Homeಅಂತರಾಷ್ಟ್ರೀಯ3 ಒತ್ತೆಯಾಳುಗಳನ್ನು ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್: ಇಸ್ರೇಲ್ ಸೇನೆ

3 ಒತ್ತೆಯಾಳುಗಳನ್ನು ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್: ಇಸ್ರೇಲ್ ಸೇನೆ

- Advertisement -
- Advertisement -

ಶನಿವಾರ ಗಾಜಾದಲ್ಲಿ ದೊಡ್ಡ ಜನಸಮೂಹದ ಮುಂದೆ ಹಮಾಸ್ ಮೂವರು ಒತ್ತೆಯಾಳುಗಳನ್ನು ಪೆರೇಡ್ ಮಾಡಿದ ನಂತರ ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.

ಒತ್ತೆಯಾಳುಗಳಲ್ಲಿ 46 ವರ್ಷದ ಇಯಾರ್ ಹಾರ್ನ್, 36 ವರ್ಷದ ಸಗುಯ್ ಡೆಕೆಲ್ ಮತ್ತು 29 ವರ್ಷದ ಅಲೆಕ್ಸಾಂಡರ್ (ಸಾಶಾ) ಟ್ರೌಫನೋವ್ ಸೇರಿದ್ದಾರೆ.

ಹಾರ್ನ್ ಇಸ್ರೇಲ್ ಮತ್ತು ಅರ್ಜೆಂಟೀನಾದ ದ್ವಿಪೌರತ್ವವನ್ನು ಹೊಂದಿದ್ದಾರೆ, ಡೆಕೆಲ್ ಅವರು ಅಮೇರಿಕನ್-ಇಸ್ರೇಲಿ ಮತ್ತು ಟ್ರೌಫನೋವ್ ಅವರು ಇಸ್ರೇಲಿ ಮತ್ತು ರಷ್ಯಾದ ಪೌರತ್ವವನ್ನು ಹೊಂದಿದ್ದಾರೆ. ಅಕ್ಟೋಬರ್ 7, 2023ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿ ಈ ಮೂವರನ್ನು ಅಪಹರಿಸಿತ್ತು.

ಶನಿವಾರ ಬೆಳಿಗ್ಗೆ ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದ ಸ್ಥಳಕ್ಕೆ ರೆಡ್ ಕ್ರಾಸ್ ವಾಹನಗಳು ಬಂದವು. ಹಿಂದಿನ ವಿನಿಮಯದಂತೆ ಫೆಲೇಸ್ತಿನಿಯರ ಧ್ವಜಗಳು ಮತ್ತು ಹಮಾಸ್ ಬಣಗಳ ಬ್ಯಾನರ್‌ಗಳಿಂದ ಅಲಂಕರಿಸಲ್ಪಟ್ಟ ವೇದಿಕೆಯ ಬಳಿ ಡಜನ್ ಗಟ್ಟಲೆ ಮುಖವಾಡ ಧರಿಸಿದ ಶಸ್ತ್ರಸಜ್ಜಿತ ಹಮಾಸ್ ಹೋರಾಟಗಾರರು ಸಾಲುಗಟ್ಟಿ ನಿಂತರು, ಧ್ವನಿವರ್ಧಕಗಳಿಂದ ಸಂಗೀತ ಮೊಳಗಿತು.

ಜನವರಿ 19ರಂದು ಕದನ ವಿರಾಮ ಜಾರಿಗೆ ಬಂದ ನಂತರ ಇದು ಆರನೇ ವಿನಿಮಯವಾಗಿದೆ. ಇಲ್ಲಿಯವರೆಗೆ, ಕದನ ವಿರಾಮದ ಮೊದಲ ಹಂತದಲ್ಲಿ 21 ಒತ್ತೆಯಾಳುಗಳು ಮತ್ತು 730 ಕ್ಕೂ ಹೆಚ್ಚು ಫೆಲೇಸ್ತಿನಿ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.

ಹಮಾಸ್ ಮತ್ತು ಇಸ್ರೇಲ್ ನಡುವೆ ಸಹಿ ಹಾಕಲಾದ ಕದನ ವಿರಾಮದ ಭಾಗವಾಗಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಹಮಾಸ್ ನೂರಾರು ಫೆಲೇಸ್ತಿನಿ ಕೈದಿಗಳನ್ನು ಬಿಡುಗಡೆ ಮಾಡಬೇಕಿದೆ. ಸುಮಾರು ನಾಲ್ಕು ವಾರಗಳ ಹಿಂದೆ ಪ್ರಾರಂಭವಾದ ಕದನ ವಿರಾಮವು ಇತ್ತೀಚಿನ ದಿನಗಳಲ್ಲಿ ಉದ್ವಿಗ್ನ ವಿವಾದದಿಂದ ಅಪಾಯಕ್ಕೆ ಸಿಲುಕಿದ್ದು, ಇದು ಯುದ್ಧವನ್ನು ಪುನರಾರಂಭಿಸುವ ಬೆದರಿಕೆ ಹಾಕಿತ್ತು.

ಒತ್ತೆಯಾಳುಗಳ ಬಿಡುಗಡೆ ಸಂಭ್ರಮಿಸಿದ ನೆತನ್ಯಾಹು ಕಚೇರಿ 
ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಸಗುಯಿ ಡೆಕೆಲ್-ಚೆನ್, ಸಶಾ ಅಲೆಕ್ಸಾಂಡರ್ ಟ್ರೌಫನೋವ್ ಮತ್ತು ಐಯರ್ ಹಾರ್ನ್ ಅವರ ಬಿಡುಗಡೆಯನ್ನು ಸಂಭ್ರಮಿಸಿ, ಹೇಳಿಕೆಯನ್ನು ಬಿಡುಗಡೆ ಮಾಡಿತು.

“ನಾವು ಅವರನ್ನು ದೊಡ್ಡ ಅಪ್ಪುಗೆಯೊಂದಿಗೆ ಸ್ವಾಗತಿಸುತ್ತೇವೆ. ಸೆರೆಯಲ್ಲಿ ದೀರ್ಘ ಮತ್ತು ಕಷ್ಟಕರ ದಿನಗಳ ನಂತರ ನಾವು ಅವರ ಪುನರ್ವಸತಿಗೆ ಸಹಾಯ ಮಾಡುತ್ತೇವೆ.” ಎಂದು ಅದು ಹೇಳಿದೆ.

“ನಮ್ಮ ಎಲ್ಲಾ ಒತ್ತೆಯಾಳುಗಳನ್ನು ರಕ್ಷಿಸುವ ಗುರಿಯೊಂದಿಗೆ ಇಸ್ರೇಲ್ ಅಮೆರಿಕದೊಂದಿಗೆ ಸಂಪೂರ್ಣ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದೆ” ಎಂದು ನೆತನ್ಯಾಹು ಅವರ ಕಚೇರಿ ತಿಳಿಸಿದೆ.

2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...