Homeಕರೋನಾ ತಲ್ಲಣಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ.

- Advertisement -
- Advertisement -

ಕಳೆದ ವಾರ, ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲಾ ಜೈಲಿನಲ್ಲಿರುವ 86 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರಲ್ಲಿ ಜೈಲಿಗೆ ಸಾಮಗ್ರಿಗಳನ್ನು ತರುವ ಜೈಲಿನ ಸಿಬ್ಬಂದಿ ಮತ್ತು ಒಬ್ಬ ಕಾರ್ಮಿಕ ಸೇರಿದ್ದಾರೆ ಎಂದು ಅನಂತ್‌ನಾಗ್ ಜೈಲಿನ ಅಧೀಕ್ಷಕ ಸಿರೋಜ್ ಅಹ್ಮದ್ ಭಟ್ ಹೇಳಿದ್ದಾರೆ.

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ. “ಅವರಲ್ಲಿ 48 ಜನರಿಗೆ ಬೇರೆ ಕಡೆ ಸೌಲಭ್ಯ ಒದಗಿಸಿ ಕ್ವಾರಂಟೈನ್ ಮಾಡಲಾಗಿದೆ. 38 ಜನರನ್ನು ಜೈಲಿನೊಳಗೆ ಕ್ವಾರಂಟೈನ್ ಮಾಡಲಾಗಿದೆ” ಎಂದು ಭಟ್ ಹೇಳಿದರು.

ಅಸ್ಸಾಂನ ಗೌಹಾಟಿಯ ಕೇಂದ್ರ ಕಾರಾಗೃಹದಲ್ಲಿರುವ, ಡಿಸೆಂಬರ್‌ನಲ್ಲಿ ನಡೆದ ಸಿಎಎ ಕಾಯ್ದೆ ವಿರೋಧಿ ಪ್ರತಿಭಟನೆಗಾಗಿ ಬಂಧಿಸಲ್ಪಟ್ಟ ಕಾರ್ಯಕರ್ತರಲ್ಲಿ ಒಬ್ಬರಾದ ರೈತ ಮುಖಂಡ ಅಖಿಲ್ ಗೊಗೊಯ್ ಅವರು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿದುಬಂದಿದೆ.

ಈ ವಾರಾಂತ್ಯದಲ್ಲಿ ಗುವಾಹಟಿ ಕೇಂದ್ರ ಕಾರಾಗೃಹದಲ್ಲಿರುವ ಕೊರೊನಾ ಸೋಂಕಿತರ ಸಂಖ್ಯೆ 438 ಕ್ಕೆ ಏರಿತು. ಅವರಲ್ಲಿ ಮೂವರು ಜೈಲು ಸಿಬ್ಬಂದಿ ಎಂದು ಅಸ್ಸಾಂನ ಜೈಲುಗಳ ಇನ್ಸ್‌ಪೆಕ್ಟರ್ ಜನರಲ್ ದಶರಥ್ ದಾಸ್ ಹೇಳಿದ್ದಾರೆ. ಜೈಲಿನಲ್ಲಿ ಸುಮಾರು 1,000 ಖೈದಿಗಳು ಇದ್ದಾರೆ. ಅವರಲ್ಲಿ ಸುಮಾರು 43% ರಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ. ಎಲ್ಲಾ ಖೈದಿಗಳನ್ನು ಪರೀಕ್ಷಿಸಲಾಯಿತು ಎಂದು ದಾಸ್ ಹೇಳಿದರು.

ಸೋಂಕಿತರಲ್ಲಿ, 154 ಖೈದಿಗಳು ಪ್ರಸ್ತುತ ನಗರದ ಮತ್ತು ಸುತ್ತಮುತ್ತಲಿನ ವಿವಿಧ ವೈದ್ಯಕೀಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಉಳಿದವರು ಚೇತರಿಸಿಕೊಂಡು ಮತ್ತೆ ಜೈಲಿಗೆ ಮರಳಿದ್ದಾರೆ” ಎಂದು ದಾಸ್ ಹೇಳಿದರು.

