Homeಮುಖಪುಟಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ...

ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮರ್ಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿ ಒಂದು ವಾರ ಕಳೆದಿದೆ. ಇದೀಗ ಈ ಕುರಿತ ಸತ್ಯಶೋಧನಾ ವರದಿಯು ಹಿಂಸಾಚಾರ ಹೇಗೆ ಭುಗಿಲೆದ್ದಿತು ಮತ್ತು ನಡೆದ ಲೋಪಗಳ ಬಗ್ಗೆ ಬೆಳಕು ಚೆಲ್ಲಿದೆ.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR)  ‘Bulldozing Peace: State Violence and Apathy in Muslim Settlements of Haldwani’ (ಬುಲ್ಡೋಜಿಂಗ್ ಪೀಸ್:  ಹ ಸ್ಟೇಟ್ ವಯಲೆನ್ಸ್ ಆ್ಯಂಡ್ ಅಪಾಥಿ ಇನ್ ಮುಸ್ಲಿಂ ಸೆಟ್ಲಮೆಂಟ್ಸ್ ಆಫ್ ಹಲ್ದ್ವಾನಿ)’ ಎಂಬ ಶೀರ್ಷಿಕೆಯಡಿಯಲ್ಲಿ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ತಂಡದಲ್ಲಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ನ ನದೀಮ್ ಖಾನ್ ಮತ್ತು ಮೊಹಮ್ಮದ್ ಮೊಬಾಶ್ಶಿರ್ ಅನೀಕ್, ಕರವಾನ್-ಎ-ಮೊಹಬ್ಬತ್‌ನ ಹರ್ಷ್ ಮಂದರ್, ನವಶರಣ್ ಸಿಂಗ್, ಅಶೋಕ್ ಶರ್ಮಾ, ಕುಮಾರ್ ನಿಖಿಲ್ ಮತ್ತು ನಾಗರಿಕ ಹಕ್ಕುಗಳ ಕಾರ್ಯಕರ್ತ ಜಾಹಿದ್ ಖಾದ್ರಿ ಇದ್ದರು.

ಹಲ್ದ್ವಾನಿ ಹಿಂಸಾಚಾರದಲ್ಲಿ ಚಾಲಕ ಫಹೀಮ್ ಹಾದಿ ಮತ್ತು ತಂದೆ-ಮಗ ಮೊಹಮ್ಮದ್ ಜಾಹಿದ್ ಮತ್ತು ಅನಾಸ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಸುಮಾರು 300 ಮನೆಗಳು ಪೊಲೀಸ್ ದಬ್ಬಾಳಿಕೆಯನ್ನು ಎದುರಿಸಿದವು, ಪೊಲೀಸರು ಮುಸ್ಲಿಮರ ಮನೆಗಳಿಗೆ ನುಗ್ಗಿ ವಸ್ತುಗಳನ್ನು ಹಾನಿಗೊಳಿಸಿದ್ದಾರೆ, ಮನೆಯಲ್ಲಿದ್ದವರ ಮೇಲೆ ದೌರ್ಜನ್ಯ ನಡೆಸಿದ್ದಾರೆ, ಹಲವರನ್ನು  ಬಂಧಿಸಿದ್ದಾರೆ.

