Homeಮುಖಪುಟಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

- Advertisement -
- Advertisement -

ಗಾಝಾದಲ್ಲಿ ಮತ್ತೊಮ್ಮೆ ಕದನ ವಿರಾಮದ ಭರವಸೆ ಚಿಗೊರೊಡೆದಿದೆ. ಪರಸ್ಪರ ಯುದ್ಧ ಕೊನೆಗೊಳಿಸುವ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದೆ ಎಂದು ಮಾತುಕತೆಯಲ್ಲಿ ಭಾಗಿಯಾಗಿರುವ ಇಬ್ಬರು ಅಧಿಕಾರಿಗಳು ಹೇಳಿದ್ದಾಗಿ ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ.

ಇಸ್ರೇಲಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿರುವ ವರದಿಯು, ಕದನ ವಿರಾಮದ ಒಪ್ಪಂದ ಪ್ರಕ್ರಿಯೆ ಪ್ರಗತಿ ಕಂಡಿದೆ. ಆದರೆ, ಅಂತಿಮಗೊಳ್ಳಬೇಕಿದೆ ಎಂದು ಹೇಳಿದೆ.

ಅಕ್ಟೋಬರ್ 2023ರಿಂದ ಹಮಾಸ್ ಮತ್ತು ಇಸ್ರೇಲ್‌ ಸೇನೆ ನಡುವೆ ನಡೆಯುತ್ತಿರುವ ಯುದ್ದ
ಕೊನೆಗೊಳಿಸಲು ಮತ್ತು ಹಮಾಸ್ ಒತ್ತೆಯಾಳುಗಾಗಿ ಇಟ್ಟುಕೊಂಡಿರುವ ಇಸ್ರೇಲಿಗರ ಬಿಡುಗಡೆಗೆ ಈ ಕದನ ವಿರಾಮ ಅಗತ್ಯವಾಗಿದೆ.

ಈ ಪ್ರಕ್ರಿಯೆಯಲ್ಲಿ ಅಮೆರಿಕ, ಈಜಿಪ್ಟ್ ಮತ್ತು ಕತಾರ್ ಮಧ್ಯಸ್ಥಗಾರರಾಗಿದ್ದಾರೆ. ಕದನ ವಿರಾಮದ ನಿಟ್ಟಿನಲ್ಲಿ ಈ ರಾಷ್ಟ್ರಗಳು ಈ ಹಿಂದೆ ಹಲವು ಬಾರಿ ಪ್ರಯತ್ನಗಳನ್ನು ಮಾಡಿವೆ. ಆದರೆ, ಅದು ವಿಫಲವಾಗಿವೆ ಎಂದು ವರದಿಗಳು ಹೇಳಿವೆ. ಮಂಗಳವಾರ (ಜ.14) ಈ ರಾಷ್ಟ್ರಗಳು ಮತ್ತೊಮ್ಮೆ ಕದನ ವಿರಾಮ ಸಂಬಂಧ ಸಭೆ ನಡೆಸಿವೆ ಎಂದು ತಿಳಿದು ಬಂದಿದೆ.

ಆದರೆ, ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುವ ಅಮೆರಿಕ ಮತ್ತೊಂದೆಡೆ ಗಾಝಾದಲ್ಲಿ ಆಕ್ರಮಣ ನಡೆಸಲು ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಆರ್ಥಿಕ ಸಹಾಯ ಒದಗಿಸುತ್ತಿದೆ ಎಂದು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ.

ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್-ಅನ್ಸಾರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕದನ ವಿರಾಮ ಸಂಬಂಧ ಎರಡೂ ಕಡೆಯವರಿಗೆ ಪಠ್ಯ ಸಂದೇಶವನ್ನು ನೀಡಲಾಗಿದೆ ಮತ್ತು ಕೊನೆಯ ವಿವರಗಳ ಕುರಿತು ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮಂಗಳವಾರದಂದು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಕೂಡ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದವು ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.

‘ಕದನ ವಿರಾಮ ಈ ಹಿಂದೆಂದಿಗಿಂತಲೂ ಹತ್ತಿರದಲ್ಲಿದೆ’. ಗಂಟೆಗಳು ಅಥವಾ ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಕದನ ವಿರಾಮ ಯಶಸ್ವಿಯಾದರೆ ಮುಂದೇನು?

ಕೆಲ ವರದಿಗಳ ಪ್ರಕಾರ, ಕದನ ವಿರಾಮ ಯಶಸ್ವಿಯಾದರೆ ಮುಂದಿನ ಸೋಮವಾರದ ಮೊದಲು, ಅಂದರೆ ಯುಎಸ್‌ನಲ್ಲಿ ಬೈಡೆನ್ ಆಡಳಿತದ ಕೊನೆಯ ವಾರದಲ್ಲಿ ಹಮಾಸ್ 33 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ.

