Homeಮುಖಪುಟಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

- Advertisement -
- Advertisement -

ಗಾಝಾದಲ್ಲಿ ಮತ್ತೊಮ್ಮೆ ಕದನ ವಿರಾಮದ ಭರವಸೆ ಚಿಗೊರೊಡೆದಿದೆ. ಪರಸ್ಪರ ಯುದ್ಧ ಕೊನೆಗೊಳಿಸುವ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದೆ ಎಂದು ಮಾತುಕತೆಯಲ್ಲಿ ಭಾಗಿಯಾಗಿರುವ ಇಬ್ಬರು ಅಧಿಕಾರಿಗಳು ಹೇಳಿದ್ದಾಗಿ ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ.

ಇಸ್ರೇಲಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿರುವ ವರದಿಯು, ಕದನ ವಿರಾಮದ ಒಪ್ಪಂದ ಪ್ರಕ್ರಿಯೆ ಪ್ರಗತಿ ಕಂಡಿದೆ. ಆದರೆ, ಅಂತಿಮಗೊಳ್ಳಬೇಕಿದೆ ಎಂದು ಹೇಳಿದೆ.

ಅಕ್ಟೋಬರ್ 2023ರಿಂದ ಹಮಾಸ್ ಮತ್ತು ಇಸ್ರೇಲ್‌ ಸೇನೆ ನಡುವೆ ನಡೆಯುತ್ತಿರುವ ಯುದ್ದ
ಕೊನೆಗೊಳಿಸಲು ಮತ್ತು ಹಮಾಸ್ ಒತ್ತೆಯಾಳುಗಾಗಿ ಇಟ್ಟುಕೊಂಡಿರುವ ಇಸ್ರೇಲಿಗರ ಬಿಡುಗಡೆಗೆ ಈ ಕದನ ವಿರಾಮ ಅಗತ್ಯವಾಗಿದೆ.

ಈ ಪ್ರಕ್ರಿಯೆಯಲ್ಲಿ ಅಮೆರಿಕ, ಈಜಿಪ್ಟ್ ಮತ್ತು ಕತಾರ್ ಮಧ್ಯಸ್ಥಗಾರರಾಗಿದ್ದಾರೆ. ಕದನ ವಿರಾಮದ ನಿಟ್ಟಿನಲ್ಲಿ ಈ ರಾಷ್ಟ್ರಗಳು ಈ ಹಿಂದೆ ಹಲವು ಬಾರಿ ಪ್ರಯತ್ನಗಳನ್ನು ಮಾಡಿವೆ. ಆದರೆ, ಅದು ವಿಫಲವಾಗಿವೆ ಎಂದು ವರದಿಗಳು ಹೇಳಿವೆ. ಮಂಗಳವಾರ (ಜ.14) ಈ ರಾಷ್ಟ್ರಗಳು ಮತ್ತೊಮ್ಮೆ ಕದನ ವಿರಾಮ ಸಂಬಂಧ ಸಭೆ ನಡೆಸಿವೆ ಎಂದು ತಿಳಿದು ಬಂದಿದೆ.

ಆದರೆ, ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುವ ಅಮೆರಿಕ ಮತ್ತೊಂದೆಡೆ ಗಾಝಾದಲ್ಲಿ ಆಕ್ರಮಣ ನಡೆಸಲು ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಆರ್ಥಿಕ ಸಹಾಯ ಒದಗಿಸುತ್ತಿದೆ ಎಂದು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ.

ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್-ಅನ್ಸಾರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕದನ ವಿರಾಮ ಸಂಬಂಧ ಎರಡೂ ಕಡೆಯವರಿಗೆ ಪಠ್ಯ ಸಂದೇಶವನ್ನು ನೀಡಲಾಗಿದೆ ಮತ್ತು ಕೊನೆಯ ವಿವರಗಳ ಕುರಿತು ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮಂಗಳವಾರದಂದು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಕೂಡ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದವು ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.

‘ಕದನ ವಿರಾಮ ಈ ಹಿಂದೆಂದಿಗಿಂತಲೂ ಹತ್ತಿರದಲ್ಲಿದೆ’. ಗಂಟೆಗಳು ಅಥವಾ ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಕದನ ವಿರಾಮ ಯಶಸ್ವಿಯಾದರೆ ಮುಂದೇನು?

ಕೆಲ ವರದಿಗಳ ಪ್ರಕಾರ, ಕದನ ವಿರಾಮ ಯಶಸ್ವಿಯಾದರೆ ಮುಂದಿನ ಸೋಮವಾರದ ಮೊದಲು, ಅಂದರೆ ಯುಎಸ್‌ನಲ್ಲಿ ಬೈಡೆನ್ ಆಡಳಿತದ ಕೊನೆಯ ವಾರದಲ್ಲಿ ಹಮಾಸ್ 33 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ.

