Homeಕರೋನಾ ತಲ್ಲಣಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ.

- Advertisement -
- Advertisement -

ಕಳೆದ ವಾರ, ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲಾ ಜೈಲಿನಲ್ಲಿರುವ 86 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರಲ್ಲಿ ಜೈಲಿಗೆ ಸಾಮಗ್ರಿಗಳನ್ನು ತರುವ ಜೈಲಿನ ಸಿಬ್ಬಂದಿ ಮತ್ತು ಒಬ್ಬ ಕಾರ್ಮಿಕ ಸೇರಿದ್ದಾರೆ ಎಂದು ಅನಂತ್‌ನಾಗ್ ಜೈಲಿನ ಅಧೀಕ್ಷಕ ಸಿರೋಜ್ ಅಹ್ಮದ್ ಭಟ್ ಹೇಳಿದ್ದಾರೆ.

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ. “ಅವರಲ್ಲಿ 48 ಜನರಿಗೆ ಬೇರೆ ಕಡೆ ಸೌಲಭ್ಯ ಒದಗಿಸಿ ಕ್ವಾರಂಟೈನ್ ಮಾಡಲಾಗಿದೆ. 38 ಜನರನ್ನು ಜೈಲಿನೊಳಗೆ ಕ್ವಾರಂಟೈನ್ ಮಾಡಲಾಗಿದೆ” ಎಂದು ಭಟ್ ಹೇಳಿದರು.

ಅಸ್ಸಾಂನ ಗೌಹಾಟಿಯ ಕೇಂದ್ರ ಕಾರಾಗೃಹದಲ್ಲಿರುವ, ಡಿಸೆಂಬರ್‌ನಲ್ಲಿ ನಡೆದ ಸಿಎಎ ಕಾಯ್ದೆ ವಿರೋಧಿ ಪ್ರತಿಭಟನೆಗಾಗಿ ಬಂಧಿಸಲ್ಪಟ್ಟ ಕಾರ್ಯಕರ್ತರಲ್ಲಿ ಒಬ್ಬರಾದ ರೈತ ಮುಖಂಡ ಅಖಿಲ್ ಗೊಗೊಯ್ ಅವರು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿದುಬಂದಿದೆ.

ಈ ವಾರಾಂತ್ಯದಲ್ಲಿ ಗುವಾಹಟಿ ಕೇಂದ್ರ ಕಾರಾಗೃಹದಲ್ಲಿರುವ ಕೊರೊನಾ ಸೋಂಕಿತರ ಸಂಖ್ಯೆ 438 ಕ್ಕೆ ಏರಿತು. ಅವರಲ್ಲಿ ಮೂವರು ಜೈಲು ಸಿಬ್ಬಂದಿ ಎಂದು ಅಸ್ಸಾಂನ ಜೈಲುಗಳ ಇನ್ಸ್‌ಪೆಕ್ಟರ್ ಜನರಲ್ ದಶರಥ್ ದಾಸ್ ಹೇಳಿದ್ದಾರೆ. ಜೈಲಿನಲ್ಲಿ ಸುಮಾರು 1,000 ಖೈದಿಗಳು ಇದ್ದಾರೆ. ಅವರಲ್ಲಿ ಸುಮಾರು 43% ರಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ. ಎಲ್ಲಾ ಖೈದಿಗಳನ್ನು ಪರೀಕ್ಷಿಸಲಾಯಿತು ಎಂದು ದಾಸ್ ಹೇಳಿದರು.

ಸೋಂಕಿತರಲ್ಲಿ, 154 ಖೈದಿಗಳು ಪ್ರಸ್ತುತ ನಗರದ ಮತ್ತು ಸುತ್ತಮುತ್ತಲಿನ ವಿವಿಧ ವೈದ್ಯಕೀಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಉಳಿದವರು ಚೇತರಿಸಿಕೊಂಡು ಮತ್ತೆ ಜೈಲಿಗೆ ಮರಳಿದ್ದಾರೆ” ಎಂದು ದಾಸ್ ಹೇಳಿದರು.

