Homeಮುಖಪುಟಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

- Advertisement -
- Advertisement -

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ 4 ದಿನಗಳ ಕದನ ಒಪ್ಪಂದದ ಭಾಗವಾಗಿ ಶುಕ್ರವಾರ 24 ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡಿದರೆ ಇಸ್ರೇಲ್‌ 39 ಪ್ಯಾಲೆಸ್ತೀನ್‌ ನಾಗರಿಕರನ್ನು ಬಿಡುಗಡೆ ಮಾಡಿದೆ.

ಹಮಾಸ್‌ ಬಿಡುಗಡೆ ಮಾಡಿದ 24 ಒತ್ತೆಯಾಳುಗಳಲ್ಲಿ 13 ಇಸ್ರೇಲಿಗಳು, 10 ಥಾಯ್ಲೆಂಡ್ ಮತ್ತು ಫಿಲಿಪೈನ್ಸ್‌ನ ಓರ್ವರು ಸೇರಿದ್ದಾರೆ ಎಂದು ಕತಾರ್ ತಿಳಿಸಿದೆ.

ಈ ಒಪ್ಪಂದವು ಯುದ್ಧ ಸಂತ್ರಸ್ತ ಗಾಝಾದ ಜನರಿಗೆ ಅಗತ್ಯವಿರುವ ಸಹಾಯದ ನೆರವಿಗೆ ದಾರಿ ಮಾಡಿಕೊಟ್ಟಿದೆ. ಅ.7ರ ಹಮಾಸ್‌ನ ದಾಳಿಯ ಬಳಿಕ ಸೆರೆಯಾಳಾಗಿದ್ದ ಪ್ರೀತಿಪಾತ್ರರ ಬಗ್ಗೆ ಇಸ್ರೇಲ್ ಮತ್ತು ಇತರ ದೇಶದ ಒತ್ತೆಯಾಳುಗಳ ಕುಟುಂಬಗಳಿಗೆ ಇದು ಕೊಂಚ ಸಮಾಧಾನವನ್ನುಂಟುಮಾಡಿದೆ.

ಶುಕ್ರವಾರ ಬೆಳಿಗ್ಗೆ ಕದನ ವಿರಾಮ ಪ್ರಾರಂಭವಾಗಿದೆ. ಗಾಝಾದ 2.3 ಮಿಲಿಯನ್ ಪ್ಯಾಲೆಸ್ತೀನಿಯನ್ನರಿಗೆ ಕೇಳಿಸುತ್ತಿದ್ದ 7 ವಾರಗಳ ನಿರಂತರ ಇಸ್ರೇಲ್‌ ಬಾಂಬ್ ದಾಳಿಯ ಶಬ್ಧಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.  ಇಸ್ರೇಲ್‌ ಬಾಂಬ್‌ ದಾಳಿಗೆ ಗಾಝಾದಲ್ಲಿ 15,000ಕ್ಕೂ ಅಧಿಕ ಮಂದಿ ಪ್ರಾಣವನ್ನು ಕಳೆದುಕೊಂಡಿದ್ದು, 40,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಬಿಡುಗಡೆಯಾದ ಇಸ್ರೇಲ್‌ ಒತ್ತೆಯಾಳುಗಳಲ್ಲಿ 8 ಮಹಿಳೆಯರು ಸೇರಿದ್ದಾರೆ. ಅವರಲ್ಲಿ 6 ಮಂದಿ 70 ಮತ್ತು 80ರ ವಯಸ್ಸಿನವರು. ಮೂವರು ಮಕ್ಕಳು ಸೇರಿದ್ದಾರೆ. ಪ್ಯಾಲೆಸ್ತೀನ್‌ ಕೈದಿಗಳನ್ನು ಇಸ್ರೇಲ್‌ ಬಿಡುಗಡೆ ಮಾಡಿದ್ದು,  ಅವರಲ್ಲಿ 24 ಮಹಿಳೆಯರಿದ್ದಾರೆ. ಇಸ್ರೇಲ್‌ ಪಡೆಗಳ ಮೇಲಿನ ದಾಳಿಗಾಗಿ ಕೊಲೆ ಯತ್ನದ ಅಪರಾಧದಲ್ಲಿ ಸೆರೆಯಾದವರು ಮತ್ತು 15 ಮಂದಿಗೆ ಕಲ್ಲೆಸೆದ ಅಪರಾಧಕ್ಕೆ ಸಂಬಂಧಿಸಿ ಜೈಲು ಪಾಲಾದವಾರಾಗಿದ್ದಾರೆ.

ಹೆಚ್ಚಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ ಕದನ ವಿರಾಮವನ್ನು ವಿಸ್ತರಿಸಬಹುದು ಎಂದು ಇಸ್ರೇಲ್ ಹೇಳುತ್ತದೆ. ಆದರೆ ಕದನ ವಿರಾಮ ಮುಗಿದ ನಂತರ ತನ್ನ ಆಕ್ರಮಣವನ್ನು ಪುನರಾರಂಭಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ. ಇದು ಸಂಘರ್ಷವನ್ನು ಕೊನೆಗಾಣಿಸಲು ಒಪ್ಪಂದವು ಅಂತಿಮವಾಗಿ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಮರೆಮಾಡಿದೆ.

ಶುಕ್ರವಾರ ರಾತ್ರಿ ಈಜಿಪ್ಟ್‌ನ ರಾಫಾ ಕ್ರಾಸಿಂಗ್ ಮೂಲಕ ಗಾಝಾದಿಂದ ಆಂಬ್ಯುಲೆನ್ಸ್‌ಗಳು ಸಾಲು ಸಾಲಾಗಿ ಬಂದಿದೆ. ಆಂಬ್ಯುಲೆನ್ಸ್‌ ಬಿಡುಗಡೆಯಾದ ಒತ್ತೆಯಾಳುಗಳನ್ನು ಹೊತ್ತೊಯ್ಯುತ್ತದೆ ಎಂದು ಈಜಿಪ್ಟ್‌ನ ಸರ್ಕಾರಿ ಅಲ್-ಖಹೆರಾ ಟಿವಿ ಲೈವ್ ತಿಳಿಸಿದೆ. ಇಸ್ರೇಲ್‌ನ ಟಿವಿ ವಾಹಿನಿಯೊಂದು ವಯಸ್ಸಾದ ಮಹಿಳೆಯು ಚಿಕ್ಕ ಬಾಲಕಿಯ ಜೊತೆಗೆ ಆಂಬ್ಯುಲೆನ್ಸ್‌ನಿಂದ ನಿರ್ಗಮಿಸುತ್ತಿರುವುದನ್ನು ತೋರಿಸಿದೆ. ಒತ್ತೆಯಾಳುಗಳು ಇಸ್ರೇಲ್‌ಗೆ ಹಿಂತಿರುಗಿದ್ದಾರೆ ಮತ್ತು ಕುಟುಂಬದ ಜೊತೆ ಸೇರುವ ಮೊದಲು ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ದೃಢಪಡಿಸಿದೆ.

ಇದನ್ನು ಓದಿ: ಡಬ್ಲಿನ್ ನಗರದಲ್ಲಿ ಚೂರಿ ಇರಿತದ ಬಳಿಕ ಭುಗಿಲೆದ್ದ ಹಿಂಸಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...