HomeಅಂಕಣಗಳುKarnataka against SIRSIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

- Advertisement -
- Advertisement -

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ ಸುಮಾರು ಒಂದು ಕೋಟಿಗೂ ಹೆಚ್ಚು ಮತದಾರರು ಬೆಂಗಳೂರಿನಲ್ಲೇ ಇದ್ದಾರೆ. ಆದರೆ, ಈ ಪರಿಷ್ಕರಣೆ ವೇಳೆ ರಾಜ್ಯಾದ್ಯಂತ ಪತ್ತೆಯಾಗಿರುವ ಒಟ್ಟು 84 ಲಕ್ಷ ಎಸ್​​ಡಿಡಿಒ (ASDDO – ಗೈರುಹಾಜರಿ, ಸ್ಥಳಾಂತರ, ಮೃತ, ನಕಲಿ ಮತ್ತು ಇತರೆ) ಮತದಾರರ ಪೈಕಿ ಸಿಂಹಪಾಲು ಅಂದರೆ ಬರೋಬ್ಬರಿ 36.75 ಲಕ್ಷ ಮತದಾರರು ಬೆಂಗಳೂರಿನಲ್ಲೇ ಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಇದು ರಾಜ್ಯದ ಒಟ್ಟು ಎಸ್​​ಡಿಡಿಒ ಮತದಾರರ ಪೈಕಿ ಶೇ 46.7 ರಷ್ಟಿದ್ದು, ಬೆಂಗಳೂರು ನಗರದಲ್ಲಿ 13.55 ಲಕ್ಷ, ಬೆಂಗಳೂರು ಉತ್ತರದಲ್ಲಿ 9 ಲಕ್ಷ, ದಕ್ಷಿಣದಲ್ಲಿ 9.35 ಲಕ್ಷ ಹಾಗೂ ಕೇಂದ್ರದಲ್ಲಿ 7.40 ಲಕ್ಷ ಮತದಾರರು ಈ ಪಟ್ಟಿಗೆ ಸೇರಿದ್ದಾರೆ. ಹೀಗೆ ಗುರುತಿಸಲ್ಪಟ್ಟ ಹೆಸರುಗಳು ಮುಂಬರುವ ಆಗಸ್ಟ್ 17ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಡಲ್ಪಡುವ ಭೀತಿಯಲ್ಲಿದ್ದು, ಲಕ್ಷಾಂತರ ಕನ್ನಡಿಗರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಳ್ಳುವ ಅಪಾಯ ಎದುರಾಗಿದೆ.

ಇಂತಹ ತಾಂತ್ರಿಕ ಪ್ರಕ್ರಿಯೆಗಳ ನಡುವೆ ಸದ್ದಿಲ್ಲದೆ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ನಾಗರಿಕರ ಕಥೆಗಳು ಈಗ ಮನೆಮನೆಯಲ್ಲಿ ಕೇಳಿಬರುತ್ತಿವೆ. ಬೆಂಗಳೂರು ಕೇಂದ್ರ ವ್ಯಾಪ್ತಿಯ ಶಾಂತಿನಗರ ವಿಧಾನಸಭಾ ಕ್ಷೇತ್ರದ ನಿವಾಸಿ, 48 ವರ್ಷದ ಸೈಯದ್ ಆಸಿಫ್ ಈ ಕುರಿತು ತಮ್ಮ ಅಳಲು ತೋಡಿಕೊಳ್ಳುತ್ತಾ,

