Homeಮುಖಪುಟಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

- Advertisement -
- Advertisement -

ಗಾಝಾದಲ್ಲಿ ಮತ್ತೊಮ್ಮೆ ಕದನ ವಿರಾಮದ ಭರವಸೆ ಚಿಗೊರೊಡೆದಿದೆ. ಪರಸ್ಪರ ಯುದ್ಧ ಕೊನೆಗೊಳಿಸುವ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದೆ ಎಂದು ಮಾತುಕತೆಯಲ್ಲಿ ಭಾಗಿಯಾಗಿರುವ ಇಬ್ಬರು ಅಧಿಕಾರಿಗಳು ಹೇಳಿದ್ದಾಗಿ ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ.

ಇಸ್ರೇಲಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿರುವ ವರದಿಯು, ಕದನ ವಿರಾಮದ ಒಪ್ಪಂದ ಪ್ರಕ್ರಿಯೆ ಪ್ರಗತಿ ಕಂಡಿದೆ. ಆದರೆ, ಅಂತಿಮಗೊಳ್ಳಬೇಕಿದೆ ಎಂದು ಹೇಳಿದೆ.

ಅಕ್ಟೋಬರ್ 2023ರಿಂದ ಹಮಾಸ್ ಮತ್ತು ಇಸ್ರೇಲ್‌ ಸೇನೆ ನಡುವೆ ನಡೆಯುತ್ತಿರುವ ಯುದ್ದ
ಕೊನೆಗೊಳಿಸಲು ಮತ್ತು ಹಮಾಸ್ ಒತ್ತೆಯಾಳುಗಾಗಿ ಇಟ್ಟುಕೊಂಡಿರುವ ಇಸ್ರೇಲಿಗರ ಬಿಡುಗಡೆಗೆ ಈ ಕದನ ವಿರಾಮ ಅಗತ್ಯವಾಗಿದೆ.

ಈ ಪ್ರಕ್ರಿಯೆಯಲ್ಲಿ ಅಮೆರಿಕ, ಈಜಿಪ್ಟ್ ಮತ್ತು ಕತಾರ್ ಮಧ್ಯಸ್ಥಗಾರರಾಗಿದ್ದಾರೆ. ಕದನ ವಿರಾಮದ ನಿಟ್ಟಿನಲ್ಲಿ ಈ ರಾಷ್ಟ್ರಗಳು ಈ ಹಿಂದೆ ಹಲವು ಬಾರಿ ಪ್ರಯತ್ನಗಳನ್ನು ಮಾಡಿವೆ. ಆದರೆ, ಅದು ವಿಫಲವಾಗಿವೆ ಎಂದು ವರದಿಗಳು ಹೇಳಿವೆ. ಮಂಗಳವಾರ (ಜ.14) ಈ ರಾಷ್ಟ್ರಗಳು ಮತ್ತೊಮ್ಮೆ ಕದನ ವಿರಾಮ ಸಂಬಂಧ ಸಭೆ ನಡೆಸಿವೆ ಎಂದು ತಿಳಿದು ಬಂದಿದೆ.

ಆದರೆ, ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುವ ಅಮೆರಿಕ ಮತ್ತೊಂದೆಡೆ ಗಾಝಾದಲ್ಲಿ ಆಕ್ರಮಣ ನಡೆಸಲು ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಆರ್ಥಿಕ ಸಹಾಯ ಒದಗಿಸುತ್ತಿದೆ ಎಂದು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ.

ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್-ಅನ್ಸಾರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕದನ ವಿರಾಮ ಸಂಬಂಧ ಎರಡೂ ಕಡೆಯವರಿಗೆ ಪಠ್ಯ ಸಂದೇಶವನ್ನು ನೀಡಲಾಗಿದೆ ಮತ್ತು ಕೊನೆಯ ವಿವರಗಳ ಕುರಿತು ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮಂಗಳವಾರದಂದು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಕೂಡ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದವು ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.

‘ಕದನ ವಿರಾಮ ಈ ಹಿಂದೆಂದಿಗಿಂತಲೂ ಹತ್ತಿರದಲ್ಲಿದೆ’. ಗಂಟೆಗಳು ಅಥವಾ ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಕದನ ವಿರಾಮ ಯಶಸ್ವಿಯಾದರೆ ಮುಂದೇನು?

ಕೆಲ ವರದಿಗಳ ಪ್ರಕಾರ, ಕದನ ವಿರಾಮ ಯಶಸ್ವಿಯಾದರೆ ಮುಂದಿನ ಸೋಮವಾರದ ಮೊದಲು, ಅಂದರೆ ಯುಎಸ್‌ನಲ್ಲಿ ಬೈಡೆನ್ ಆಡಳಿತದ ಕೊನೆಯ ವಾರದಲ್ಲಿ ಹಮಾಸ್ 33 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ.

