Homeಕರ್ನಾಟಕಹಲಾಲ್ ಎಂದು ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಹಿಂದೆಯೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ...

ಹಲಾಲ್ ಎಂದು ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಹಿಂದೆಯೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ – ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವು ನೀತಿಗಳು ಮತ್ತು ನಿರ್ಧಾರಗಳ ಕುರಿತು ಸರ್ಕಾರವನ್ನು ರಚನಾತ್ಮಕವಾಗಿ ಪ್ರಶ್ನಿಸುತ್ತವೆ. ಆದರೆ, ನಮ್ಮ ಸರ್ಕಾರದ ಬಜೆಟ್‌ನಲ್ಲಿ ರಚನಾತ್ಮಕ ಟೀಕೆಗಳಿಗೆ ಅವಕಾಶವೇ ಇಲ್ಲದಿರುವಾಗ ರಾಜ್ಯದ ಬಿಜೆಪಿ ನಾಯಕರು ಹಲಾಲ್ ಬಜೆಟ್ ಎಂಬ ಟೊಳ್ಳು ಟೀಕೆಯ ಮೊರೆ ಹೋಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದ್ದಾರೆ.

ಸ್ಟಿರಿಯೋಟೈಪ್ ಟೀಕೆಯ ಮೂಲಕ ಬಿಜೆಪಿಗರು ತಮ್ಮ ಬೌದ್ಧಿಕ ದಿವಾಳಿತನವನ್ನು ತಾವೇ ಪ್ರದರ್ಶನಕ್ಕೆ ಇಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು ಪ್ರಿಯಾಂಕ್ ಖರ್ಗೆ, ಅವರು ಮೌಲ್ಯಯುತ ರಾಜಕಾರಣಕ್ಕೆ ತಿಲಾಂಜಲಿ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬಜೆಟ್ ಬಗ್ಗೆ ಅರ್ಥಪೂರ್ಣ ಚರ್ಚೆ ಮಾಡಲು ಸಾಮರ್ಥ್ಯವಿಲ್ಲದ ಬಿಜೆಪಿಗೆ #HalalBudget ಕೊನೆಯ ಅಸ್ತ್ರವಾಗಿದೆ. ಹಿಂದೆ ಹೀಗೆಯೇ ಹಲಾಲ್, ಜಟ್ಕಾ ಕಟ್ ಎಂಬ ವಿಭಜನಾತ್ಮಕ ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಅಲ್ಲದೆ, ಬಿಜೆಪಿ ಪಕ್ಷವು ಬಣ ಬಡಿದಾಟದ ಹಲಾಲ್ ಕಟ್‌ನಿಂದಾಗಿ ಹಲವು ತುಂಡುಗಳಾಗಿದೆ. ಬಜೆಟ್ ಬಗ್ಗೆ ರಚನಾತ್ಮಕ ಟೀಕೆಗಳನ್ನು ಎದುರಿಸಲು ನಾವು ಸದಾ ಸಿದ್ದರಿದ್ದೇವೆ. ಚರ್ಚೆಗೆ ಮುಕ್ತವಾಗಿದ್ದು, ಉತ್ತರಿಸಲು ತಯಾರಿದ್ದೇವೆ. ಆದರೆ ಬಿಜೆಪಿ ಚರ್ಚೆಗೆ ಸಿದ್ದವಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಸಮಗ್ರ ಏಳಿಗೆಗೆ, ಆರ್ಥಿಕ ಸುಸ್ಥಿರತೆಗೆ, ಸಾಮಾಜಿಕ ಉನ್ನತಿಗೆ ನಮ್ಮ ಬಜೆಟ್ ಪೂರಕವಾಗಿರುವುದನ್ನು ಸಹಿಸದ ಬಿಜೆಪಿ ಸದಾ ಕನ್ನಡಿಗರನ್ನು ಅವಮಾನಿಸುವ ರಾಜಕಾರಣದಲ್ಲಿ ತೊಡಗಿರುವುದು ದುರಂತ. ಅರ್ಥಪೂರ್ಣ ಹೊಣೆಗಾರಿಕೆ ಪ್ರದರ್ಶಿಸಬೇಕಾದ ವಿರೋಧ ಪಕ್ಷವು ನೈತಿಕ ಹಾಗೂ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದಾಗ ರಾಜಕೀಯ ವ್ಯವಸ್ಥೆ ಮಾತ್ರವಲ್ಲ ಸಾಮಾಜಿಕ ಸ್ವಾಸ್ಥ್ಯವೂ ಕೆಡುತ್ತದೆ. ಇದಕ್ಕೆ ಬಿಜೆಪಿಯೇ ಸ್ಪಷ್ಟ ಉದಾಹರಣೆ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಈಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್

ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...