ಅಕ್ಟೋಬರ್ 2023ರ ದಾಳಿಯ ಸಮಯದಲ್ಲಿ ಇಸ್ರೇಲ್‌ನಿಂದ ಸೆರೆಹಿಡಿಯಲಾದ 94 ಒತ್ತೆಯಾಳುಗಳನ್ನು ಹಮಾಸ್ ಮತ್ತು ಅದರ ಮಿತ್ರರಾಷ್ಟ್ರಗಳು ಇನ್ನೂ ಹಿಡಿದಿಟ್ಟುಕೊಂಡಿವೆ ಎಂದು ಇಸ್ರೇಲ್ ಸರ್ಕಾರ ಆರೋಪಿಸಿದೆ. ಅವರಲ್ಲಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ ಎಂದಿದೆ.

ಕದನ ವಿರಾಮದ ಮೊದಲ ಹಂತವು ಯೋಜಿಸಿದಂತೆ ನಡೆದರೆ, ಒಪ್ಪಂದ ಜಾರಿಗೆ ಬಂದ 16ನೇ ದಿನದಂದು, ಎರಡನೇ ಹಂತದ ಮಾತುಕತೆಗಳು ಪ್ರಾರಂಭವಾಗಲಿದೆ. ಈ ಸಮಯದಲ್ಲಿ ಉಳಿದ ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುತ್ತದೆ ಮತ್ತು ಸತ್ತ ಒತ್ತೆಯಾಳುಗಳ ಶವಗಳನ್ನು ಹಿಂತಿರುಗಿಸಲಾಗುತ್ತದೆ.

ಒಪ್ಪಂದದ ಅಡಿಯಲ್ಲಿ, ಇಸ್ರೇಲ್‌ ಪಡೆಗಳನ್ನು ಹಂತಹಂತವಾಗಿ ಹಿಂತೆಗೆದುಕೊಳ್ಳಲಾಗುವುದು. ಇಸ್ರೇಲಿ ಪಡೆಗಳು ಇಸ್ರೇಲ್ ಗಡಿ ಪಟ್ಟಣಗಳು ​​ಮತ್ತು ಹಳ್ಳಿಗಳನ್ನು ರಕ್ಷಿಸಲು ಗಡಿ ಪರಿಧಿಯಲ್ಲಿ ಉಳಿಯಲಿವೆ. ಇದರ ಜೊತೆಗೆ, ಗಾಝಾದ ದಕ್ಷಿಣ ಅಂಚಿನಲ್ಲಿರುವ ಫಿಲಡೆಲ್ಫಿ ಕಾರಿಡಾರ್‌ನಲ್ಲಿ ಭದ್ರತಾ ವ್ಯವಸ್ಥೆಗಳಿರುತ್ತವೆ. ಒಪ್ಪಂದದ ಮೊದಲ ಕೆಲವು ದಿನಗಳ ನಂತರ ಇಸ್ರೇಲ್ ಅದರ ಕೆಲವು ಭಾಗಗಳಿಂದ ಹಿಂದೆ ಸರಿಯಲಿದೆ.

ಅಲ್ಲದೆ, ನಿರಾಯುಧ ಉತ್ತರ ಗಾಝಾ ನಿವಾಸಿಗಳನ್ನು ಅವರ ಮೂಲ ಸ್ಥಳಗಳಿಗೆ ಹಿಂತಿರುಗಲು ಅನುಮತಿಸಲಾಗುವುದು. ಯಾವುದೇ ಶಸ್ತ್ರಾಸ್ತ್ರಗಳನ್ನು ಅಲ್ಲಿಗೆ ಸಾಗಿಸದಂತೆ ನೋಡಿಕೊಳ್ಳಲಾಗುವುದು. ಮಧ್ಯ ಗಾಝಾದಲ್ಲಿರುವ ನೆಟ್‌ಜಾರಿಮ್ ಕಾರಿಡಾರ್‌ನಿಂದ ಇಸ್ರೇಲಿ ಪಡೆಗಳು ಹಿಂದೆ ಸರಿಯಲಿವೆ. ಈ ನಡುವೆ ಕೊಲೆ ಅಥವಾ ಮಾರಕ ದಾಳಿಗಳಿಗೆ ಶಿಕ್ಷೆಗೊಳಗಾದ ಪ್ಯಾಲೆಸ್ತೀನಿಯನ್ ಬಂಡುಕೋರರನ್ನು ಕೂಡ ಬಿಡುಗಡೆ ಮಾಡಲಾಗುತ್ತದೆ. ಆದರೆ, ಅದರ ಸಂಖ್ಯೆಗಳು ಜೀವಂತ ಒತ್ತೆಯಾಳುಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ.  ಕೈದಿಗಳನ್ನು ಪಶ್ಚಿಮ ದಂಡೆಯಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಹಮಾಸ್ ಹೋರಾಟಗಾರರನ್ನು ಬಿಡುಗಡೆ ಮಾಡಲಾಗುವುದಿಲ್ಲ.

