Homeಮುಖಪುಟಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ...

ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮರ್ಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿ ಒಂದು ವಾರ ಕಳೆದಿದೆ. ಇದೀಗ ಈ ಕುರಿತ ಸತ್ಯಶೋಧನಾ ವರದಿಯು ಹಿಂಸಾಚಾರ ಹೇಗೆ ಭುಗಿಲೆದ್ದಿತು ಮತ್ತು ನಡೆದ ಲೋಪಗಳ ಬಗ್ಗೆ ಬೆಳಕು ಚೆಲ್ಲಿದೆ.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR)  ‘Bulldozing Peace: State Violence and Apathy in Muslim Settlements of Haldwani’ (ಬುಲ್ಡೋಜಿಂಗ್ ಪೀಸ್:  ಹ ಸ್ಟೇಟ್ ವಯಲೆನ್ಸ್ ಆ್ಯಂಡ್ ಅಪಾಥಿ ಇನ್ ಮುಸ್ಲಿಂ ಸೆಟ್ಲಮೆಂಟ್ಸ್ ಆಫ್ ಹಲ್ದ್ವಾನಿ)’ ಎಂಬ ಶೀರ್ಷಿಕೆಯಡಿಯಲ್ಲಿ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ತಂಡದಲ್ಲಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ನ ನದೀಮ್ ಖಾನ್ ಮತ್ತು ಮೊಹಮ್ಮದ್ ಮೊಬಾಶ್ಶಿರ್ ಅನೀಕ್, ಕರವಾನ್-ಎ-ಮೊಹಬ್ಬತ್‌ನ ಹರ್ಷ್ ಮಂದರ್, ನವಶರಣ್ ಸಿಂಗ್, ಅಶೋಕ್ ಶರ್ಮಾ, ಕುಮಾರ್ ನಿಖಿಲ್ ಮತ್ತು ನಾಗರಿಕ ಹಕ್ಕುಗಳ ಕಾರ್ಯಕರ್ತ ಜಾಹಿದ್ ಖಾದ್ರಿ ಇದ್ದರು.

ಹಲ್ದ್ವಾನಿ ಹಿಂಸಾಚಾರದಲ್ಲಿ ಚಾಲಕ ಫಹೀಮ್ ಹಾದಿ ಮತ್ತು ತಂದೆ-ಮಗ ಮೊಹಮ್ಮದ್ ಜಾಹಿದ್ ಮತ್ತು ಅನಾಸ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಸುಮಾರು 300 ಮನೆಗಳು ಪೊಲೀಸ್ ದಬ್ಬಾಳಿಕೆಯನ್ನು ಎದುರಿಸಿದವು, ಪೊಲೀಸರು ಮುಸ್ಲಿಮರ ಮನೆಗಳಿಗೆ ನುಗ್ಗಿ ವಸ್ತುಗಳನ್ನು ಹಾನಿಗೊಳಿಸಿದ್ದಾರೆ, ಮನೆಯಲ್ಲಿದ್ದವರ ಮೇಲೆ ದೌರ್ಜನ್ಯ ನಡೆಸಿದ್ದಾರೆ, ಹಲವರನ್ನು  ಬಂಧಿಸಿದ್ದಾರೆ.

