HomeಅಂಕಣಗಳುKarnataka against SIRSIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

- Advertisement -
- Advertisement -

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ ಸುಮಾರು ಒಂದು ಕೋಟಿಗೂ ಹೆಚ್ಚು ಮತದಾರರು ಬೆಂಗಳೂರಿನಲ್ಲೇ ಇದ್ದಾರೆ. ಆದರೆ, ಈ ಪರಿಷ್ಕರಣೆ ವೇಳೆ ರಾಜ್ಯಾದ್ಯಂತ ಪತ್ತೆಯಾಗಿರುವ ಒಟ್ಟು 84 ಲಕ್ಷ ಎಸ್​​ಡಿಡಿಒ (ASDDO – ಗೈರುಹಾಜರಿ, ಸ್ಥಳಾಂತರ, ಮೃತ, ನಕಲಿ ಮತ್ತು ಇತರೆ) ಮತದಾರರ ಪೈಕಿ ಸಿಂಹಪಾಲು ಅಂದರೆ ಬರೋಬ್ಬರಿ 36.75 ಲಕ್ಷ ಮತದಾರರು ಬೆಂಗಳೂರಿನಲ್ಲೇ ಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಇದು ರಾಜ್ಯದ ಒಟ್ಟು ಎಸ್​​ಡಿಡಿಒ ಮತದಾರರ ಪೈಕಿ ಶೇ 46.7 ರಷ್ಟಿದ್ದು, ಬೆಂಗಳೂರು ನಗರದಲ್ಲಿ 13.55 ಲಕ್ಷ, ಬೆಂಗಳೂರು ಉತ್ತರದಲ್ಲಿ 9 ಲಕ್ಷ, ದಕ್ಷಿಣದಲ್ಲಿ 9.35 ಲಕ್ಷ ಹಾಗೂ ಕೇಂದ್ರದಲ್ಲಿ 7.40 ಲಕ್ಷ ಮತದಾರರು ಈ ಪಟ್ಟಿಗೆ ಸೇರಿದ್ದಾರೆ. ಹೀಗೆ ಗುರುತಿಸಲ್ಪಟ್ಟ ಹೆಸರುಗಳು ಮುಂಬರುವ ಆಗಸ್ಟ್ 17ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಡಲ್ಪಡುವ ಭೀತಿಯಲ್ಲಿದ್ದು, ಲಕ್ಷಾಂತರ ಕನ್ನಡಿಗರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಳ್ಳುವ ಅಪಾಯ ಎದುರಾಗಿದೆ.

ಇಂತಹ ತಾಂತ್ರಿಕ ಪ್ರಕ್ರಿಯೆಗಳ ನಡುವೆ ಸದ್ದಿಲ್ಲದೆ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ನಾಗರಿಕರ ಕಥೆಗಳು ಈಗ ಮನೆಮನೆಯಲ್ಲಿ ಕೇಳಿಬರುತ್ತಿವೆ. ಬೆಂಗಳೂರು ಕೇಂದ್ರ ವ್ಯಾಪ್ತಿಯ ಶಾಂತಿನಗರ ವಿಧಾನಸಭಾ ಕ್ಷೇತ್ರದ ನಿವಾಸಿ, 48 ವರ್ಷದ ಸೈಯದ್ ಆಸಿಫ್ ಈ ಕುರಿತು ತಮ್ಮ ಅಳಲು ತೋಡಿಕೊಳ್ಳುತ್ತಾ,