ದಿ ಕ್ವಿಂಟ್‌ ವರದಿಯ ಪ್ರಕಾರ, ಅಧಿಕೃತ ಮಾಹಿತಿಯಲ್ಲಿ ಕೇವಲ 30-36 ಜನರನ್ನು ಮಾತ್ರ ಬಂಧಿಸಲಾಗಿದೆ ಎಂದು ಹೇಳುತ್ತದೆ, ಆದರೆ ಸತ್ಯವು ವಿಭಿನ್ನವಾಗಿದೆ. ಪೊಲೀಸರು ಚಿತ್ರಹಿಂಸೆ ಕೊಠಡಿಗಳನ್ನು ಹೋಲುವ ರೀತಿಯ ಬಂಧನ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ, ಅಲ್ಲಿ ವಿವಿಧ ಕಾರಣಗಳಿಗಾಗಿ ಬೇರೆ ನಗರಗಳಿಂದ ಬಂಧಿತರಿದ್ದರು ಎಂದು ವರದಿಯು ಉಲ್ಲೇಖಿಸಿದೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಜೊತೆ ಮಾತನಾಡಿದ ನದೀಮ್ ಖಾನ್, ಬಂಧನಕ್ಕಿಂತ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಸ್ಥಳೀಯ ಮೂಲಗಳ ಪ್ರಕಾರ 15 ಕಿ.ಮೀ. ದೂರದಲ್ಲಿರುವ ಶಾಲೆಯೊಂದನ್ನು ಬಂಧನ ಕೇಂದ್ರವಾಗಿ ಬಳಸಲಾಗಿತ್ತು. ಹಿಂಸಾಚಾರದಲ್ಲಿ 5,000ಕ್ಕೂ ಅಧಿಕ ಜನರು ಭಾಗಿಯಾಗಿದ್ದಾರೆ ಎಂದು ಸ್ಥಳೀಯರು ನಮಗೆ ತಿಳಿಸಿದ್ದಾರೆ. ಆದರೆ ವೀಡಿಯೊ ಮಾದರಿಗಳು ಅವರಿಗೆ ಹೋಲಿಕೆ ಮಾಡಲು ಸಾಧ್ಯವಾಗಿಲ್ಲ. ಯಾಕೆಂದರೆ ಆರೋಪಿಗಳು ಸ್ಥಳೀಯರು ಅಲ್ಲದಿರಬಹುದು ಎಂದು ಹೇಳಿದ್ದಾರೆ.

ದಿ ಕ್ವಿಂಟ್‌ನೊಂದಿಗೆ ಮಾತನಾಡಿದ ಹಲ್ದ್ವಾನಿ ಪೊಲೀಸರ ಸಾರ್ವಜನಿಕ ಸಂಪರ್ಕ ಅಧಿಕಾರಿ ದಿನೇಶ್ ಜೋಶಿ,  ಬಂಧನ ಕೇಂದ್ರ ಸ್ಥಾಪಿಸಿರುವ ಕುರಿತ ಆರೋಪಗಳನ್ನು ನಿರಾಕರಿಸಿದ್ದಾರೆ. ಇಲ್ಲಿ ಅಂತಹ ಯಾವುದೇ ಬಂಧನ ಕೇಂದ್ರವಿಲ್ಲ. ಶಾಲೆಯು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಬೋರ್ಡ್ ಪರೀಕ್ಷೆಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ.

ತಂಡದ ವರದಿಯ ಪ್ರಕಾದ, ಹಲ್ದ್ವಾನಿ ಘಟನೆಯು ಉತ್ತರಾಖಂಡವನ್ನು ದೇವಭೂಮಿಯಾಗಿ ಅಂದರೆ ಹಿಂದೂಗಳ ಪವಿತ್ರ ಭೂಮಿಯಾಗಿ ರಚಿಸುವ ಕಲ್ಪನೆಯೊಂದಿಗೆ ಆಳವಾಗಿ ಸಂಬಂಧ ಹೊಂದಿದೆ, ಅದು ಇತರ ಧಾರ್ಮಿಕ ಅಲ್ಪಸಂಖ್ಯಾತರಿಗೆ ಅಲ್ಲಿ ಅವಕಾಶವನ್ನು ನಿರಾಕರಿಸುತ್ತದೆ. ಅರಣ್ಯ ಭೂಮಿಯಲ್ಲಿ ಅನಧಿಕೃತ ಹಿಂದೂ ಧಾರ್ಮಿಕ ರಚನೆಗಳ ಬಗ್ಗೆ ಮೌನವಾಗಿರುವ ಉತ್ತರಖಂಡ ಸರಕಾರ, ರಾಜ್ಯದಲ್ಲಿ 3000 ಮಜಾರ್‌ಗಳನ್ನು ಅಕ್ರಮದ ಹಣೆಪಟ್ಟಿಯಲ್ಲಿ ಧ್ವಂಸ ಮಾಡಿ ತಮ್ಮ ಸರ್ಕಾರದ ಸಾಧನೆ ಎಂದು ಘೋಷಿಸಿದ ಮುಖ್ಯಮಂತ್ರಿಯ ಹೇಳಿಕೆಯು ಇದನ್ನು ಪ್ರತಿನಿಧಿಸುತ್ತದೆ ಎಂದು ವರದಿಯು ಉಲ್ಲೇಖಿಸಿದೆ.

