Homeಅಂತರಾಷ್ಟ್ರೀಯಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ 'ವಿದಾಯ ಚಿತ್ರ' ಬಿಡುಗಡೆ

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

- Advertisement -
- Advertisement -

ಗಾಝಾ ನಗರದಲ್ಲಿ ಇಸ್ರೇಲ್ ಆಕ್ರಮಣ ತೀವ್ರಗೊಳಿಸಿರುವ ನಡುವೆ, ಹಮಾಸ್‌ನ ಸಶಸ್ತ್ರ ವಿಭಾಗವು 48 ಇಸ್ರೇಲಿ ಒತ್ತೆಯಾಳುಗಳ ‘ವಿದಾಯ’ ಚಿತ್ರವನ್ನು ಬಿಡುಗಡೆ ಮಾಡಿದೆ.

1986ರಲ್ಲಿ ಲೆಬನಾನ್‌ನಲ್ಲಿ ಕಾಣೆಯಾದ ಇಸ್ರೇಲಿ ವಾಯುಪಡೆಯ ನಾಯಕನನ್ನು ಉಲ್ಲೇಖಿಸಿ, ‘ರಾನ್ ಅರಾದ್’ ಎಂಬ ಶೀರ್ಷಿಕೆಯೊಂದಿಗೆ, ಎಲ್ಲಾ ಜೀವಂತ ಮತ್ತು ಸತ್ತ ಒತ್ತೆಯಾಳುಗಳ ಮುಖಗಳನ್ನು ತೋರಿಸುವ ಕೊಲಾಜ್ ಫೋಟೋವನ್ನು ಕಸ್ಸಮ್ ಬ್ರಿಗೇಡ್ಸ್ ಶನಿವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದೆ.

ದಕ್ಷಿಣ ಲೆಬನಾನ್ ಮೇಲಿನ ದಾಳಿಯ ಸಂದರ್ಭದಲ್ಲಿ ಇಸ್ರೇಲಿ ವಾಯುಪಡೆಯ ನಾಯಕ ಅರಾದ್ ಇದ್ದ ಎಫ್-4 ಫ್ಯಾಂಟಮ್ ವಿಮಾನವು ಬಾಂಬ್ ದಾಳಿಯಿಂದ ಪತನವಾದ ಬಳಿಕ, ಅರಾದ್ ನನ್ನು ಅಮಲ್ ಮೂವ್‌ಮೆಂಟ್ ಕೈಗೆ ಸಿಕ್ಕು ಹಿಜ್ಬುಲ್ಲಾ ಗೆ ಹಸ್ತಾಂತರ ಮಾಡಲಾಗಿತ್ತು. ಅರಾದ್ ಜೀವಿತದ ಬಗ್ಗೆ ನಿರ್ಣಾಯಕ ಪುರಾವೆ ಸಿಕ್ಕಿಲ್ಲದಿದ್ದರೂ, ಆತ ಮೃತಪಟ್ಟಿದ್ದಾರೆ ಎಂದು ನಂಬಲಾಗಿದೆ. ಹಮಾಸ್ ಇದೀಗ ಅದೇ ನಾಮಧೇಯವನ್ನು ಬಳಸಿ ಇಸ್ರೇಲಿ ಒತ್ತೆಯಾಳುಗಳ ಭವಿಷ್ಯದ ಬಗ್ಗೆ ಗಂಭೀರ ಸಂದೇಶ ಕಳುಹಿಸಿದೆ.

“ನೆತನ್ಯಾಹು ಅವರ ನಿರಾಕರಣೆ ಮತ್ತು ಝಮೀರ್ ಅವರ ಶರಣಾಗತಿಯಿಂದಾಗಿ, ಗಾಝಾ ನಗರದಲ್ಲಿ ಸೈನಿಕ ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ ವಿದಾಯ ಚಿತ್ರ” ಎಂದು ಫೋಟೋದೊಂದಿಗೆ ಹಮಾಸ್ ಪ್ರಕಟಣೆ ನೀಡಿದೆ.

ಈ ಮೂಲಕ ಹಮಾಸ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಲ್ಲಾ ಒಪ್ಪಂದಗಳನ್ನು ತಿರಸ್ಕರಿಸಿರುವುದನ್ನು ಹಾಗೂ ಸೇನಾ ಮುಖ್ಯಸ್ಥ ಇಯಾಲ್ ಝಮೀರ್ ನೇತೃತ್ವದಲ್ಲಿ ದಾಳಿಗಳು ತೀವ್ರಗೊಂಡಿರುವುದನ್ನು ಉಲ್ಲೇಖಿಸಿದೆ.