ದಿ ಕ್ವಿಂಟ್‌ ವರದಿಯ ಪ್ರಕಾರ, ಅಧಿಕೃತ ಮಾಹಿತಿಯಲ್ಲಿ ಕೇವಲ 30-36 ಜನರನ್ನು ಮಾತ್ರ ಬಂಧಿಸಲಾಗಿದೆ ಎಂದು ಹೇಳುತ್ತದೆ, ಆದರೆ ಸತ್ಯವು ವಿಭಿನ್ನವಾಗಿದೆ. ಪೊಲೀಸರು ಚಿತ್ರಹಿಂಸೆ ಕೊಠಡಿಗಳನ್ನು ಹೋಲುವ ರೀತಿಯ ಬಂಧನ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ, ಅಲ್ಲಿ ವಿವಿಧ ಕಾರಣಗಳಿಗಾಗಿ ಬೇರೆ ನಗರಗಳಿಂದ ಬಂಧಿತರಿದ್ದರು ಎಂದು ವರದಿಯು ಉಲ್ಲೇಖಿಸಿದೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಜೊತೆ ಮಾತನಾಡಿದ ನದೀಮ್ ಖಾನ್, ಬಂಧನಕ್ಕಿಂತ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಸ್ಥಳೀಯ ಮೂಲಗಳ ಪ್ರಕಾರ 15 ಕಿ.ಮೀ. ದೂರದಲ್ಲಿರುವ ಶಾಲೆಯೊಂದನ್ನು ಬಂಧನ ಕೇಂದ್ರವಾಗಿ ಬಳಸಲಾಗಿತ್ತು. ಹಿಂಸಾಚಾರದಲ್ಲಿ 5,000ಕ್ಕೂ ಅಧಿಕ ಜನರು ಭಾಗಿಯಾಗಿದ್ದಾರೆ ಎಂದು ಸ್ಥಳೀಯರು ನಮಗೆ ತಿಳಿಸಿದ್ದಾರೆ. ಆದರೆ ವೀಡಿಯೊ ಮಾದರಿಗಳು ಅವರಿಗೆ ಹೋಲಿಕೆ ಮಾಡಲು ಸಾಧ್ಯವಾಗಿಲ್ಲ. ಯಾಕೆಂದರೆ ಆರೋಪಿಗಳು ಸ್ಥಳೀಯರು ಅಲ್ಲದಿರಬಹುದು ಎಂದು ಹೇಳಿದ್ದಾರೆ.

ದಿ ಕ್ವಿಂಟ್‌ನೊಂದಿಗೆ ಮಾತನಾಡಿದ ಹಲ್ದ್ವಾನಿ ಪೊಲೀಸರ ಸಾರ್ವಜನಿಕ ಸಂಪರ್ಕ ಅಧಿಕಾರಿ ದಿನೇಶ್ ಜೋಶಿ,  ಬಂಧನ ಕೇಂದ್ರ ಸ್ಥಾಪಿಸಿರುವ ಕುರಿತ ಆರೋಪಗಳನ್ನು ನಿರಾಕರಿಸಿದ್ದಾರೆ. ಇಲ್ಲಿ ಅಂತಹ ಯಾವುದೇ ಬಂಧನ ಕೇಂದ್ರವಿಲ್ಲ. ಶಾಲೆಯು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಬೋರ್ಡ್ ಪರೀಕ್ಷೆಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ.

ತಂಡದ ವರದಿಯ ಪ್ರಕಾದ, ಹಲ್ದ್ವಾನಿ ಘಟನೆಯು ಉತ್ತರಾಖಂಡವನ್ನು ದೇವಭೂಮಿಯಾಗಿ ಅಂದರೆ ಹಿಂದೂಗಳ ಪವಿತ್ರ ಭೂಮಿಯಾಗಿ ರಚಿಸುವ ಕಲ್ಪನೆಯೊಂದಿಗೆ ಆಳವಾಗಿ ಸಂಬಂಧ ಹೊಂದಿದೆ, ಅದು ಇತರ ಧಾರ್ಮಿಕ ಅಲ್ಪಸಂಖ್ಯಾತರಿಗೆ ಅಲ್ಲಿ ಅವಕಾಶವನ್ನು ನಿರಾಕರಿಸುತ್ತದೆ. ಅರಣ್ಯ ಭೂಮಿಯಲ್ಲಿ ಅನಧಿಕೃತ ಹಿಂದೂ ಧಾರ್ಮಿಕ ರಚನೆಗಳ ಬಗ್ಗೆ ಮೌನವಾಗಿರುವ ಉತ್ತರಖಂಡ ಸರಕಾರ, ರಾಜ್ಯದಲ್ಲಿ 3000 ಮಜಾರ್‌ಗಳನ್ನು ಅಕ್ರಮದ ಹಣೆಪಟ್ಟಿಯಲ್ಲಿ ಧ್ವಂಸ ಮಾಡಿ ತಮ್ಮ ಸರ್ಕಾರದ ಸಾಧನೆ ಎಂದು ಘೋಷಿಸಿದ ಮುಖ್ಯಮಂತ್ರಿಯ ಹೇಳಿಕೆಯು ಇದನ್ನು ಪ್ರತಿನಿಧಿಸುತ್ತದೆ ಎಂದು ವರದಿಯು ಉಲ್ಲೇಖಿಸಿದೆ.

