Homeಮುಖಪುಟಇಸ್ರೇಲ್‌ನ ಆಕ್ರಮಣಕಾರಿ ದಾಳಿಯಲ್ಲಿ ಹಮಾಸ್ ಕಮಾಂಡರ್‌ನ ಹತ್ಯೆ

ಇಸ್ರೇಲ್‌ನ ಆಕ್ರಮಣಕಾರಿ ದಾಳಿಯಲ್ಲಿ ಹಮಾಸ್ ಕಮಾಂಡರ್‌ನ ಹತ್ಯೆ

- Advertisement -
- Advertisement -

ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನೆಯ ಆಕ್ರಮಣಕಾರಿ ದಾಳಿ ಮುಂದುವರೆದಿದ್ದು, ಇಸ್ರೇಲಿ ವಾಯುಪಡೆಯು ಹಮಾಸ್ ಸಂಘಟನೆಯ ಪ್ರದೇಶದ ಮೇಲೆ ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿದೆ. ಇಸ್ರೇಲಿ ರಕ್ಷಣಾ ಪಡೆಗಳು ಮಂಗಳವಾರ ಗಾಜಾದ ಜಬಾಲಿಯಾದಲ್ಲಿ ಪ್ರಮುಖ ಕಾರ್ಯಾಚರಣೆಯನ್ನು ನಡೆಸಿವೆ.

ಹಮಾಸ್ ಸಂಘಟನೆಯ ಕೇಂದ್ರೀಯ ಜಬಾಲಿಯಾ ಬೆಟಾಲಿಯನ್‌ನ ಕಮಾಂಡರ್ ಇಬ್ರಾಹಿಂ ಬಿಯಾರಿ ಅವರನ್ನು ಬಾಂಬ್ ದಾಳಿಯಲ್ಲಿ ಹತ್ಯೆ ಮಾಡಿರುವುದಾಗಿ ಇಸ್ರೇಲ್ ನ ರಕ್ಷಣಾ ಪಡೆಗಳು ದೃಢಪಡಿಸಿವೆ. ಆದರೆ, ಈ ಶಿಬಿರದಲ್ಲಿ ಸಂಘಟನೆಯ ಮುಖಂಡರು ಇದ್ದರು ಎಂಬ ವರದಿಗಳನ್ನು ಹಮಾಸ್ ವಕ್ತಾರ ಹಝೀಮ್ ಕಾಸಿಂ ಅಲ್ಲಗಳೆದಿದ್ದಾರೆ.

ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ನಡೆಸಲು ‘ನುಕ್ಖಾ’ ಹೋರಾಟಗಾರರನ್ನು ಇಸ್ರೇಲ್‌ಗೆ ಕಳುಹಿಸಿಕೊಡುವಲ್ಲಿ ಬಿಯಾರಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಐಡಿಎಫ್ ಹೇಳಿದೆ.

ಇದಕ್ಕೂ ಮುನ್ನ ಐಡಿಎಫ್ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಟ್ ಹೇಳಿಕೆ ನೀಡಿ, ಪರಿಹಾರ ಶಿಬಿರದ ಸುತ್ತಮುತ್ತ ಅತ್ಯ ಹಿರಿಯ ಹಮಾಸ್ ಕಮಾಂಡರ್ ಅವರನ್ನು ಐಡಿಎಫ್ ಗುರಿ ಮಾಡಿದೆ ಎಂದು ಪ್ರಕಟಿಸಿದ್ದರು.

ಇಲ್ಲಿ ರಕ್ಷಣಾ ಪಡೆಗಳು ಹಮಾಸ್ ಕಮಾಂಡರ್ ಸೇರಿದಂತೆ 50 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅಬು ಅಜೀನಾ ಹತ್ಯೆ ಹಮಾಸ್​ನ್ನು ದುರ್ಬಲಗೊಳಿಸಿದೆ ಎಂದು ಇಸ್ರೇಲ್ ಹೇಳಿದೆ.

ಇಸ್ರೇಲ್ ದಾಳಿಯಲ್ಲಿ ಇದುವರೆಗೆ 10 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಗಾಜಾ ಪಟ್ಟಿಯ ಆರೋಗ್ಯ ಸಚಿವಾಲಯ ಹೇಳಿದೆ. ಇಸ್ರೇಲ್​ನಲ್ಲಿ ಇದುವರೆಗೆ 1,400 ಜನರು ಸಾವನ್ನಪ್ಪಿದ್ದಾರೆ, ಸುಮಾರು 250 ಜನರನ್ನು ಹಮಾಸ್ ಒತ್ತೆಯಾಳಾಗಿ ಇರಿಸಿದೆ. ಇದೇ ಸಮಯದಲ್ಲಿ, ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಇಸ್ರೇಲಿ ಸೈನಿಕರು ಸಹ ಸಾವನ್ನಪ್ಪಿದ್ದಾರೆ.

ಇಸ್ರೇಲಿ ಸೇನೆಯು ಮೊದಲು ವೈಮಾನಿಕ ದಾಳಿಯನ್ನು ಪ್ರಾರಂಭಿಸಿತು, ಇದಾದ ನಂತರ ಹಮಾಸ್‌ನ ಸೆಂಟ್ರಲ್ ಜಬಾಲಿಯಾ ಬೆಟಾಲಿಯನ್ ಬಳಸುತ್ತಿದ್ದ ಕಟ್ಟಡವನ್ನು ಗ್ರೌಂಡ್ ಫೋರ್ಸ್ ವಶಪಡಿಸಿಕೊಂಡಿತು. ಇಸ್ರೇಲ್ ದಾಳಿಯಲ್ಲಿ ಜಬಾಲಿಯಾದಲ್ಲಿ ಹಲವು ಕಟ್ಟಡಗಳು ನಾಶವಾಗಿವೆ. ಈ ಸಮಯದಲ್ಲಿ, ಇಸ್ರೇಲಿ ಸೇನೆಯು ಬೆಟಾಲಿಯನ್ ಮುಖ್ಯಸ್ಥ ಸೇರಿದಂತೆ 50 ಹಮಾಸ್ ಹೋರಾಟಗಾರರನ್ನು ಕೊಂದಿದೆ ಎಂದು ಹೇಳಲಾಗಿದೆ. ಇದಾದ ಬಳಿಕ ಇಲ್ಲಿ ನಿರ್ಮಿಸಲಾಗಿದ್ದ ಸುರಂಗವನ್ನೂ ಭೂಸೇನೆ ಧ್ವಂಸಗೊಳಿಸಿದೆ.

ಇದನ್ನೂ ಓದಿ: ಇಸ್ರೇಲ್ ಹಿಂಸಾಚಾರ: ಹಮಾಸ್‌ ಗುಂಪಿನ 150 ಸುರಂಗ ಮಾರ್ಗಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...