ್ಟ್‌ ನಿರಾಕರಿಸಿದೆ, ಅಂತಹ ಮನವಿಯನ್ನು ಮುಂದಕ್ಕೆ ಪರಿಗಣಿಸಲಾಗುವುದು ಎಂದು ಪೀಠವು ಹೇಳಿದೆ.

ಏನಿದು ಆದೇಶ?

ಉತ್ತರಪ್ರದೇಶ ಸರ್ಕಾರ ಹಲಾಲ್ ಟ್ಯಾಗ್ ಹೊಂದಿರುವ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನ.18ರಂದು ನಿಷೇಧಿಸಿ ಆದೇಶ ಹೊರಡಿಸಿತ್ತು. ಆದರೆ ರಫ್ತಿಗಾಗಿ ತಯಾರಿಸಿದ ಉತ್ಪನ್ನಗಳು ಈ ನಿರ್ಬಂಧಗಳಿಗೆ ಒಳಪಟ್ಟಿರುವುದಿಲ್ಲ.

ಉತ್ತರಪ್ರದೇಶದೊಳಗೆ ಹಲಾಲ್ ಪ್ರಮಾಣೀಕೃತ ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಲಾಗಿತ್ತು.

ಆಹಾರ ಉತ್ಪನ್ನಗಳ ಹಲಾಲ್ ಪ್ರಮಾಣೀಕರಣವು ಒಂದು ಸಮಾನಾಂತರ ವ್ಯವಸ್ಥೆಯಾಗಿದ್ದು ಅದು ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿಸುತ್ತದೆ ಮತ್ತು ಆಹಾರ ಕಾನೂನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯ ಸೆಕ್ಷನ್ 89ರ ಅಡಿಯಲ್ಲಿ ಸಮರ್ಥನೀಯವಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಆಹಾರ ಪದಾರ್ಥಗಳ ಗುಣಮಟ್ಟವನ್ನು ನಿರ್ಧರಿಸುವ ಹಕ್ಕು ಸೆಕ್ಷನ್ 29ರಲ್ಲಿ ನೀಡಲಾದ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಮಾತ್ರ ಇರುತ್ತದೆ. ಅವರು ಕಾಯಿದೆಯ ನಿಬಂಧನೆಗಳ ಪ್ರಕಾರ ಸಂಬಂಧಿತ ಮಾನದಂಡಗಳನ್ನು ಪರಿಶೀಲಿಸುತ್ತಾರೆ ಎಂದು ಆದೇಶದಲ್ಲಿ ಹೇಳಲಾಗಿತ್ತು.

ಇದಲ್ಲದೆ ಚಿಲ್ಲರೆ ಮಾರಾಟಗಾರರಿಗೆ ನಕಲಿ ಹಲಾಲ್ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮಾರಾಟವನ್ನು ಹೆಚ್ಚಿಸಲು ಜನರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕಂಪನಿ ಮತ್ತು ಇತರ ಕೆಲವು ಸಂಸ್ಥೆಗಳ ವಿರುದ್ಧ ಲಕ್ನೋ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು. ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಜಮಿಯತ್ ಉಲ್ಲೆಮಾ ಹಿಂದ್ ಹಲಾಲ್ ಟ್ರಸ್ಟ್,  ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಸೇರಿ ಕೆಲವು ಸಂಸ್ಥೆಗಳ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು.

ಇದನ್ನು ಓದಿ: ಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...