Homeಕರೋನಾ ತಲ್ಲಣಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ.

- Advertisement -
- Advertisement -

ಕಳೆದ ವಾರ, ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲಾ ಜೈಲಿನಲ್ಲಿರುವ 86 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರಲ್ಲಿ ಜೈಲಿಗೆ ಸಾಮಗ್ರಿಗಳನ್ನು ತರುವ ಜೈಲಿನ ಸಿಬ್ಬಂದಿ ಮತ್ತು ಒಬ್ಬ ಕಾರ್ಮಿಕ ಸೇರಿದ್ದಾರೆ ಎಂದು ಅನಂತ್‌ನಾಗ್ ಜೈಲಿನ ಅಧೀಕ್ಷಕ ಸಿರೋಜ್ ಅಹ್ಮದ್ ಭಟ್ ಹೇಳಿದ್ದಾರೆ.

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ. “ಅವರಲ್ಲಿ 48 ಜನರಿಗೆ ಬೇರೆ ಕಡೆ ಸೌಲಭ್ಯ ಒದಗಿಸಿ ಕ್ವಾರಂಟೈನ್ ಮಾಡಲಾಗಿದೆ. 38 ಜನರನ್ನು ಜೈಲಿನೊಳಗೆ ಕ್ವಾರಂಟೈನ್ ಮಾಡಲಾಗಿದೆ” ಎಂದು ಭಟ್ ಹೇಳಿದರು.

ಅಸ್ಸಾಂನ ಗೌಹಾಟಿಯ ಕೇಂದ್ರ ಕಾರಾಗೃಹದಲ್ಲಿರುವ, ಡಿಸೆಂಬರ್‌ನಲ್ಲಿ ನಡೆದ ಸಿಎಎ ಕಾಯ್ದೆ ವಿರೋಧಿ ಪ್ರತಿಭಟನೆಗಾಗಿ ಬಂಧಿಸಲ್ಪಟ್ಟ ಕಾರ್ಯಕರ್ತರಲ್ಲಿ ಒಬ್ಬರಾದ ರೈತ ಮುಖಂಡ ಅಖಿಲ್ ಗೊಗೊಯ್ ಅವರು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿದುಬಂದಿದೆ.

ಈ ವಾರಾಂತ್ಯದಲ್ಲಿ ಗುವಾಹಟಿ ಕೇಂದ್ರ ಕಾರಾಗೃಹದಲ್ಲಿರುವ ಕೊರೊನಾ ಸೋಂಕಿತರ ಸಂಖ್ಯೆ 438 ಕ್ಕೆ ಏರಿತು. ಅವರಲ್ಲಿ ಮೂವರು ಜೈಲು ಸಿಬ್ಬಂದಿ ಎಂದು ಅಸ್ಸಾಂನ ಜೈಲುಗಳ ಇನ್ಸ್‌ಪೆಕ್ಟರ್ ಜನರಲ್ ದಶರಥ್ ದಾಸ್ ಹೇಳಿದ್ದಾರೆ. ಜೈಲಿನಲ್ಲಿ ಸುಮಾರು 1,000 ಖೈದಿಗಳು ಇದ್ದಾರೆ. ಅವರಲ್ಲಿ ಸುಮಾರು 43% ರಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ. ಎಲ್ಲಾ ಖೈದಿಗಳನ್ನು ಪರೀಕ್ಷಿಸಲಾಯಿತು ಎಂದು ದಾಸ್ ಹೇಳಿದರು.

ಸೋಂಕಿತರಲ್ಲಿ, 154 ಖೈದಿಗಳು ಪ್ರಸ್ತುತ ನಗರದ ಮತ್ತು ಸುತ್ತಮುತ್ತಲಿನ ವಿವಿಧ ವೈದ್ಯಕೀಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಉಳಿದವರು ಚೇತರಿಸಿಕೊಂಡು ಮತ್ತೆ ಜೈಲಿಗೆ ಮರಳಿದ್ದಾರೆ” ಎಂದು ದಾಸ್ ಹೇಳಿದರು.

