Homeಕರೋನಾ ತಲ್ಲಣಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ.

- Advertisement -
- Advertisement -

ಕಳೆದ ವಾರ, ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲಾ ಜೈಲಿನಲ್ಲಿರುವ 86 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರಲ್ಲಿ ಜೈಲಿಗೆ ಸಾಮಗ್ರಿಗಳನ್ನು ತರುವ ಜೈಲಿನ ಸಿಬ್ಬಂದಿ ಮತ್ತು ಒಬ್ಬ ಕಾರ್ಮಿಕ ಸೇರಿದ್ದಾರೆ ಎಂದು ಅನಂತ್‌ನಾಗ್ ಜೈಲಿನ ಅಧೀಕ್ಷಕ ಸಿರೋಜ್ ಅಹ್ಮದ್ ಭಟ್ ಹೇಳಿದ್ದಾರೆ.

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ. “ಅವರಲ್ಲಿ 48 ಜನರಿಗೆ ಬೇರೆ ಕಡೆ ಸೌಲಭ್ಯ ಒದಗಿಸಿ ಕ್ವಾರಂಟೈನ್ ಮಾಡಲಾಗಿದೆ. 38 ಜನರನ್ನು ಜೈಲಿನೊಳಗೆ ಕ್ವಾರಂಟೈನ್ ಮಾಡಲಾಗಿದೆ” ಎಂದು ಭಟ್ ಹೇಳಿದರು.

ಅಸ್ಸಾಂನ ಗೌಹಾಟಿಯ ಕೇಂದ್ರ ಕಾರಾಗೃಹದಲ್ಲಿರುವ, ಡಿಸೆಂಬರ್‌ನಲ್ಲಿ ನಡೆದ ಸಿಎಎ ಕಾಯ್ದೆ ವಿರೋಧಿ ಪ್ರತಿಭಟನೆಗಾಗಿ ಬಂಧಿಸಲ್ಪಟ್ಟ ಕಾರ್ಯಕರ್ತರಲ್ಲಿ ಒಬ್ಬರಾದ ರೈತ ಮುಖಂಡ ಅಖಿಲ್ ಗೊಗೊಯ್ ಅವರು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿದುಬಂದಿದೆ.

ಈ ವಾರಾಂತ್ಯದಲ್ಲಿ ಗುವಾಹಟಿ ಕೇಂದ್ರ ಕಾರಾಗೃಹದಲ್ಲಿರುವ ಕೊರೊನಾ ಸೋಂಕಿತರ ಸಂಖ್ಯೆ 438 ಕ್ಕೆ ಏರಿತು. ಅವರಲ್ಲಿ ಮೂವರು ಜೈಲು ಸಿಬ್ಬಂದಿ ಎಂದು ಅಸ್ಸಾಂನ ಜೈಲುಗಳ ಇನ್ಸ್‌ಪೆಕ್ಟರ್ ಜನರಲ್ ದಶರಥ್ ದಾಸ್ ಹೇಳಿದ್ದಾರೆ. ಜೈಲಿನಲ್ಲಿ ಸುಮಾರು 1,000 ಖೈದಿಗಳು ಇದ್ದಾರೆ. ಅವರಲ್ಲಿ ಸುಮಾರು 43% ರಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ. ಎಲ್ಲಾ ಖೈದಿಗಳನ್ನು ಪರೀಕ್ಷಿಸಲಾಯಿತು ಎಂದು ದಾಸ್ ಹೇಳಿದರು.

ಸೋಂಕಿತರಲ್ಲಿ, 154 ಖೈದಿಗಳು ಪ್ರಸ್ತುತ ನಗರದ ಮತ್ತು ಸುತ್ತಮುತ್ತಲಿನ ವಿವಿಧ ವೈದ್ಯಕೀಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಉಳಿದವರು ಚೇತರಿಸಿಕೊಂಡು ಮತ್ತೆ ಜೈಲಿಗೆ ಮರಳಿದ್ದಾರೆ” ಎಂದು ದಾಸ್ ಹೇಳಿದರು.

