Homeಕರೋನಾ ತಲ್ಲಣಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ.

- Advertisement -
- Advertisement -

ಕಳೆದ ವಾರ, ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲಾ ಜೈಲಿನಲ್ಲಿರುವ 86 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರಲ್ಲಿ ಜೈಲಿಗೆ ಸಾಮಗ್ರಿಗಳನ್ನು ತರುವ ಜೈಲಿನ ಸಿಬ್ಬಂದಿ ಮತ್ತು ಒಬ್ಬ ಕಾರ್ಮಿಕ ಸೇರಿದ್ದಾರೆ ಎಂದು ಅನಂತ್‌ನಾಗ್ ಜೈಲಿನ ಅಧೀಕ್ಷಕ ಸಿರೋಜ್ ಅಹ್ಮದ್ ಭಟ್ ಹೇಳಿದ್ದಾರೆ.

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ. “ಅವರಲ್ಲಿ 48 ಜನರಿಗೆ ಬೇರೆ ಕಡೆ ಸೌಲಭ್ಯ ಒದಗಿಸಿ ಕ್ವಾರಂಟೈನ್ ಮಾಡಲಾಗಿದೆ. 38 ಜನರನ್ನು ಜೈಲಿನೊಳಗೆ ಕ್ವಾರಂಟೈನ್ ಮಾಡಲಾಗಿದೆ” ಎಂದು ಭಟ್ ಹೇಳಿದರು.

ಅಸ್ಸಾಂನ ಗೌಹಾಟಿಯ ಕೇಂದ್ರ ಕಾರಾಗೃಹದಲ್ಲಿರುವ, ಡಿಸೆಂಬರ್‌ನಲ್ಲಿ ನಡೆದ ಸಿಎಎ ಕಾಯ್ದೆ ವಿರೋಧಿ ಪ್ರತಿಭಟನೆಗಾಗಿ ಬಂಧಿಸಲ್ಪಟ್ಟ ಕಾರ್ಯಕರ್ತರಲ್ಲಿ ಒಬ್ಬರಾದ ರೈತ ಮುಖಂಡ ಅಖಿಲ್ ಗೊಗೊಯ್ ಅವರು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿದುಬಂದಿದೆ.

ಈ ವಾರಾಂತ್ಯದಲ್ಲಿ ಗುವಾಹಟಿ ಕೇಂದ್ರ ಕಾರಾಗೃಹದಲ್ಲಿರುವ ಕೊರೊನಾ ಸೋಂಕಿತರ ಸಂಖ್ಯೆ 438 ಕ್ಕೆ ಏರಿತು. ಅವರಲ್ಲಿ ಮೂವರು ಜೈಲು ಸಿಬ್ಬಂದಿ ಎಂದು ಅಸ್ಸಾಂನ ಜೈಲುಗಳ ಇನ್ಸ್‌ಪೆಕ್ಟರ್ ಜನರಲ್ ದಶರಥ್ ದಾಸ್ ಹೇಳಿದ್ದಾರೆ. ಜೈಲಿನಲ್ಲಿ ಸುಮಾರು 1,000 ಖೈದಿಗಳು ಇದ್ದಾರೆ. ಅವರಲ್ಲಿ ಸುಮಾರು 43% ರಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ. ಎಲ್ಲಾ ಖೈದಿಗಳನ್ನು ಪರೀಕ್ಷಿಸಲಾಯಿತು ಎಂದು ದಾಸ್ ಹೇಳಿದರು.

ಸೋಂಕಿತರಲ್ಲಿ, 154 ಖೈದಿಗಳು ಪ್ರಸ್ತುತ ನಗರದ ಮತ್ತು ಸುತ್ತಮುತ್ತಲಿನ ವಿವಿಧ ವೈದ್ಯಕೀಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಉಳಿದವರು ಚೇತರಿಸಿಕೊಂಡು ಮತ್ತೆ ಜೈಲಿಗೆ ಮರಳಿದ್ದಾರೆ” ಎಂದು ದಾಸ್ ಹೇಳಿದರು.