“ನಾವು ಕಳೆದ 25 ವರ್ಷಗಳಿಂದ ಇದೇ ಗಲ್ಲಿಯಲ್ಲಿ, ಇದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ಕಳೆದ ಪ್ರತಿಯೊಂದು ಚುನಾವಣೆಯಲ್ಲೂ ಮತ ಚಲಾಯಿಸಿದ್ದೇವೆ. ಆದರೆ ದಿಢೀರನೆ ಅಧಿಕಾರಿಗಳು ಬಂದು ನಮ್ಮ ಹೆಸರನ್ನು ‘ಸ್ಥಳಾಂತರಗೊಂಡಿದ್ದಾರೆ’ (Shifted)ಎಂದು ಪಟ್ಟಿಯಲ್ಲಿ ಬರೆದುಕೊಂಡು ಹೋಗಿದ್ದಾರೆ. ನಾವು ಎಲ್ಲಿಗೂ ಹೋಗಿಲ್ಲ, ಇಲ್ಲೇ ಇದ್ದೇವೆ ಎಂದು ಬಿಎಲ್‌ಒಗೆ ದಾಖಲೆ ತೋರಿಸಿದರೂ ತಾಂತ್ರಿಕ ಕಾರಣ ಹೇಳಿ ಅಲೆದಾಡಿಸುತ್ತಿದ್ದಾರೆ. 2002ರ ಹಳೆಯ ದಾಖಲೆ ಮ್ಯಾಪ್ ಆಗಿಲ್ಲ ಎಂಬ ನೆಪವೊಡ್ಡಿ ನಮ್ಮಂತ  ಬಡವರನ್ನು  ಹೊರಟಿರುವುದು ಯಾವ ನ್ಯಾಯ?” ಎಂದು ಕಳವಳ ವ್ಯಕ್ತಪಡಿಸುತ್ತಾರೆ. ಆಸಿಫ್ ಅವರಂತೆಯೇ ಲಕ್ಷಾಂತರ ಮತದಾರರು ಈಗ ತಮಗರಿವಿಲ್ಲದಂತೆಯೇ ‘ಅದೃಶ್ಯ ಮತದಾರರಾಗಿ’ ಬದಲಾಗುವ ಅಪಾಯದಲ್ಲಿದ್ದಾರೆ.

ಮಹಾನಗರ ಬೆಂಗಳೂರಿನಲ್ಲಿ ಈ ಪ್ರಮಾಣದಲ್ಲಿ ಎಸ್​​ಡಿಡಿಒ ಪ್ರಕರಣಗಳು ಹೆಚ್ಚಾಗಲು ಹಾಗೂ ಪ್ರಕ್ರಿಯೆ ನಿಧಾನಗೊಳ್ಳಲು ಆಡಳಿತಾತ್ಮಕ ಗೊಂದಲಗಳೇ ಪ್ರಮುಖ ಕಾರಣವಾಗಿವೆ. ಮುಖ್ಯವಾಗಿ 2002ರ ಹಳೆಯ ಮತದಾರರ ದಾಖಲೆಗಳನ್ನು ಪತ್ತೆಹಚ್ಚುವಲ್ಲಿ ಎದುರಾಗುತ್ತಿರುವ ಸಮಸ್ಯೆ ಹಾಗೂ 2008ರ ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆಗಳ ಭೌಗೋಳಿಕ ವ್ಯಾಪ್ತಿ ಬದಲಾಗಿರುವುದು ಹಳೆಯ ದಾಖಲೆಗಳನ್ನು ಮ್ಯಾಪ್ ಮಾಡುವುದನ್ನು ಕಷ್ಟಕರವಾಗಿಸಿದೆ. ಜೊತೆಗೆ, ಮಹದೇವಪುರ ಸೇರಿದಂತೆ ಹಲವು ಕ್ಷೇತ್ರಗಳ ಕೆಲವು ಬೂತ್‌ಗಳಲ್ಲಿನ 2002ರ ಮತಪಟ್ಟಿಯ ವಿವರವನ್ನು‌ ಚುನಾವಣಾ ಆಯೋಗವು ವೆಬ್‌ಸೈಟ್‌ ನಲ್ಲಿಯೂ, ಬಿಎಲ್‌ಒಗಳಿಗೂ ಒದಗಿಸಿಲ್ಲ ಎಂದು ಹೇಳಲಾಗಿದೆ. ಆಯೋಗದ ಎಡವಟ್ಟಿನಿಂದ ಈಗ ಭಾರೀ ಪ್ರಮಾಣದ ಮತದಾರರು ತಮ್ಮ ಹೆಸರುಗಳನ್ನು ಕಳೆದುಕೊಳ್ಳುವ ಅಪಾಯವಿದೆ.

