Homeಮುಖಪುಟಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

- Advertisement -
- Advertisement -

ಗಾಝಾದಲ್ಲಿ ಮತ್ತೊಮ್ಮೆ ಕದನ ವಿರಾಮದ ಭರವಸೆ ಚಿಗೊರೊಡೆದಿದೆ. ಪರಸ್ಪರ ಯುದ್ಧ ಕೊನೆಗೊಳಿಸುವ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದೆ ಎಂದು ಮಾತುಕತೆಯಲ್ಲಿ ಭಾಗಿಯಾಗಿರುವ ಇಬ್ಬರು ಅಧಿಕಾರಿಗಳು ಹೇಳಿದ್ದಾಗಿ ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ.

ಇಸ್ರೇಲಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿರುವ ವರದಿಯು, ಕದನ ವಿರಾಮದ ಒಪ್ಪಂದ ಪ್ರಕ್ರಿಯೆ ಪ್ರಗತಿ ಕಂಡಿದೆ. ಆದರೆ, ಅಂತಿಮಗೊಳ್ಳಬೇಕಿದೆ ಎಂದು ಹೇಳಿದೆ.

ಅಕ್ಟೋಬರ್ 2023ರಿಂದ ಹಮಾಸ್ ಮತ್ತು ಇಸ್ರೇಲ್‌ ಸೇನೆ ನಡುವೆ ನಡೆಯುತ್ತಿರುವ ಯುದ್ದ
ಕೊನೆಗೊಳಿಸಲು ಮತ್ತು ಹಮಾಸ್ ಒತ್ತೆಯಾಳುಗಾಗಿ ಇಟ್ಟುಕೊಂಡಿರುವ ಇಸ್ರೇಲಿಗರ ಬಿಡುಗಡೆಗೆ ಈ ಕದನ ವಿರಾಮ ಅಗತ್ಯವಾಗಿದೆ.

ಈ ಪ್ರಕ್ರಿಯೆಯಲ್ಲಿ ಅಮೆರಿಕ, ಈಜಿಪ್ಟ್ ಮತ್ತು ಕತಾರ್ ಮಧ್ಯಸ್ಥಗಾರರಾಗಿದ್ದಾರೆ. ಕದನ ವಿರಾಮದ ನಿಟ್ಟಿನಲ್ಲಿ ಈ ರಾಷ್ಟ್ರಗಳು ಈ ಹಿಂದೆ ಹಲವು ಬಾರಿ ಪ್ರಯತ್ನಗಳನ್ನು ಮಾಡಿವೆ. ಆದರೆ, ಅದು ವಿಫಲವಾಗಿವೆ ಎಂದು ವರದಿಗಳು ಹೇಳಿವೆ. ಮಂಗಳವಾರ (ಜ.14) ಈ ರಾಷ್ಟ್ರಗಳು ಮತ್ತೊಮ್ಮೆ ಕದನ ವಿರಾಮ ಸಂಬಂಧ ಸಭೆ ನಡೆಸಿವೆ ಎಂದು ತಿಳಿದು ಬಂದಿದೆ.

ಆದರೆ, ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುವ ಅಮೆರಿಕ ಮತ್ತೊಂದೆಡೆ ಗಾಝಾದಲ್ಲಿ ಆಕ್ರಮಣ ನಡೆಸಲು ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಆರ್ಥಿಕ ಸಹಾಯ ಒದಗಿಸುತ್ತಿದೆ ಎಂದು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ.

ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್-ಅನ್ಸಾರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕದನ ವಿರಾಮ ಸಂಬಂಧ ಎರಡೂ ಕಡೆಯವರಿಗೆ ಪಠ್ಯ ಸಂದೇಶವನ್ನು ನೀಡಲಾಗಿದೆ ಮತ್ತು ಕೊನೆಯ ವಿವರಗಳ ಕುರಿತು ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮಂಗಳವಾರದಂದು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಕೂಡ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದವು ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.

‘ಕದನ ವಿರಾಮ ಈ ಹಿಂದೆಂದಿಗಿಂತಲೂ ಹತ್ತಿರದಲ್ಲಿದೆ’. ಗಂಟೆಗಳು ಅಥವಾ ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಕದನ ವಿರಾಮ ಯಶಸ್ವಿಯಾದರೆ ಮುಂದೇನು?

ಕೆಲ ವರದಿಗಳ ಪ್ರಕಾರ, ಕದನ ವಿರಾಮ ಯಶಸ್ವಿಯಾದರೆ ಮುಂದಿನ ಸೋಮವಾರದ ಮೊದಲು, ಅಂದರೆ ಯುಎಸ್‌ನಲ್ಲಿ ಬೈಡೆನ್ ಆಡಳಿತದ ಕೊನೆಯ ವಾರದಲ್ಲಿ ಹಮಾಸ್ 33 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ.