ಅಕ್ಟೋಬರ್ 2023ರ ದಾಳಿಯ ಸಮಯದಲ್ಲಿ ಇಸ್ರೇಲ್‌ನಿಂದ ಸೆರೆಹಿಡಿಯಲಾದ 94 ಒತ್ತೆಯಾಳುಗಳನ್ನು ಹಮಾಸ್ ಮತ್ತು ಅದರ ಮಿತ್ರರಾಷ್ಟ್ರಗಳು ಇನ್ನೂ ಹಿಡಿದಿಟ್ಟುಕೊಂಡಿವೆ ಎಂದು ಇಸ್ರೇಲ್ ಸರ್ಕಾರ ಆರೋಪಿಸಿದೆ. ಅವರಲ್ಲಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ ಎಂದಿದೆ.

ಕದನ ವಿರಾಮದ ಮೊದಲ ಹಂತವು ಯೋಜಿಸಿದಂತೆ ನಡೆದರೆ, ಒಪ್ಪಂದ ಜಾರಿಗೆ ಬಂದ 16ನೇ ದಿನದಂದು, ಎರಡನೇ ಹಂತದ ಮಾತುಕತೆಗಳು ಪ್ರಾರಂಭವಾಗಲಿದೆ. ಈ ಸಮಯದಲ್ಲಿ ಉಳಿದ ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುತ್ತದೆ ಮತ್ತು ಸತ್ತ ಒತ್ತೆಯಾಳುಗಳ ಶವಗಳನ್ನು ಹಿಂತಿರುಗಿಸಲಾಗುತ್ತದೆ.

ಒಪ್ಪಂದದ ಅಡಿಯಲ್ಲಿ, ಇಸ್ರೇಲ್‌ ಪಡೆಗಳನ್ನು ಹಂತಹಂತವಾಗಿ ಹಿಂತೆಗೆದುಕೊಳ್ಳಲಾಗುವುದು. ಇಸ್ರೇಲಿ ಪಡೆಗಳು ಇಸ್ರೇಲ್ ಗಡಿ ಪಟ್ಟಣಗಳು ​​ಮತ್ತು ಹಳ್ಳಿಗಳನ್ನು ರಕ್ಷಿಸಲು ಗಡಿ ಪರಿಧಿಯಲ್ಲಿ ಉಳಿಯಲಿವೆ. ಇದರ ಜೊತೆಗೆ, ಗಾಝಾದ ದಕ್ಷಿಣ ಅಂಚಿನಲ್ಲಿರುವ ಫಿಲಡೆಲ್ಫಿ ಕಾರಿಡಾರ್‌ನಲ್ಲಿ ಭದ್ರತಾ ವ್ಯವಸ್ಥೆಗಳಿರುತ್ತವೆ. ಒಪ್ಪಂದದ ಮೊದಲ ಕೆಲವು ದಿನಗಳ ನಂತರ ಇಸ್ರೇಲ್ ಅದರ ಕೆಲವು ಭಾಗಗಳಿಂದ ಹಿಂದೆ ಸರಿಯಲಿದೆ.

ಅಲ್ಲದೆ, ನಿರಾಯುಧ ಉತ್ತರ ಗಾಝಾ ನಿವಾಸಿಗಳನ್ನು ಅವರ ಮೂಲ ಸ್ಥಳಗಳಿಗೆ ಹಿಂತಿರುಗಲು ಅನುಮತಿಸಲಾಗುವುದು. ಯಾವುದೇ ಶಸ್ತ್ರಾಸ್ತ್ರಗಳನ್ನು ಅಲ್ಲಿಗೆ ಸಾಗಿಸದಂತೆ ನೋಡಿಕೊಳ್ಳಲಾಗುವುದು. ಮಧ್ಯ ಗಾಝಾದಲ್ಲಿರುವ ನೆಟ್‌ಜಾರಿಮ್ ಕಾರಿಡಾರ್‌ನಿಂದ ಇಸ್ರೇಲಿ ಪಡೆಗಳು ಹಿಂದೆ ಸರಿಯಲಿವೆ. ಈ ನಡುವೆ ಕೊಲೆ ಅಥವಾ ಮಾರಕ ದಾಳಿಗಳಿಗೆ ಶಿಕ್ಷೆಗೊಳಗಾದ ಪ್ಯಾಲೆಸ್ತೀನಿಯನ್ ಬಂಡುಕೋರರನ್ನು ಕೂಡ ಬಿಡುಗಡೆ ಮಾಡಲಾಗುತ್ತದೆ. ಆದರೆ, ಅದರ ಸಂಖ್ಯೆಗಳು ಜೀವಂತ ಒತ್ತೆಯಾಳುಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ.  ಕೈದಿಗಳನ್ನು ಪಶ್ಚಿಮ ದಂಡೆಯಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಹಮಾಸ್ ಹೋರಾಟಗಾರರನ್ನು ಬಿಡುಗಡೆ ಮಾಡಲಾಗುವುದಿಲ್ಲ.