ಗುವಾಹಟಿ ಮತ್ತು ದಕ್ಷಿಣ ಕಾಶ್ಮೀರ ಜೈಲುಗಳು, ದೇಶದ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾದ ಕೆಲವು ಪ್ರಕರಣಗಳಲ್ಲಿನ ಖೈದಿಗಳನ್ನು ಇರಿಸಿಕೊಂಡಿವೆ. ಅವರಲ್ಲಿ ಹಲವರು ರಾಜ್ಯದ ವಿರುದ್ಧದ ಅಪರಾಧದ ಆರೋಪಗಳನ್ನು ಹೊಂದಿದ್ದಾರೆ. ಸಾಂಕ್ರಾಮಿಕ ರೋಗವು ದೇಶವನ್ನು ಅಪ್ಪಳಿಸುತ್ತಿದ್ದಂತೆ ಭಾರತದಾದ್ಯಂತ ಜೈಲುಗಳು ಭಾಗಶಃ ಖಾಲಿಯಾಗಿದ್ದರೂ, ಇಲ್ಲಿನ ಖೈದಿಗಳಿಗೆ ಈ ಭಾಗ್ಯ ದೊರಕಿಲ್ಲ.

ಕೊರೊನಾ ಸೋಂಕು ಭಾರತದ ಕಿಕ್ಕಿರಿದ, ಆರೋಗ್ಯಕರವಲ್ಲದ ಕಾರಾಗೃಹಗಳನ್ನು ತಲುಪಿದ ನಂತರ, ಖೈದಿಗಳಲ್ಲಿ ಕಾಡ್ಗಿಚ್ಚಿನಂತೆ ಹರಡುವ ವೈರಸ್ ಅನ್ನು ತಡೆಯುವುದು ಕಷ್ಟಕರವಾಗಿತ್ತು. ಇದಕ್ಕೆ ಹೆದರಿ ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಚ್‌ನಲ್ಲಿ ಜೈಲುಗಳನ್ನು ಆದಷ್ಟು ಖಾಲಿ ಮಾಡುವಂತೆ ಆದೇಶಿಸಿತ್ತು.

ಅಂದಿನಿಂದ, ಜೂನ್ 20ರ ವೇಳೆಗೆ ದೆಹಲಿಯ ಮೂರು ಜೈಲುಗಳಿಂದ 4,129 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 26ರ ಹೊತ್ತಿಗೆ 18,000 ಖೈದಿಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಉತ್ತರ ಪ್ರದೇಶ ಹೇಳಿಕೊಂಡಿದೆ.

ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಅಸ್ಸಾಂ 3,550 ಖೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಮೇ ತಿಂಗಳಿನಲ್ಲಿ ವರದಿಯಾಗಿದೆ. ಇದರಲ್ಲಿ ಅಸ್ಸಾಂನ ವಿದೇಶಿ ನ್ಯಾಯಮಂಡಳಿಗಳು, ಅರೆ-ನ್ಯಾಯಾಂಗ ಸಂಸ್ಥೆಗಳು ಘೋಷಿಸಿದ ವಿದೇಶಿಯರ ಬಂಧನ ಕೇಂದ್ರಗಳಲ್ಲಿ ದಾಖಲಾದ 300 ಜನರನ್ನು ಒಳಗೊಂಡಿದೆ.

ಏಪ್ರಿಲ್ 23 ರ ಹೊತ್ತಿಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ 288 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಅನೇಕರ ಬಂಧನ ಆದೇಶಗಳನ್ನು ಈಗ ಸರ್ಕಾರ ರದ್ದುಪಡಿಸಿದೆ. ಅದರಲ್ಲಿ ಪೆರೋಲ್ ಅಥವಾ ಬಿಡುಗಡೆಗೆ ಅರ್ಹರಲ್ಲದವರಲ್ಲಿ ಉಗ್ರಗಾಮಿತ್ವ ಸಂಬಂಧಿತ ಆರೋಪಗಳ ಮೇಲೆ ಅಥವಾ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಬಂಧಿತ ಖೈದಿಗಳು ಸೇರಿದ್ದಾರೆ.

ಕಿಕ್ಕಿರಿದ ಜೈಲುಗಳಲ್ಲಿ ಉಳಿದವರು ಸೋಂಕಿನ ತೀವ್ರತೆಯನ್ನು ಎದುರಿಸಬೇಕಾಗಿದೆ.