“ನಾವು ಕಳೆದ 25 ವರ್ಷಗಳಿಂದ ಇದೇ ಗಲ್ಲಿಯಲ್ಲಿ, ಇದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ಕಳೆದ ಪ್ರತಿಯೊಂದು ಚುನಾವಣೆಯಲ್ಲೂ ಮತ ಚಲಾಯಿಸಿದ್ದೇವೆ. ಆದರೆ ದಿಢೀರನೆ ಅಧಿಕಾರಿಗಳು ಬಂದು ನಮ್ಮ ಹೆಸರನ್ನು ‘ಸ್ಥಳಾಂತರಗೊಂಡಿದ್ದಾರೆ’ (Shifted)ಎಂದು ಪಟ್ಟಿಯಲ್ಲಿ ಬರೆದುಕೊಂಡು ಹೋಗಿದ್ದಾರೆ. ನಾವು ಎಲ್ಲಿಗೂ ಹೋಗಿಲ್ಲ, ಇಲ್ಲೇ ಇದ್ದೇವೆ ಎಂದು ಬಿಎಲ್‌ಒಗೆ ದಾಖಲೆ ತೋರಿಸಿದರೂ ತಾಂತ್ರಿಕ ಕಾರಣ ಹೇಳಿ ಅಲೆದಾಡಿಸುತ್ತಿದ್ದಾರೆ. 2002ರ ಹಳೆಯ ದಾಖಲೆ ಮ್ಯಾಪ್ ಆಗಿಲ್ಲ ಎಂಬ ನೆಪವೊಡ್ಡಿ ನಮ್ಮಂತ  ಬಡವರನ್ನು  ಹೊರಟಿರುವುದು ಯಾವ ನ್ಯಾಯ?” ಎಂದು ಕಳವಳ ವ್ಯಕ್ತಪಡಿಸುತ್ತಾರೆ. ಆಸಿಫ್ ಅವರಂತೆಯೇ ಲಕ್ಷಾಂತರ ಮತದಾರರು ಈಗ ತಮಗರಿವಿಲ್ಲದಂತೆಯೇ ‘ಅದೃಶ್ಯ ಮತದಾರರಾಗಿ’ ಬದಲಾಗುವ ಅಪಾಯದಲ್ಲಿದ್ದಾರೆ.

ಮಹಾನಗರ ಬೆಂಗಳೂರಿನಲ್ಲಿ ಈ ಪ್ರಮಾಣದಲ್ಲಿ ಎಸ್​​ಡಿಡಿಒ ಪ್ರಕರಣಗಳು ಹೆಚ್ಚಾಗಲು ಹಾಗೂ ಪ್ರಕ್ರಿಯೆ ನಿಧಾನಗೊಳ್ಳಲು ಆಡಳಿತಾತ್ಮಕ ಗೊಂದಲಗಳೇ ಪ್ರಮುಖ ಕಾರಣವಾಗಿವೆ. ಮುಖ್ಯವಾಗಿ 2002ರ ಹಳೆಯ ಮತದಾರರ ದಾಖಲೆಗಳನ್ನು ಪತ್ತೆಹಚ್ಚುವಲ್ಲಿ ಎದುರಾಗುತ್ತಿರುವ ಸಮಸ್ಯೆ ಹಾಗೂ 2008ರ ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆಗಳ ಭೌಗೋಳಿಕ ವ್ಯಾಪ್ತಿ ಬದಲಾಗಿರುವುದು ಹಳೆಯ ದಾಖಲೆಗಳನ್ನು ಮ್ಯಾಪ್ ಮಾಡುವುದನ್ನು ಕಷ್ಟಕರವಾಗಿಸಿದೆ. ಜೊತೆಗೆ, ಮಹದೇವಪುರ ಸೇರಿದಂತೆ ಹಲವು ಕ್ಷೇತ್ರಗಳ ಕೆಲವು ಬೂತ್‌ಗಳಲ್ಲಿನ 2002ರ ಮತಪಟ್ಟಿಯ ವಿವರವನ್ನು‌ ಚುನಾವಣಾ ಆಯೋಗವು ವೆಬ್‌ಸೈಟ್‌ ನಲ್ಲಿಯೂ, ಬಿಎಲ್‌ಒಗಳಿಗೂ ಒದಗಿಸಿಲ್ಲ ಎಂದು ಹೇಳಲಾಗಿದೆ. ಆಯೋಗದ ಎಡವಟ್ಟಿನಿಂದ ಈಗ ಭಾರೀ ಪ್ರಮಾಣದ ಮತದಾರರು ತಮ್ಮ ಹೆಸರುಗಳನ್ನು ಕಳೆದುಕೊಳ್ಳುವ ಅಪಾಯವಿದೆ.

