Homeಮುಖಪುಟಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

- Advertisement -
- Advertisement -

ಗಾಝಾದಲ್ಲಿ ಮತ್ತೊಮ್ಮೆ ಕದನ ವಿರಾಮದ ಭರವಸೆ ಚಿಗೊರೊಡೆದಿದೆ. ಪರಸ್ಪರ ಯುದ್ಧ ಕೊನೆಗೊಳಿಸುವ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದೆ ಎಂದು ಮಾತುಕತೆಯಲ್ಲಿ ಭಾಗಿಯಾಗಿರುವ ಇಬ್ಬರು ಅಧಿಕಾರಿಗಳು ಹೇಳಿದ್ದಾಗಿ ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ.

ಇಸ್ರೇಲಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿರುವ ವರದಿಯು, ಕದನ ವಿರಾಮದ ಒಪ್ಪಂದ ಪ್ರಕ್ರಿಯೆ ಪ್ರಗತಿ ಕಂಡಿದೆ. ಆದರೆ, ಅಂತಿಮಗೊಳ್ಳಬೇಕಿದೆ ಎಂದು ಹೇಳಿದೆ.

ಅಕ್ಟೋಬರ್ 2023ರಿಂದ ಹಮಾಸ್ ಮತ್ತು ಇಸ್ರೇಲ್‌ ಸೇನೆ ನಡುವೆ ನಡೆಯುತ್ತಿರುವ ಯುದ್ದ
ಕೊನೆಗೊಳಿಸಲು ಮತ್ತು ಹಮಾಸ್ ಒತ್ತೆಯಾಳುಗಾಗಿ ಇಟ್ಟುಕೊಂಡಿರುವ ಇಸ್ರೇಲಿಗರ ಬಿಡುಗಡೆಗೆ ಈ ಕದನ ವಿರಾಮ ಅಗತ್ಯವಾಗಿದೆ.

ಈ ಪ್ರಕ್ರಿಯೆಯಲ್ಲಿ ಅಮೆರಿಕ, ಈಜಿಪ್ಟ್ ಮತ್ತು ಕತಾರ್ ಮಧ್ಯಸ್ಥಗಾರರಾಗಿದ್ದಾರೆ. ಕದನ ವಿರಾಮದ ನಿಟ್ಟಿನಲ್ಲಿ ಈ ರಾಷ್ಟ್ರಗಳು ಈ ಹಿಂದೆ ಹಲವು ಬಾರಿ ಪ್ರಯತ್ನಗಳನ್ನು ಮಾಡಿವೆ. ಆದರೆ, ಅದು ವಿಫಲವಾಗಿವೆ ಎಂದು ವರದಿಗಳು ಹೇಳಿವೆ. ಮಂಗಳವಾರ (ಜ.14) ಈ ರಾಷ್ಟ್ರಗಳು ಮತ್ತೊಮ್ಮೆ ಕದನ ವಿರಾಮ ಸಂಬಂಧ ಸಭೆ ನಡೆಸಿವೆ ಎಂದು ತಿಳಿದು ಬಂದಿದೆ.

ಆದರೆ, ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುವ ಅಮೆರಿಕ ಮತ್ತೊಂದೆಡೆ ಗಾಝಾದಲ್ಲಿ ಆಕ್ರಮಣ ನಡೆಸಲು ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಆರ್ಥಿಕ ಸಹಾಯ ಒದಗಿಸುತ್ತಿದೆ ಎಂದು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ.

ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್-ಅನ್ಸಾರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕದನ ವಿರಾಮ ಸಂಬಂಧ ಎರಡೂ ಕಡೆಯವರಿಗೆ ಪಠ್ಯ ಸಂದೇಶವನ್ನು ನೀಡಲಾಗಿದೆ ಮತ್ತು ಕೊನೆಯ ವಿವರಗಳ ಕುರಿತು ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮಂಗಳವಾರದಂದು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಕೂಡ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದವು ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.

‘ಕದನ ವಿರಾಮ ಈ ಹಿಂದೆಂದಿಗಿಂತಲೂ ಹತ್ತಿರದಲ್ಲಿದೆ’. ಗಂಟೆಗಳು ಅಥವಾ ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಕದನ ವಿರಾಮ ಯಶಸ್ವಿಯಾದರೆ ಮುಂದೇನು?

ಕೆಲ ವರದಿಗಳ ಪ್ರಕಾರ, ಕದನ ವಿರಾಮ ಯಶಸ್ವಿಯಾದರೆ ಮುಂದಿನ ಸೋಮವಾರದ ಮೊದಲು, ಅಂದರೆ ಯುಎಸ್‌ನಲ್ಲಿ ಬೈಡೆನ್ ಆಡಳಿತದ ಕೊನೆಯ ವಾರದಲ್ಲಿ ಹಮಾಸ್ 33 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ.