ಅಕ್ಟೋಬರ್ 2023ರ ದಾಳಿಯ ಸಮಯದಲ್ಲಿ ಇಸ್ರೇಲ್‌ನಿಂದ ಸೆರೆಹಿಡಿಯಲಾದ 94 ಒತ್ತೆಯಾಳುಗಳನ್ನು ಹಮಾಸ್ ಮತ್ತು ಅದರ ಮಿತ್ರರಾಷ್ಟ್ರಗಳು ಇನ್ನೂ ಹಿಡಿದಿಟ್ಟುಕೊಂಡಿವೆ ಎಂದು ಇಸ್ರೇಲ್ ಸರ್ಕಾರ ಆರೋಪಿಸಿದೆ. ಅವರಲ್ಲಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ ಎಂದಿದೆ.

ಕದನ ವಿರಾಮದ ಮೊದಲ ಹಂತವು ಯೋಜಿಸಿದಂತೆ ನಡೆದರೆ, ಒಪ್ಪಂದ ಜಾರಿಗೆ ಬಂದ 16ನೇ ದಿನದಂದು, ಎರಡನೇ ಹಂತದ ಮಾತುಕತೆಗಳು ಪ್ರಾರಂಭವಾಗಲಿದೆ. ಈ ಸಮಯದಲ್ಲಿ ಉಳಿದ ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುತ್ತದೆ ಮತ್ತು ಸತ್ತ ಒತ್ತೆಯಾಳುಗಳ ಶವಗಳನ್ನು ಹಿಂತಿರುಗಿಸಲಾಗುತ್ತದೆ.

ಒಪ್ಪಂದದ ಅಡಿಯಲ್ಲಿ, ಇಸ್ರೇಲ್‌ ಪಡೆಗಳನ್ನು ಹಂತಹಂತವಾಗಿ ಹಿಂತೆಗೆದುಕೊಳ್ಳಲಾಗುವುದು. ಇಸ್ರೇಲಿ ಪಡೆಗಳು ಇಸ್ರೇಲ್ ಗಡಿ ಪಟ್ಟಣಗಳು ​​ಮತ್ತು ಹಳ್ಳಿಗಳನ್ನು ರಕ್ಷಿಸಲು ಗಡಿ ಪರಿಧಿಯಲ್ಲಿ ಉಳಿಯಲಿವೆ. ಇದರ ಜೊತೆಗೆ, ಗಾಝಾದ ದಕ್ಷಿಣ ಅಂಚಿನಲ್ಲಿರುವ ಫಿಲಡೆಲ್ಫಿ ಕಾರಿಡಾರ್‌ನಲ್ಲಿ ಭದ್ರತಾ ವ್ಯವಸ್ಥೆಗಳಿರುತ್ತವೆ. ಒಪ್ಪಂದದ ಮೊದಲ ಕೆಲವು ದಿನಗಳ ನಂತರ ಇಸ್ರೇಲ್ ಅದರ ಕೆಲವು ಭಾಗಗಳಿಂದ ಹಿಂದೆ ಸರಿಯಲಿದೆ.

ಅಲ್ಲದೆ, ನಿರಾಯುಧ ಉತ್ತರ ಗಾಝಾ ನಿವಾಸಿಗಳನ್ನು ಅವರ ಮೂಲ ಸ್ಥಳಗಳಿಗೆ ಹಿಂತಿರುಗಲು ಅನುಮತಿಸಲಾಗುವುದು. ಯಾವುದೇ ಶಸ್ತ್ರಾಸ್ತ್ರಗಳನ್ನು ಅಲ್ಲಿಗೆ ಸಾಗಿಸದಂತೆ ನೋಡಿಕೊಳ್ಳಲಾಗುವುದು. ಮಧ್ಯ ಗಾಝಾದಲ್ಲಿರುವ ನೆಟ್‌ಜಾರಿಮ್ ಕಾರಿಡಾರ್‌ನಿಂದ ಇಸ್ರೇಲಿ ಪಡೆಗಳು ಹಿಂದೆ ಸರಿಯಲಿವೆ. ಈ ನಡುವೆ ಕೊಲೆ ಅಥವಾ ಮಾರಕ ದಾಳಿಗಳಿಗೆ ಶಿಕ್ಷೆಗೊಳಗಾದ ಪ್ಯಾಲೆಸ್ತೀನಿಯನ್ ಬಂಡುಕೋರರನ್ನು ಕೂಡ ಬಿಡುಗಡೆ ಮಾಡಲಾಗುತ್ತದೆ. ಆದರೆ, ಅದರ ಸಂಖ್ಯೆಗಳು ಜೀವಂತ ಒತ್ತೆಯಾಳುಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ.  ಕೈದಿಗಳನ್ನು ಪಶ್ಚಿಮ ದಂಡೆಯಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಹಮಾಸ್ ಹೋರಾಟಗಾರರನ್ನು ಬಿಡುಗಡೆ ಮಾಡಲಾಗುವುದಿಲ್ಲ.