ಸಾವಿನ ಸಂಖ್ಯೆಯಿಂದ ಹಿಡಿದು ಕಂಡಲ್ಲಿ ಗುಂಡು ಆದೇಶದವರೆಗಿನ ನಡೆಯು ಸಂಶಯಾಸ್ಪದವಾಗಿದೆ. ಹಿಂಸಾಚಾರವು 7 ವ್ಯಕ್ತಿಗಳ ಸಾವಿಗೆ ಕಾರಣವಾಯಿತು. ಇದುವರೆಗೆ 31 ಜನರನ್ನು ಬಂಧಿಸಲಾಗಿದೆ ಮತ್ತು 90ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. 5,000 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಾವಿನ ಸಂಖ್ಯೆ 20ಕ್ಕಿಂತ ಹೆಚ್ಚಿದೆ ಎಂದು ಸ್ಥಳೀಯರು ಹೇಳಿಕೊಳ್ಳುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ.

ಹಿಂಸಾಚಾರದ ಕುರಿತು ಮಾತನಾಡಿದ ನದೀಮ್, ಘಟನೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ, ಸಮಿತಿಯ ಸದಸ್ಯರು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರುತ್ತಾರೆ. ಪೊಲೀಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಿಂಸಾಚಾರದ ವೇಳೆ ತೆಗೆದುಕೊಂಡ ಕ್ರಮಗಳನ್ನು ತನಿಖೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಲವ್ ಜಿಹಾದ್, ಭೂಮಿ ಜಿಹಾದ್, ವ್ಯಾಪಾರಿ ಜಿಹಾದ್ ಹಾಗೂ ಮಝಾರ್ ಜಿಹಾದ್‌ನಂತಹ ಆಧಾರವಿಲ್ಲದ ಪ್ರತಿಪಾದನೆಗಳು ಹಾಗೂ ಅಲ್ಪಸಂಖ್ಯಾತರ ಮೇಲಿನ ಆರ್ಥಿಕ ಹಾಗೂ ಸಾಮಾಜಿಕ ಬಹಿಷ್ಕಾರದ ಕರೆಗಳು ಅಶಾಂತಿ ಉಲ್ಬಣಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಸತ್ಯಶೋಧನಾ ವರದಿ ಹೇಳಿದೆ. ಸ್ಥಳೀಯ ಮುಸ್ಲಿಂ ಮಹಿಳೆಯರು ತೋರಿದ ಪ್ರತಿರೋಧವನ್ನು ಪೊಲೀಸರು ಪ್ರಶ್ನಿಸಿದ್ದಾರೆ, ಆದರೆ ಇದು ಇದ್ದಕ್ಕಿದ್ದಂತೆ ಅಲ್ಲ. ನಗರದಲ್ಲಿ ಸಿಎಎ ವಿರೋಧಿ ಆಂದೋಲನದ ಸಂದರ್ಭದಲ್ಲಿ ಸ್ಥಳೀಯ ಮಹಿಳೆಯರು ಕೂಡ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅವರಿಗೂ ತಪ್ಪಾಗಿ ಥಳಿಸಲಾಗಿದೆ ಎಂದು ನದೀಮ್ ಹೇಳಿದ್ದಾರೆ.

ಉದ್ಭವಿಸಿದ ಪ್ರಶ್ನೆ: 

ಫೆಬ್ರುವರಿ 8ರಂದು ಮಸೀದಿ-ಮದರಸ ಕೆಡವುವ ಮುನ್ನ ಸಮುದಾಯದ ಮುಖಂಡರನ್ನು ಮಾತುಕತೆಗೆ ಕರೆಯಲಾಗಿತ್ತು ಆದರೆ ಸ್ವಿಚ್ ಆಫ್ ಆಗಿದ್ದರಿಂದ ಅವರ ಫೋನ್ ಸಂಪರ್ಕಕ್ಕೆ ಬರಲಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಆದರೆ, ಮುಸ್ಲಿಂ ಧರ್ಮಗುರುಗಳು ಮತ್ತು ಮುಖಂಡರು ಈ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. 80 ವ್ಯಕ್ತಿಗಳು ಒಂದೇ ಸಮಯದಲ್ಲಿ ತಮ್ಮ ಫೋನ್‌ಗಳನ್ನು ಆಫ್ ಮಾಡುವುದು ಹೇಗೆ ಸಾಧ್ಯ? ತಮ್ಮ ಹೇಳಿಕೆ ಬಗ್ಗೆ ಸಾಬೀತುಪಡಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಆಗ್ರಹಿಸಿದ್ದಾರೆ.

