Homeಮುಖಪುಟಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

- Advertisement -
- Advertisement -

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ 4 ದಿನಗಳ ಕದನ ಒಪ್ಪಂದದ ಭಾಗವಾಗಿ ಶುಕ್ರವಾರ 24 ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡಿದರೆ ಇಸ್ರೇಲ್‌ 39 ಪ್ಯಾಲೆಸ್ತೀನ್‌ ನಾಗರಿಕರನ್ನು ಬಿಡುಗಡೆ ಮಾಡಿದೆ.

ಹಮಾಸ್‌ ಬಿಡುಗಡೆ ಮಾಡಿದ 24 ಒತ್ತೆಯಾಳುಗಳಲ್ಲಿ 13 ಇಸ್ರೇಲಿಗಳು, 10 ಥಾಯ್ಲೆಂಡ್ ಮತ್ತು ಫಿಲಿಪೈನ್ಸ್‌ನ ಓರ್ವರು ಸೇರಿದ್ದಾರೆ ಎಂದು ಕತಾರ್ ತಿಳಿಸಿದೆ.

ಈ ಒಪ್ಪಂದವು ಯುದ್ಧ ಸಂತ್ರಸ್ತ ಗಾಝಾದ ಜನರಿಗೆ ಅಗತ್ಯವಿರುವ ಸಹಾಯದ ನೆರವಿಗೆ ದಾರಿ ಮಾಡಿಕೊಟ್ಟಿದೆ. ಅ.7ರ ಹಮಾಸ್‌ನ ದಾಳಿಯ ಬಳಿಕ ಸೆರೆಯಾಳಾಗಿದ್ದ ಪ್ರೀತಿಪಾತ್ರರ ಬಗ್ಗೆ ಇಸ್ರೇಲ್ ಮತ್ತು ಇತರ ದೇಶದ ಒತ್ತೆಯಾಳುಗಳ ಕುಟುಂಬಗಳಿಗೆ ಇದು ಕೊಂಚ ಸಮಾಧಾನವನ್ನುಂಟುಮಾಡಿದೆ.

ಶುಕ್ರವಾರ ಬೆಳಿಗ್ಗೆ ಕದನ ವಿರಾಮ ಪ್ರಾರಂಭವಾಗಿದೆ. ಗಾಝಾದ 2.3 ಮಿಲಿಯನ್ ಪ್ಯಾಲೆಸ್ತೀನಿಯನ್ನರಿಗೆ ಕೇಳಿಸುತ್ತಿದ್ದ 7 ವಾರಗಳ ನಿರಂತರ ಇಸ್ರೇಲ್‌ ಬಾಂಬ್ ದಾಳಿಯ ಶಬ್ಧಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.  ಇಸ್ರೇಲ್‌ ಬಾಂಬ್‌ ದಾಳಿಗೆ ಗಾಝಾದಲ್ಲಿ 15,000ಕ್ಕೂ ಅಧಿಕ ಮಂದಿ ಪ್ರಾಣವನ್ನು ಕಳೆದುಕೊಂಡಿದ್ದು, 40,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಬಿಡುಗಡೆಯಾದ ಇಸ್ರೇಲ್‌ ಒತ್ತೆಯಾಳುಗಳಲ್ಲಿ 8 ಮಹಿಳೆಯರು ಸೇರಿದ್ದಾರೆ. ಅವರಲ್ಲಿ 6 ಮಂದಿ 70 ಮತ್ತು 80ರ ವಯಸ್ಸಿನವರು. ಮೂವರು ಮಕ್ಕಳು ಸೇರಿದ್ದಾರೆ. ಪ್ಯಾಲೆಸ್ತೀನ್‌ ಕೈದಿಗಳನ್ನು ಇಸ್ರೇಲ್‌ ಬಿಡುಗಡೆ ಮಾಡಿದ್ದು,  ಅವರಲ್ಲಿ 24 ಮಹಿಳೆಯರಿದ್ದಾರೆ. ಇಸ್ರೇಲ್‌ ಪಡೆಗಳ ಮೇಲಿನ ದಾಳಿಗಾಗಿ ಕೊಲೆ ಯತ್ನದ ಅಪರಾಧದಲ್ಲಿ ಸೆರೆಯಾದವರು ಮತ್ತು 15 ಮಂದಿಗೆ ಕಲ್ಲೆಸೆದ ಅಪರಾಧಕ್ಕೆ ಸಂಬಂಧಿಸಿ ಜೈಲು ಪಾಲಾದವಾರಾಗಿದ್ದಾರೆ.

