Homeಮುಖಪುಟಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

- Advertisement -
- Advertisement -

ಗಾಝಾದಲ್ಲಿ ಮತ್ತೊಮ್ಮೆ ಕದನ ವಿರಾಮದ ಭರವಸೆ ಚಿಗೊರೊಡೆದಿದೆ. ಪರಸ್ಪರ ಯುದ್ಧ ಕೊನೆಗೊಳಿಸುವ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದೆ ಎಂದು ಮಾತುಕತೆಯಲ್ಲಿ ಭಾಗಿಯಾಗಿರುವ ಇಬ್ಬರು ಅಧಿಕಾರಿಗಳು ಹೇಳಿದ್ದಾಗಿ ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ.

ಇಸ್ರೇಲಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿರುವ ವರದಿಯು, ಕದನ ವಿರಾಮದ ಒಪ್ಪಂದ ಪ್ರಕ್ರಿಯೆ ಪ್ರಗತಿ ಕಂಡಿದೆ. ಆದರೆ, ಅಂತಿಮಗೊಳ್ಳಬೇಕಿದೆ ಎಂದು ಹೇಳಿದೆ.

ಅಕ್ಟೋಬರ್ 2023ರಿಂದ ಹಮಾಸ್ ಮತ್ತು ಇಸ್ರೇಲ್‌ ಸೇನೆ ನಡುವೆ ನಡೆಯುತ್ತಿರುವ ಯುದ್ದ
ಕೊನೆಗೊಳಿಸಲು ಮತ್ತು ಹಮಾಸ್ ಒತ್ತೆಯಾಳುಗಾಗಿ ಇಟ್ಟುಕೊಂಡಿರುವ ಇಸ್ರೇಲಿಗರ ಬಿಡುಗಡೆಗೆ ಈ ಕದನ ವಿರಾಮ ಅಗತ್ಯವಾಗಿದೆ.

ಈ ಪ್ರಕ್ರಿಯೆಯಲ್ಲಿ ಅಮೆರಿಕ, ಈಜಿಪ್ಟ್ ಮತ್ತು ಕತಾರ್ ಮಧ್ಯಸ್ಥಗಾರರಾಗಿದ್ದಾರೆ. ಕದನ ವಿರಾಮದ ನಿಟ್ಟಿನಲ್ಲಿ ಈ ರಾಷ್ಟ್ರಗಳು ಈ ಹಿಂದೆ ಹಲವು ಬಾರಿ ಪ್ರಯತ್ನಗಳನ್ನು ಮಾಡಿವೆ. ಆದರೆ, ಅದು ವಿಫಲವಾಗಿವೆ ಎಂದು ವರದಿಗಳು ಹೇಳಿವೆ. ಮಂಗಳವಾರ (ಜ.14) ಈ ರಾಷ್ಟ್ರಗಳು ಮತ್ತೊಮ್ಮೆ ಕದನ ವಿರಾಮ ಸಂಬಂಧ ಸಭೆ ನಡೆಸಿವೆ ಎಂದು ತಿಳಿದು ಬಂದಿದೆ.

ಆದರೆ, ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುವ ಅಮೆರಿಕ ಮತ್ತೊಂದೆಡೆ ಗಾಝಾದಲ್ಲಿ ಆಕ್ರಮಣ ನಡೆಸಲು ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಆರ್ಥಿಕ ಸಹಾಯ ಒದಗಿಸುತ್ತಿದೆ ಎಂದು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ.

ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್-ಅನ್ಸಾರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕದನ ವಿರಾಮ ಸಂಬಂಧ ಎರಡೂ ಕಡೆಯವರಿಗೆ ಪಠ್ಯ ಸಂದೇಶವನ್ನು ನೀಡಲಾಗಿದೆ ಮತ್ತು ಕೊನೆಯ ವಿವರಗಳ ಕುರಿತು ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮಂಗಳವಾರದಂದು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಕೂಡ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದವು ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.

‘ಕದನ ವಿರಾಮ ಈ ಹಿಂದೆಂದಿಗಿಂತಲೂ ಹತ್ತಿರದಲ್ಲಿದೆ’. ಗಂಟೆಗಳು ಅಥವಾ ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಕದನ ವಿರಾಮ ಯಶಸ್ವಿಯಾದರೆ ಮುಂದೇನು?

ಕೆಲ ವರದಿಗಳ ಪ್ರಕಾರ, ಕದನ ವಿರಾಮ ಯಶಸ್ವಿಯಾದರೆ ಮುಂದಿನ ಸೋಮವಾರದ ಮೊದಲು, ಅಂದರೆ ಯುಎಸ್‌ನಲ್ಲಿ ಬೈಡೆನ್ ಆಡಳಿತದ ಕೊನೆಯ ವಾರದಲ್ಲಿ ಹಮಾಸ್ 33 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ.

