Homeಮುಖಪುಟಇಸ್ರೇಲ್‌ನ ಆಕ್ರಮಣಕಾರಿ ದಾಳಿಯಲ್ಲಿ ಹಮಾಸ್ ಕಮಾಂಡರ್‌ನ ಹತ್ಯೆ

ಇಸ್ರೇಲ್‌ನ ಆಕ್ರಮಣಕಾರಿ ದಾಳಿಯಲ್ಲಿ ಹಮಾಸ್ ಕಮಾಂಡರ್‌ನ ಹತ್ಯೆ

- Advertisement -
- Advertisement -

ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನೆಯ ಆಕ್ರಮಣಕಾರಿ ದಾಳಿ ಮುಂದುವರೆದಿದ್ದು, ಇಸ್ರೇಲಿ ವಾಯುಪಡೆಯು ಹಮಾಸ್ ಸಂಘಟನೆಯ ಪ್ರದೇಶದ ಮೇಲೆ ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿದೆ. ಇಸ್ರೇಲಿ ರಕ್ಷಣಾ ಪಡೆಗಳು ಮಂಗಳವಾರ ಗಾಜಾದ ಜಬಾಲಿಯಾದಲ್ಲಿ ಪ್ರಮುಖ ಕಾರ್ಯಾಚರಣೆಯನ್ನು ನಡೆಸಿವೆ.

ಹಮಾಸ್ ಸಂಘಟನೆಯ ಕೇಂದ್ರೀಯ ಜಬಾಲಿಯಾ ಬೆಟಾಲಿಯನ್‌ನ ಕಮಾಂಡರ್ ಇಬ್ರಾಹಿಂ ಬಿಯಾರಿ ಅವರನ್ನು ಬಾಂಬ್ ದಾಳಿಯಲ್ಲಿ ಹತ್ಯೆ ಮಾಡಿರುವುದಾಗಿ ಇಸ್ರೇಲ್ ನ ರಕ್ಷಣಾ ಪಡೆಗಳು ದೃಢಪಡಿಸಿವೆ. ಆದರೆ, ಈ ಶಿಬಿರದಲ್ಲಿ ಸಂಘಟನೆಯ ಮುಖಂಡರು ಇದ್ದರು ಎಂಬ ವರದಿಗಳನ್ನು ಹಮಾಸ್ ವಕ್ತಾರ ಹಝೀಮ್ ಕಾಸಿಂ ಅಲ್ಲಗಳೆದಿದ್ದಾರೆ.

ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ನಡೆಸಲು ‘ನುಕ್ಖಾ’ ಹೋರಾಟಗಾರರನ್ನು ಇಸ್ರೇಲ್‌ಗೆ ಕಳುಹಿಸಿಕೊಡುವಲ್ಲಿ ಬಿಯಾರಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಐಡಿಎಫ್ ಹೇಳಿದೆ.

ಇದಕ್ಕೂ ಮುನ್ನ ಐಡಿಎಫ್ ವಕ್ತಾರ ಲೆಫ್ಟಿನೆಂಟ್ ಕರ್ನಲ್ ರಿಚರ್ಡ್ ಹೆಟ್ ಹೇಳಿಕೆ ನೀಡಿ, ಪರಿಹಾರ ಶಿಬಿರದ ಸುತ್ತಮುತ್ತ ಅತ್ಯ ಹಿರಿಯ ಹಮಾಸ್ ಕಮಾಂಡರ್ ಅವರನ್ನು ಐಡಿಎಫ್ ಗುರಿ ಮಾಡಿದೆ ಎಂದು ಪ್ರಕಟಿಸಿದ್ದರು.

ಇಲ್ಲಿ ರಕ್ಷಣಾ ಪಡೆಗಳು ಹಮಾಸ್ ಕಮಾಂಡರ್ ಸೇರಿದಂತೆ 50 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅಬು ಅಜೀನಾ ಹತ್ಯೆ ಹಮಾಸ್​ನ್ನು ದುರ್ಬಲಗೊಳಿಸಿದೆ ಎಂದು ಇಸ್ರೇಲ್ ಹೇಳಿದೆ.

ಇಸ್ರೇಲ್ ದಾಳಿಯಲ್ಲಿ ಇದುವರೆಗೆ 10 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಗಾಜಾ ಪಟ್ಟಿಯ ಆರೋಗ್ಯ ಸಚಿವಾಲಯ ಹೇಳಿದೆ. ಇಸ್ರೇಲ್​ನಲ್ಲಿ ಇದುವರೆಗೆ 1,400 ಜನರು ಸಾವನ್ನಪ್ಪಿದ್ದಾರೆ, ಸುಮಾರು 250 ಜನರನ್ನು ಹಮಾಸ್ ಒತ್ತೆಯಾಳಾಗಿ ಇರಿಸಿದೆ. ಇದೇ ಸಮಯದಲ್ಲಿ, ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಇಸ್ರೇಲಿ ಸೈನಿಕರು ಸಹ ಸಾವನ್ನಪ್ಪಿದ್ದಾರೆ.

ಇಸ್ರೇಲಿ ಸೇನೆಯು ಮೊದಲು ವೈಮಾನಿಕ ದಾಳಿಯನ್ನು ಪ್ರಾರಂಭಿಸಿತು, ಇದಾದ ನಂತರ ಹಮಾಸ್‌ನ ಸೆಂಟ್ರಲ್ ಜಬಾಲಿಯಾ ಬೆಟಾಲಿಯನ್ ಬಳಸುತ್ತಿದ್ದ ಕಟ್ಟಡವನ್ನು ಗ್ರೌಂಡ್ ಫೋರ್ಸ್ ವಶಪಡಿಸಿಕೊಂಡಿತು. ಇಸ್ರೇಲ್ ದಾಳಿಯಲ್ಲಿ ಜಬಾಲಿಯಾದಲ್ಲಿ ಹಲವು ಕಟ್ಟಡಗಳು ನಾಶವಾಗಿವೆ. ಈ ಸಮಯದಲ್ಲಿ, ಇಸ್ರೇಲಿ ಸೇನೆಯು ಬೆಟಾಲಿಯನ್ ಮುಖ್ಯಸ್ಥ ಸೇರಿದಂತೆ 50 ಹಮಾಸ್ ಹೋರಾಟಗಾರರನ್ನು ಕೊಂದಿದೆ ಎಂದು ಹೇಳಲಾಗಿದೆ. ಇದಾದ ಬಳಿಕ ಇಲ್ಲಿ ನಿರ್ಮಿಸಲಾಗಿದ್ದ ಸುರಂಗವನ್ನೂ ಭೂಸೇನೆ ಧ್ವಂಸಗೊಳಿಸಿದೆ.

ಇದನ್ನೂ ಓದಿ: ಇಸ್ರೇಲ್ ಹಿಂಸಾಚಾರ: ಹಮಾಸ್‌ ಗುಂಪಿನ 150 ಸುರಂಗ ಮಾರ್ಗಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...