ಹೆಚ್ಚಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ ಕದನ ವಿರಾಮವನ್ನು ವಿಸ್ತರಿಸಬಹುದು ಎಂದು ಇಸ್ರೇಲ್ ಹೇಳುತ್ತದೆ. ಆದರೆ ಕದನ ವಿರಾಮ ಮುಗಿದ ನಂತರ ತನ್ನ ಆಕ್ರಮಣವನ್ನು ಪುನರಾರಂಭಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ. ಇದು ಸಂಘರ್ಷವನ್ನು ಕೊನೆಗಾಣಿಸಲು ಒಪ್ಪಂದವು ಅಂತಿಮವಾಗಿ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಮರೆಮಾಡಿದೆ.

ಶುಕ್ರವಾರ ರಾತ್ರಿ ಈಜಿಪ್ಟ್‌ನ ರಾಫಾ ಕ್ರಾಸಿಂಗ್ ಮೂಲಕ ಗಾಝಾದಿಂದ ಆಂಬ್ಯುಲೆನ್ಸ್‌ಗಳು ಸಾಲು ಸಾಲಾಗಿ ಬಂದಿದೆ. ಆಂಬ್ಯುಲೆನ್ಸ್‌ ಬಿಡುಗಡೆಯಾದ ಒತ್ತೆಯಾಳುಗಳನ್ನು ಹೊತ್ತೊಯ್ಯುತ್ತದೆ ಎಂದು ಈಜಿಪ್ಟ್‌ನ ಸರ್ಕಾರಿ ಅಲ್-ಖಹೆರಾ ಟಿವಿ ಲೈವ್ ತಿಳಿಸಿದೆ. ಇಸ್ರೇಲ್‌ನ ಟಿವಿ ವಾಹಿನಿಯೊಂದು ವಯಸ್ಸಾದ ಮಹಿಳೆಯು ಚಿಕ್ಕ ಬಾಲಕಿಯ ಜೊತೆಗೆ ಆಂಬ್ಯುಲೆನ್ಸ್‌ನಿಂದ ನಿರ್ಗಮಿಸುತ್ತಿರುವುದನ್ನು ತೋರಿಸಿದೆ. ಒತ್ತೆಯಾಳುಗಳು ಇಸ್ರೇಲ್‌ಗೆ ಹಿಂತಿರುಗಿದ್ದಾರೆ ಮತ್ತು ಕುಟುಂಬದ ಜೊತೆ ಸೇರುವ ಮೊದಲು ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ದೃಢಪಡಿಸಿದೆ.

ಇದನ್ನು ಓದಿ: ಡಬ್ಲಿನ್ ನಗರದಲ್ಲಿ ಚೂರಿ ಇರಿತದ ಬಳಿಕ ಭುಗಿಲೆದ್ದ ಹಿಂಸಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...

ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ...

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ...

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು 'ನ್ಯೂ ಇಂಡಿಯನ್...

ಬಾಂಗ್ಲಾ ಉದ್ವಿಗ್ನತೆ: ಮತ್ತೊಬ್ಬ ಯುವ ನಾಯಕ ಮುಹಮ್ಮದ್ ಮೊತಾಲೆಬ್ ಸಿಕ್ದಾರ್ ಮೇಲೆ ಗುಂಡಿನ ದಾಳಿ 

ದೇಶದಲ್ಲಿ ವ್ಯಾಪಕ ಅಶಾಂತಿಗೆ ಕಾರಣವಾದ ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಬಿನ್ ಹಾದಿ ಅವರ ಮರಣದ ಕೆಲವು ದಿನಗಳ ನಂತರ, ಸೋಮವಾರ ಮತ್ತೊಬ್ಬ ನಾಯಕನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡ...

ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ. ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು,...

‘ಹಿಂದೂಸ್ತಾನಿ ಅವಾಮ್ ಮೋರ್ಚಾಕ್ಕೆ ರಾಜ್ಯಸಭಾ ಸೀಟು ನೀಡಿ’: ದಲಿತ ನಾಯಕ ಜಿತನ್ ರಾಮ್ ಮಾಂಝಿ ಬೇಡಿಕೆ

ಬಿಹಾರ: ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಉಸ್ತುವಾರಿ ಜಿತನ್ ರಾಮ್ ಮಾಂಝಿ ಅವರು 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಹಾರದಲ್ಲಿ NDA ಮೈತ್ರಿಕೂಟದ ಭಾಗವಾಗಿ ನೀಡಿದ ಭರವಸೆಗಳನ್ನು ನೆನಪಿಸಿಕೊಂಡು...

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...