ಗುವಾಹಟಿ ಮತ್ತು ದಕ್ಷಿಣ ಕಾಶ್ಮೀರ ಜೈಲುಗಳು, ದೇಶದ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾದ ಕೆಲವು ಪ್ರಕರಣಗಳಲ್ಲಿನ ಖೈದಿಗಳನ್ನು ಇರಿಸಿಕೊಂಡಿವೆ. ಅವರಲ್ಲಿ ಹಲವರು ರಾಜ್ಯದ ವಿರುದ್ಧದ ಅಪರಾಧದ ಆರೋಪಗಳನ್ನು ಹೊಂದಿದ್ದಾರೆ. ಸಾಂಕ್ರಾಮಿಕ ರೋಗವು ದೇಶವನ್ನು ಅಪ್ಪಳಿಸುತ್ತಿದ್ದಂತೆ ಭಾರತದಾದ್ಯಂತ ಜೈಲುಗಳು ಭಾಗಶಃ ಖಾಲಿಯಾಗಿದ್ದರೂ, ಇಲ್ಲಿನ ಖೈದಿಗಳಿಗೆ ಈ ಭಾಗ್ಯ ದೊರಕಿಲ್ಲ.

ಕೊರೊನಾ ಸೋಂಕು ಭಾರತದ ಕಿಕ್ಕಿರಿದ, ಆರೋಗ್ಯಕರವಲ್ಲದ ಕಾರಾಗೃಹಗಳನ್ನು ತಲುಪಿದ ನಂತರ, ಖೈದಿಗಳಲ್ಲಿ ಕಾಡ್ಗಿಚ್ಚಿನಂತೆ ಹರಡುವ ವೈರಸ್ ಅನ್ನು ತಡೆಯುವುದು ಕಷ್ಟಕರವಾಗಿತ್ತು. ಇದಕ್ಕೆ ಹೆದರಿ ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಚ್‌ನಲ್ಲಿ ಜೈಲುಗಳನ್ನು ಆದಷ್ಟು ಖಾಲಿ ಮಾಡುವಂತೆ ಆದೇಶಿಸಿತ್ತು.

ಅಂದಿನಿಂದ, ಜೂನ್ 20ರ ವೇಳೆಗೆ ದೆಹಲಿಯ ಮೂರು ಜೈಲುಗಳಿಂದ 4,129 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 26ರ ಹೊತ್ತಿಗೆ 18,000 ಖೈದಿಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಉತ್ತರ ಪ್ರದೇಶ ಹೇಳಿಕೊಂಡಿದೆ.

ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಅಸ್ಸಾಂ 3,550 ಖೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಮೇ ತಿಂಗಳಿನಲ್ಲಿ ವರದಿಯಾಗಿದೆ. ಇದರಲ್ಲಿ ಅಸ್ಸಾಂನ ವಿದೇಶಿ ನ್ಯಾಯಮಂಡಳಿಗಳು, ಅರೆ-ನ್ಯಾಯಾಂಗ ಸಂಸ್ಥೆಗಳು ಘೋಷಿಸಿದ ವಿದೇಶಿಯರ ಬಂಧನ ಕೇಂದ್ರಗಳಲ್ಲಿ ದಾಖಲಾದ 300 ಜನರನ್ನು ಒಳಗೊಂಡಿದೆ.

ಏಪ್ರಿಲ್ 23 ರ ಹೊತ್ತಿಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ 288 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಅನೇಕರ ಬಂಧನ ಆದೇಶಗಳನ್ನು ಈಗ ಸರ್ಕಾರ ರದ್ದುಪಡಿಸಿದೆ. ಅದರಲ್ಲಿ ಪೆರೋಲ್ ಅಥವಾ ಬಿಡುಗಡೆಗೆ ಅರ್ಹರಲ್ಲದವರಲ್ಲಿ ಉಗ್ರಗಾಮಿತ್ವ ಸಂಬಂಧಿತ ಆರೋಪಗಳ ಮೇಲೆ ಅಥವಾ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಬಂಧಿತ ಖೈದಿಗಳು ಸೇರಿದ್ದಾರೆ.

ಕಿಕ್ಕಿರಿದ ಜೈಲುಗಳಲ್ಲಿ ಉಳಿದವರು ಸೋಂಕಿನ ತೀವ್ರತೆಯನ್ನು ಎದುರಿಸಬೇಕಾಗಿದೆ.