ಮುಂದುವರಿದು, ಗಾಝಾ ಪಟ್ಟಿಗೆ ಮಾನವೀಯ ನೆರವಿನಲ್ಲಿ ಗಮನಾರ್ಹ ಹೆಚ್ಚಳವೂ ಆಗಲಿದೆ. ಏಕೆಂದರೆ ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ಅಲ್ಲಿನ ಜನಸಂಖ್ಯೆಯು ತೀವ್ರ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಈಗಾಗಲೇ ಎಚ್ಚರಿಸಿವೆ.

ಗಾಝಾದ ಆಡಳಿಯ ನಡೆಸುವವರು ಯಾರು?

ಯುದ್ಧದ ನಂತರ ಗಾಝಾವನ್ನು ಯಾರು ಮುನ್ನಡೆಸುತ್ತಾರೆ ಅಥವಾ ಯಾರು ಆಡಳಿತ ನಡೆಸಲಿದ್ದಾರೆ ಎಂಬುದು ಕದನ ವಿರಾಮದ ಅತ್ಯಂತ ಪ್ರಮುಖ ವಿಷವಾಗಿದೆ. ವರದಿಗಳ ಪ್ರಕಾರ, ಪ್ರಸ್ತುತ ಒಪ್ಪಂದದಲ್ಲಿ ಸರ್ಕಾರ ರಚಿಸುವ ಕುರಿತು ಉಲ್ಲೇಖವಿಲ್ಲ. ಏಕೆಂದರೆ, ಸರ್ಕಾರ ರಚನೆ ಬಹಳ ಸಂಕೀರ್ಣ ವಿಷಯವಾಗಿರುವುದರಿಂದ, ಅದನ್ನು ಈ ಒಪ್ಪಂದದಲ್ಲಿ ಉಲ್ಲೇಖಿಸಿದರೆ ಒಪ್ಪಂದಕ್ಕೆ ತಡೆಯಾಗಬಹುದು ಎಂದು ವರದಿಯಾಗಿದೆ.

ಹಮಾಸ್ ಸರ್ಕಾರ ರಚಿಸುವುದಕ್ಕೆ ಇಸ್ರೇಲ್ ವಿರೋಧ ವ್ಯಕ್ತಪಡಿಸಿದೆ. ಮೂರು ದಶಕಗಳ ಹಿಂದೆ ಓಸ್ಲೋ ಮಧ್ಯಂತರ ಶಾಂತಿ ಒಪ್ಪಂದಗಳ ಅಡಿಯಲ್ಲಿ ಸ್ಥಾಪಿಸಲಾದ ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಅಧಿಕಾರ ಚಲಾಯಿಸುವುದಕ್ಕೂ ಇಸ್ರೇಲ್‌ನ ವಿರೋಧವಿದೆ. ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಸೀಮಿತ ಸಾರ್ವಭೌಮತ್ವವನ್ನು ಹೊಂದಿದೆ.

ಕದನ ವಿರಾಮ ಒಪ್ಪಂದ ಮಾಡಿಕೊಂಡು ಯುದ್ದ ಕೊನೆಗೊಳಿಸಿದರೂ ಗಾಝಾ ಮೇಲೆ ನಿಯಂತ್ರಣ ಸಾಧಿಸುವ ಒಲವನ್ನು ಇಸ್ರೇಲ್ ಹೊಂದಿದೆ. ಆದರೆ, ಅಂತಾರಾಷ್ಟ್ರೀಯ ಸಮುದಾಯವು ಗಾಝಾವನ್ನು ಪ್ಯಾಲೆಸ್ತೀನಿಯರು ಮುನ್ನಡೆಸಬೇಕು ಎಂದು ಹೇಳಿದೆ. ಆದರೆ, ಪ್ಯಾಲೆಸ್ತೀನ್‌ ರಾಜಕೀಯದಲ್ಲಿ ಹಲವು ಬಿಕ್ಕಟ್ಟುಗಳಿರುವುದರಿಂದ ಅದು ಅಷ್ಟು ಸುಲಭದ ವಿಚಾರವಲ್ಲ. ಹಾಗಾಗಿ, ಗಾಝಾದ ಆಡಳಿತ ನಡೆಸುವವರು ಯಾರು? ಎಂಬುವುದು ಗೊಂದಲಮಯವಾಗಿದೆ.

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...