ಫೆಬ್ರವರಿ 14ರಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದರೂ ಮಸೀದಿ ಮತ್ತು ಮದರಸಾವನ್ನು ಕೆಡವಲು ಆಡಳಿತವು ಏಕೆ ಆತುರ ತೋರಿತು?

ಮುಸ್ಲಿಮ್ ಸಮುದಾಯವು ಮಸೀದಿ ಸೀಲಿಂಗ್ ಸಮಯದಲ್ಲಿ ಸಹಕರಿಸಿದಾಗ ಎರಡನೇ ಬಾರಿಗೆ ಅವರನ್ನು ಏಕೆ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ?

ಮುನ್ಸಿಪಲ್ ಕಮಿಷನರ್ ಪಂಕಜ್ ಉಪಾಧ್ಯಾಯ ಅವರಂತಹ ಆಕ್ಷೇಪಾರ್ಹ ವ್ಯಕ್ತಿಯನ್ನು ಮತ್ತೊಂದು ಕಚೇರಿಗೆ ವರ್ಗಾಯಿಸಿದ್ದರೂ ಈ ಸಂದರ್ಭಗಳನ್ನು ನಿರ್ವಹಿಸಲು ಅವರಿಗೆ ಏಕೆ ಅನುಮತಿಸಲಾಗಿದೆ?

ಉತ್ತರಾಂಚಲದ ದೀಪ್‌ನ ಪತ್ರಕರ್ತ ಸಲೀಂ ಖಾನ್ ಅವರ ಮನೆಗೆ ಪೊಲೀಸರು ನುಗ್ಗಿದ್ದಾರೆ. ಅವರ ಪತ್ನಿ ಮಕ್ಕಳು ಮೇಲೆ ಹಲ್ಲೆ ನಡೆಸಿದ್ದಾರೆ. ಕರ್ಫ್ಯ್ಯೂ ಹಾಗೂ ಕಂಡಲ್ಲಿ ಗುಂಡು ಹಾರಿಸುವ ಆದೇಶ ಜಾರಿಯಲ್ಲಿರುವಾಗ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಸರಕಾರ ಹೇಗೆ ಹೇಳಿತು?

ಅಚ್ಚರಿ ಎಂದರೆ ಮುಸ್ಲಿಂ ಮನೆಯೊಂದರಲ್ಲಿ ವಿವಾಹ ಸಮಾರಂಭದ ಮೇಲೆ ದಾಳಿ ನಡೆಸಿದ ಗುಂಪು ಪೊಲೀಸ್ ಠಾಣೆಯ ಮೇಲೂ ದಾಳಿ ನಡೆಸಿದೆ. ಸ್ಥಳೀಯರು ಹಾಗೂ ಪೊಲೀಸರಿಗೆ ಅವರನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಇದು ದಾಳಿಕೋರರು ಹೊರಗಿನವರು ಎಂದು ಸೂಚಿಸುತ್ತದೆ. ಗುಂಪು ಅಥವಾ ದಾಳಿಕೋರರು ಅಲ್ಪಸಂಖ್ಯಾತರು ಆಗಿದ್ದರೆ, ಅವರು ಅಲ್ಪಸಂಖ್ಯಾತರ ಮೇಲೆಯೇ ಯಾಕೆ ದಾಳಿ ನಡೆಸುತ್ತಿದ್ದರು?

ಇದಲ್ಲದೆ ಹಿಂಸಾಚಾರದ ಸಮಯದಲ್ಲಿ ಎರಡು ಗಂಟೆಗಳಲ್ಲಿ ಸುಮಾರು 1,000-2,000 ಸುತ್ತುಗಳಷ್ಟು ಗುಂಡು ಹಾರಿಸುವುದರೊಂದಿಗೆ ವಿವಿಧ ನಗರ ಪ್ರದೇಶಗಳಲ್ಲಿ ನಿರಂತರ ಪೊಲೀಸ್ ಫೈರಿಂಗ್ ಮಾಡಲಾಗಿದೆ. ಆದರೆ ಮಾಧ್ಯಮಗಳು ಕೇವಲ 350 ಸುತ್ತು ಗುಂಡು ಹಾರಿಸಿವೆ ಎಂದು ಹೇಳಿಕೊಂಡಿದೆ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...