ಗುವಾಹಟಿ ಮತ್ತು ದಕ್ಷಿಣ ಕಾಶ್ಮೀರ ಜೈಲುಗಳು, ದೇಶದ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾದ ಕೆಲವು ಪ್ರಕರಣಗಳಲ್ಲಿನ ಖೈದಿಗಳನ್ನು ಇರಿಸಿಕೊಂಡಿವೆ. ಅವರಲ್ಲಿ ಹಲವರು ರಾಜ್ಯದ ವಿರುದ್ಧದ ಅಪರಾಧದ ಆರೋಪಗಳನ್ನು ಹೊಂದಿದ್ದಾರೆ. ಸಾಂಕ್ರಾಮಿಕ ರೋಗವು ದೇಶವನ್ನು ಅಪ್ಪಳಿಸುತ್ತಿದ್ದಂತೆ ಭಾರತದಾದ್ಯಂತ ಜೈಲುಗಳು ಭಾಗಶಃ ಖಾಲಿಯಾಗಿದ್ದರೂ, ಇಲ್ಲಿನ ಖೈದಿಗಳಿಗೆ ಈ ಭಾಗ್ಯ ದೊರಕಿಲ್ಲ.

ಕೊರೊನಾ ಸೋಂಕು ಭಾರತದ ಕಿಕ್ಕಿರಿದ, ಆರೋಗ್ಯಕರವಲ್ಲದ ಕಾರಾಗೃಹಗಳನ್ನು ತಲುಪಿದ ನಂತರ, ಖೈದಿಗಳಲ್ಲಿ ಕಾಡ್ಗಿಚ್ಚಿನಂತೆ ಹರಡುವ ವೈರಸ್ ಅನ್ನು ತಡೆಯುವುದು ಕಷ್ಟಕರವಾಗಿತ್ತು. ಇದಕ್ಕೆ ಹೆದರಿ ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಚ್‌ನಲ್ಲಿ ಜೈಲುಗಳನ್ನು ಆದಷ್ಟು ಖಾಲಿ ಮಾಡುವಂತೆ ಆದೇಶಿಸಿತ್ತು.

ಅಂದಿನಿಂದ, ಜೂನ್ 20ರ ವೇಳೆಗೆ ದೆಹಲಿಯ ಮೂರು ಜೈಲುಗಳಿಂದ 4,129 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 26ರ ಹೊತ್ತಿಗೆ 18,000 ಖೈದಿಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಉತ್ತರ ಪ್ರದೇಶ ಹೇಳಿಕೊಂಡಿದೆ.

ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಅಸ್ಸಾಂ 3,550 ಖೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಮೇ ತಿಂಗಳಿನಲ್ಲಿ ವರದಿಯಾಗಿದೆ. ಇದರಲ್ಲಿ ಅಸ್ಸಾಂನ ವಿದೇಶಿ ನ್ಯಾಯಮಂಡಳಿಗಳು, ಅರೆ-ನ್ಯಾಯಾಂಗ ಸಂಸ್ಥೆಗಳು ಘೋಷಿಸಿದ ವಿದೇಶಿಯರ ಬಂಧನ ಕೇಂದ್ರಗಳಲ್ಲಿ ದಾಖಲಾದ 300 ಜನರನ್ನು ಒಳಗೊಂಡಿದೆ.

ಏಪ್ರಿಲ್ 23 ರ ಹೊತ್ತಿಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ 288 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಅನೇಕರ ಬಂಧನ ಆದೇಶಗಳನ್ನು ಈಗ ಸರ್ಕಾರ ರದ್ದುಪಡಿಸಿದೆ. ಅದರಲ್ಲಿ ಪೆರೋಲ್ ಅಥವಾ ಬಿಡುಗಡೆಗೆ ಅರ್ಹರಲ್ಲದವರಲ್ಲಿ ಉಗ್ರಗಾಮಿತ್ವ ಸಂಬಂಧಿತ ಆರೋಪಗಳ ಮೇಲೆ ಅಥವಾ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಬಂಧಿತ ಖೈದಿಗಳು ಸೇರಿದ್ದಾರೆ.

ಕಿಕ್ಕಿರಿದ ಜೈಲುಗಳಲ್ಲಿ ಉಳಿದವರು ಸೋಂಕಿನ ತೀವ್ರತೆಯನ್ನು ಎದುರಿಸಬೇಕಾಗಿದೆ.

