Homeಅಂತರಾಷ್ಟ್ರೀಯಗಾಝಾ ಶಾಂತಿ ಯೋಜನೆಗೆ ಭಾಗಶಃ ಸಮ್ಮತಿ ಸೂಚಿಸಿದ ಹಮಾಸ್: ಬಾಂಬ್ ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್...

ಗಾಝಾ ಶಾಂತಿ ಯೋಜನೆಗೆ ಭಾಗಶಃ ಸಮ್ಮತಿ ಸೂಚಿಸಿದ ಹಮಾಸ್: ಬಾಂಬ್ ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್ ಸೂಚನೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಹಮಾಸ್ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ್ದು, ಗಾಝಾ ಪಟ್ಟಿಯ ಆಡಳಿತವನ್ನು ಅರಬ್ ಮತ್ತು ಇಸ್ಲಾಮಿಕ್ ಬೆಂಬಲಿತ ಪ್ಯಾಲೆಸ್ತೀನ್ ತಂತ್ರಜ್ಞರ ಸ್ವತಂತ್ರ ಸಂಸ್ಥೆಗೆ ಹಸ್ತಾಂತರಿಸಲು ಮತ್ತು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಹಮಾಸ್ ಗುಂಪು ಶಾಂತಿ ಯೋಜನೆಯ ಪ್ರಮುಖ ಅಂಶ ಮತ್ತು ಇಸ್ರೇಲ್‌ನ ಪ್ರಮುಖ ಬೇಡಿಕೆಯಾದ ಶಸ್ತ್ರಾಸ್ತ್ರ ತ್ಯಜಿಸುವ ಬಗ್ಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಮಧ್ಯವರ್ತಿಗಳ ಮೂಲಕ ತಕ್ಷಣ ಶಾಂತಿ ಮಾತುಕತೆ ನಡೆಸಲು ಸಿದ್ದ ಎಂದು ಹೇಳಿದೆ.

ಗಾಝಾ ಪಟ್ಟಿಯ ಭವಿಷ್ಯ ಮತ್ತು ಪ್ಯಾಲೆಸ್ತೀನ್ ಜನತೆಯ ಕಾನೂನುಬದ್ಧ ಹಕ್ಕುಗಳ ಕುರಿತು ಟ್ರಂಪ್ ಅವರ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾದ ಇತರ ವಿಷಯಗಳು ‘ಏಕೀಕೃತ ರಾಷ್ಟ್ರೀಯ ನಿಲುವು ಮತ್ತು ಸಂಬಂಧಿತ ಅಂತಾರಾಷ್ಟ್ರೀಯ ಕಾನೂನುಗಳು ಮತ್ತು ನಿರ್ಣಯಗಳಿಗೆ ಸಂಬಂಧಿಸಿವೆ’ ಎಂದು ಹಮಾಸ್ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಉಳಿದ ವಿಷಯಗಳನ್ನು (ಉದಾಹರಣೆಗೆ: ಶಸ್ತ್ರಾಸ್ತ್ರ ತ್ಯಜಿಸುವುದು) ಒಂದು ‘ಸಮಗ್ರ ಪ್ಯಾಲೆಸ್ತೀನ್‌ ರಾಷ್ಟ್ರೀಯ ಚೌಕಟ್ಟಿನ’ (ಎಲ್ಲಾ ಪ್ಯಾಲೆಸ್ತೀನ್‌ ಗುಂಪುಗಳನ್ನು ಒಳಗೊಂಡ ಒಂದು ದೊಡ್ಡ ಒಪ್ಪಂದ) ಮೂಲಕ ಚರ್ಚಿಸಲಾಗುವುದು. ಈ ಚೌಕಟ್ಟಿನಲ್ಲಿ ಹಮಾಸ್ ಭಾಗವಹಿಸಲಿದೆ ಮತ್ತು ಜವಾಬ್ದಾರಿಯುತವಾಗಿ ತನ್ನ ಕೊಡುಗೆಯನ್ನು ನೀಡಲಿದೆ ಎಂದು ಹೇಳಿದೆ.

