Homeಮುಖಪುಟಹಲಾಲ್ ಉತ್ಪನ್ನಗಳ ನಿಷೇಧ: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್‌ ನೊಟೀಸ್‌

ಹಲಾಲ್ ಉತ್ಪನ್ನಗಳ ನಿಷೇಧ: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್‌ ನೊಟೀಸ್‌

- Advertisement -
- Advertisement -

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ವಿತರಣೆ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರಕ್ಕೆ ವಿವರಣೆ ಕೋರಿ ಸುಪ್ರೀಂಕೋರ್ಟ್‌ ನೊಟೀಸ್‌ ಜಾರಿಗೊಳಿಸಿದೆ.

ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಜಮಿಯತ್ ಉಲಮಾ-ಎ-ಮಹಾರಾಷ್ಟ್ರ ಸಂಘಟನೆ, ಉತ್ತರಪ್ರದೇಶ ಸರಕಾರ ಹಲಾಲ್‌ ಉತ್ಪನ್ನಗಳ ಮಾರಾಟ, ತಯಾರಿಕೆ, ಸಂಗ್ರಹಣೆ  ನಿಷೇಧಿಸಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಹಲಾಲ್-ಪ್ರಮಾಣೀಕೃತ ಉತ್ಪನ್ನಗಳ ಕುರಿತು ನವೆಂಬರ್ 18ರಂದು ಉತ್ತರಪ್ರದೇಶ ಸರಕಾರ ಆದೇಶಿಸಿತ್ತು. ಆದೇಶವು ವಿವಾದಕ್ಕೆ ಕಾರಣವಾಗಿತ್ತು. ಹಲಾಲ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲು ರಾಜ್ಯಾದ್ಯಂತ ಮಾಲ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಹಲಾಲ್‌ ಉತ್ಪನ್ನಗಳ ನಿಷೇಧವು ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಇದು ಚಿಲ್ಲರೆ ವ್ಯಾಪಾರಿಗಳಿಗೆ ಗೊಂದಲವನ್ನು ಉಂಟುಮಾಡುವ ಮತ್ತು ಕಾನೂನುಬದ್ಧ ವ್ಯಾಪಾರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿತ್ತು.

ನಾವು ಆರ್ಟಿಕಲ್ 32 ರ ಅಡಿಯಲ್ಲಿ ಅದನ್ನು ಏಕೆ ಪರಿಗಣಿಸಬೇಕು? ಎಂದು ವಿಚಾರಣೆಯ ಆರಂಭದಲ್ಲಿ ನ್ಯಾಯಮೂರ್ತಿ ಗವಾಯಿ ಅವರು ಹಲಾಲ್ ಇಂಡಿಯಾವನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಿದ್ಧಾರ್ಥ್ ಅಗರ್ವಾಲ್ ಅವರಿಗೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು ಹಲಾಲ್ ನಿಷೇಧದಿಂದಾಗುವ ವ್ಯಾಪಾರ ಮತ್ತು ವಾಣಿಜ್ಯದ ಮೇಲೆ ಅದರ ಪ್ರಭಾವವನ್ನು ಉಲ್ಲೇಖಿಸಿದ್ದಾರೆ. ಒಂದು ನಿರ್ದಿಷ್ಟ ಆದೇಶವನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ, ಆ ತಡೆಯಾಜ್ಞೆಯು ದೇಶಾದ್ಯಂತ ಅನ್ವಯಿಸುತ್ತದೆ ಎಂದು ಕೋರ್ಟ್‌ ಹೇಳಿದೆ.

ಈ ಸ್ವರೂಪದ ಅಧಿಸೂಚನೆಯನ್ನು ನೀಡಬಹುದೇ ಮತ್ತು ಎರಡನೆಯದಾಗಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳ ಘಟಕಗಳನ್ನು ಕಾನೂನು ಕ್ರಮಕ್ಕೆ ಒಳಪಡಿಸಬಹುದೇ ಎಂಬುದರ ಕುರಿತು ನಿಮ್ಮ ಗಮನವು ಅಗತ್ಯವಿದೆ ಎಂದು ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.

ಜಮಿಯತ್ ಉಲಮಾ-ಎ-ಮಹಾರಾಷ್ಟ್ರವನ್ನು ಪ್ರತಿನಿಧಿಸುವ ಹಿರಿಯ ವಕೀಲ ರಾಜು ರಾಮಚಂದ್ರನ್ ಅವರು ಉತ್ತರ ಪ್ರದೇಶ ಸರಕಾರದ ನಿಷೇಧ ಆದೇಶವು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾದಿಸಿದರು.