ಸಾವಿನ ಸಂಖ್ಯೆಯಿಂದ ಹಿಡಿದು ಕಂಡಲ್ಲಿ ಗುಂಡು ಆದೇಶದವರೆಗಿನ ನಡೆಯು ಸಂಶಯಾಸ್ಪದವಾಗಿದೆ. ಹಿಂಸಾಚಾರವು 7 ವ್ಯಕ್ತಿಗಳ ಸಾವಿಗೆ ಕಾರಣವಾಯಿತು. ಇದುವರೆಗೆ 31 ಜನರನ್ನು ಬಂಧಿಸಲಾಗಿದೆ ಮತ್ತು 90ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. 5,000 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಾವಿನ ಸಂಖ್ಯೆ 20ಕ್ಕಿಂತ ಹೆಚ್ಚಿದೆ ಎಂದು ಸ್ಥಳೀಯರು ಹೇಳಿಕೊಳ್ಳುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ.

ಹಿಂಸಾಚಾರದ ಕುರಿತು ಮಾತನಾಡಿದ ನದೀಮ್, ಘಟನೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ, ಸಮಿತಿಯ ಸದಸ್ಯರು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರುತ್ತಾರೆ. ಪೊಲೀಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಿಂಸಾಚಾರದ ವೇಳೆ ತೆಗೆದುಕೊಂಡ ಕ್ರಮಗಳನ್ನು ತನಿಖೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಲವ್ ಜಿಹಾದ್, ಭೂಮಿ ಜಿಹಾದ್, ವ್ಯಾಪಾರಿ ಜಿಹಾದ್ ಹಾಗೂ ಮಝಾರ್ ಜಿಹಾದ್‌ನಂತಹ ಆಧಾರವಿಲ್ಲದ ಪ್ರತಿಪಾದನೆಗಳು ಹಾಗೂ ಅಲ್ಪಸಂಖ್ಯಾತರ ಮೇಲಿನ ಆರ್ಥಿಕ ಹಾಗೂ ಸಾಮಾಜಿಕ ಬಹಿಷ್ಕಾರದ ಕರೆಗಳು ಅಶಾಂತಿ ಉಲ್ಬಣಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಸತ್ಯಶೋಧನಾ ವರದಿ ಹೇಳಿದೆ. ಸ್ಥಳೀಯ ಮುಸ್ಲಿಂ ಮಹಿಳೆಯರು ತೋರಿದ ಪ್ರತಿರೋಧವನ್ನು ಪೊಲೀಸರು ಪ್ರಶ್ನಿಸಿದ್ದಾರೆ, ಆದರೆ ಇದು ಇದ್ದಕ್ಕಿದ್ದಂತೆ ಅಲ್ಲ. ನಗರದಲ್ಲಿ ಸಿಎಎ ವಿರೋಧಿ ಆಂದೋಲನದ ಸಂದರ್ಭದಲ್ಲಿ ಸ್ಥಳೀಯ ಮಹಿಳೆಯರು ಕೂಡ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅವರಿಗೂ ತಪ್ಪಾಗಿ ಥಳಿಸಲಾಗಿದೆ ಎಂದು ನದೀಮ್ ಹೇಳಿದ್ದಾರೆ.

ಉದ್ಭವಿಸಿದ ಪ್ರಶ್ನೆ: 

ಫೆಬ್ರುವರಿ 8ರಂದು ಮಸೀದಿ-ಮದರಸ ಕೆಡವುವ ಮುನ್ನ ಸಮುದಾಯದ ಮುಖಂಡರನ್ನು ಮಾತುಕತೆಗೆ ಕರೆಯಲಾಗಿತ್ತು ಆದರೆ ಸ್ವಿಚ್ ಆಫ್ ಆಗಿದ್ದರಿಂದ ಅವರ ಫೋನ್ ಸಂಪರ್ಕಕ್ಕೆ ಬರಲಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಆದರೆ, ಮುಸ್ಲಿಂ ಧರ್ಮಗುರುಗಳು ಮತ್ತು ಮುಖಂಡರು ಈ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. 80 ವ್ಯಕ್ತಿಗಳು ಒಂದೇ ಸಮಯದಲ್ಲಿ ತಮ್ಮ ಫೋನ್‌ಗಳನ್ನು ಆಫ್ ಮಾಡುವುದು ಹೇಗೆ ಸಾಧ್ಯ? ತಮ್ಮ ಹೇಳಿಕೆ ಬಗ್ಗೆ ಸಾಬೀತುಪಡಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಆಗ್ರಹಿಸಿದ್ದಾರೆ.