ಗುವಾಹಟಿ ಮತ್ತು ದಕ್ಷಿಣ ಕಾಶ್ಮೀರ ಜೈಲುಗಳು, ದೇಶದ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾದ ಕೆಲವು ಪ್ರಕರಣಗಳಲ್ಲಿನ ಖೈದಿಗಳನ್ನು ಇರಿಸಿಕೊಂಡಿವೆ. ಅವರಲ್ಲಿ ಹಲವರು ರಾಜ್ಯದ ವಿರುದ್ಧದ ಅಪರಾಧದ ಆರೋಪಗಳನ್ನು ಹೊಂದಿದ್ದಾರೆ. ಸಾಂಕ್ರಾಮಿಕ ರೋಗವು ದೇಶವನ್ನು ಅಪ್ಪಳಿಸುತ್ತಿದ್ದಂತೆ ಭಾರತದಾದ್ಯಂತ ಜೈಲುಗಳು ಭಾಗಶಃ ಖಾಲಿಯಾಗಿದ್ದರೂ, ಇಲ್ಲಿನ ಖೈದಿಗಳಿಗೆ ಈ ಭಾಗ್ಯ ದೊರಕಿಲ್ಲ.

ಕೊರೊನಾ ಸೋಂಕು ಭಾರತದ ಕಿಕ್ಕಿರಿದ, ಆರೋಗ್ಯಕರವಲ್ಲದ ಕಾರಾಗೃಹಗಳನ್ನು ತಲುಪಿದ ನಂತರ, ಖೈದಿಗಳಲ್ಲಿ ಕಾಡ್ಗಿಚ್ಚಿನಂತೆ ಹರಡುವ ವೈರಸ್ ಅನ್ನು ತಡೆಯುವುದು ಕಷ್ಟಕರವಾಗಿತ್ತು. ಇದಕ್ಕೆ ಹೆದರಿ ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಚ್‌ನಲ್ಲಿ ಜೈಲುಗಳನ್ನು ಆದಷ್ಟು ಖಾಲಿ ಮಾಡುವಂತೆ ಆದೇಶಿಸಿತ್ತು.

ಅಂದಿನಿಂದ, ಜೂನ್ 20ರ ವೇಳೆಗೆ ದೆಹಲಿಯ ಮೂರು ಜೈಲುಗಳಿಂದ 4,129 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 26ರ ಹೊತ್ತಿಗೆ 18,000 ಖೈದಿಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಉತ್ತರ ಪ್ರದೇಶ ಹೇಳಿಕೊಂಡಿದೆ.

ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಅಸ್ಸಾಂ 3,550 ಖೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಮೇ ತಿಂಗಳಿನಲ್ಲಿ ವರದಿಯಾಗಿದೆ. ಇದರಲ್ಲಿ ಅಸ್ಸಾಂನ ವಿದೇಶಿ ನ್ಯಾಯಮಂಡಳಿಗಳು, ಅರೆ-ನ್ಯಾಯಾಂಗ ಸಂಸ್ಥೆಗಳು ಘೋಷಿಸಿದ ವಿದೇಶಿಯರ ಬಂಧನ ಕೇಂದ್ರಗಳಲ್ಲಿ ದಾಖಲಾದ 300 ಜನರನ್ನು ಒಳಗೊಂಡಿದೆ.

ಏಪ್ರಿಲ್ 23 ರ ಹೊತ್ತಿಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ 288 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಅನೇಕರ ಬಂಧನ ಆದೇಶಗಳನ್ನು ಈಗ ಸರ್ಕಾರ ರದ್ದುಪಡಿಸಿದೆ. ಅದರಲ್ಲಿ ಪೆರೋಲ್ ಅಥವಾ ಬಿಡುಗಡೆಗೆ ಅರ್ಹರಲ್ಲದವರಲ್ಲಿ ಉಗ್ರಗಾಮಿತ್ವ ಸಂಬಂಧಿತ ಆರೋಪಗಳ ಮೇಲೆ ಅಥವಾ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಬಂಧಿತ ಖೈದಿಗಳು ಸೇರಿದ್ದಾರೆ.

ಕಿಕ್ಕಿರಿದ ಜೈಲುಗಳಲ್ಲಿ ಉಳಿದವರು ಸೋಂಕಿನ ತೀವ್ರತೆಯನ್ನು ಎದುರಿಸಬೇಕಾಗಿದೆ.

