Homeಮುಖಪುಟಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆ: ಬೀದಿಗೆ ಬಿದ್ದ ಮುಸ್ಲಿಂ ಕುಟುಂಬಗಳು - ಇಂದು ಸುಪ್ರೀಂ ವಿಚಾರಣೆ

ಹಲ್ದ್‌ವಾನಿ ಒಕ್ಕಲೆಬ್ಬಿಸುವಿಕೆ: ಬೀದಿಗೆ ಬಿದ್ದ ಮುಸ್ಲಿಂ ಕುಟುಂಬಗಳು – ಇಂದು ಸುಪ್ರೀಂ ವಿಚಾರಣೆ

- Advertisement -
- Advertisement -

“ನಮ್ಮನ್ನು ಇಲ್ಲಿಂದ ಹೊರದೂಡಬೇಡಿ. ನಮ್ಮ ಮನೆ, ಶಾಲೆ ಎಲ್ಲ ಇಲ್ಲೇ ಇವೆ. ನಾವು ಎಲ್ಲಿಗೂ ಹೋಗುವುದಿಲ್ಲ. ಬೇರೆಡೆ ಹೋಗಿ ನಾವು ಓದುವುದಾದರೂ ಹೇಗೆ? ಈ ಚಳಿಯಲ್ಲಿ ನಮ್ಮ ತಮ್ಮ- ತಂಗಿಯರನ್ನು ಎಲ್ಲಿಗೆ ಕರೆದುಕೊಂಡು ಹೋಗಬೇಕು?” ಈ ರೀತಿಯಾಗಿ ಅಳುತ್ತಾ ಪರಿ ಪರಿಯಾಗಿ ಬೇಡಿಕೊಳ್ಳುವ ಪುಟ್ಟ ಬಾಲಕಿಯ ವಿಡಿಯೋ ಇಂಟರ್ನೆಟ್‌ನಲ್ಲಿ ಹಲವರ ಮನಕರಗಿಸುತ್ತಿದೆ. ಆದರೆ ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಸ್ಲಂ ತೆರವುಗೊಳಿಸಬಾರದೆಂಬ ವಿಚಾರವಾಗಿ ಸುಪ್ರೀಂ ಕೋರ್ಟ್‌ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಇಂದು ನಿರ್ಧಾರವಾಗಲಿದೆ.

ಉತ್ತರಾಖಂಡ ರಾಜ್ಯದ ಹಲ್ದ್‌ವಾನಿ ಜಿಲ್ಲೆಯ ಬನ್‌ಭೂಲ್‌ಪುರ ಪ್ರದೇಶದ ರೈಲು ನಿಲ್ದಾಣದ ಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು, ಮನೆ ಕಟ್ಟಿಕೊಂಡು ತಲೆಮಾರುಗಳಿಂದ ವಾಸಿಸುತ್ತಿದ್ದು ಸುಮಾರು 4,000ಕ್ಕೂ ಹೆಚ್ಚು ಕುಟುಂಬಗಳನ್ನು ಅಲ್ಲಿಂದ ಒಕ್ಕಲಿಬ್ಬಿಸಬೇಕು, ಅದು ರೈಲ್ವೆ ಇಲಾಖೆಗೆ ಸೇರಿದ ಜಾಗ ಎಂದು ಉತ್ತರಾಖಂಡ ಹೈಕೋರ್ಟ್ ಆದೇಶಿಸಿದೆ. ಈ ಆದೇಶದಿಂದ ತತ್ತರಿಸಿರುವ ಅಲ್ಲಿನ ನಿವಾಸಿಗಳು ಇದು ರೈಲ್ವೆ ಇಲಾಖೆಯ ಜಾಗವಲ್ಲ ಎಂದು ವಾದಿಸಿ, ಒಕ್ಕಲೆಬ್ಬಿಸುವಿಕೆಯನ್ನು ನಿಲ್ಲಿಸಬೆಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ. ಕೋರ್ಟ್ ಇಂದು ಅರ್ಜಿ ವಿಚಾರಣೆ ನಡೆಸಲಿದೆ.

ನಾವಿಲ್ಲಿ ಹಲವಾರು ತಲೆಮಾರುಗಳಿಂದ ವಾಸಿಸುತ್ತಿದ್ದೇವೆ. ನಮ್ಮ ಮನೆಗಳಿಗೆ ತೆರಿಗೆ ಕಟ್ಟುತ್ತಿದ್ದೇವೆ. ಈ ಪ್ರದೇಶದಲ್ಲಿ ಐದು ಸರ್ಕಾರಿ ಶಾಲೆಗಳು, ಒಂದು ಆಸ್ಪತ್ರೆ ಮತ್ತು ಎರಡು ಓವರ್‌ಹೆಡ್ ನೀರಿನ ಟ್ಯಾಂಕ್‌ಗಳಿವೆ. ಇಂತಹ ಪ್ರದೇಶವನ್ನು ಅಕ್ರಮವೆಂದು ನೆಲಸಮ ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಭೂಮಿಯ ಒಡೆತನದ ವ್ಯಾಜ್ಯ ಇನ್ನು ಜಿಲ್ಲಾ ಕೋರ್ಟ್‌ನಲ್ಲಿರುವಾಗ ಒಕ್ಕಲೆಬ್ಬಿಸುವಿಕೆಗೆ ಹೈಕೋರ್ಟ್ ಆದೇಶಿಸಿರುವುದು ಕಾನೂನುಬಾಹಿರ ಎಂದು ಅಲ್ಲಿನ ನಿವಾಸಿಗಳು ವಾದಿಸಿದ್ದಾರೆ.

ಈ ಪ್ರದೇಶದಲ್ಲಿ ಬಹುತೇಕ ಮುಸ್ಲಿಂ ಸಮುದಾಯಗಳು ವಾಸಿಸುತ್ತಿರುವ ಕಾರಣ ಹಗೆತನದಿಂದಾಗಿ ನಮ್ಮನ್ನು ಒಕ್ಕಲೆಬ್ಬಿಸಲಾಗುತ್ತಿದೆ. ತಲೆಮಾರುಗಳಿಂದ ಇಲ್ಲಿ ಬದುಕಿದ ನಮಗೆ ಈ ಜಾಗದ ಒಡೆತನದ ಹಕ್ಕಿದೆ. ನಮ್ಮನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅಲ್ಲಿನ ಸಾವಿರಾರು ಮಹಿಳೆಯರು ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...