ಫೆಬ್ರವರಿ 14ರಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದರೂ ಮಸೀದಿ ಮತ್ತು ಮದರಸಾವನ್ನು ಕೆಡವಲು ಆಡಳಿತವು ಏಕೆ ಆತುರ ತೋರಿತು?

ಮುಸ್ಲಿಮ್ ಸಮುದಾಯವು ಮಸೀದಿ ಸೀಲಿಂಗ್ ಸಮಯದಲ್ಲಿ ಸಹಕರಿಸಿದಾಗ ಎರಡನೇ ಬಾರಿಗೆ ಅವರನ್ನು ಏಕೆ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ?

ಮುನ್ಸಿಪಲ್ ಕಮಿಷನರ್ ಪಂಕಜ್ ಉಪಾಧ್ಯಾಯ ಅವರಂತಹ ಆಕ್ಷೇಪಾರ್ಹ ವ್ಯಕ್ತಿಯನ್ನು ಮತ್ತೊಂದು ಕಚೇರಿಗೆ ವರ್ಗಾಯಿಸಿದ್ದರೂ ಈ ಸಂದರ್ಭಗಳನ್ನು ನಿರ್ವಹಿಸಲು ಅವರಿಗೆ ಏಕೆ ಅನುಮತಿಸಲಾಗಿದೆ?

ಉತ್ತರಾಂಚಲದ ದೀಪ್‌ನ ಪತ್ರಕರ್ತ ಸಲೀಂ ಖಾನ್ ಅವರ ಮನೆಗೆ ಪೊಲೀಸರು ನುಗ್ಗಿದ್ದಾರೆ. ಅವರ ಪತ್ನಿ ಮಕ್ಕಳು ಮೇಲೆ ಹಲ್ಲೆ ನಡೆಸಿದ್ದಾರೆ. ಕರ್ಫ್ಯ್ಯೂ ಹಾಗೂ ಕಂಡಲ್ಲಿ ಗುಂಡು ಹಾರಿಸುವ ಆದೇಶ ಜಾರಿಯಲ್ಲಿರುವಾಗ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಸರಕಾರ ಹೇಗೆ ಹೇಳಿತು?

ಅಚ್ಚರಿ ಎಂದರೆ ಮುಸ್ಲಿಂ ಮನೆಯೊಂದರಲ್ಲಿ ವಿವಾಹ ಸಮಾರಂಭದ ಮೇಲೆ ದಾಳಿ ನಡೆಸಿದ ಗುಂಪು ಪೊಲೀಸ್ ಠಾಣೆಯ ಮೇಲೂ ದಾಳಿ ನಡೆಸಿದೆ. ಸ್ಥಳೀಯರು ಹಾಗೂ ಪೊಲೀಸರಿಗೆ ಅವರನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಇದು ದಾಳಿಕೋರರು ಹೊರಗಿನವರು ಎಂದು ಸೂಚಿಸುತ್ತದೆ. ಗುಂಪು ಅಥವಾ ದಾಳಿಕೋರರು ಅಲ್ಪಸಂಖ್ಯಾತರು ಆಗಿದ್ದರೆ, ಅವರು ಅಲ್ಪಸಂಖ್ಯಾತರ ಮೇಲೆಯೇ ಯಾಕೆ ದಾಳಿ ನಡೆಸುತ್ತಿದ್ದರು?

ಇದಲ್ಲದೆ ಹಿಂಸಾಚಾರದ ಸಮಯದಲ್ಲಿ ಎರಡು ಗಂಟೆಗಳಲ್ಲಿ ಸುಮಾರು 1,000-2,000 ಸುತ್ತುಗಳಷ್ಟು ಗುಂಡು ಹಾರಿಸುವುದರೊಂದಿಗೆ ವಿವಿಧ ನಗರ ಪ್ರದೇಶಗಳಲ್ಲಿ ನಿರಂತರ ಪೊಲೀಸ್ ಫೈರಿಂಗ್ ಮಾಡಲಾಗಿದೆ. ಆದರೆ ಮಾಧ್ಯಮಗಳು ಕೇವಲ 350 ಸುತ್ತು ಗುಂಡು ಹಾರಿಸಿವೆ ಎಂದು ಹೇಳಿಕೊಂಡಿದೆ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...