Homeಮುಖಪುಟಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

- Advertisement -
- Advertisement -

ರಾಯ್‌ಪುರ: ಕಾಶ್ಮೀರಿ ಹಿಂದೂಗಳ ವಲಸೆ ಆಧರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಅರ್ಧಸತ್ಯವನ್ನು ತೋರಿಸುತ್ತದೆ, ಜೊತೆಗೆ ಹಿಂಸೆಯನ್ನು ಹೊರತುಪಡಿಸಿ ಯಾವುದೇ ನೈಜ ಸಂದೇಶವನ್ನು ನೀಡಿಲ್ಲ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಹೇಳಿದ್ದಾರೆ.

ಶಾಸಕರೊಂದಿಗೆ ಸಿನಿಮಾ ನೋಡಿರುವ ಅವರು, ಕಾಶ್ಮೀರದಲ್ಲಿ ಹಿಂದೂಗಳು ಮಾತ್ರವಲ್ಲ, ಬೌದ್ಧರು, ಮುಸ್ಲಿಮರು, ಸಿಖ್ಖರು ಕೂಡ ಹತ್ಯೆಯಾಗಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

“…ಚಿತ್ರವು ಅರ್ಧ ಸತ್ಯವನ್ನು ತೋರಿಸುತ್ತದೆ. ಇದು ಯಾವುದೇ ಪರಿಹಾರವನ್ನು ಸೂಚಿಸುವುದಿಲ್ಲ. ಸುಧಾರಣೆಯ ದಿಕ್ಕಿನಲ್ಲಿ ಯಾವುದೇ ಪ್ರಯತ್ನವನ್ನು ಈ ಸಿನಿಮಾ ಮಾಡಿಲ್ಲ. ಇದು ಯಾವುದೇ ಅರ್ಥವಿಲ್ಲದ ಹಿಂಸೆಯನ್ನು ಮಾತ್ರ ತೋರಿಸುತ್ತದೆ” ಎಂದು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಮಲ್ಟಿಪ್ಲೆಕ್ಸ್‌ನಲ್ಲಿ ವಿಶೇಷ ಪ್ರದರ್ಶನದಲ್ಲಿ ಸಿನಿಮಾ ನೋಡಿದ ಬಳಿಕ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ಚಲನಚಿತ್ರವನ್ನು ಶ್ಲಾಘಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ಎನ್ನುವವರು ಕಾಶ್ಮೀರ್‌ ಫೈಲ್ಸ್‌ ವಿರುದ್ಧ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಪಿ ಸಿಂಗ್ ಪ್ರಧಾನಿಯಾಗಿದ್ದಾಗ ಬಿಜೆಪಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿಯವರ ಬೆಂಬಲದೊಂದಿಗೆ ಕಾಶ್ಮೀರಿ ಪಂಡಿತರ ವಲಸೆ ನಡೆಯಿತು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ತಿಳಿಸಿದ್ದಾರೆ.

”ರಾಜಕೀಯ ಸಂದೇಶ ನೀಡುವ ಪ್ರಯತ್ನ ನಡೆದಿದೆ. ಆಗ ಬಿಜೆಪಿಯ ಬೆಂಬಲದೊಂದಿಗೆ (ಕೇಂದ್ರದಲ್ಲಿ) ಅಧಿಕಾರದಲ್ಲಿದ್ದ ವಿಪಿ ಸಿಂಗ್ ಸರ್ಕಾರವು ಕಾಶ್ಮೀರಿ ಪಂಡಿತರನ್ನು ತಡೆಯಲು ಪ್ರಯತ್ನಿಸಲಿಲ್ಲ. ಬದಲಿಗೆ ಅವರನ್ನು ತೊರೆಯುವಂತೆ ಹೇಳಿತು ಎಂದು ಚಿತ್ರದಲ್ಲಿ ತೋರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಸೇನೆಯನ್ನು ಕೇಂದ್ರದಿಂದ ಅಲ್ಲಿಗೆ ಕಳುಹಿಸಿರಲಿಲ್ಲ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಲೋಕಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಸೇನೆಯನ್ನು ಅಲ್ಲಿಗೆ ಕಳುಹಿಸಲಾಯಿತು” ಎಂದು ಬಾಘೆಲ್ ವಿವರಿಸಿದ್ದಾರೆ.

ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದತ್ತ ತಿರುಗಿಬಿದ್ದಿರುವ ಬಘೇಲ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಪಡಿಸಿದ ನಂತರವೂ ಕಾಶ್ಮೀರಿ ಪಂಡಿತರ ವಿಷಯದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ ಎಂದು ಆರೋಪಿಸಿದ್ದಾರೆ.

370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಈ (ಕೇಂದ್ರ) ಸರ್ಕಾರ ಕೇವಲ ರಾಜಕೀಯ ಮಾಡಿದೆ ಮತ್ತು ಕಾಶ್ಮೀರಿ ಪಂಡಿತರಿಗೆ ನೆರವು ನೀಡಲು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ.

ಛತ್ತೀಸ್‌ಗಢದ ಬಿಜೆಪಿ ಸೇರಿದಂತೆ ಪ್ರತಿಪಕ್ಷ ನಾಯಕರು ಚಿತ್ರ ವೀಕ್ಷಿಸಲು ತಮ್ಮೊಂದಿಗೆ ಬಂದು ಕೂರದಿದ್ದಕ್ಕಾಗಿ ಮುಖ್ಯಮಂತ್ರಿ ಬಾಘೇಲ್‌ ವಿಷಾದ ವ್ಯಕ್ತಪಡಿಸಿದರು. ಯಾರಾದರೂ ಅವರನ್ನು ಎದುರಿಸಿದಾಗ ಅವರು ಓಡಿಹೋಗುತ್ತಾರೆ ಎಂದು ಕುಟುಕಿದ್ದಾರೆ.

ವಿರೋಧ ಪಕ್ಷದ ನಾಯಕ, ಬಿಜೆಪಿಯ ಹಿರಿಯ ನಾಯಕ ಧರ್ಮಲಾಲ್ ಕೌಶಿಕ್ ಅವರು ಛತ್ತೀಸ್‌ಗಢದಲ್ಲಿ ‘ದಿ ಕಾಶ್ಮೀರ ಫೈಲ್ಸ್’ಗೆ ತೆರಿಗೆಯಿಂದ ವಿನಾಯಿತಿ ನೀಡುವ ಬೇಡಿಕೆಯನ್ನು ಇಟ್ಟಿದ್ದಾರೆ. ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ ಮತ್ತು ಮಧ್ಯಪ್ರದೇಶದಂತಹ ಹಲವಾರು ಬಿಜೆಪಿ ಆಡಳಿತದ ರಾಜ್ಯಗಳು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿವೆ. ಬುಧವಾರ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವೂ ಈ ಘೋಷಣೆ ಮಾಡಿದೆ. ಬಾಘೆಲ್ ನೇರವಾಗಿ ಬೇಡಿಕೆಯನ್ನು ತಿರಸ್ಕರಿಸಿಲ್ಲ. ಆದರೆ ರಾಜ್ಯಗಳಿಗಿಂತ ಹೆಚ್ಚಾಗಿ ಕೇಂದ್ರವು ತನ್ನ ತೆರಿಗೆಯ ಪಾಲನ್ನು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಶಾಸಕರು ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು (ಮನರಂಜನೆ) ತೆರಿಗೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಚಿತ್ರದ ಮೇಲಿನ ಕೇಂದ್ರ ಜಿಎಸ್‌ಟಿಯನ್ನು ಮನ್ನಾ ಮಾಡಲು ಮಾನ್ಯ ಪ್ರಧಾನ ಮಂತ್ರಿಗಳು ಘೋಷಿಸಬೇಕೆಂದು ನಾನು ವಿನಂತಿಸುತ್ತೇನೆ. ಆಗ ಚಿತ್ರವು ದೇಶಾದ್ಯಂತ ತೆರಿಗೆ ಮುಕ್ತವಾಗಿರುತ್ತದೆ” ಎಂದು ಬಘೇಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯಾದ ನಂತರ ಅರ್ಧದಷ್ಟು ತೆರಿಗೆ ಪಾಲು ಕೇಂದ್ರಕ್ಕೆ ಹೋಗುತ್ತದೆ ಎಂದು ವಿಧಾನಸಭೆಯಲ್ಲಿ ಅವರು ವಿವರಿಸಿದ್ದಾರೆ. “ಕೇಂದ್ರ ಸರ್ಕಾರ ಈ ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸಬೇಕು” ಎಂದು ಬಾಘೇಲ್‌ ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...