Homeಕರೋನಾ ತಲ್ಲಣಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ.

- Advertisement -
- Advertisement -

ಕಳೆದ ವಾರ, ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲಾ ಜೈಲಿನಲ್ಲಿರುವ 86 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರಲ್ಲಿ ಜೈಲಿಗೆ ಸಾಮಗ್ರಿಗಳನ್ನು ತರುವ ಜೈಲಿನ ಸಿಬ್ಬಂದಿ ಮತ್ತು ಒಬ್ಬ ಕಾರ್ಮಿಕ ಸೇರಿದ್ದಾರೆ ಎಂದು ಅನಂತ್‌ನಾಗ್ ಜೈಲಿನ ಅಧೀಕ್ಷಕ ಸಿರೋಜ್ ಅಹ್ಮದ್ ಭಟ್ ಹೇಳಿದ್ದಾರೆ.

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ. “ಅವರಲ್ಲಿ 48 ಜನರಿಗೆ ಬೇರೆ ಕಡೆ ಸೌಲಭ್ಯ ಒದಗಿಸಿ ಕ್ವಾರಂಟೈನ್ ಮಾಡಲಾಗಿದೆ. 38 ಜನರನ್ನು ಜೈಲಿನೊಳಗೆ ಕ್ವಾರಂಟೈನ್ ಮಾಡಲಾಗಿದೆ” ಎಂದು ಭಟ್ ಹೇಳಿದರು.

ಅಸ್ಸಾಂನ ಗೌಹಾಟಿಯ ಕೇಂದ್ರ ಕಾರಾಗೃಹದಲ್ಲಿರುವ, ಡಿಸೆಂಬರ್‌ನಲ್ಲಿ ನಡೆದ ಸಿಎಎ ಕಾಯ್ದೆ ವಿರೋಧಿ ಪ್ರತಿಭಟನೆಗಾಗಿ ಬಂಧಿಸಲ್ಪಟ್ಟ ಕಾರ್ಯಕರ್ತರಲ್ಲಿ ಒಬ್ಬರಾದ ರೈತ ಮುಖಂಡ ಅಖಿಲ್ ಗೊಗೊಯ್ ಅವರು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿದುಬಂದಿದೆ.

ಈ ವಾರಾಂತ್ಯದಲ್ಲಿ ಗುವಾಹಟಿ ಕೇಂದ್ರ ಕಾರಾಗೃಹದಲ್ಲಿರುವ ಕೊರೊನಾ ಸೋಂಕಿತರ ಸಂಖ್ಯೆ 438 ಕ್ಕೆ ಏರಿತು. ಅವರಲ್ಲಿ ಮೂವರು ಜೈಲು ಸಿಬ್ಬಂದಿ ಎಂದು ಅಸ್ಸಾಂನ ಜೈಲುಗಳ ಇನ್ಸ್‌ಪೆಕ್ಟರ್ ಜನರಲ್ ದಶರಥ್ ದಾಸ್ ಹೇಳಿದ್ದಾರೆ. ಜೈಲಿನಲ್ಲಿ ಸುಮಾರು 1,000 ಖೈದಿಗಳು ಇದ್ದಾರೆ. ಅವರಲ್ಲಿ ಸುಮಾರು 43% ರಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ. ಎಲ್ಲಾ ಖೈದಿಗಳನ್ನು ಪರೀಕ್ಷಿಸಲಾಯಿತು ಎಂದು ದಾಸ್ ಹೇಳಿದರು.

ಸೋಂಕಿತರಲ್ಲಿ, 154 ಖೈದಿಗಳು ಪ್ರಸ್ತುತ ನಗರದ ಮತ್ತು ಸುತ್ತಮುತ್ತಲಿನ ವಿವಿಧ ವೈದ್ಯಕೀಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಉಳಿದವರು ಚೇತರಿಸಿಕೊಂಡು ಮತ್ತೆ ಜೈಲಿಗೆ ಮರಳಿದ್ದಾರೆ” ಎಂದು ದಾಸ್ ಹೇಳಿದರು.