ಮುಂದುವರಿದು, ಗಾಝಾ ಪಟ್ಟಿಗೆ ಮಾನವೀಯ ನೆರವಿನಲ್ಲಿ ಗಮನಾರ್ಹ ಹೆಚ್ಚಳವೂ ಆಗಲಿದೆ. ಏಕೆಂದರೆ ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ಅಲ್ಲಿನ ಜನಸಂಖ್ಯೆಯು ತೀವ್ರ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಈಗಾಗಲೇ ಎಚ್ಚರಿಸಿವೆ.

ಗಾಝಾದ ಆಡಳಿಯ ನಡೆಸುವವರು ಯಾರು?

ಯುದ್ಧದ ನಂತರ ಗಾಝಾವನ್ನು ಯಾರು ಮುನ್ನಡೆಸುತ್ತಾರೆ ಅಥವಾ ಯಾರು ಆಡಳಿತ ನಡೆಸಲಿದ್ದಾರೆ ಎಂಬುದು ಕದನ ವಿರಾಮದ ಅತ್ಯಂತ ಪ್ರಮುಖ ವಿಷವಾಗಿದೆ. ವರದಿಗಳ ಪ್ರಕಾರ, ಪ್ರಸ್ತುತ ಒಪ್ಪಂದದಲ್ಲಿ ಸರ್ಕಾರ ರಚಿಸುವ ಕುರಿತು ಉಲ್ಲೇಖವಿಲ್ಲ. ಏಕೆಂದರೆ, ಸರ್ಕಾರ ರಚನೆ ಬಹಳ ಸಂಕೀರ್ಣ ವಿಷಯವಾಗಿರುವುದರಿಂದ, ಅದನ್ನು ಈ ಒಪ್ಪಂದದಲ್ಲಿ ಉಲ್ಲೇಖಿಸಿದರೆ ಒಪ್ಪಂದಕ್ಕೆ ತಡೆಯಾಗಬಹುದು ಎಂದು ವರದಿಯಾಗಿದೆ.

ಹಮಾಸ್ ಸರ್ಕಾರ ರಚಿಸುವುದಕ್ಕೆ ಇಸ್ರೇಲ್ ವಿರೋಧ ವ್ಯಕ್ತಪಡಿಸಿದೆ. ಮೂರು ದಶಕಗಳ ಹಿಂದೆ ಓಸ್ಲೋ ಮಧ್ಯಂತರ ಶಾಂತಿ ಒಪ್ಪಂದಗಳ ಅಡಿಯಲ್ಲಿ ಸ್ಥಾಪಿಸಲಾದ ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಅಧಿಕಾರ ಚಲಾಯಿಸುವುದಕ್ಕೂ ಇಸ್ರೇಲ್‌ನ ವಿರೋಧವಿದೆ. ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಸೀಮಿತ ಸಾರ್ವಭೌಮತ್ವವನ್ನು ಹೊಂದಿದೆ.

ಕದನ ವಿರಾಮ ಒಪ್ಪಂದ ಮಾಡಿಕೊಂಡು ಯುದ್ದ ಕೊನೆಗೊಳಿಸಿದರೂ ಗಾಝಾ ಮೇಲೆ ನಿಯಂತ್ರಣ ಸಾಧಿಸುವ ಒಲವನ್ನು ಇಸ್ರೇಲ್ ಹೊಂದಿದೆ. ಆದರೆ, ಅಂತಾರಾಷ್ಟ್ರೀಯ ಸಮುದಾಯವು ಗಾಝಾವನ್ನು ಪ್ಯಾಲೆಸ್ತೀನಿಯರು ಮುನ್ನಡೆಸಬೇಕು ಎಂದು ಹೇಳಿದೆ. ಆದರೆ, ಪ್ಯಾಲೆಸ್ತೀನ್‌ ರಾಜಕೀಯದಲ್ಲಿ ಹಲವು ಬಿಕ್ಕಟ್ಟುಗಳಿರುವುದರಿಂದ ಅದು ಅಷ್ಟು ಸುಲಭದ ವಿಚಾರವಲ್ಲ. ಹಾಗಾಗಿ, ಗಾಝಾದ ಆಡಳಿತ ನಡೆಸುವವರು ಯಾರು? ಎಂಬುವುದು ಗೊಂದಲಮಯವಾಗಿದೆ.

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...