Homeಅಂತರಾಷ್ಟ್ರೀಯಗಾಝಾ ಶಾಂತಿ ಯೋಜನೆಗೆ ಭಾಗಶಃ ಸಮ್ಮತಿ ಸೂಚಿಸಿದ ಹಮಾಸ್: ಬಾಂಬ್ ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್...

ಗಾಝಾ ಶಾಂತಿ ಯೋಜನೆಗೆ ಭಾಗಶಃ ಸಮ್ಮತಿ ಸೂಚಿಸಿದ ಹಮಾಸ್: ಬಾಂಬ್ ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್ ಸೂಚನೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಹಮಾಸ್ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ್ದು, ಗಾಝಾ ಪಟ್ಟಿಯ ಆಡಳಿತವನ್ನು ಅರಬ್ ಮತ್ತು ಇಸ್ಲಾಮಿಕ್ ಬೆಂಬಲಿತ ಪ್ಯಾಲೆಸ್ತೀನ್ ತಂತ್ರಜ್ಞರ ಸ್ವತಂತ್ರ ಸಂಸ್ಥೆಗೆ ಹಸ್ತಾಂತರಿಸಲು ಮತ್ತು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಹಮಾಸ್ ಗುಂಪು ಶಾಂತಿ ಯೋಜನೆಯ ಪ್ರಮುಖ ಅಂಶ ಮತ್ತು ಇಸ್ರೇಲ್‌ನ ಪ್ರಮುಖ ಬೇಡಿಕೆಯಾದ ಶಸ್ತ್ರಾಸ್ತ್ರ ತ್ಯಜಿಸುವ ಬಗ್ಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಮಧ್ಯವರ್ತಿಗಳ ಮೂಲಕ ತಕ್ಷಣ ಶಾಂತಿ ಮಾತುಕತೆ ನಡೆಸಲು ಸಿದ್ದ ಎಂದು ಹೇಳಿದೆ.

ಗಾಝಾ ಪಟ್ಟಿಯ ಭವಿಷ್ಯ ಮತ್ತು ಪ್ಯಾಲೆಸ್ತೀನ್ ಜನತೆಯ ಕಾನೂನುಬದ್ಧ ಹಕ್ಕುಗಳ ಕುರಿತು ಟ್ರಂಪ್ ಅವರ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾದ ಇತರ ವಿಷಯಗಳು ‘ಏಕೀಕೃತ ರಾಷ್ಟ್ರೀಯ ನಿಲುವು ಮತ್ತು ಸಂಬಂಧಿತ ಅಂತಾರಾಷ್ಟ್ರೀಯ ಕಾನೂನುಗಳು ಮತ್ತು ನಿರ್ಣಯಗಳಿಗೆ ಸಂಬಂಧಿಸಿವೆ’ ಎಂದು ಹಮಾಸ್ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಉಳಿದ ವಿಷಯಗಳನ್ನು (ಉದಾಹರಣೆಗೆ: ಶಸ್ತ್ರಾಸ್ತ್ರ ತ್ಯಜಿಸುವುದು) ಒಂದು ‘ಸಮಗ್ರ ಪ್ಯಾಲೆಸ್ತೀನ್‌ ರಾಷ್ಟ್ರೀಯ ಚೌಕಟ್ಟಿನ’ (ಎಲ್ಲಾ ಪ್ಯಾಲೆಸ್ತೀನ್‌ ಗುಂಪುಗಳನ್ನು ಒಳಗೊಂಡ ಒಂದು ದೊಡ್ಡ ಒಪ್ಪಂದ) ಮೂಲಕ ಚರ್ಚಿಸಲಾಗುವುದು. ಈ ಚೌಕಟ್ಟಿನಲ್ಲಿ ಹಮಾಸ್ ಭಾಗವಹಿಸಲಿದೆ ಮತ್ತು ಜವಾಬ್ದಾರಿಯುತವಾಗಿ ತನ್ನ ಕೊಡುಗೆಯನ್ನು ನೀಡಲಿದೆ ಎಂದು ಹೇಳಿದೆ.