ಅಕ್ಟೋಬರ್ 2023ರ ದಾಳಿಯ ಸಮಯದಲ್ಲಿ ಇಸ್ರೇಲ್‌ನಿಂದ ಸೆರೆಹಿಡಿಯಲಾದ 94 ಒತ್ತೆಯಾಳುಗಳನ್ನು ಹಮಾಸ್ ಮತ್ತು ಅದರ ಮಿತ್ರರಾಷ್ಟ್ರಗಳು ಇನ್ನೂ ಹಿಡಿದಿಟ್ಟುಕೊಂಡಿವೆ ಎಂದು ಇಸ್ರೇಲ್ ಸರ್ಕಾರ ಆರೋಪಿಸಿದೆ. ಅವರಲ್ಲಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ ಎಂದಿದೆ.

ಕದನ ವಿರಾಮದ ಮೊದಲ ಹಂತವು ಯೋಜಿಸಿದಂತೆ ನಡೆದರೆ, ಒಪ್ಪಂದ ಜಾರಿಗೆ ಬಂದ 16ನೇ ದಿನದಂದು, ಎರಡನೇ ಹಂತದ ಮಾತುಕತೆಗಳು ಪ್ರಾರಂಭವಾಗಲಿದೆ. ಈ ಸಮಯದಲ್ಲಿ ಉಳಿದ ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುತ್ತದೆ ಮತ್ತು ಸತ್ತ ಒತ್ತೆಯಾಳುಗಳ ಶವಗಳನ್ನು ಹಿಂತಿರುಗಿಸಲಾಗುತ್ತದೆ.

ಒಪ್ಪಂದದ ಅಡಿಯಲ್ಲಿ, ಇಸ್ರೇಲ್‌ ಪಡೆಗಳನ್ನು ಹಂತಹಂತವಾಗಿ ಹಿಂತೆಗೆದುಕೊಳ್ಳಲಾಗುವುದು. ಇಸ್ರೇಲಿ ಪಡೆಗಳು ಇಸ್ರೇಲ್ ಗಡಿ ಪಟ್ಟಣಗಳು ​​ಮತ್ತು ಹಳ್ಳಿಗಳನ್ನು ರಕ್ಷಿಸಲು ಗಡಿ ಪರಿಧಿಯಲ್ಲಿ ಉಳಿಯಲಿವೆ. ಇದರ ಜೊತೆಗೆ, ಗಾಝಾದ ದಕ್ಷಿಣ ಅಂಚಿನಲ್ಲಿರುವ ಫಿಲಡೆಲ್ಫಿ ಕಾರಿಡಾರ್‌ನಲ್ಲಿ ಭದ್ರತಾ ವ್ಯವಸ್ಥೆಗಳಿರುತ್ತವೆ. ಒಪ್ಪಂದದ ಮೊದಲ ಕೆಲವು ದಿನಗಳ ನಂತರ ಇಸ್ರೇಲ್ ಅದರ ಕೆಲವು ಭಾಗಗಳಿಂದ ಹಿಂದೆ ಸರಿಯಲಿದೆ.

ಅಲ್ಲದೆ, ನಿರಾಯುಧ ಉತ್ತರ ಗಾಝಾ ನಿವಾಸಿಗಳನ್ನು ಅವರ ಮೂಲ ಸ್ಥಳಗಳಿಗೆ ಹಿಂತಿರುಗಲು ಅನುಮತಿಸಲಾಗುವುದು. ಯಾವುದೇ ಶಸ್ತ್ರಾಸ್ತ್ರಗಳನ್ನು ಅಲ್ಲಿಗೆ ಸಾಗಿಸದಂತೆ ನೋಡಿಕೊಳ್ಳಲಾಗುವುದು. ಮಧ್ಯ ಗಾಝಾದಲ್ಲಿರುವ ನೆಟ್‌ಜಾರಿಮ್ ಕಾರಿಡಾರ್‌ನಿಂದ ಇಸ್ರೇಲಿ ಪಡೆಗಳು ಹಿಂದೆ ಸರಿಯಲಿವೆ. ಈ ನಡುವೆ ಕೊಲೆ ಅಥವಾ ಮಾರಕ ದಾಳಿಗಳಿಗೆ ಶಿಕ್ಷೆಗೊಳಗಾದ ಪ್ಯಾಲೆಸ್ತೀನಿಯನ್ ಬಂಡುಕೋರರನ್ನು ಕೂಡ ಬಿಡುಗಡೆ ಮಾಡಲಾಗುತ್ತದೆ. ಆದರೆ, ಅದರ ಸಂಖ್ಯೆಗಳು ಜೀವಂತ ಒತ್ತೆಯಾಳುಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ.  ಕೈದಿಗಳನ್ನು ಪಶ್ಚಿಮ ದಂಡೆಯಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಹಮಾಸ್ ಹೋರಾಟಗಾರರನ್ನು ಬಿಡುಗಡೆ ಮಾಡಲಾಗುವುದಿಲ್ಲ.