ಗುವಾಹಟಿ ಮತ್ತು ದಕ್ಷಿಣ ಕಾಶ್ಮೀರ ಜೈಲುಗಳು, ದೇಶದ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾದ ಕೆಲವು ಪ್ರಕರಣಗಳಲ್ಲಿನ ಖೈದಿಗಳನ್ನು ಇರಿಸಿಕೊಂಡಿವೆ. ಅವರಲ್ಲಿ ಹಲವರು ರಾಜ್ಯದ ವಿರುದ್ಧದ ಅಪರಾಧದ ಆರೋಪಗಳನ್ನು ಹೊಂದಿದ್ದಾರೆ. ಸಾಂಕ್ರಾಮಿಕ ರೋಗವು ದೇಶವನ್ನು ಅಪ್ಪಳಿಸುತ್ತಿದ್ದಂತೆ ಭಾರತದಾದ್ಯಂತ ಜೈಲುಗಳು ಭಾಗಶಃ ಖಾಲಿಯಾಗಿದ್ದರೂ, ಇಲ್ಲಿನ ಖೈದಿಗಳಿಗೆ ಈ ಭಾಗ್ಯ ದೊರಕಿಲ್ಲ.

ಕೊರೊನಾ ಸೋಂಕು ಭಾರತದ ಕಿಕ್ಕಿರಿದ, ಆರೋಗ್ಯಕರವಲ್ಲದ ಕಾರಾಗೃಹಗಳನ್ನು ತಲುಪಿದ ನಂತರ, ಖೈದಿಗಳಲ್ಲಿ ಕಾಡ್ಗಿಚ್ಚಿನಂತೆ ಹರಡುವ ವೈರಸ್ ಅನ್ನು ತಡೆಯುವುದು ಕಷ್ಟಕರವಾಗಿತ್ತು. ಇದಕ್ಕೆ ಹೆದರಿ ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಚ್‌ನಲ್ಲಿ ಜೈಲುಗಳನ್ನು ಆದಷ್ಟು ಖಾಲಿ ಮಾಡುವಂತೆ ಆದೇಶಿಸಿತ್ತು.

ಅಂದಿನಿಂದ, ಜೂನ್ 20ರ ವೇಳೆಗೆ ದೆಹಲಿಯ ಮೂರು ಜೈಲುಗಳಿಂದ 4,129 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 26ರ ಹೊತ್ತಿಗೆ 18,000 ಖೈದಿಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಉತ್ತರ ಪ್ರದೇಶ ಹೇಳಿಕೊಂಡಿದೆ.

ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಅಸ್ಸಾಂ 3,550 ಖೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಮೇ ತಿಂಗಳಿನಲ್ಲಿ ವರದಿಯಾಗಿದೆ. ಇದರಲ್ಲಿ ಅಸ್ಸಾಂನ ವಿದೇಶಿ ನ್ಯಾಯಮಂಡಳಿಗಳು, ಅರೆ-ನ್ಯಾಯಾಂಗ ಸಂಸ್ಥೆಗಳು ಘೋಷಿಸಿದ ವಿದೇಶಿಯರ ಬಂಧನ ಕೇಂದ್ರಗಳಲ್ಲಿ ದಾಖಲಾದ 300 ಜನರನ್ನು ಒಳಗೊಂಡಿದೆ.

ಏಪ್ರಿಲ್ 23 ರ ಹೊತ್ತಿಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ 288 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಅನೇಕರ ಬಂಧನ ಆದೇಶಗಳನ್ನು ಈಗ ಸರ್ಕಾರ ರದ್ದುಪಡಿಸಿದೆ. ಅದರಲ್ಲಿ ಪೆರೋಲ್ ಅಥವಾ ಬಿಡುಗಡೆಗೆ ಅರ್ಹರಲ್ಲದವರಲ್ಲಿ ಉಗ್ರಗಾಮಿತ್ವ ಸಂಬಂಧಿತ ಆರೋಪಗಳ ಮೇಲೆ ಅಥವಾ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಬಂಧಿತ ಖೈದಿಗಳು ಸೇರಿದ್ದಾರೆ.

ಕಿಕ್ಕಿರಿದ ಜೈಲುಗಳಲ್ಲಿ ಉಳಿದವರು ಸೋಂಕಿನ ತೀವ್ರತೆಯನ್ನು ಎದುರಿಸಬೇಕಾಗಿದೆ.