ಗಾಝಾದ ಶಾಂತಿ ವಿಷಯದಲ್ಲಿ ಅಂತಾರಾಷ್ಟ್ರೀಯ ಪ್ರಯತ್ನಗಳನ್ನು, ವಿಶೇಷವಾಗಿ ಟ್ರಂಪ್ ಮುಂದಿಟ್ಟಿರುವ ಯೋಜನೆಯನ್ನು ಹಮಾಸ್ ಶ್ಲಾಘಿಸಿದೆ. ಯುದ್ಧವನ್ನು ಕೊನೆಗೊಳಿಸುವುದು, ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದು, ಗಾಝಾಕ್ಕೆ ಹೆಚ್ಚಿನ ನೆರವು ಒದಗಿಸುವುದು, ಗಾಝಾ ಪಟ್ಟಿ ಆಕ್ರಮಿಸಿಕೊಳ್ಳುವುದನ್ನು ತಿರಸ್ಕರಿಸುವುದು, ಪ್ಯಾಲೆಸ್ತೀನಿಯರನ್ನು ಗಾಝಾದಿಂದ ಬಲವಂತವಾಗಿ ಓಡಿಸುವುದನ್ನು ವಿರೋಧಿಸುವುದು ಸೇರಿದಂತೆ ಟ್ರಂಪ್ ಪ್ರಸ್ತಾಪದಲ್ಲಿ ಕೆಲವು ಮುಖ್ಯ ಅಂಶಗಳಿವೆ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರತಿಕ್ರಿಯೆಬಳಿಕ ವಿಡಿಯೋ ಹೇಳಿಕೆ ನೀಡಿರುವ ಡೊನಾಲ್ಡ್ ಟ್ರಂಪ್, “ಇದೊಂದು ‘ಅಭೂತಪೂರ್ವ’ ಬೆಳವಣಿಗೆ. ಆದರೆ, ಎಲ್ಲವನ್ನೂ ಖಚಿತವಾದ ಒಪ್ಪಂದದ ರೂಪದಲ್ಲಿ ಲಿಖಿತವಾಗಿ ದಾಖಲಿಸುವುದು ತುಂಬಾ ಮುಖ್ಯ” ಎಂದಿದ್ದಾರೆ.

ತಮ್ಮ ಟ್ರುಥ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಟ್ರಂಪ್, “ಗಾಝಾದ ಮೇಲೆ ಬಾಂಬ್ ದಾಳಿ ಮಾಡುವುದನ್ನು ತಕ್ಷಣ ನಿಲ್ಲಿಸಿ ಎಂದು ಇಸ್ರೇಲ್‌ಗೆ ಕರೆ ನೀಡಿದ್ದು, ಹಮಾಸ್ ಶಾಶ್ವತ ಶಾಂತಿಗೆ ಸಿದ್ಧವಾಗಿದೆ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಇಸ್ರೇಲ್ ಗಾಝಾ ಮೇಲಿನ ತನ್ನ ಆಕ್ರಮಣವನ್ನು ಶುಕ್ರವಾರ (ಅ.3) ಮುಂದುವರೆಸಿತ್ತು. ಗಾಝಾ ಪಟ್ಟಿಯಾದ್ಯಂತ ಶುಕ್ರವಾರ ಕನಿಷ್ಠ 72 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಅಕ್ಟೋಬರ್ 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಕನಿಷ್ಠ 66,288 ಜನರು ಸಾವನ್ನಪ್ಪಿದ್ದಾರೆ ಮತ್ತು 169,165 ಜನರು ಗಾಯಗೊಂಡಿದ್ದಾರೆ. ಇನ್ನೂ ಸಾವಿರಾರು ಜನರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ ಎಂದು ನಂಬಲಾಗಿದೆ.

ಅಕ್ಟೋಬರ್ 7,2023 ರಂದು ಇಸ್ರೇಲ್‌ನ ಟೆಲ್‌ ಅವೀವ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಒಟ್ಟು 1,139 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 200 ಜನರನ್ನು ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು. ಈ ಪೈಕಿ ಹಲವರನ್ನು ಇಸ್ರೇಲ್‌ಗೆ ಹಸ್ತಾಂತರಿಸಲಾಗಿದೆ. ಇನ್ನೂ ಕೆಲವರು ಹಮಾಸ್ ವಶದಲ್ಲಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗ್ತಿದೆ.

ಭಾರಿ ಭದ್ರತೆಯ ನಡುವೆ ಸಂಭಾಲ್‌ನಲ್ಲಿ ಮಸೀದಿ ಮತ್ತು ಮದುವೆ ಹಾಲ್ ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...