Homeಮುಖಪುಟಅಮೆರಿಕ ಮೂಲದ ಇಬ್ಬರು ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಿದ ಹಮಾಸ್

ಅಮೆರಿಕ ಮೂಲದ ಇಬ್ಬರು ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಿದ ಹಮಾಸ್

- Advertisement -
- Advertisement -

ಅಮೆರಿಕದ ಇಬ್ಬರು ಒತ್ತೆಯಾಳುಗಳನ್ನು ಹಮಾಸ್ ಸಶಸ್ತ್ರ ಗುಂಪು ಶುಕ್ರವಾರ ಬಿಡುಗಡೆ ಮಾಡಿದೆ. ಚಿಕಾಗೋ-ಪ್ರದೇಶದ ಮಹಿಳೆ ಮತ್ತು ಅವರ ಮಗಳು ಇಸ್ರೇಲ್‌ನಲ್ಲಿರುವ ತಮ್ಮ ಕುಟುಂಬದೊಂದಿಗೆ ಮತ್ತೆ ಸೇರಿಕೊಂಡಿದ್ದಾರೆ.

ಜ್ಯುಡಿತ್ ತಾಯ್ ರಾನನ್ ಮತ್ತು ಆಕೆಯ ಮಗಳು ನತಾಲಿ ಶೋಷನಾ ರಾನನ್ ಅವರು ಶುಕ್ರವಾರ ಗಾಝಾ ಗಡಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿಯನ್ನು ಭೇಟಿ ಮಾಡಿದ್ದು, ಅವರನ್ನು ಕೇಂದ್ರ ಇಸ್ರೇಲಿನ ಮಿಲಿಟರಿ ನೆಲೆಗೆ ಕರೆದೊಯ್ಯಲಾಗಿದೆ.

ಹಮಾಸ್‌ನ ಸಶಸ್ತ್ರ ವಿಭಾಗವಾದ ಇಝ್ ಎಲ್-ದೀನ್ ಅಲ್-ಕಸ್ಸಾಮ್ ಬ್ರಿಗೇಡ್ಸ್‌ನ ವಕ್ತಾರ ಅಬು ಉಬೈದಾ ಅವರು ಬಿಡುಗಡೆಯನ್ನು ಘೋಷಿಸಿದರು ಮತ್ತು ಸ್ವಲ್ಪ ಸಮಯದ ನಂತರ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಹೇಳಿಕೆಯಲ್ಲಿ ದೃಢಪಡಿಸಿದರು.

ಇಲಿನಾಯ್ಸ್‌ನ ಇವಾನ್‌ಸ್ಟನ್‌ನ ಚಿಕಾಗೋ ಉಪನಗರದ ತಾಯಿ ಮತ್ತು ಮಗಳು ಮಿಲಿಟರಿ ನೆಲೆಯಲ್ಲಿ ಸಭೆಯ ಸ್ಥಳಕ್ಕೆ ಹೋಗುತ್ತಿದ್ದಾರೆ, ಅಲ್ಲಿ ಅವರ ಕುಟುಂಬ ಸದಸ್ಯರು ಅವರಿಗಾಗಿ ಕಾಯುತ್ತಿದ್ದಾರೆ ಎಂದು ಇಸ್ರೇಲಿ ನಾಯಕ ಹೇಳಿದರು.

ನತಾಲಿ ಶೋಷನಾ ರಾನನ್ ಅವರ ತಂದೆ ಉರಿ ರಾನನ್ ಅವರು ತಮ್ಮ ಮಗಳೊಂದಿಗೆ ಫೋನ್ ಮೂಲಕ ಮಾತನಾಡಿದ್ದು, ”ಅವಳು ತುಂಬಾ ಒಳ್ಳೆಯವಳು, ತುಂಬಾ ಸಂತೋಷವಾಗಿದ್ದಾಳೆ – ಮತ್ತು ಅವಳು ಚೆನ್ನಾಗಿ ಇದ್ದಾಳೆ” ಎಂದು ತಿಳಿಸಿದರು.