ಇಸ್ರೇಲ್ ಅಧಿಕಾರಿಗಳ ಪ್ರಕಾರ ಗಾಝಾದಲ್ಲಿ ಒತ್ತೆಯಾಳಾಗಿರುವವರಲ್ಲಿ ಸುಮಾರು 20 ಮಂದಿ ಜೀವಂತವಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಸಂಖ್ಯೆ 20ಕ್ಕಿಂತ ಕಡಿಮೆಯಾಗಿರಬಹುದು ಎಂದು ಹೇಳಿದ್ದಾರೆ.

ನೆತನ್ಯಾಹು ಮತ್ತು ಟ್ರಂಪ್ ಇಬ್ಬರೂ, ಎಲ್ಲಾ ಜೀವಂತ ಮತ್ತು ಮೃತಪಟ್ಟ ಒತ್ತೆಯಾಳುಗಳನ್ನು ಮರಳಿ ತರಲಾಗುವುದು ಹಾಗೂ ಹಮಾಸ್ ಅನ್ನು ಸಂಪೂರ್ಣವಾಗಿ ನಾಶಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ವಾಯು ಹಾಗೂ ಪದಾತಿ ದಳದ ದಾಳಿಗಳು ಬಂಧಿತರ ಜೀವಕ್ಕೆ ನೇರ ಅಪಾಯವಾಗುತ್ತದೆ ಎಂದು ಹಮಾಸ್ ಪುನಃ ಎಚ್ಚರಿಸಿದೆ. ಅವರ ಪ್ರಕಾರ, ಕೆಲ ಒತ್ತೆಯಾಳುಗಳು ಈಗಾಗಲೇ ಇಸ್ರೇಲಿನ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ‘ಒತ್ತೆಯಾಳುಗಳು ಗಾಝಾ ನಗರದ ವಿವಿಧ ಪ್ರದೇಶಗಳಲ್ಲಿದ್ದಾರೆ’ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರಕಟಣೆಯ ನಂತರ ಇಸ್ರೇಲ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಲಕ್ಷಾಂತರ ಜನರು ಮತ್ತೆ ಟೆಲ್ ಅವೀವ್ ಮತ್ತು ಇತರ ಪ್ರಮುಖ ನಗರಗಳಲ್ಲಿ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. ಯುದ್ಧವನ್ನು ಕೊನೆಗೊಳಿಸಿ, ಒತ್ತೆಯಾಳುಗಳನ್ನು ತಕ್ಷಣ ಮತ್ತು ಸುರಕ್ಷಿತವಾಗಿ ಹಿಂತಿರುಗಿಸುವಂತೆ ಒತ್ತಾಯಿಸಲಾಗುತ್ತಿದೆ.

ಈ ತಿಂಗಳ ಆರಂಭದಲ್ಲಿ, ಹಮಾಸ್ ಇಬ್ಬರು ಇಸ್ರೇಲಿ ಒತ್ತೆಯಾಳುಗಳ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಆ ದೃಶ್ಯಗಳಲ್ಲಿ ದುರ್ಬಲ ಸ್ಥಿತಿಯಲ್ಲಿದ್ದ ಬಂಧಿತರಲ್ಲಿ ಒಬ್ಬನು ತನ್ನದೇ ಸಮಾಧಿಯನ್ನು ತೋಡುತ್ತಿರುವುದಾಗಿ ತೋರಿಸಲಾಗಿತ್ತು. ಈ ದೃಶ್ಯಗಳು ಬಂಧಿತರ ಕುಟುಂಬಗಳಲ್ಲಿಯೂ, ಇಸ್ರೇಲಿ ಸರ್ಕಾರದಲ್ಲಿಯೂ ಹಾಗೂ ಅಮೆರಿಕ ಸೇರಿದಂತೆ ಇಸ್ರೇಲ್ ಮಿತ್ರ ರಾಷ್ಟ್ರಗಳಲ್ಲಿಯೂ ಆಕ್ರೋಶ ಹುಟ್ಟಿಸಿತ್ತು.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದ ನಂತರದಿಂದ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕನಿಷ್ಠ 65,208 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದಾರೆ ಮತ್ತು 1,66,271 ಮಂದಿ ಗಾಯಗೊಂಡಿದ್ದಾರೆ. ಮಾರ್ಚ್ 18ರಂದು ಇಸ್ರೇಲ್ ಹಮಾಸ್ ಜೊತೆಗಿನ ಕದನ ವಿರಾಮವನ್ನು ಮುರಿದ ನಂತರದಿಂದಲೇ 12,653 ಜನರು ಮೃತಪಟ್ಟು, 54,230 ಮಂದಿ ಗಾಯಗೊಂಡಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...