Homeಮುಖಪುಟಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

- Advertisement -
- Advertisement -

ರಾಯ್‌ಪುರ: ಕಾಶ್ಮೀರಿ ಹಿಂದೂಗಳ ವಲಸೆ ಆಧರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಅರ್ಧಸತ್ಯವನ್ನು ತೋರಿಸುತ್ತದೆ, ಜೊತೆಗೆ ಹಿಂಸೆಯನ್ನು ಹೊರತುಪಡಿಸಿ ಯಾವುದೇ ನೈಜ ಸಂದೇಶವನ್ನು ನೀಡಿಲ್ಲ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಹೇಳಿದ್ದಾರೆ.

ಶಾಸಕರೊಂದಿಗೆ ಸಿನಿಮಾ ನೋಡಿರುವ ಅವರು, ಕಾಶ್ಮೀರದಲ್ಲಿ ಹಿಂದೂಗಳು ಮಾತ್ರವಲ್ಲ, ಬೌದ್ಧರು, ಮುಸ್ಲಿಮರು, ಸಿಖ್ಖರು ಕೂಡ ಹತ್ಯೆಯಾಗಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

“…ಚಿತ್ರವು ಅರ್ಧ ಸತ್ಯವನ್ನು ತೋರಿಸುತ್ತದೆ. ಇದು ಯಾವುದೇ ಪರಿಹಾರವನ್ನು ಸೂಚಿಸುವುದಿಲ್ಲ. ಸುಧಾರಣೆಯ ದಿಕ್ಕಿನಲ್ಲಿ ಯಾವುದೇ ಪ್ರಯತ್ನವನ್ನು ಈ ಸಿನಿಮಾ ಮಾಡಿಲ್ಲ. ಇದು ಯಾವುದೇ ಅರ್ಥವಿಲ್ಲದ ಹಿಂಸೆಯನ್ನು ಮಾತ್ರ ತೋರಿಸುತ್ತದೆ” ಎಂದು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಮಲ್ಟಿಪ್ಲೆಕ್ಸ್‌ನಲ್ಲಿ ವಿಶೇಷ ಪ್ರದರ್ಶನದಲ್ಲಿ ಸಿನಿಮಾ ನೋಡಿದ ಬಳಿಕ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ಚಲನಚಿತ್ರವನ್ನು ಶ್ಲಾಘಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ಎನ್ನುವವರು ಕಾಶ್ಮೀರ್‌ ಫೈಲ್ಸ್‌ ವಿರುದ್ಧ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಪಿ ಸಿಂಗ್ ಪ್ರಧಾನಿಯಾಗಿದ್ದಾಗ ಬಿಜೆಪಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿಯವರ ಬೆಂಬಲದೊಂದಿಗೆ ಕಾಶ್ಮೀರಿ ಪಂಡಿತರ ವಲಸೆ ನಡೆಯಿತು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ತಿಳಿಸಿದ್ದಾರೆ.

”ರಾಜಕೀಯ ಸಂದೇಶ ನೀಡುವ ಪ್ರಯತ್ನ ನಡೆದಿದೆ. ಆಗ ಬಿಜೆಪಿಯ ಬೆಂಬಲದೊಂದಿಗೆ (ಕೇಂದ್ರದಲ್ಲಿ) ಅಧಿಕಾರದಲ್ಲಿದ್ದ ವಿಪಿ ಸಿಂಗ್ ಸರ್ಕಾರವು ಕಾಶ್ಮೀರಿ ಪಂಡಿತರನ್ನು ತಡೆಯಲು ಪ್ರಯತ್ನಿಸಲಿಲ್ಲ. ಬದಲಿಗೆ ಅವರನ್ನು ತೊರೆಯುವಂತೆ ಹೇಳಿತು ಎಂದು ಚಿತ್ರದಲ್ಲಿ ತೋರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಸೇನೆಯನ್ನು ಕೇಂದ್ರದಿಂದ ಅಲ್ಲಿಗೆ ಕಳುಹಿಸಿರಲಿಲ್ಲ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಲೋಕಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಸೇನೆಯನ್ನು ಅಲ್ಲಿಗೆ ಕಳುಹಿಸಲಾಯಿತು” ಎಂದು ಬಾಘೆಲ್ ವಿವರಿಸಿದ್ದಾರೆ.

ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದತ್ತ ತಿರುಗಿಬಿದ್ದಿರುವ ಬಘೇಲ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಪಡಿಸಿದ ನಂತರವೂ ಕಾಶ್ಮೀರಿ ಪಂಡಿತರ ವಿಷಯದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ ಎಂದು ಆರೋಪಿಸಿದ್ದಾರೆ.

370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಈ (ಕೇಂದ್ರ) ಸರ್ಕಾರ ಕೇವಲ ರಾಜಕೀಯ ಮಾಡಿದೆ ಮತ್ತು ಕಾಶ್ಮೀರಿ ಪಂಡಿತರಿಗೆ ನೆರವು ನೀಡಲು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ.

ಛತ್ತೀಸ್‌ಗಢದ ಬಿಜೆಪಿ ಸೇರಿದಂತೆ ಪ್ರತಿಪಕ್ಷ ನಾಯಕರು ಚಿತ್ರ ವೀಕ್ಷಿಸಲು ತಮ್ಮೊಂದಿಗೆ ಬಂದು ಕೂರದಿದ್ದಕ್ಕಾಗಿ ಮುಖ್ಯಮಂತ್ರಿ ಬಾಘೇಲ್‌ ವಿಷಾದ ವ್ಯಕ್ತಪಡಿಸಿದರು. ಯಾರಾದರೂ ಅವರನ್ನು ಎದುರಿಸಿದಾಗ ಅವರು ಓಡಿಹೋಗುತ್ತಾರೆ ಎಂದು ಕುಟುಕಿದ್ದಾರೆ.

ವಿರೋಧ ಪಕ್ಷದ ನಾಯಕ, ಬಿಜೆಪಿಯ ಹಿರಿಯ ನಾಯಕ ಧರ್ಮಲಾಲ್ ಕೌಶಿಕ್ ಅವರು ಛತ್ತೀಸ್‌ಗಢದಲ್ಲಿ ‘ದಿ ಕಾಶ್ಮೀರ ಫೈಲ್ಸ್’ಗೆ ತೆರಿಗೆಯಿಂದ ವಿನಾಯಿತಿ ನೀಡುವ ಬೇಡಿಕೆಯನ್ನು ಇಟ್ಟಿದ್ದಾರೆ. ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ ಮತ್ತು ಮಧ್ಯಪ್ರದೇಶದಂತಹ ಹಲವಾರು ಬಿಜೆಪಿ ಆಡಳಿತದ ರಾಜ್ಯಗಳು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿವೆ. ಬುಧವಾರ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವೂ ಈ ಘೋಷಣೆ ಮಾಡಿದೆ. ಬಾಘೆಲ್ ನೇರವಾಗಿ ಬೇಡಿಕೆಯನ್ನು ತಿರಸ್ಕರಿಸಿಲ್ಲ. ಆದರೆ ರಾಜ್ಯಗಳಿಗಿಂತ ಹೆಚ್ಚಾಗಿ ಕೇಂದ್ರವು ತನ್ನ ತೆರಿಗೆಯ ಪಾಲನ್ನು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಶಾಸಕರು ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು (ಮನರಂಜನೆ) ತೆರಿಗೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಚಿತ್ರದ ಮೇಲಿನ ಕೇಂದ್ರ ಜಿಎಸ್‌ಟಿಯನ್ನು ಮನ್ನಾ ಮಾಡಲು ಮಾನ್ಯ ಪ್ರಧಾನ ಮಂತ್ರಿಗಳು ಘೋಷಿಸಬೇಕೆಂದು ನಾನು ವಿನಂತಿಸುತ್ತೇನೆ. ಆಗ ಚಿತ್ರವು ದೇಶಾದ್ಯಂತ ತೆರಿಗೆ ಮುಕ್ತವಾಗಿರುತ್ತದೆ” ಎಂದು ಬಘೇಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯಾದ ನಂತರ ಅರ್ಧದಷ್ಟು ತೆರಿಗೆ ಪಾಲು ಕೇಂದ್ರಕ್ಕೆ ಹೋಗುತ್ತದೆ ಎಂದು ವಿಧಾನಸಭೆಯಲ್ಲಿ ಅವರು ವಿವರಿಸಿದ್ದಾರೆ. “ಕೇಂದ್ರ ಸರ್ಕಾರ ಈ ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸಬೇಕು” ಎಂದು ಬಾಘೇಲ್‌ ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...