ಮುಂದುವರಿದು, ಗಾಝಾ ಪಟ್ಟಿಗೆ ಮಾನವೀಯ ನೆರವಿನಲ್ಲಿ ಗಮನಾರ್ಹ ಹೆಚ್ಚಳವೂ ಆಗಲಿದೆ. ಏಕೆಂದರೆ ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ಅಲ್ಲಿನ ಜನಸಂಖ್ಯೆಯು ತೀವ್ರ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಈಗಾಗಲೇ ಎಚ್ಚರಿಸಿವೆ.

ಗಾಝಾದ ಆಡಳಿಯ ನಡೆಸುವವರು ಯಾರು?

ಯುದ್ಧದ ನಂತರ ಗಾಝಾವನ್ನು ಯಾರು ಮುನ್ನಡೆಸುತ್ತಾರೆ ಅಥವಾ ಯಾರು ಆಡಳಿತ ನಡೆಸಲಿದ್ದಾರೆ ಎಂಬುದು ಕದನ ವಿರಾಮದ ಅತ್ಯಂತ ಪ್ರಮುಖ ವಿಷವಾಗಿದೆ. ವರದಿಗಳ ಪ್ರಕಾರ, ಪ್ರಸ್ತುತ ಒಪ್ಪಂದದಲ್ಲಿ ಸರ್ಕಾರ ರಚಿಸುವ ಕುರಿತು ಉಲ್ಲೇಖವಿಲ್ಲ. ಏಕೆಂದರೆ, ಸರ್ಕಾರ ರಚನೆ ಬಹಳ ಸಂಕೀರ್ಣ ವಿಷಯವಾಗಿರುವುದರಿಂದ, ಅದನ್ನು ಈ ಒಪ್ಪಂದದಲ್ಲಿ ಉಲ್ಲೇಖಿಸಿದರೆ ಒಪ್ಪಂದಕ್ಕೆ ತಡೆಯಾಗಬಹುದು ಎಂದು ವರದಿಯಾಗಿದೆ.

ಹಮಾಸ್ ಸರ್ಕಾರ ರಚಿಸುವುದಕ್ಕೆ ಇಸ್ರೇಲ್ ವಿರೋಧ ವ್ಯಕ್ತಪಡಿಸಿದೆ. ಮೂರು ದಶಕಗಳ ಹಿಂದೆ ಓಸ್ಲೋ ಮಧ್ಯಂತರ ಶಾಂತಿ ಒಪ್ಪಂದಗಳ ಅಡಿಯಲ್ಲಿ ಸ್ಥಾಪಿಸಲಾದ ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಅಧಿಕಾರ ಚಲಾಯಿಸುವುದಕ್ಕೂ ಇಸ್ರೇಲ್‌ನ ವಿರೋಧವಿದೆ. ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಸೀಮಿತ ಸಾರ್ವಭೌಮತ್ವವನ್ನು ಹೊಂದಿದೆ.

ಕದನ ವಿರಾಮ ಒಪ್ಪಂದ ಮಾಡಿಕೊಂಡು ಯುದ್ದ ಕೊನೆಗೊಳಿಸಿದರೂ ಗಾಝಾ ಮೇಲೆ ನಿಯಂತ್ರಣ ಸಾಧಿಸುವ ಒಲವನ್ನು ಇಸ್ರೇಲ್ ಹೊಂದಿದೆ. ಆದರೆ, ಅಂತಾರಾಷ್ಟ್ರೀಯ ಸಮುದಾಯವು ಗಾಝಾವನ್ನು ಪ್ಯಾಲೆಸ್ತೀನಿಯರು ಮುನ್ನಡೆಸಬೇಕು ಎಂದು ಹೇಳಿದೆ. ಆದರೆ, ಪ್ಯಾಲೆಸ್ತೀನ್‌ ರಾಜಕೀಯದಲ್ಲಿ ಹಲವು ಬಿಕ್ಕಟ್ಟುಗಳಿರುವುದರಿಂದ ಅದು ಅಷ್ಟು ಸುಲಭದ ವಿಚಾರವಲ್ಲ. ಹಾಗಾಗಿ, ಗಾಝಾದ ಆಡಳಿತ ನಡೆಸುವವರು ಯಾರು? ಎಂಬುವುದು ಗೊಂದಲಮಯವಾಗಿದೆ.

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...