ಕಾಶ್ಮೀರದ ಕಿಕ್ಕಿರಿದ ಜೈಲುಗಳು

“ನಾವು ಮಾರ್ಚ್‌ನಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು ಜೈಲು ಅಧೀಕ್ಷಕ ಸಿರೋಜ್ ಭಟ್ ಹೇಳಿದ್ದಾರೆ. “ಜಮ್ಮು ಕಾಶ್ಮೀರದಲ್ಲಿಯೇ ಮೊದಲಿಗೆ ಅನಂತ್ ನಾಗ್ ಜಿಲ್ಲಾ ಜೈಲು ಕೊರೊನಾ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಿತು. ಅದರ ನಂತರ ನಾವು ನಿಯಮಿತವಾಗಿ ಜೈಲು ಆವರಣದಲ್ಲಿ ಸೋಂಕುನಿವಾರಕಗಳನ್ನು ಸಿಂಪಡಿಸುವುದನ್ನು ಮುಂದುವರಿಸಿದ್ದೇವೆ” ಎಂದಿದ್ದಾರೆ.

ಸೋಂಕು ಹರಡುವುದನ್ನು ತಡೆಗಟ್ಟಲು ಜೈಲು ಸಂದರ್ಶಕರಿಗೆ ಮತ್ತು ಕೈದಿಗಳಿಗೆ ಮನೆಯಲ್ಲಿ ಬೇಯಿಸಿದ ಆಹಾರ ನೀಡುವುದನ್ನು ನಿರ್ಬಂಧಿಸಲಾಯಿತು ಎಂದು ಅವರು ಹೇಳಿದರು. “ಆದರೆ ಜೈಲು ಕಿಕ್ಕಿರಿದ ಕಾರಣ ಸಾಮಾಜಿಕ ಅಂತರ ಸಾಧ್ಯವಾಗಲಿಲ್ಲ” ಎಂದು ಅವರು ಒಪ್ಪಿಕೊಂಡರು.

ಗುವಾಹಟಿ ಕೇಂದ್ರ ಕಾರಾಗೃಹದಲ್ಲಿ, ಜೂನ್ 4 ರಂದು ಮೊದಲ ಪ್ರಕರಣ ಪತ್ತೆಯಾಗಿದೆ ಮತ್ತು ಜೈಲನ್ನು ತಕ್ಷಣವೇ ನಿಯಂತ್ರಣ ವಲಯವೆಂದು ಘೋಷಿಸಲಾಗಿದೆ ಎಂದು ದಾಸ್ ಹೇಳಿದರು.

“ಸೋಂಕಿತ ವ್ಯಕ್ತಿಯೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದಲ್ಲಿದ್ದ ಪ್ರತಿಯೊಬ್ಬರ ಸ್ವ್ಯಾಬ್ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಪರೀಕ್ಷಾ ಫಲಿತಾಂಶಗಳನ್ನು ಘೋಷಿಸುವವರೆಗೆ ಅವರೆಲ್ಲರನ್ನೂ ಪ್ರತ್ಯೇಕವಾಗಿ ಇಡಲಾಗಿದೆ” ಎಂದು ದಾಸ್ ಹೇಳಿದರು. ಎಲ್ಲಾ ಸಂಪರ್ಕಿತರಿಗೂ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದರು.

14 ದಿನಗಳ ನಂತರ ಜೈಲಿನ ನಿಯಂತ್ರಣ ವಲಯದ ಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗುತ್ತಿದ್ದಂತೆ, ಹಲವಾರು ಹೊಸ ಖೈದಿಗಳನ್ನು ಕೊರೊನಾ ಚಿಕಿತ್ಸೆಗೆ ದಾಖಲಿಸಲಾಯಿತು. “ಸೋಂಕು ಹೊಸ ಖೈದಿಗಳಲ್ಲೇ ಹೆಚ್ಚಾಗಿರಬಹುದು” ಎಂದು ದಾಸ್ ಹೇಳಿದರು.


ಇದನ್ನೂ ಓದಿ: ಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...