ಕಾಶ್ಮೀರದ ಕಿಕ್ಕಿರಿದ ಜೈಲುಗಳು

“ನಾವು ಮಾರ್ಚ್‌ನಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು ಜೈಲು ಅಧೀಕ್ಷಕ ಸಿರೋಜ್ ಭಟ್ ಹೇಳಿದ್ದಾರೆ. “ಜಮ್ಮು ಕಾಶ್ಮೀರದಲ್ಲಿಯೇ ಮೊದಲಿಗೆ ಅನಂತ್ ನಾಗ್ ಜಿಲ್ಲಾ ಜೈಲು ಕೊರೊನಾ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಿತು. ಅದರ ನಂತರ ನಾವು ನಿಯಮಿತವಾಗಿ ಜೈಲು ಆವರಣದಲ್ಲಿ ಸೋಂಕುನಿವಾರಕಗಳನ್ನು ಸಿಂಪಡಿಸುವುದನ್ನು ಮುಂದುವರಿಸಿದ್ದೇವೆ” ಎಂದಿದ್ದಾರೆ.

ಸೋಂಕು ಹರಡುವುದನ್ನು ತಡೆಗಟ್ಟಲು ಜೈಲು ಸಂದರ್ಶಕರಿಗೆ ಮತ್ತು ಕೈದಿಗಳಿಗೆ ಮನೆಯಲ್ಲಿ ಬೇಯಿಸಿದ ಆಹಾರ ನೀಡುವುದನ್ನು ನಿರ್ಬಂಧಿಸಲಾಯಿತು ಎಂದು ಅವರು ಹೇಳಿದರು. “ಆದರೆ ಜೈಲು ಕಿಕ್ಕಿರಿದ ಕಾರಣ ಸಾಮಾಜಿಕ ಅಂತರ ಸಾಧ್ಯವಾಗಲಿಲ್ಲ” ಎಂದು ಅವರು ಒಪ್ಪಿಕೊಂಡರು.

ಗುವಾಹಟಿ ಕೇಂದ್ರ ಕಾರಾಗೃಹದಲ್ಲಿ, ಜೂನ್ 4 ರಂದು ಮೊದಲ ಪ್ರಕರಣ ಪತ್ತೆಯಾಗಿದೆ ಮತ್ತು ಜೈಲನ್ನು ತಕ್ಷಣವೇ ನಿಯಂತ್ರಣ ವಲಯವೆಂದು ಘೋಷಿಸಲಾಗಿದೆ ಎಂದು ದಾಸ್ ಹೇಳಿದರು.

“ಸೋಂಕಿತ ವ್ಯಕ್ತಿಯೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದಲ್ಲಿದ್ದ ಪ್ರತಿಯೊಬ್ಬರ ಸ್ವ್ಯಾಬ್ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಪರೀಕ್ಷಾ ಫಲಿತಾಂಶಗಳನ್ನು ಘೋಷಿಸುವವರೆಗೆ ಅವರೆಲ್ಲರನ್ನೂ ಪ್ರತ್ಯೇಕವಾಗಿ ಇಡಲಾಗಿದೆ” ಎಂದು ದಾಸ್ ಹೇಳಿದರು. ಎಲ್ಲಾ ಸಂಪರ್ಕಿತರಿಗೂ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದರು.

14 ದಿನಗಳ ನಂತರ ಜೈಲಿನ ನಿಯಂತ್ರಣ ವಲಯದ ಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗುತ್ತಿದ್ದಂತೆ, ಹಲವಾರು ಹೊಸ ಖೈದಿಗಳನ್ನು ಕೊರೊನಾ ಚಿಕಿತ್ಸೆಗೆ ದಾಖಲಿಸಲಾಯಿತು. “ಸೋಂಕು ಹೊಸ ಖೈದಿಗಳಲ್ಲೇ ಹೆಚ್ಚಾಗಿರಬಹುದು” ಎಂದು ದಾಸ್ ಹೇಳಿದರು.


ಇದನ್ನೂ ಓದಿ: ಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...