Homeಮುಖಪುಟಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

- Advertisement -
- Advertisement -

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ 4 ದಿನಗಳ ಕದನ ಒಪ್ಪಂದದ ಭಾಗವಾಗಿ ಶುಕ್ರವಾರ 24 ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡಿದರೆ ಇಸ್ರೇಲ್‌ 39 ಪ್ಯಾಲೆಸ್ತೀನ್‌ ನಾಗರಿಕರನ್ನು ಬಿಡುಗಡೆ ಮಾಡಿದೆ.

ಹಮಾಸ್‌ ಬಿಡುಗಡೆ ಮಾಡಿದ 24 ಒತ್ತೆಯಾಳುಗಳಲ್ಲಿ 13 ಇಸ್ರೇಲಿಗಳು, 10 ಥಾಯ್ಲೆಂಡ್ ಮತ್ತು ಫಿಲಿಪೈನ್ಸ್‌ನ ಓರ್ವರು ಸೇರಿದ್ದಾರೆ ಎಂದು ಕತಾರ್ ತಿಳಿಸಿದೆ.

ಈ ಒಪ್ಪಂದವು ಯುದ್ಧ ಸಂತ್ರಸ್ತ ಗಾಝಾದ ಜನರಿಗೆ ಅಗತ್ಯವಿರುವ ಸಹಾಯದ ನೆರವಿಗೆ ದಾರಿ ಮಾಡಿಕೊಟ್ಟಿದೆ. ಅ.7ರ ಹಮಾಸ್‌ನ ದಾಳಿಯ ಬಳಿಕ ಸೆರೆಯಾಳಾಗಿದ್ದ ಪ್ರೀತಿಪಾತ್ರರ ಬಗ್ಗೆ ಇಸ್ರೇಲ್ ಮತ್ತು ಇತರ ದೇಶದ ಒತ್ತೆಯಾಳುಗಳ ಕುಟುಂಬಗಳಿಗೆ ಇದು ಕೊಂಚ ಸಮಾಧಾನವನ್ನುಂಟುಮಾಡಿದೆ.

ಶುಕ್ರವಾರ ಬೆಳಿಗ್ಗೆ ಕದನ ವಿರಾಮ ಪ್ರಾರಂಭವಾಗಿದೆ. ಗಾಝಾದ 2.3 ಮಿಲಿಯನ್ ಪ್ಯಾಲೆಸ್ತೀನಿಯನ್ನರಿಗೆ ಕೇಳಿಸುತ್ತಿದ್ದ 7 ವಾರಗಳ ನಿರಂತರ ಇಸ್ರೇಲ್‌ ಬಾಂಬ್ ದಾಳಿಯ ಶಬ್ಧಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.  ಇಸ್ರೇಲ್‌ ಬಾಂಬ್‌ ದಾಳಿಗೆ ಗಾಝಾದಲ್ಲಿ 15,000ಕ್ಕೂ ಅಧಿಕ ಮಂದಿ ಪ್ರಾಣವನ್ನು ಕಳೆದುಕೊಂಡಿದ್ದು, 40,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಬಿಡುಗಡೆಯಾದ ಇಸ್ರೇಲ್‌ ಒತ್ತೆಯಾಳುಗಳಲ್ಲಿ 8 ಮಹಿಳೆಯರು ಸೇರಿದ್ದಾರೆ. ಅವರಲ್ಲಿ 6 ಮಂದಿ 70 ಮತ್ತು 80ರ ವಯಸ್ಸಿನವರು. ಮೂವರು ಮಕ್ಕಳು ಸೇರಿದ್ದಾರೆ. ಪ್ಯಾಲೆಸ್ತೀನ್‌ ಕೈದಿಗಳನ್ನು ಇಸ್ರೇಲ್‌ ಬಿಡುಗಡೆ ಮಾಡಿದ್ದು,  ಅವರಲ್ಲಿ 24 ಮಹಿಳೆಯರಿದ್ದಾರೆ. ಇಸ್ರೇಲ್‌ ಪಡೆಗಳ ಮೇಲಿನ ದಾಳಿಗಾಗಿ ಕೊಲೆ ಯತ್ನದ ಅಪರಾಧದಲ್ಲಿ ಸೆರೆಯಾದವರು ಮತ್ತು 15 ಮಂದಿಗೆ ಕಲ್ಲೆಸೆದ ಅಪರಾಧಕ್ಕೆ ಸಂಬಂಧಿಸಿ ಜೈಲು ಪಾಲಾದವಾರಾಗಿದ್ದಾರೆ.

ಹೆಚ್ಚಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ ಕದನ ವಿರಾಮವನ್ನು ವಿಸ್ತರಿಸಬಹುದು ಎಂದು ಇಸ್ರೇಲ್ ಹೇಳುತ್ತದೆ. ಆದರೆ ಕದನ ವಿರಾಮ ಮುಗಿದ ನಂತರ ತನ್ನ ಆಕ್ರಮಣವನ್ನು ಪುನರಾರಂಭಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ. ಇದು ಸಂಘರ್ಷವನ್ನು ಕೊನೆಗಾಣಿಸಲು ಒಪ್ಪಂದವು ಅಂತಿಮವಾಗಿ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಮರೆಮಾಡಿದೆ.

ಶುಕ್ರವಾರ ರಾತ್ರಿ ಈಜಿಪ್ಟ್‌ನ ರಾಫಾ ಕ್ರಾಸಿಂಗ್ ಮೂಲಕ ಗಾಝಾದಿಂದ ಆಂಬ್ಯುಲೆನ್ಸ್‌ಗಳು ಸಾಲು ಸಾಲಾಗಿ ಬಂದಿದೆ. ಆಂಬ್ಯುಲೆನ್ಸ್‌ ಬಿಡುಗಡೆಯಾದ ಒತ್ತೆಯಾಳುಗಳನ್ನು ಹೊತ್ತೊಯ್ಯುತ್ತದೆ ಎಂದು ಈಜಿಪ್ಟ್‌ನ ಸರ್ಕಾರಿ ಅಲ್-ಖಹೆರಾ ಟಿವಿ ಲೈವ್ ತಿಳಿಸಿದೆ. ಇಸ್ರೇಲ್‌ನ ಟಿವಿ ವಾಹಿನಿಯೊಂದು ವಯಸ್ಸಾದ ಮಹಿಳೆಯು ಚಿಕ್ಕ ಬಾಲಕಿಯ ಜೊತೆಗೆ ಆಂಬ್ಯುಲೆನ್ಸ್‌ನಿಂದ ನಿರ್ಗಮಿಸುತ್ತಿರುವುದನ್ನು ತೋರಿಸಿದೆ. ಒತ್ತೆಯಾಳುಗಳು ಇಸ್ರೇಲ್‌ಗೆ ಹಿಂತಿರುಗಿದ್ದಾರೆ ಮತ್ತು ಕುಟುಂಬದ ಜೊತೆ ಸೇರುವ ಮೊದಲು ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ದೃಢಪಡಿಸಿದೆ.

ಇದನ್ನು ಓದಿ: ಡಬ್ಲಿನ್ ನಗರದಲ್ಲಿ ಚೂರಿ ಇರಿತದ ಬಳಿಕ ಭುಗಿಲೆದ್ದ ಹಿಂಸಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...