ಅಕ್ಟೋಬರ್ 2023ರ ದಾಳಿಯ ಸಮಯದಲ್ಲಿ ಇಸ್ರೇಲ್‌ನಿಂದ ಸೆರೆಹಿಡಿಯಲಾದ 94 ಒತ್ತೆಯಾಳುಗಳನ್ನು ಹಮಾಸ್ ಮತ್ತು ಅದರ ಮಿತ್ರರಾಷ್ಟ್ರಗಳು ಇನ್ನೂ ಹಿಡಿದಿಟ್ಟುಕೊಂಡಿವೆ ಎಂದು ಇಸ್ರೇಲ್ ಸರ್ಕಾರ ಆರೋಪಿಸಿದೆ. ಅವರಲ್ಲಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ ಎಂದಿದೆ.

ಕದನ ವಿರಾಮದ ಮೊದಲ ಹಂತವು ಯೋಜಿಸಿದಂತೆ ನಡೆದರೆ, ಒಪ್ಪಂದ ಜಾರಿಗೆ ಬಂದ 16ನೇ ದಿನದಂದು, ಎರಡನೇ ಹಂತದ ಮಾತುಕತೆಗಳು ಪ್ರಾರಂಭವಾಗಲಿದೆ. ಈ ಸಮಯದಲ್ಲಿ ಉಳಿದ ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುತ್ತದೆ ಮತ್ತು ಸತ್ತ ಒತ್ತೆಯಾಳುಗಳ ಶವಗಳನ್ನು ಹಿಂತಿರುಗಿಸಲಾಗುತ್ತದೆ.

ಒಪ್ಪಂದದ ಅಡಿಯಲ್ಲಿ, ಇಸ್ರೇಲ್‌ ಪಡೆಗಳನ್ನು ಹಂತಹಂತವಾಗಿ ಹಿಂತೆಗೆದುಕೊಳ್ಳಲಾಗುವುದು. ಇಸ್ರೇಲಿ ಪಡೆಗಳು ಇಸ್ರೇಲ್ ಗಡಿ ಪಟ್ಟಣಗಳು ​​ಮತ್ತು ಹಳ್ಳಿಗಳನ್ನು ರಕ್ಷಿಸಲು ಗಡಿ ಪರಿಧಿಯಲ್ಲಿ ಉಳಿಯಲಿವೆ. ಇದರ ಜೊತೆಗೆ, ಗಾಝಾದ ದಕ್ಷಿಣ ಅಂಚಿನಲ್ಲಿರುವ ಫಿಲಡೆಲ್ಫಿ ಕಾರಿಡಾರ್‌ನಲ್ಲಿ ಭದ್ರತಾ ವ್ಯವಸ್ಥೆಗಳಿರುತ್ತವೆ. ಒಪ್ಪಂದದ ಮೊದಲ ಕೆಲವು ದಿನಗಳ ನಂತರ ಇಸ್ರೇಲ್ ಅದರ ಕೆಲವು ಭಾಗಗಳಿಂದ ಹಿಂದೆ ಸರಿಯಲಿದೆ.

ಅಲ್ಲದೆ, ನಿರಾಯುಧ ಉತ್ತರ ಗಾಝಾ ನಿವಾಸಿಗಳನ್ನು ಅವರ ಮೂಲ ಸ್ಥಳಗಳಿಗೆ ಹಿಂತಿರುಗಲು ಅನುಮತಿಸಲಾಗುವುದು. ಯಾವುದೇ ಶಸ್ತ್ರಾಸ್ತ್ರಗಳನ್ನು ಅಲ್ಲಿಗೆ ಸಾಗಿಸದಂತೆ ನೋಡಿಕೊಳ್ಳಲಾಗುವುದು. ಮಧ್ಯ ಗಾಝಾದಲ್ಲಿರುವ ನೆಟ್‌ಜಾರಿಮ್ ಕಾರಿಡಾರ್‌ನಿಂದ ಇಸ್ರೇಲಿ ಪಡೆಗಳು ಹಿಂದೆ ಸರಿಯಲಿವೆ. ಈ ನಡುವೆ ಕೊಲೆ ಅಥವಾ ಮಾರಕ ದಾಳಿಗಳಿಗೆ ಶಿಕ್ಷೆಗೊಳಗಾದ ಪ್ಯಾಲೆಸ್ತೀನಿಯನ್ ಬಂಡುಕೋರರನ್ನು ಕೂಡ ಬಿಡುಗಡೆ ಮಾಡಲಾಗುತ್ತದೆ. ಆದರೆ, ಅದರ ಸಂಖ್ಯೆಗಳು ಜೀವಂತ ಒತ್ತೆಯಾಳುಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ.  ಕೈದಿಗಳನ್ನು ಪಶ್ಚಿಮ ದಂಡೆಯಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಹಮಾಸ್ ಹೋರಾಟಗಾರರನ್ನು ಬಿಡುಗಡೆ ಮಾಡಲಾಗುವುದಿಲ್ಲ.