ಇದರ ಜೊತೆಗೆ ಬಿಬಿಎಂಪಿ/ಜಿಬಿಎ ವ್ಯಾಪ್ತಿಯಲ್ಲಿ ಸಲ್ಲಿಕೆಯಾಗಿರುವ ನಮೂನೆಗಳ ಡಿಜಿಟಲೀಕರಣವೂ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇಂದಿಗೂ ಸುಮಾರು 16.52 ಲಕ್ಷ ಫಾರಂಗಳು ಡಿಜಿಟಲೀಕರಣಗೊಳ್ಳದೆ ಬಾಕಿ ಉಳಿದಿವೆ. ಪ್ರಸ್ತುತ ಬೆಂಗಳೂರು ದಕ್ಷಿಣದಲ್ಲಿ ಶೇ 42.6, ಕೇಂದ್ರದಲ್ಲಿ ಶೇ 44.6, ಉತ್ತರದಲ್ಲಿ ಶೇ 46.2 ಹಾಗೂ ನಗರ ಭಾಗದಲ್ಲಿ ಶೇ 48.8ರಷ್ಟು ಮಾತ್ರ ಡಿಜಿಟಲೀಕರಣ ಪೂರ್ಣಗೊಂಡಿರುವುದು ಚುನಾವಣಾ ಆಯೋಗದ ಮಂದಗತಿಯ ಕಾರ್ಯವೈಖರಿಯನ್ನು ಎತ್ತಿ ತೋರಿಸುತ್ತದೆ. ಇದಲ್ಲದೆ, ತಾಂತ್ರಿಕ‌ ವ್ಯತ್ಯಾಸ ಹಾಗೂ ಮ್ಯಾಪಿಂಗ್ ದೋಷಗಳ ಕಾರಣದಿಂದಾಗಿ ರಾಜ್ಯಾದ್ಯಂತ ಒಟ್ಟು 2 ಕೋಟಿ ಮತದಾರರ ಹೆಸರುಗಳನ್ನು ಆಯೋಗವು ಅಳಿಸಿ ಹಾಕುವ ಅಪಾಯವಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಈ ಗೊಂದಲಗಳ ನಡುವೆಯೂ ನಿಜವಾದ ಹಾಗೂ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡದಂತೆ ತಡೆಯಲು ಆಯೋಗಕ್ಕೆ ಆಗಸ್ಟ್ 8ರವರೆಗೆ ಕಾಲಾವಕಾಶವಿದೆ. ಗೈರುಹಾಜರಾಗಿದ್ದಾರೆ ಅಥವಾ ಸ್ಥಳಾಂತರಗೊಂಡಿದ್ದಾರೆ ಎಂದು ತಪ್ಪಾಗಿ ಗುರುತಿಸಲ್ಪಟ್ಟಿರುವ ನಿಜವಾದ ಮತದಾರರು ಕೂಡಲೇ ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳನ್ನು (BLO) ಸಂಪರ್ಕಿಸಿ ಅಗತ್ಯ ಫಾರಂ ಸಲ್ಲಿಸಬೇಕಿದೆ.

2002ರ ಮಾಹಿತಿಯೊಂದಿಗೆ ಮ್ಯಾಪ್ ಆಗದಿದ್ದರೂ ಫಾರಂ ಸಲ್ಲಿಸಲು ಅವಕಾಶವಿದ್ದು, ಈಗಾಗಲೇ ಮ್ಯಾಪ್ ಆಗದ 29 ಲಕ್ಷಕ್ಕೂ ಹೆಚ್ಚು ಮತದಾರರು ಅರ್ಜಿ ಸಲ್ಲಿಸಿ ಕರಡು ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (BLA) ಮತ್ತು ನಾಗರಿಕ ಸಮಾಜದ ಸಂಘಟನೆಗಳು ಆಯೋಗ ಹಂಚಿಕೊಂಡಿರುವ ಎಸ್​​ಡಿಡಿಒ ಪಟ್ಟಿಯನ್ನು ಪರಿಶೀಲಿಸಿ, ತಳಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ಯಾವುದೇ ಅರ್ಹ ನಾಗರಿಕನ ಮತದಾನದ ಹಕ್ಕು ಕಸಿದುಕೊಳ್ಳದಂತೆ ನೋಡಿಕೊಳ್ಳಬೇಕಾದ ತುರ್ತು ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...