Homeಅಂತರಾಷ್ಟ್ರೀಯಗಾಝಾ ಶಾಂತಿ ಯೋಜನೆಗೆ ಭಾಗಶಃ ಸಮ್ಮತಿ ಸೂಚಿಸಿದ ಹಮಾಸ್: ಬಾಂಬ್ ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್...

ಗಾಝಾ ಶಾಂತಿ ಯೋಜನೆಗೆ ಭಾಗಶಃ ಸಮ್ಮತಿ ಸೂಚಿಸಿದ ಹಮಾಸ್: ಬಾಂಬ್ ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್ ಸೂಚನೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಹಮಾಸ್ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ್ದು, ಗಾಝಾ ಪಟ್ಟಿಯ ಆಡಳಿತವನ್ನು ಅರಬ್ ಮತ್ತು ಇಸ್ಲಾಮಿಕ್ ಬೆಂಬಲಿತ ಪ್ಯಾಲೆಸ್ತೀನ್ ತಂತ್ರಜ್ಞರ ಸ್ವತಂತ್ರ ಸಂಸ್ಥೆಗೆ ಹಸ್ತಾಂತರಿಸಲು ಮತ್ತು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಹಮಾಸ್ ಗುಂಪು ಶಾಂತಿ ಯೋಜನೆಯ ಪ್ರಮುಖ ಅಂಶ ಮತ್ತು ಇಸ್ರೇಲ್‌ನ ಪ್ರಮುಖ ಬೇಡಿಕೆಯಾದ ಶಸ್ತ್ರಾಸ್ತ್ರ ತ್ಯಜಿಸುವ ಬಗ್ಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಮಧ್ಯವರ್ತಿಗಳ ಮೂಲಕ ತಕ್ಷಣ ಶಾಂತಿ ಮಾತುಕತೆ ನಡೆಸಲು ಸಿದ್ದ ಎಂದು ಹೇಳಿದೆ.

ಗಾಝಾ ಪಟ್ಟಿಯ ಭವಿಷ್ಯ ಮತ್ತು ಪ್ಯಾಲೆಸ್ತೀನ್ ಜನತೆಯ ಕಾನೂನುಬದ್ಧ ಹಕ್ಕುಗಳ ಕುರಿತು ಟ್ರಂಪ್ ಅವರ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾದ ಇತರ ವಿಷಯಗಳು ‘ಏಕೀಕೃತ ರಾಷ್ಟ್ರೀಯ ನಿಲುವು ಮತ್ತು ಸಂಬಂಧಿತ ಅಂತಾರಾಷ್ಟ್ರೀಯ ಕಾನೂನುಗಳು ಮತ್ತು ನಿರ್ಣಯಗಳಿಗೆ ಸಂಬಂಧಿಸಿವೆ’ ಎಂದು ಹಮಾಸ್ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಉಳಿದ ವಿಷಯಗಳನ್ನು (ಉದಾಹರಣೆಗೆ: ಶಸ್ತ್ರಾಸ್ತ್ರ ತ್ಯಜಿಸುವುದು) ಒಂದು ‘ಸಮಗ್ರ ಪ್ಯಾಲೆಸ್ತೀನ್‌ ರಾಷ್ಟ್ರೀಯ ಚೌಕಟ್ಟಿನ’ (ಎಲ್ಲಾ ಪ್ಯಾಲೆಸ್ತೀನ್‌ ಗುಂಪುಗಳನ್ನು ಒಳಗೊಂಡ ಒಂದು ದೊಡ್ಡ ಒಪ್ಪಂದ) ಮೂಲಕ ಚರ್ಚಿಸಲಾಗುವುದು. ಈ ಚೌಕಟ್ಟಿನಲ್ಲಿ ಹಮಾಸ್ ಭಾಗವಹಿಸಲಿದೆ ಮತ್ತು ಜವಾಬ್ದಾರಿಯುತವಾಗಿ ತನ್ನ ಕೊಡುಗೆಯನ್ನು ನೀಡಲಿದೆ ಎಂದು ಹೇಳಿದೆ.