ಮುಂದುವರಿದು, ಗಾಝಾ ಪಟ್ಟಿಗೆ ಮಾನವೀಯ ನೆರವಿನಲ್ಲಿ ಗಮನಾರ್ಹ ಹೆಚ್ಚಳವೂ ಆಗಲಿದೆ. ಏಕೆಂದರೆ ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ಅಲ್ಲಿನ ಜನಸಂಖ್ಯೆಯು ತೀವ್ರ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಈಗಾಗಲೇ ಎಚ್ಚರಿಸಿವೆ.

ಗಾಝಾದ ಆಡಳಿಯ ನಡೆಸುವವರು ಯಾರು?

ಯುದ್ಧದ ನಂತರ ಗಾಝಾವನ್ನು ಯಾರು ಮುನ್ನಡೆಸುತ್ತಾರೆ ಅಥವಾ ಯಾರು ಆಡಳಿತ ನಡೆಸಲಿದ್ದಾರೆ ಎಂಬುದು ಕದನ ವಿರಾಮದ ಅತ್ಯಂತ ಪ್ರಮುಖ ವಿಷವಾಗಿದೆ. ವರದಿಗಳ ಪ್ರಕಾರ, ಪ್ರಸ್ತುತ ಒಪ್ಪಂದದಲ್ಲಿ ಸರ್ಕಾರ ರಚಿಸುವ ಕುರಿತು ಉಲ್ಲೇಖವಿಲ್ಲ. ಏಕೆಂದರೆ, ಸರ್ಕಾರ ರಚನೆ ಬಹಳ ಸಂಕೀರ್ಣ ವಿಷಯವಾಗಿರುವುದರಿಂದ, ಅದನ್ನು ಈ ಒಪ್ಪಂದದಲ್ಲಿ ಉಲ್ಲೇಖಿಸಿದರೆ ಒಪ್ಪಂದಕ್ಕೆ ತಡೆಯಾಗಬಹುದು ಎಂದು ವರದಿಯಾಗಿದೆ.

ಹಮಾಸ್ ಸರ್ಕಾರ ರಚಿಸುವುದಕ್ಕೆ ಇಸ್ರೇಲ್ ವಿರೋಧ ವ್ಯಕ್ತಪಡಿಸಿದೆ. ಮೂರು ದಶಕಗಳ ಹಿಂದೆ ಓಸ್ಲೋ ಮಧ್ಯಂತರ ಶಾಂತಿ ಒಪ್ಪಂದಗಳ ಅಡಿಯಲ್ಲಿ ಸ್ಥಾಪಿಸಲಾದ ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಅಧಿಕಾರ ಚಲಾಯಿಸುವುದಕ್ಕೂ ಇಸ್ರೇಲ್‌ನ ವಿರೋಧವಿದೆ. ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಸೀಮಿತ ಸಾರ್ವಭೌಮತ್ವವನ್ನು ಹೊಂದಿದೆ.

ಕದನ ವಿರಾಮ ಒಪ್ಪಂದ ಮಾಡಿಕೊಂಡು ಯುದ್ದ ಕೊನೆಗೊಳಿಸಿದರೂ ಗಾಝಾ ಮೇಲೆ ನಿಯಂತ್ರಣ ಸಾಧಿಸುವ ಒಲವನ್ನು ಇಸ್ರೇಲ್ ಹೊಂದಿದೆ. ಆದರೆ, ಅಂತಾರಾಷ್ಟ್ರೀಯ ಸಮುದಾಯವು ಗಾಝಾವನ್ನು ಪ್ಯಾಲೆಸ್ತೀನಿಯರು ಮುನ್ನಡೆಸಬೇಕು ಎಂದು ಹೇಳಿದೆ. ಆದರೆ, ಪ್ಯಾಲೆಸ್ತೀನ್‌ ರಾಜಕೀಯದಲ್ಲಿ ಹಲವು ಬಿಕ್ಕಟ್ಟುಗಳಿರುವುದರಿಂದ ಅದು ಅಷ್ಟು ಸುಲಭದ ವಿಚಾರವಲ್ಲ. ಹಾಗಾಗಿ, ಗಾಝಾದ ಆಡಳಿತ ನಡೆಸುವವರು ಯಾರು? ಎಂಬುವುದು ಗೊಂದಲಮಯವಾಗಿದೆ.

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...