ರಾನನ್ ಅವರ ಚಿಕ್ಕಪ್ಪ ಅವ್ರಹಾಂ ಝಮೀರ್ ಮಾತನಾಡಿ, ”ಸುರಕ್ಷಿತವಾಗಿ ಬಿಡುಗಡೆಗೊಂಡಿದ್ದರಿಂದ ಕುಟುಂಬವು ಸಂತೋಷವಾಗಿದೆ. ಆದರೆ ಇನ್ನೂ ಅನೇಕ ಕುಟುಂಬಗಳು ಅವರ ಪ್ರೀತಿಪಾತ್ರರನ್ನು ಇನ್ನೂ ಒತ್ತೆಯಾಳುಗಳಾಗಿ ಇರಿಸಲಾಗಿದೆ ಮತ್ತು ಅವರ ಬಿಡುಗಡೆಗಾಗಿ ನಾವು ನಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದರು.

ಈ ಬಿಡುಗಡೆಯನ್ನು ದೃಢಪಡಿಸಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಉಭಯ ದೇಶಗಳ ಪುನಶ್ಚೇತನ ಮತ್ತು ಶಮನ ಪ್ರಕ್ರಿಯೆಯನ್ನು ಸರ್ಕಾರ ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದು ಘೋಷಿಸಿದ್ದಾರೆ.

”ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ಹೋರಾಟಗಾರರು ನಡೆಸಿದ ದಾಳಿಯ ವೇಳೆ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ಇಬ್ಬರು ಅಮೆರಿಕನ್ನರನ್ನು ಬಿಡುಗಡೆ ಮಾಡಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ನಮ್ಮ ಸಹ ಪ್ರಜೆಗಳು ಕಳೆದ 14 ದಿನಗಳಿಂದ ಈ ಭಯಾನಕ ಘಟನಾವಳಿಗಳಿಗೆ ಸಾಕ್ಷಿಯಾಗಿದ್ದಾರೆ. ಇವರು ಶೀಘ್ರವೇ ಭಯಭೀತರಾಗಿರುವ ತಮ್ಮ ಕುಟುಂಬಗಳ ಜತೆ ಮತ್ತೆ ಸೇರುವುದರಿಂದ ಅತೀವ ಸಂತಸವಾಗಿದೆ” ಎಂದು ಅಮೆರಿಕದ ಅಧ್ಯಕ್ಷ ಬೈಡನ್ ಹೇಳಿಕೆ ನೀಡಿದ್ದಾರೆ.

ಗಾಝಾ ಆಡಳಿತಗಾರರು ಸೆರೆ ಇರಿಸಿಕೊಂಡಿರುವ 200 ಒತ್ತೆಯಾಳುಗಳ ಪೈಕಿ ಬಿಡುಗಡೆಯಾದವರಲ್ಲಿ ರಾನನ್ ಮೊದಲಿಗರು. ನಾಗರಿಕ ಒತ್ತೆಯಾಳುಗಳ ಬಿಡುಗಡೆಗಾಗಿ ಹಮಾಸ್, ಕತಾರ್ ಹಾಗೂ ಈಜಿಪ್ಟ್ ಜತೆಗೆ ಕಾರ್ಯ ನಿರ್ವಹಿಸಲಿದ್ದು, ಇದರಿಂದ ಮತ್ತಷ್ಟು ಮಂದಿಯ ಬಿಡುಗಡೆಯ ಸುಳಿವು ಸಿಕ್ಕಿದೆ.

ಇದನ್ನೂ ಓದಿ: ‘ಇಸ್ರೇಲ್ ಸೃಷ್ಟಿಸಿದ ನಿರಾಶ್ರಿತರ ಗಾಝಾ’: ಇಸ್ರೇಲಿ ಯಹೂದಿ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...