ಗುವಾಹಟಿ ಮತ್ತು ದಕ್ಷಿಣ ಕಾಶ್ಮೀರ ಜೈಲುಗಳು, ದೇಶದ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾದ ಕೆಲವು ಪ್ರಕರಣಗಳಲ್ಲಿನ ಖೈದಿಗಳನ್ನು ಇರಿಸಿಕೊಂಡಿವೆ. ಅವರಲ್ಲಿ ಹಲವರು ರಾಜ್ಯದ ವಿರುದ್ಧದ ಅಪರಾಧದ ಆರೋಪಗಳನ್ನು ಹೊಂದಿದ್ದಾರೆ. ಸಾಂಕ್ರಾಮಿಕ ರೋಗವು ದೇಶವನ್ನು ಅಪ್ಪಳಿಸುತ್ತಿದ್ದಂತೆ ಭಾರತದಾದ್ಯಂತ ಜೈಲುಗಳು ಭಾಗಶಃ ಖಾಲಿಯಾಗಿದ್ದರೂ, ಇಲ್ಲಿನ ಖೈದಿಗಳಿಗೆ ಈ ಭಾಗ್ಯ ದೊರಕಿಲ್ಲ.

ಕೊರೊನಾ ಸೋಂಕು ಭಾರತದ ಕಿಕ್ಕಿರಿದ, ಆರೋಗ್ಯಕರವಲ್ಲದ ಕಾರಾಗೃಹಗಳನ್ನು ತಲುಪಿದ ನಂತರ, ಖೈದಿಗಳಲ್ಲಿ ಕಾಡ್ಗಿಚ್ಚಿನಂತೆ ಹರಡುವ ವೈರಸ್ ಅನ್ನು ತಡೆಯುವುದು ಕಷ್ಟಕರವಾಗಿತ್ತು. ಇದಕ್ಕೆ ಹೆದರಿ ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಚ್‌ನಲ್ಲಿ ಜೈಲುಗಳನ್ನು ಆದಷ್ಟು ಖಾಲಿ ಮಾಡುವಂತೆ ಆದೇಶಿಸಿತ್ತು.

ಅಂದಿನಿಂದ, ಜೂನ್ 20ರ ವೇಳೆಗೆ ದೆಹಲಿಯ ಮೂರು ಜೈಲುಗಳಿಂದ 4,129 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 26ರ ಹೊತ್ತಿಗೆ 18,000 ಖೈದಿಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಉತ್ತರ ಪ್ರದೇಶ ಹೇಳಿಕೊಂಡಿದೆ.

ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಅಸ್ಸಾಂ 3,550 ಖೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಮೇ ತಿಂಗಳಿನಲ್ಲಿ ವರದಿಯಾಗಿದೆ. ಇದರಲ್ಲಿ ಅಸ್ಸಾಂನ ವಿದೇಶಿ ನ್ಯಾಯಮಂಡಳಿಗಳು, ಅರೆ-ನ್ಯಾಯಾಂಗ ಸಂಸ್ಥೆಗಳು ಘೋಷಿಸಿದ ವಿದೇಶಿಯರ ಬಂಧನ ಕೇಂದ್ರಗಳಲ್ಲಿ ದಾಖಲಾದ 300 ಜನರನ್ನು ಒಳಗೊಂಡಿದೆ.

ಏಪ್ರಿಲ್ 23 ರ ಹೊತ್ತಿಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ 288 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಅನೇಕರ ಬಂಧನ ಆದೇಶಗಳನ್ನು ಈಗ ಸರ್ಕಾರ ರದ್ದುಪಡಿಸಿದೆ. ಅದರಲ್ಲಿ ಪೆರೋಲ್ ಅಥವಾ ಬಿಡುಗಡೆಗೆ ಅರ್ಹರಲ್ಲದವರಲ್ಲಿ ಉಗ್ರಗಾಮಿತ್ವ ಸಂಬಂಧಿತ ಆರೋಪಗಳ ಮೇಲೆ ಅಥವಾ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಬಂಧಿತ ಖೈದಿಗಳು ಸೇರಿದ್ದಾರೆ.

ಕಿಕ್ಕಿರಿದ ಜೈಲುಗಳಲ್ಲಿ ಉಳಿದವರು ಸೋಂಕಿನ ತೀವ್ರತೆಯನ್ನು ಎದುರಿಸಬೇಕಾಗಿದೆ.