ಅಕ್ಟೋಬರ್ 2023ರ ದಾಳಿಯ ಸಮಯದಲ್ಲಿ ಇಸ್ರೇಲ್‌ನಿಂದ ಸೆರೆಹಿಡಿಯಲಾದ 94 ಒತ್ತೆಯಾಳುಗಳನ್ನು ಹಮಾಸ್ ಮತ್ತು ಅದರ ಮಿತ್ರರಾಷ್ಟ್ರಗಳು ಇನ್ನೂ ಹಿಡಿದಿಟ್ಟುಕೊಂಡಿವೆ ಎಂದು ಇಸ್ರೇಲ್ ಸರ್ಕಾರ ಆರೋಪಿಸಿದೆ. ಅವರಲ್ಲಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದಾರೆ ಎಂದಿದೆ.

ಕದನ ವಿರಾಮದ ಮೊದಲ ಹಂತವು ಯೋಜಿಸಿದಂತೆ ನಡೆದರೆ, ಒಪ್ಪಂದ ಜಾರಿಗೆ ಬಂದ 16ನೇ ದಿನದಂದು, ಎರಡನೇ ಹಂತದ ಮಾತುಕತೆಗಳು ಪ್ರಾರಂಭವಾಗಲಿದೆ. ಈ ಸಮಯದಲ್ಲಿ ಉಳಿದ ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುತ್ತದೆ ಮತ್ತು ಸತ್ತ ಒತ್ತೆಯಾಳುಗಳ ಶವಗಳನ್ನು ಹಿಂತಿರುಗಿಸಲಾಗುತ್ತದೆ.

ಒಪ್ಪಂದದ ಅಡಿಯಲ್ಲಿ, ಇಸ್ರೇಲ್‌ ಪಡೆಗಳನ್ನು ಹಂತಹಂತವಾಗಿ ಹಿಂತೆಗೆದುಕೊಳ್ಳಲಾಗುವುದು. ಇಸ್ರೇಲಿ ಪಡೆಗಳು ಇಸ್ರೇಲ್ ಗಡಿ ಪಟ್ಟಣಗಳು ​​ಮತ್ತು ಹಳ್ಳಿಗಳನ್ನು ರಕ್ಷಿಸಲು ಗಡಿ ಪರಿಧಿಯಲ್ಲಿ ಉಳಿಯಲಿವೆ. ಇದರ ಜೊತೆಗೆ, ಗಾಝಾದ ದಕ್ಷಿಣ ಅಂಚಿನಲ್ಲಿರುವ ಫಿಲಡೆಲ್ಫಿ ಕಾರಿಡಾರ್‌ನಲ್ಲಿ ಭದ್ರತಾ ವ್ಯವಸ್ಥೆಗಳಿರುತ್ತವೆ. ಒಪ್ಪಂದದ ಮೊದಲ ಕೆಲವು ದಿನಗಳ ನಂತರ ಇಸ್ರೇಲ್ ಅದರ ಕೆಲವು ಭಾಗಗಳಿಂದ ಹಿಂದೆ ಸರಿಯಲಿದೆ.

ಅಲ್ಲದೆ, ನಿರಾಯುಧ ಉತ್ತರ ಗಾಝಾ ನಿವಾಸಿಗಳನ್ನು ಅವರ ಮೂಲ ಸ್ಥಳಗಳಿಗೆ ಹಿಂತಿರುಗಲು ಅನುಮತಿಸಲಾಗುವುದು. ಯಾವುದೇ ಶಸ್ತ್ರಾಸ್ತ್ರಗಳನ್ನು ಅಲ್ಲಿಗೆ ಸಾಗಿಸದಂತೆ ನೋಡಿಕೊಳ್ಳಲಾಗುವುದು. ಮಧ್ಯ ಗಾಝಾದಲ್ಲಿರುವ ನೆಟ್‌ಜಾರಿಮ್ ಕಾರಿಡಾರ್‌ನಿಂದ ಇಸ್ರೇಲಿ ಪಡೆಗಳು ಹಿಂದೆ ಸರಿಯಲಿವೆ. ಈ ನಡುವೆ ಕೊಲೆ ಅಥವಾ ಮಾರಕ ದಾಳಿಗಳಿಗೆ ಶಿಕ್ಷೆಗೊಳಗಾದ ಪ್ಯಾಲೆಸ್ತೀನಿಯನ್ ಬಂಡುಕೋರರನ್ನು ಕೂಡ ಬಿಡುಗಡೆ ಮಾಡಲಾಗುತ್ತದೆ. ಆದರೆ, ಅದರ ಸಂಖ್ಯೆಗಳು ಜೀವಂತ ಒತ್ತೆಯಾಳುಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ.  ಕೈದಿಗಳನ್ನು ಪಶ್ಚಿಮ ದಂಡೆಯಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಹಮಾಸ್ ಹೋರಾಟಗಾರರನ್ನು ಬಿಡುಗಡೆ ಮಾಡಲಾಗುವುದಿಲ್ಲ.