ಮುಂದುವರಿದು, ಗಾಝಾ ಪಟ್ಟಿಗೆ ಮಾನವೀಯ ನೆರವಿನಲ್ಲಿ ಗಮನಾರ್ಹ ಹೆಚ್ಚಳವೂ ಆಗಲಿದೆ. ಏಕೆಂದರೆ ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ಅಲ್ಲಿನ ಜನಸಂಖ್ಯೆಯು ತೀವ್ರ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಈಗಾಗಲೇ ಎಚ್ಚರಿಸಿವೆ.

ಗಾಝಾದ ಆಡಳಿಯ ನಡೆಸುವವರು ಯಾರು?

ಯುದ್ಧದ ನಂತರ ಗಾಝಾವನ್ನು ಯಾರು ಮುನ್ನಡೆಸುತ್ತಾರೆ ಅಥವಾ ಯಾರು ಆಡಳಿತ ನಡೆಸಲಿದ್ದಾರೆ ಎಂಬುದು ಕದನ ವಿರಾಮದ ಅತ್ಯಂತ ಪ್ರಮುಖ ವಿಷವಾಗಿದೆ. ವರದಿಗಳ ಪ್ರಕಾರ, ಪ್ರಸ್ತುತ ಒಪ್ಪಂದದಲ್ಲಿ ಸರ್ಕಾರ ರಚಿಸುವ ಕುರಿತು ಉಲ್ಲೇಖವಿಲ್ಲ. ಏಕೆಂದರೆ, ಸರ್ಕಾರ ರಚನೆ ಬಹಳ ಸಂಕೀರ್ಣ ವಿಷಯವಾಗಿರುವುದರಿಂದ, ಅದನ್ನು ಈ ಒಪ್ಪಂದದಲ್ಲಿ ಉಲ್ಲೇಖಿಸಿದರೆ ಒಪ್ಪಂದಕ್ಕೆ ತಡೆಯಾಗಬಹುದು ಎಂದು ವರದಿಯಾಗಿದೆ.

ಹಮಾಸ್ ಸರ್ಕಾರ ರಚಿಸುವುದಕ್ಕೆ ಇಸ್ರೇಲ್ ವಿರೋಧ ವ್ಯಕ್ತಪಡಿಸಿದೆ. ಮೂರು ದಶಕಗಳ ಹಿಂದೆ ಓಸ್ಲೋ ಮಧ್ಯಂತರ ಶಾಂತಿ ಒಪ್ಪಂದಗಳ ಅಡಿಯಲ್ಲಿ ಸ್ಥಾಪಿಸಲಾದ ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಅಧಿಕಾರ ಚಲಾಯಿಸುವುದಕ್ಕೂ ಇಸ್ರೇಲ್‌ನ ವಿರೋಧವಿದೆ. ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಸೀಮಿತ ಸಾರ್ವಭೌಮತ್ವವನ್ನು ಹೊಂದಿದೆ.

ಕದನ ವಿರಾಮ ಒಪ್ಪಂದ ಮಾಡಿಕೊಂಡು ಯುದ್ದ ಕೊನೆಗೊಳಿಸಿದರೂ ಗಾಝಾ ಮೇಲೆ ನಿಯಂತ್ರಣ ಸಾಧಿಸುವ ಒಲವನ್ನು ಇಸ್ರೇಲ್ ಹೊಂದಿದೆ. ಆದರೆ, ಅಂತಾರಾಷ್ಟ್ರೀಯ ಸಮುದಾಯವು ಗಾಝಾವನ್ನು ಪ್ಯಾಲೆಸ್ತೀನಿಯರು ಮುನ್ನಡೆಸಬೇಕು ಎಂದು ಹೇಳಿದೆ. ಆದರೆ, ಪ್ಯಾಲೆಸ್ತೀನ್‌ ರಾಜಕೀಯದಲ್ಲಿ ಹಲವು ಬಿಕ್ಕಟ್ಟುಗಳಿರುವುದರಿಂದ ಅದು ಅಷ್ಟು ಸುಲಭದ ವಿಚಾರವಲ್ಲ. ಹಾಗಾಗಿ, ಗಾಝಾದ ಆಡಳಿತ ನಡೆಸುವವರು ಯಾರು? ಎಂಬುವುದು ಗೊಂದಲಮಯವಾಗಿದೆ.

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...