ಕಾಶ್ಮೀರದ ಕಿಕ್ಕಿರಿದ ಜೈಲುಗಳು

“ನಾವು ಮಾರ್ಚ್‌ನಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು ಜೈಲು ಅಧೀಕ್ಷಕ ಸಿರೋಜ್ ಭಟ್ ಹೇಳಿದ್ದಾರೆ. “ಜಮ್ಮು ಕಾಶ್ಮೀರದಲ್ಲಿಯೇ ಮೊದಲಿಗೆ ಅನಂತ್ ನಾಗ್ ಜಿಲ್ಲಾ ಜೈಲು ಕೊರೊನಾ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಿತು. ಅದರ ನಂತರ ನಾವು ನಿಯಮಿತವಾಗಿ ಜೈಲು ಆವರಣದಲ್ಲಿ ಸೋಂಕುನಿವಾರಕಗಳನ್ನು ಸಿಂಪಡಿಸುವುದನ್ನು ಮುಂದುವರಿಸಿದ್ದೇವೆ” ಎಂದಿದ್ದಾರೆ.

ಸೋಂಕು ಹರಡುವುದನ್ನು ತಡೆಗಟ್ಟಲು ಜೈಲು ಸಂದರ್ಶಕರಿಗೆ ಮತ್ತು ಕೈದಿಗಳಿಗೆ ಮನೆಯಲ್ಲಿ ಬೇಯಿಸಿದ ಆಹಾರ ನೀಡುವುದನ್ನು ನಿರ್ಬಂಧಿಸಲಾಯಿತು ಎಂದು ಅವರು ಹೇಳಿದರು. “ಆದರೆ ಜೈಲು ಕಿಕ್ಕಿರಿದ ಕಾರಣ ಸಾಮಾಜಿಕ ಅಂತರ ಸಾಧ್ಯವಾಗಲಿಲ್ಲ” ಎಂದು ಅವರು ಒಪ್ಪಿಕೊಂಡರು.

ಗುವಾಹಟಿ ಕೇಂದ್ರ ಕಾರಾಗೃಹದಲ್ಲಿ, ಜೂನ್ 4 ರಂದು ಮೊದಲ ಪ್ರಕರಣ ಪತ್ತೆಯಾಗಿದೆ ಮತ್ತು ಜೈಲನ್ನು ತಕ್ಷಣವೇ ನಿಯಂತ್ರಣ ವಲಯವೆಂದು ಘೋಷಿಸಲಾಗಿದೆ ಎಂದು ದಾಸ್ ಹೇಳಿದರು.

“ಸೋಂಕಿತ ವ್ಯಕ್ತಿಯೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದಲ್ಲಿದ್ದ ಪ್ರತಿಯೊಬ್ಬರ ಸ್ವ್ಯಾಬ್ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಪರೀಕ್ಷಾ ಫಲಿತಾಂಶಗಳನ್ನು ಘೋಷಿಸುವವರೆಗೆ ಅವರೆಲ್ಲರನ್ನೂ ಪ್ರತ್ಯೇಕವಾಗಿ ಇಡಲಾಗಿದೆ” ಎಂದು ದಾಸ್ ಹೇಳಿದರು. ಎಲ್ಲಾ ಸಂಪರ್ಕಿತರಿಗೂ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದರು.

14 ದಿನಗಳ ನಂತರ ಜೈಲಿನ ನಿಯಂತ್ರಣ ವಲಯದ ಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗುತ್ತಿದ್ದಂತೆ, ಹಲವಾರು ಹೊಸ ಖೈದಿಗಳನ್ನು ಕೊರೊನಾ ಚಿಕಿತ್ಸೆಗೆ ದಾಖಲಿಸಲಾಯಿತು. “ಸೋಂಕು ಹೊಸ ಖೈದಿಗಳಲ್ಲೇ ಹೆಚ್ಚಾಗಿರಬಹುದು” ಎಂದು ದಾಸ್ ಹೇಳಿದರು.


ಇದನ್ನೂ ಓದಿ: ಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...