ಗಾಝಾದ ಶಾಂತಿ ವಿಷಯದಲ್ಲಿ ಅಂತಾರಾಷ್ಟ್ರೀಯ ಪ್ರಯತ್ನಗಳನ್ನು, ವಿಶೇಷವಾಗಿ ಟ್ರಂಪ್ ಮುಂದಿಟ್ಟಿರುವ ಯೋಜನೆಯನ್ನು ಹಮಾಸ್ ಶ್ಲಾಘಿಸಿದೆ. ಯುದ್ಧವನ್ನು ಕೊನೆಗೊಳಿಸುವುದು, ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದು, ಗಾಝಾಕ್ಕೆ ಹೆಚ್ಚಿನ ನೆರವು ಒದಗಿಸುವುದು, ಗಾಝಾ ಪಟ್ಟಿ ಆಕ್ರಮಿಸಿಕೊಳ್ಳುವುದನ್ನು ತಿರಸ್ಕರಿಸುವುದು, ಪ್ಯಾಲೆಸ್ತೀನಿಯರನ್ನು ಗಾಝಾದಿಂದ ಬಲವಂತವಾಗಿ ಓಡಿಸುವುದನ್ನು ವಿರೋಧಿಸುವುದು ಸೇರಿದಂತೆ ಟ್ರಂಪ್ ಪ್ರಸ್ತಾಪದಲ್ಲಿ ಕೆಲವು ಮುಖ್ಯ ಅಂಶಗಳಿವೆ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರತಿಕ್ರಿಯೆಬಳಿಕ ವಿಡಿಯೋ ಹೇಳಿಕೆ ನೀಡಿರುವ ಡೊನಾಲ್ಡ್ ಟ್ರಂಪ್, “ಇದೊಂದು ‘ಅಭೂತಪೂರ್ವ’ ಬೆಳವಣಿಗೆ. ಆದರೆ, ಎಲ್ಲವನ್ನೂ ಖಚಿತವಾದ ಒಪ್ಪಂದದ ರೂಪದಲ್ಲಿ ಲಿಖಿತವಾಗಿ ದಾಖಲಿಸುವುದು ತುಂಬಾ ಮುಖ್ಯ” ಎಂದಿದ್ದಾರೆ.

ತಮ್ಮ ಟ್ರುಥ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಟ್ರಂಪ್, “ಗಾಝಾದ ಮೇಲೆ ಬಾಂಬ್ ದಾಳಿ ಮಾಡುವುದನ್ನು ತಕ್ಷಣ ನಿಲ್ಲಿಸಿ ಎಂದು ಇಸ್ರೇಲ್‌ಗೆ ಕರೆ ನೀಡಿದ್ದು, ಹಮಾಸ್ ಶಾಶ್ವತ ಶಾಂತಿಗೆ ಸಿದ್ಧವಾಗಿದೆ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಇಸ್ರೇಲ್ ಗಾಝಾ ಮೇಲಿನ ತನ್ನ ಆಕ್ರಮಣವನ್ನು ಶುಕ್ರವಾರ (ಅ.3) ಮುಂದುವರೆಸಿತ್ತು. ಗಾಝಾ ಪಟ್ಟಿಯಾದ್ಯಂತ ಶುಕ್ರವಾರ ಕನಿಷ್ಠ 72 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಅಕ್ಟೋಬರ್ 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಕನಿಷ್ಠ 66,288 ಜನರು ಸಾವನ್ನಪ್ಪಿದ್ದಾರೆ ಮತ್ತು 169,165 ಜನರು ಗಾಯಗೊಂಡಿದ್ದಾರೆ. ಇನ್ನೂ ಸಾವಿರಾರು ಜನರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ ಎಂದು ನಂಬಲಾಗಿದೆ.

ಅಕ್ಟೋಬರ್ 7,2023 ರಂದು ಇಸ್ರೇಲ್‌ನ ಟೆಲ್‌ ಅವೀವ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಒಟ್ಟು 1,139 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 200 ಜನರನ್ನು ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು. ಈ ಪೈಕಿ ಹಲವರನ್ನು ಇಸ್ರೇಲ್‌ಗೆ ಹಸ್ತಾಂತರಿಸಲಾಗಿದೆ. ಇನ್ನೂ ಕೆಲವರು ಹಮಾಸ್ ವಶದಲ್ಲಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗ್ತಿದೆ.

ಭಾರಿ ಭದ್ರತೆಯ ನಡುವೆ ಸಂಭಾಲ್‌ನಲ್ಲಿ ಮಸೀದಿ ಮತ್ತು ಮದುವೆ ಹಾಲ್ ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...