ಇದರ ಜೊತೆಗೆ ಬಿಬಿಎಂಪಿ/ಜಿಬಿಎ ವ್ಯಾಪ್ತಿಯಲ್ಲಿ ಸಲ್ಲಿಕೆಯಾಗಿರುವ ನಮೂನೆಗಳ ಡಿಜಿಟಲೀಕರಣವೂ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇಂದಿಗೂ ಸುಮಾರು 16.52 ಲಕ್ಷ ಫಾರಂಗಳು ಡಿಜಿಟಲೀಕರಣಗೊಳ್ಳದೆ ಬಾಕಿ ಉಳಿದಿವೆ. ಪ್ರಸ್ತುತ ಬೆಂಗಳೂರು ದಕ್ಷಿಣದಲ್ಲಿ ಶೇ 42.6, ಕೇಂದ್ರದಲ್ಲಿ ಶೇ 44.6, ಉತ್ತರದಲ್ಲಿ ಶೇ 46.2 ಹಾಗೂ ನಗರ ಭಾಗದಲ್ಲಿ ಶೇ 48.8ರಷ್ಟು ಮಾತ್ರ ಡಿಜಿಟಲೀಕರಣ ಪೂರ್ಣಗೊಂಡಿರುವುದು ಚುನಾವಣಾ ಆಯೋಗದ ಮಂದಗತಿಯ ಕಾರ್ಯವೈಖರಿಯನ್ನು ಎತ್ತಿ ತೋರಿಸುತ್ತದೆ. ಇದಲ್ಲದೆ, ತಾಂತ್ರಿಕ‌ ವ್ಯತ್ಯಾಸ ಹಾಗೂ ಮ್ಯಾಪಿಂಗ್ ದೋಷಗಳ ಕಾರಣದಿಂದಾಗಿ ರಾಜ್ಯಾದ್ಯಂತ ಒಟ್ಟು 2 ಕೋಟಿ ಮತದಾರರ ಹೆಸರುಗಳನ್ನು ಆಯೋಗವು ಅಳಿಸಿ ಹಾಕುವ ಅಪಾಯವಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಈ ಗೊಂದಲಗಳ ನಡುವೆಯೂ ನಿಜವಾದ ಹಾಗೂ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡದಂತೆ ತಡೆಯಲು ಆಯೋಗಕ್ಕೆ ಆಗಸ್ಟ್ 8ರವರೆಗೆ ಕಾಲಾವಕಾಶವಿದೆ. ಗೈರುಹಾಜರಾಗಿದ್ದಾರೆ ಅಥವಾ ಸ್ಥಳಾಂತರಗೊಂಡಿದ್ದಾರೆ ಎಂದು ತಪ್ಪಾಗಿ ಗುರುತಿಸಲ್ಪಟ್ಟಿರುವ ನಿಜವಾದ ಮತದಾರರು ಕೂಡಲೇ ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳನ್ನು (BLO) ಸಂಪರ್ಕಿಸಿ ಅಗತ್ಯ ಫಾರಂ ಸಲ್ಲಿಸಬೇಕಿದೆ.

2002ರ ಮಾಹಿತಿಯೊಂದಿಗೆ ಮ್ಯಾಪ್ ಆಗದಿದ್ದರೂ ಫಾರಂ ಸಲ್ಲಿಸಲು ಅವಕಾಶವಿದ್ದು, ಈಗಾಗಲೇ ಮ್ಯಾಪ್ ಆಗದ 29 ಲಕ್ಷಕ್ಕೂ ಹೆಚ್ಚು ಮತದಾರರು ಅರ್ಜಿ ಸಲ್ಲಿಸಿ ಕರಡು ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (BLA) ಮತ್ತು ನಾಗರಿಕ ಸಮಾಜದ ಸಂಘಟನೆಗಳು ಆಯೋಗ ಹಂಚಿಕೊಂಡಿರುವ ಎಸ್​​ಡಿಡಿಒ ಪಟ್ಟಿಯನ್ನು ಪರಿಶೀಲಿಸಿ, ತಳಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ಯಾವುದೇ ಅರ್ಹ ನಾಗರಿಕನ ಮತದಾನದ ಹಕ್ಕು ಕಸಿದುಕೊಳ್ಳದಂತೆ ನೋಡಿಕೊಳ್ಳಬೇಕಾದ ತುರ್ತು ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...