Homeಮುಖಪುಟಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

- Advertisement -
- Advertisement -

ಭಾರತೀಯ ತಿನಿಸುಗಳ ಅತಿ ದೊಡ್ಡ ರಫ್ತದಾರ ಬ್ರಾಂಡ್ ಆದ ಹಲ್ದಿರಾಮ್ಸ್ (Haldiram’s) ಕಂಪನಿ ಟ್ವಿಟರ್‌ನಲ್ಲಿ ಸಾಕಷ್ಟು ಚರ್ಚೆಗೊಳಗಾಗುತ್ತಿದೆ. ಉಪ್ಪಿನ ಕಾಯಿ ಪ್ಯಾಕೆಟ್ ಮೇಲೆ ಉರ್ದು ಭಾಷೆ ಏಕೆ ಬಳಸಿದ್ದಿರಿ ಎಂದು ಮೈಕ್ ಹಿಡಿದು ಪ್ರಶ್ನಿಸಿದ ಸುದರ್ಶನ್ ಟಿವಿ ಪತ್ರಕರ್ತೆಯನ್ನು ಹಲ್ದಿರಾಮ್ಸ್ ಉದ್ಯೋಗಿಯೊಬ್ಬರು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನೆಟ್ಟಿಗರು ಆ ಉದ್ಯೋಗಿಯ ಧೈರ್ಯವನ್ನು ಮೆಚ್ಚಿ ಪೋಸ್ಟ್ ಹಾಕುತ್ತಿದ್ದಾರೆ.

ಹಲ್ದಿರಾಮ್ಸ್ ಮಳಿಗೆಯಲ್ಲಿ ಬಲಪಂಥೀಯ ಬೆಂಬಲಿಗ ಮಾಧ್ಯಮವಾದ ಸುದರ್ಶನ್ ಟಿವಿಯ ನಿರೂಪಕಿ ತಿಂಡಿ ಪ್ಯಾಕೆಟ್‌ಗಳ ಮೇಲೆ ಉರ್ದು ಏಕೆ ಬರೆದಿದ್ದೀರಿ ಎಂದು ಕೂಗಾಡಿದ್ದಾರೆ. ಅದಕ್ಕೆ ಉದ್ಯೋಗಿಯೊಬ್ಬರು ಮೇಡಂ ನಿಮಗೆ ತಿಂಡಿ ಬೇಕಾದರೆ ಕೊಂಡುಕೊಳ್ಳಿ, ಇಲ್ಲವಾದರೆ ಇಲ್ಲಿಂದ ಹೊರಡಿ ಎಂದು ತಾಕೀತು ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಉದ್ಯೋಗಿಯು “ತಿಂಡಿ ಪ್ಯಾಕೆಟ್ ಮೇಲೆ ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ಸಹ ಬರೆಯಲಾಗಿದೆ. ನೀವು ಏಕೆ ಒಂದು ಭಾಷೆಯನ್ನು ನೋಡಿ ಮಾತನಾಡುತ್ತೀರಿ? ನಿಮ್ಮ ಇಂತಹ ತಂತ್ರಗಳನ್ನು ನಾವು ಪುರಸ್ಕರಿಸುವುದಿಲ್ಲ, ಇಲ್ಲಿಂದ ಹೊರಡಿ” ಎಂದು ಖಡಕ್ ಆಗಿ ಹೇಳಿದ್ದಾರೆ.