ಕಾಶ್ಮೀರದ ಕಿಕ್ಕಿರಿದ ಜೈಲುಗಳು

“ನಾವು ಮಾರ್ಚ್‌ನಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು ಜೈಲು ಅಧೀಕ್ಷಕ ಸಿರೋಜ್ ಭಟ್ ಹೇಳಿದ್ದಾರೆ. “ಜಮ್ಮು ಕಾಶ್ಮೀರದಲ್ಲಿಯೇ ಮೊದಲಿಗೆ ಅನಂತ್ ನಾಗ್ ಜಿಲ್ಲಾ ಜೈಲು ಕೊರೊನಾ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಿತು. ಅದರ ನಂತರ ನಾವು ನಿಯಮಿತವಾಗಿ ಜೈಲು ಆವರಣದಲ್ಲಿ ಸೋಂಕುನಿವಾರಕಗಳನ್ನು ಸಿಂಪಡಿಸುವುದನ್ನು ಮುಂದುವರಿಸಿದ್ದೇವೆ” ಎಂದಿದ್ದಾರೆ.

ಸೋಂಕು ಹರಡುವುದನ್ನು ತಡೆಗಟ್ಟಲು ಜೈಲು ಸಂದರ್ಶಕರಿಗೆ ಮತ್ತು ಕೈದಿಗಳಿಗೆ ಮನೆಯಲ್ಲಿ ಬೇಯಿಸಿದ ಆಹಾರ ನೀಡುವುದನ್ನು ನಿರ್ಬಂಧಿಸಲಾಯಿತು ಎಂದು ಅವರು ಹೇಳಿದರು. “ಆದರೆ ಜೈಲು ಕಿಕ್ಕಿರಿದ ಕಾರಣ ಸಾಮಾಜಿಕ ಅಂತರ ಸಾಧ್ಯವಾಗಲಿಲ್ಲ” ಎಂದು ಅವರು ಒಪ್ಪಿಕೊಂಡರು.

ಗುವಾಹಟಿ ಕೇಂದ್ರ ಕಾರಾಗೃಹದಲ್ಲಿ, ಜೂನ್ 4 ರಂದು ಮೊದಲ ಪ್ರಕರಣ ಪತ್ತೆಯಾಗಿದೆ ಮತ್ತು ಜೈಲನ್ನು ತಕ್ಷಣವೇ ನಿಯಂತ್ರಣ ವಲಯವೆಂದು ಘೋಷಿಸಲಾಗಿದೆ ಎಂದು ದಾಸ್ ಹೇಳಿದರು.

“ಸೋಂಕಿತ ವ್ಯಕ್ತಿಯೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದಲ್ಲಿದ್ದ ಪ್ರತಿಯೊಬ್ಬರ ಸ್ವ್ಯಾಬ್ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಪರೀಕ್ಷಾ ಫಲಿತಾಂಶಗಳನ್ನು ಘೋಷಿಸುವವರೆಗೆ ಅವರೆಲ್ಲರನ್ನೂ ಪ್ರತ್ಯೇಕವಾಗಿ ಇಡಲಾಗಿದೆ” ಎಂದು ದಾಸ್ ಹೇಳಿದರು. ಎಲ್ಲಾ ಸಂಪರ್ಕಿತರಿಗೂ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದರು.

14 ದಿನಗಳ ನಂತರ ಜೈಲಿನ ನಿಯಂತ್ರಣ ವಲಯದ ಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗುತ್ತಿದ್ದಂತೆ, ಹಲವಾರು ಹೊಸ ಖೈದಿಗಳನ್ನು ಕೊರೊನಾ ಚಿಕಿತ್ಸೆಗೆ ದಾಖಲಿಸಲಾಯಿತು. “ಸೋಂಕು ಹೊಸ ಖೈದಿಗಳಲ್ಲೇ ಹೆಚ್ಚಾಗಿರಬಹುದು” ಎಂದು ದಾಸ್ ಹೇಳಿದರು.


ಇದನ್ನೂ ಓದಿ: ಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...