ಗಾಝಾದ ಶಾಂತಿ ವಿಷಯದಲ್ಲಿ ಅಂತಾರಾಷ್ಟ್ರೀಯ ಪ್ರಯತ್ನಗಳನ್ನು, ವಿಶೇಷವಾಗಿ ಟ್ರಂಪ್ ಮುಂದಿಟ್ಟಿರುವ ಯೋಜನೆಯನ್ನು ಹಮಾಸ್ ಶ್ಲಾಘಿಸಿದೆ. ಯುದ್ಧವನ್ನು ಕೊನೆಗೊಳಿಸುವುದು, ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದು, ಗಾಝಾಕ್ಕೆ ಹೆಚ್ಚಿನ ನೆರವು ಒದಗಿಸುವುದು, ಗಾಝಾ ಪಟ್ಟಿ ಆಕ್ರಮಿಸಿಕೊಳ್ಳುವುದನ್ನು ತಿರಸ್ಕರಿಸುವುದು, ಪ್ಯಾಲೆಸ್ತೀನಿಯರನ್ನು ಗಾಝಾದಿಂದ ಬಲವಂತವಾಗಿ ಓಡಿಸುವುದನ್ನು ವಿರೋಧಿಸುವುದು ಸೇರಿದಂತೆ ಟ್ರಂಪ್ ಪ್ರಸ್ತಾಪದಲ್ಲಿ ಕೆಲವು ಮುಖ್ಯ ಅಂಶಗಳಿವೆ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರತಿಕ್ರಿಯೆಬಳಿಕ ವಿಡಿಯೋ ಹೇಳಿಕೆ ನೀಡಿರುವ ಡೊನಾಲ್ಡ್ ಟ್ರಂಪ್, “ಇದೊಂದು ‘ಅಭೂತಪೂರ್ವ’ ಬೆಳವಣಿಗೆ. ಆದರೆ, ಎಲ್ಲವನ್ನೂ ಖಚಿತವಾದ ಒಪ್ಪಂದದ ರೂಪದಲ್ಲಿ ಲಿಖಿತವಾಗಿ ದಾಖಲಿಸುವುದು ತುಂಬಾ ಮುಖ್ಯ” ಎಂದಿದ್ದಾರೆ.

ತಮ್ಮ ಟ್ರುಥ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಟ್ರಂಪ್, “ಗಾಝಾದ ಮೇಲೆ ಬಾಂಬ್ ದಾಳಿ ಮಾಡುವುದನ್ನು ತಕ್ಷಣ ನಿಲ್ಲಿಸಿ ಎಂದು ಇಸ್ರೇಲ್‌ಗೆ ಕರೆ ನೀಡಿದ್ದು, ಹಮಾಸ್ ಶಾಶ್ವತ ಶಾಂತಿಗೆ ಸಿದ್ಧವಾಗಿದೆ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಇಸ್ರೇಲ್ ಗಾಝಾ ಮೇಲಿನ ತನ್ನ ಆಕ್ರಮಣವನ್ನು ಶುಕ್ರವಾರ (ಅ.3) ಮುಂದುವರೆಸಿತ್ತು. ಗಾಝಾ ಪಟ್ಟಿಯಾದ್ಯಂತ ಶುಕ್ರವಾರ ಕನಿಷ್ಠ 72 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಅಕ್ಟೋಬರ್ 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಕನಿಷ್ಠ 66,288 ಜನರು ಸಾವನ್ನಪ್ಪಿದ್ದಾರೆ ಮತ್ತು 169,165 ಜನರು ಗಾಯಗೊಂಡಿದ್ದಾರೆ. ಇನ್ನೂ ಸಾವಿರಾರು ಜನರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ ಎಂದು ನಂಬಲಾಗಿದೆ.

ಅಕ್ಟೋಬರ್ 7,2023 ರಂದು ಇಸ್ರೇಲ್‌ನ ಟೆಲ್‌ ಅವೀವ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಒಟ್ಟು 1,139 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 200 ಜನರನ್ನು ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು. ಈ ಪೈಕಿ ಹಲವರನ್ನು ಇಸ್ರೇಲ್‌ಗೆ ಹಸ್ತಾಂತರಿಸಲಾಗಿದೆ. ಇನ್ನೂ ಕೆಲವರು ಹಮಾಸ್ ವಶದಲ್ಲಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗ್ತಿದೆ.

ಭಾರಿ ಭದ್ರತೆಯ ನಡುವೆ ಸಂಭಾಲ್‌ನಲ್ಲಿ ಮಸೀದಿ ಮತ್ತು ಮದುವೆ ಹಾಲ್ ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....