ಕಾಶ್ಮೀರದ ಕಿಕ್ಕಿರಿದ ಜೈಲುಗಳು

“ನಾವು ಮಾರ್ಚ್‌ನಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು ಜೈಲು ಅಧೀಕ್ಷಕ ಸಿರೋಜ್ ಭಟ್ ಹೇಳಿದ್ದಾರೆ. “ಜಮ್ಮು ಕಾಶ್ಮೀರದಲ್ಲಿಯೇ ಮೊದಲಿಗೆ ಅನಂತ್ ನಾಗ್ ಜಿಲ್ಲಾ ಜೈಲು ಕೊರೊನಾ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಿತು. ಅದರ ನಂತರ ನಾವು ನಿಯಮಿತವಾಗಿ ಜೈಲು ಆವರಣದಲ್ಲಿ ಸೋಂಕುನಿವಾರಕಗಳನ್ನು ಸಿಂಪಡಿಸುವುದನ್ನು ಮುಂದುವರಿಸಿದ್ದೇವೆ” ಎಂದಿದ್ದಾರೆ.

ಸೋಂಕು ಹರಡುವುದನ್ನು ತಡೆಗಟ್ಟಲು ಜೈಲು ಸಂದರ್ಶಕರಿಗೆ ಮತ್ತು ಕೈದಿಗಳಿಗೆ ಮನೆಯಲ್ಲಿ ಬೇಯಿಸಿದ ಆಹಾರ ನೀಡುವುದನ್ನು ನಿರ್ಬಂಧಿಸಲಾಯಿತು ಎಂದು ಅವರು ಹೇಳಿದರು. “ಆದರೆ ಜೈಲು ಕಿಕ್ಕಿರಿದ ಕಾರಣ ಸಾಮಾಜಿಕ ಅಂತರ ಸಾಧ್ಯವಾಗಲಿಲ್ಲ” ಎಂದು ಅವರು ಒಪ್ಪಿಕೊಂಡರು.

ಗುವಾಹಟಿ ಕೇಂದ್ರ ಕಾರಾಗೃಹದಲ್ಲಿ, ಜೂನ್ 4 ರಂದು ಮೊದಲ ಪ್ರಕರಣ ಪತ್ತೆಯಾಗಿದೆ ಮತ್ತು ಜೈಲನ್ನು ತಕ್ಷಣವೇ ನಿಯಂತ್ರಣ ವಲಯವೆಂದು ಘೋಷಿಸಲಾಗಿದೆ ಎಂದು ದಾಸ್ ಹೇಳಿದರು.

“ಸೋಂಕಿತ ವ್ಯಕ್ತಿಯೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದಲ್ಲಿದ್ದ ಪ್ರತಿಯೊಬ್ಬರ ಸ್ವ್ಯಾಬ್ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಪರೀಕ್ಷಾ ಫಲಿತಾಂಶಗಳನ್ನು ಘೋಷಿಸುವವರೆಗೆ ಅವರೆಲ್ಲರನ್ನೂ ಪ್ರತ್ಯೇಕವಾಗಿ ಇಡಲಾಗಿದೆ” ಎಂದು ದಾಸ್ ಹೇಳಿದರು. ಎಲ್ಲಾ ಸಂಪರ್ಕಿತರಿಗೂ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದರು.

14 ದಿನಗಳ ನಂತರ ಜೈಲಿನ ನಿಯಂತ್ರಣ ವಲಯದ ಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗುತ್ತಿದ್ದಂತೆ, ಹಲವಾರು ಹೊಸ ಖೈದಿಗಳನ್ನು ಕೊರೊನಾ ಚಿಕಿತ್ಸೆಗೆ ದಾಖಲಿಸಲಾಯಿತು. “ಸೋಂಕು ಹೊಸ ಖೈದಿಗಳಲ್ಲೇ ಹೆಚ್ಚಾಗಿರಬಹುದು” ಎಂದು ದಾಸ್ ಹೇಳಿದರು.


ಇದನ್ನೂ ಓದಿ: ಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...