ಉರ್ದುವಿನಲ್ಲಿ ಬರೆಯುವ ಮೂಲಕ ನವರಾತ್ರಿ ಸಮಯದಲ್ಲಿ ಉಪವಾಸವಿರುದ ಹಿಂದೂಗಳಿಗೆ ಅವಮಾನ ಮಾಡಲಾಗುತ್ತಿದೆ. ಇದರಿಂದ ನೀವು ಏನನ್ನಾದರೂ ಮುಚ್ಚಿಡಲು ಬಯಸುತ್ತಿರುವಿರೆ? ಇದರಲ್ಲಿ ದನದ ಮಾಂಸ ಬಳಸಿದ್ದೀರಾ ಎಂದು ಪತ್ರಕರ್ತೆ ಪದೇ ಪದೇ ಆರೋಪಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಉದ್ಯೋಗಿ. “ನೀವು ಏನು ಬೇಕಾದರೂ ಭಾವಿಸಿ. ನಿಮ್ಮ ಮೈಕ್ ತೆಗೆದು ಏನಾದರೂ ವಿಚಾರಿಸುವುದಿದ್ದರೆ ನನ್ನ ಬಳಿ ಕೇಳಿ. ಅದು ಬಿಟ್ಟು ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನಿಸಬೇಡಿ. ನಿಮ್ಮೊಂದಿಗೆ ನಾನು ಮಾತನಾಡುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈ ವಿಡಿಯೋವನ್ನು ಬಹಳಷ್ಟು ಜನರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅಲ್ಲಿರುವುದು ಉರ್ದು ಭಾಷೆಯಲ್ಲ, ಅದು ಅರೇಬಿಕ್ ಆಗಿದೆ. ಹಲ್ದಿರಾಮ್ಸ್‌ನ ಹಲವಾರು ಉತ್ಪನ್ನಗಳು ಮುಸ್ಲಿಂ ಜನಸಂಖ್ಯೆ ಹೆಚ್ಚು ಇರುವ ಗಲ್ಫ್ ದೇಶಗಳಿಗೆ ರಫ್ತು ಆಗುವುದರಿಂದ ಆ ಭಾಷೆಯಲ್ಲಿಯೂ ಸಹ ಮುದ್ರಿಸಲಾಗಿದೆ. ಇದರಿಂದ ಸುದರ್ಶನ್ ಟಿವಿಗೇನು ಕಷ್ಟ? ನಮ್ಮ ಭಾರತದ ನೋಟಿನಲ್ಲಿ ಉರ್ದು ಬಳಸಲಾಗಿದೆ, ರೈಲ್ವೆ ನಿಲ್ದಾಣಗಳಲ್ಲಿ ಉರ್ದು ಇರುತ್ತದೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸುದರ್ಶನ್ ಟಿವಿಯು ತನ್ನ ಇಸ್ಲಾಮೋಫೋಬಿಯಾ ಕಾರಣಕ್ಕೆ ಕೆಲ ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿತ್ತು. ಯುಪಿಎಸ್‌ಸಿ ಜಿಹಾದ್ ಎಂಬ ಹೆಸರಿನಲ್ಲಿ ಮುಸ್ಲಿಮರ ವಿರುದ್ಧ ಹಲವಾರು ವರದಿಗಳನ್ನು ಪ್ರಸಾರ ಮಾಡಿತ್ತು. ನ್ಯಾಯಾಧೀಶರು ಈ ಚಾನೆಲ್ ಉಗ್ರವಾದವನ್ನು ಪ್ರಸಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಮುಸ್ಲಿಮರು ಸರ್ಕಾರಿ ಇಲಾಖೆಗಳಿಗೆ ನುಸುಳುತ್ತಿದ್ದಾರೆ ಎಂದು ಟಿವಿ ವರದಿ ಮಾಡಿದ್ದನ್ನು ಅಳಿಸುಹಾಕುವಂತೆ ಮತ್ತು ನಿಲ್ಲಿಸುವಂತೆ ಸುಪ್ರೀಂ ಸೂಚಿಸಿತ್ತು. ಒಂದು ಎಪಿಸೋಡ್ ನೋಡುವುದಲ್ಲಿಯೇ ನನಗ ಬಹಳ ಬೇಸರವಾಗಿತ್ತು. ಇನ್ನೊಂದು ಸಮುದಾಯದ ಮೇಲೆ ಆರೋಪಿಸುವುದನ್ನು ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಡಿ.ವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...