ಮುಂದುವರಿದು, ಗಾಝಾ ಪಟ್ಟಿಗೆ ಮಾನವೀಯ ನೆರವಿನಲ್ಲಿ ಗಮನಾರ್ಹ ಹೆಚ್ಚಳವೂ ಆಗಲಿದೆ. ಏಕೆಂದರೆ ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ಅಲ್ಲಿನ ಜನಸಂಖ್ಯೆಯು ತೀವ್ರ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಈಗಾಗಲೇ ಎಚ್ಚರಿಸಿವೆ.

ಗಾಝಾದ ಆಡಳಿಯ ನಡೆಸುವವರು ಯಾರು?

ಯುದ್ಧದ ನಂತರ ಗಾಝಾವನ್ನು ಯಾರು ಮುನ್ನಡೆಸುತ್ತಾರೆ ಅಥವಾ ಯಾರು ಆಡಳಿತ ನಡೆಸಲಿದ್ದಾರೆ ಎಂಬುದು ಕದನ ವಿರಾಮದ ಅತ್ಯಂತ ಪ್ರಮುಖ ವಿಷವಾಗಿದೆ. ವರದಿಗಳ ಪ್ರಕಾರ, ಪ್ರಸ್ತುತ ಒಪ್ಪಂದದಲ್ಲಿ ಸರ್ಕಾರ ರಚಿಸುವ ಕುರಿತು ಉಲ್ಲೇಖವಿಲ್ಲ. ಏಕೆಂದರೆ, ಸರ್ಕಾರ ರಚನೆ ಬಹಳ ಸಂಕೀರ್ಣ ವಿಷಯವಾಗಿರುವುದರಿಂದ, ಅದನ್ನು ಈ ಒಪ್ಪಂದದಲ್ಲಿ ಉಲ್ಲೇಖಿಸಿದರೆ ಒಪ್ಪಂದಕ್ಕೆ ತಡೆಯಾಗಬಹುದು ಎಂದು ವರದಿಯಾಗಿದೆ.

ಹಮಾಸ್ ಸರ್ಕಾರ ರಚಿಸುವುದಕ್ಕೆ ಇಸ್ರೇಲ್ ವಿರೋಧ ವ್ಯಕ್ತಪಡಿಸಿದೆ. ಮೂರು ದಶಕಗಳ ಹಿಂದೆ ಓಸ್ಲೋ ಮಧ್ಯಂತರ ಶಾಂತಿ ಒಪ್ಪಂದಗಳ ಅಡಿಯಲ್ಲಿ ಸ್ಥಾಪಿಸಲಾದ ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಅಧಿಕಾರ ಚಲಾಯಿಸುವುದಕ್ಕೂ ಇಸ್ರೇಲ್‌ನ ವಿರೋಧವಿದೆ. ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಸೀಮಿತ ಸಾರ್ವಭೌಮತ್ವವನ್ನು ಹೊಂದಿದೆ.

ಕದನ ವಿರಾಮ ಒಪ್ಪಂದ ಮಾಡಿಕೊಂಡು ಯುದ್ದ ಕೊನೆಗೊಳಿಸಿದರೂ ಗಾಝಾ ಮೇಲೆ ನಿಯಂತ್ರಣ ಸಾಧಿಸುವ ಒಲವನ್ನು ಇಸ್ರೇಲ್ ಹೊಂದಿದೆ. ಆದರೆ, ಅಂತಾರಾಷ್ಟ್ರೀಯ ಸಮುದಾಯವು ಗಾಝಾವನ್ನು ಪ್ಯಾಲೆಸ್ತೀನಿಯರು ಮುನ್ನಡೆಸಬೇಕು ಎಂದು ಹೇಳಿದೆ. ಆದರೆ, ಪ್ಯಾಲೆಸ್ತೀನ್‌ ರಾಜಕೀಯದಲ್ಲಿ ಹಲವು ಬಿಕ್ಕಟ್ಟುಗಳಿರುವುದರಿಂದ ಅದು ಅಷ್ಟು ಸುಲಭದ ವಿಚಾರವಲ್ಲ. ಹಾಗಾಗಿ, ಗಾಝಾದ ಆಡಳಿತ ನಡೆಸುವವರು ಯಾರು? ಎಂಬುವುದು ಗೊಂದಲಮಯವಾಗಿದೆ.

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...