ಆರ್ಟಿಕಲ್ 32 ರ ಅಡಿಯಲ್ಲಿ ಅರ್ಜಿಗಳನ್ನು ಪರಿಗಣಿಸಲು ಆರಂಭದಲ್ಲಿ ಕೋರ್ಟ್‌ ಮುಂದಾಗದಿದ್ದರೂ, ಪೀಠವು ಅಂತಿಮವಾಗಿ ನೋಟಿಸ್ ನೀಡಲು ನಿರ್ಧರಿಸಿತು. ನ್ಯಾಯಮೂರ್ತಿ ಗವಾಯಿ ಅವರು ಈ ಬಗ್ಗೆ ಉತ್ತರಪ್ರದೇಶ ಸರಕಾರಕ್ಕೆ ನೊಟೀಸ್ ಜಾರಿ ಮಾಡಿದ್ದಾರೆ.  ಆದರೆ ಆದೇಶಕ್ಕೆ ತಡೆ ನೀಡಲು ಕೋರ್ಟ್‌ ನಿರಾಕರಿಸಿದೆ, ಅಂತಹ ಮನವಿಯನ್ನು ಮುಂದಕ್ಕೆ ಪರಿಗಣಿಸಲಾಗುವುದು ಎಂದು ಪೀಠವು ಹೇಳಿದೆ.

ಏನಿದು ಆದೇಶ?

ಉತ್ತರಪ್ರದೇಶ ಸರ್ಕಾರ ಹಲಾಲ್ ಟ್ಯಾಗ್ ಹೊಂದಿರುವ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನ.18ರಂದು ನಿಷೇಧಿಸಿ ಆದೇಶ ಹೊರಡಿಸಿತ್ತು. ಆದರೆ ರಫ್ತಿಗಾಗಿ ತಯಾರಿಸಿದ ಉತ್ಪನ್ನಗಳು ಈ ನಿರ್ಬಂಧಗಳಿಗೆ ಒಳಪಟ್ಟಿರುವುದಿಲ್ಲ.

ಉತ್ತರಪ್ರದೇಶದೊಳಗೆ ಹಲಾಲ್ ಪ್ರಮಾಣೀಕೃತ ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಲಾಗಿತ್ತು.

ಆಹಾರ ಉತ್ಪನ್ನಗಳ ಹಲಾಲ್ ಪ್ರಮಾಣೀಕರಣವು ಒಂದು ಸಮಾನಾಂತರ ವ್ಯವಸ್ಥೆಯಾಗಿದ್ದು ಅದು ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿಸುತ್ತದೆ ಮತ್ತು ಆಹಾರ ಕಾನೂನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯ ಸೆಕ್ಷನ್ 89ರ ಅಡಿಯಲ್ಲಿ ಸಮರ್ಥನೀಯವಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಆಹಾರ ಪದಾರ್ಥಗಳ ಗುಣಮಟ್ಟವನ್ನು ನಿರ್ಧರಿಸುವ ಹಕ್ಕು ಸೆಕ್ಷನ್ 29ರಲ್ಲಿ ನೀಡಲಾದ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಮಾತ್ರ ಇರುತ್ತದೆ. ಅವರು ಕಾಯಿದೆಯ ನಿಬಂಧನೆಗಳ ಪ್ರಕಾರ ಸಂಬಂಧಿತ ಮಾನದಂಡಗಳನ್ನು ಪರಿಶೀಲಿಸುತ್ತಾರೆ ಎಂದು ಆದೇಶದಲ್ಲಿ ಹೇಳಲಾಗಿತ್ತು.

ಇದಲ್ಲದೆ ಚಿಲ್ಲರೆ ಮಾರಾಟಗಾರರಿಗೆ ನಕಲಿ ಹಲಾಲ್ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮಾರಾಟವನ್ನು ಹೆಚ್ಚಿಸಲು ಜನರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕಂಪನಿ ಮತ್ತು ಇತರ ಕೆಲವು ಸಂಸ್ಥೆಗಳ ವಿರುದ್ಧ ಲಕ್ನೋ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು. ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಜಮಿಯತ್ ಉಲ್ಲೆಮಾ ಹಿಂದ್ ಹಲಾಲ್ ಟ್ರಸ್ಟ್,  ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಸೇರಿ ಕೆಲವು ಸಂಸ್ಥೆಗಳ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು.

ಇದನ್ನು ಓದಿ: ಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...