Homeಮುಖಪುಟಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆ: ಬೀದಿಗೆ ಬಿದ್ದ ಮುಸ್ಲಿಂ ಕುಟುಂಬಗಳು - ಇಂದು ಸುಪ್ರೀಂ ವಿಚಾರಣೆ

ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆ: ಬೀದಿಗೆ ಬಿದ್ದ ಮುಸ್ಲಿಂ ಕುಟುಂಬಗಳು – ಇಂದು ಸುಪ್ರೀಂ ವಿಚಾರಣೆ

- Advertisement -
- Advertisement -

“ನಮ್ಮನ್ನು ಇಲ್ಲಿಂದ ಹೊರದೂಡಬೇಡಿ. ನಮ್ಮ ಮನೆ, ಶಾಲೆ ಎಲ್ಲ ಇಲ್ಲೇ ಇವೆ. ನಾವು ಎಲ್ಲಿಗೂ ಹೋಗುವುದಿಲ್ಲ. ಬೇರೆಡೆ ಹೋಗಿ ನಾವು ಓದುವುದಾದರೂ ಹೇಗೆ? ಈ ಚಳಿಯಲ್ಲಿ ನಮ್ಮ ತಮ್ಮ- ತಂಗಿಯರನ್ನು ಎಲ್ಲಿಗೆ ಕರೆದುಕೊಂಡು ಹೋಗಬೇಕು?” ಈ ರೀತಿಯಾಗಿ ಅಳುತ್ತಾ ಪರಿ ಪರಿಯಾಗಿ ಬೇಡಿಕೊಳ್ಳುವ ಪುಟ್ಟ ಬಾಲಕಿಯ ವಿಡಿಯೋ ಇಂಟರ್ನೆಟ್‌ನಲ್ಲಿ ಹಲವರ ಮನಕರಗಿಸುತ್ತಿದೆ. ಆದರೆ ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಸ್ಲಂ ತೆರವುಗೊಳಿಸಬಾರದೆಂಬ ವಿಚಾರವಾಗಿ ಸುಪ್ರೀಂ ಕೋರ್ಟ್‌ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಇಂದು ನಿರ್ಧಾರವಾಗಲಿದೆ.

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ಬನ್‌ಭೂಲ್‌ಪುರ ಪ್ರದೇಶದ ರೈಲು ನಿಲ್ದಾಣದ ಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು, ಮನೆ ಕಟ್ಟಿಕೊಂಡು ತಲೆಮಾರುಗಳಿಂದ ವಾಸಿಸುತ್ತಿದ್ದು ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳನ್ನು ಅಲ್ಲಿಂದ ಒಕ್ಕಲಿಬ್ಬಿಸಬೇಕು, ಅದು ರೈಲ್ವೆ ಇಲಾಖೆಗೆ ಸೇರಿದ ಜಾಗ ಎಂದು ಉತ್ತರಾಖಂಡ ಹೈಕೋರ್ಟ್ ಆದೇಶಿಸಿದೆ. ಈ ಆದೇಶದಿಂದ ತತ್ತರಿಸಿರುವ ಅಲ್ಲಿನ ನಿವಾಸಿಗಳು ಇದು ರೈಲ್ವೆ ಇಲಾಖೆಯ ಜಾಗವಲ್ಲ ಎಂದು ವಾದಿಸಿ, ಒಕ್ಕಲೆಬ್ಬಿಸುವಿಕೆಯನ್ನು ನಿಲ್ಲಿಸಬೆಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ. ಕೋರ್ಟ್ ಇಂದು ಅರ್ಜಿ ವಿಚಾರಣೆ ನಡೆಸಲಿದೆ.

ನಾವಿಲ್ಲಿ ಹಲವಾರು ತಲೆಮಾರುಗಳಿಂದ ವಾಸಿಸುತ್ತಿದ್ದೇವೆ. ನಮ್ಮ ಮನೆಗಳಿಗೆ ತೆರಿಗೆ ಕಟ್ಟುತ್ತಿದ್ದೇವೆ. ಈ ಪ್ರದೇಶದಲ್ಲಿ ಐದು ಸರ್ಕಾರಿ ಶಾಲೆಗಳು, ಒಂದು ಆಸ್ಪತ್ರೆ ಮತ್ತು ಎರಡು ಓವರ್‌ಹೆಡ್ ನೀರಿನ ಟ್ಯಾಂಕ್‌ಗಳಿವೆ. ಇಂತಹ ಪ್ರದೇಶವನ್ನು ಅಕ್ರಮವೆಂದು ನೆಲಸಮ ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಭೂಮಿಯ ಒಡೆತನದ ವ್ಯಾಜ್ಯ ಇನ್ನು ಜಿಲ್ಲಾ ಕೋರ್ಟ್‌ನಲ್ಲಿರುವಾಗ ಒಕ್ಕಲೆಬ್ಬಿಸುವಿಕೆಗೆ ಹೈಕೋರ್ಟ್ ಆದೇಶಿಸಿರುವುದು ಕಾನೂನುಬಾಹಿರ ಎಂದು ಅಲ್ಲಿನ ನಿವಾಸಿಗಳು ವಾದಿಸಿದ್ದಾರೆ.

ಈ ಪ್ರದೇಶದಲ್ಲಿ ಬಹುತೇಕ ಮುಸ್ಲಿಂ ಸಮುದಾಯಗಳು ವಾಸಿಸುತ್ತಿರುವ ಕಾರಣ ಹಗೆತನದಿಂದಾಗಿ ನಮ್ಮನ್ನು ಒಕ್ಕಲೆಬ್ಬಿಸಲಾಗುತ್ತಿದೆ. ತಲೆಮಾರುಗಳಿಂದ ಇಲ್ಲಿ ಬದುಕಿದ ನಮಗೆ ಈ ಜಾಗದ ಒಡೆತನದ ಹಕ್ಕಿದೆ. ನಮ್ಮನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅಲ್ಲಿನ ಸಾವಿರಾರು ಮಹಿಳೆಯರು ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...