ಕಾಶ್ಮೀರದ ಕಿಕ್ಕಿರಿದ ಜೈಲುಗಳು

“ನಾವು ಮಾರ್ಚ್‌ನಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು ಜೈಲು ಅಧೀಕ್ಷಕ ಸಿರೋಜ್ ಭಟ್ ಹೇಳಿದ್ದಾರೆ. “ಜಮ್ಮು ಕಾಶ್ಮೀರದಲ್ಲಿಯೇ ಮೊದಲಿಗೆ ಅನಂತ್ ನಾಗ್ ಜಿಲ್ಲಾ ಜೈಲು ಕೊರೊನಾ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಿತು. ಅದರ ನಂತರ ನಾವು ನಿಯಮಿತವಾಗಿ ಜೈಲು ಆವರಣದಲ್ಲಿ ಸೋಂಕುನಿವಾರಕಗಳನ್ನು ಸಿಂಪಡಿಸುವುದನ್ನು ಮುಂದುವರಿಸಿದ್ದೇವೆ” ಎಂದಿದ್ದಾರೆ.

ಸೋಂಕು ಹರಡುವುದನ್ನು ತಡೆಗಟ್ಟಲು ಜೈಲು ಸಂದರ್ಶಕರಿಗೆ ಮತ್ತು ಕೈದಿಗಳಿಗೆ ಮನೆಯಲ್ಲಿ ಬೇಯಿಸಿದ ಆಹಾರ ನೀಡುವುದನ್ನು ನಿರ್ಬಂಧಿಸಲಾಯಿತು ಎಂದು ಅವರು ಹೇಳಿದರು. “ಆದರೆ ಜೈಲು ಕಿಕ್ಕಿರಿದ ಕಾರಣ ಸಾಮಾಜಿಕ ಅಂತರ ಸಾಧ್ಯವಾಗಲಿಲ್ಲ” ಎಂದು ಅವರು ಒಪ್ಪಿಕೊಂಡರು.

ಗುವಾಹಟಿ ಕೇಂದ್ರ ಕಾರಾಗೃಹದಲ್ಲಿ, ಜೂನ್ 4 ರಂದು ಮೊದಲ ಪ್ರಕರಣ ಪತ್ತೆಯಾಗಿದೆ ಮತ್ತು ಜೈಲನ್ನು ತಕ್ಷಣವೇ ನಿಯಂತ್ರಣ ವಲಯವೆಂದು ಘೋಷಿಸಲಾಗಿದೆ ಎಂದು ದಾಸ್ ಹೇಳಿದರು.

“ಸೋಂಕಿತ ವ್ಯಕ್ತಿಯೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದಲ್ಲಿದ್ದ ಪ್ರತಿಯೊಬ್ಬರ ಸ್ವ್ಯಾಬ್ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಪರೀಕ್ಷಾ ಫಲಿತಾಂಶಗಳನ್ನು ಘೋಷಿಸುವವರೆಗೆ ಅವರೆಲ್ಲರನ್ನೂ ಪ್ರತ್ಯೇಕವಾಗಿ ಇಡಲಾಗಿದೆ” ಎಂದು ದಾಸ್ ಹೇಳಿದರು. ಎಲ್ಲಾ ಸಂಪರ್ಕಿತರಿಗೂ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದರು.

14 ದಿನಗಳ ನಂತರ ಜೈಲಿನ ನಿಯಂತ್ರಣ ವಲಯದ ಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗುತ್ತಿದ್ದಂತೆ, ಹಲವಾರು ಹೊಸ ಖೈದಿಗಳನ್ನು ಕೊರೊನಾ ಚಿಕಿತ್ಸೆಗೆ ದಾಖಲಿಸಲಾಯಿತು. “ಸೋಂಕು ಹೊಸ ಖೈದಿಗಳಲ್ಲೇ ಹೆಚ್ಚಾಗಿರಬಹುದು” ಎಂದು ದಾಸ್ ಹೇಳಿದರು.


ಇದನ್ನೂ ಓದಿ: ಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...