Homeಅಂತರಾಷ್ಟ್ರೀಯಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ 'ವಿದಾಯ ಚಿತ್ರ' ಬಿಡುಗಡೆ

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

- Advertisement -
- Advertisement -

ಗಾಝಾ ನಗರದಲ್ಲಿ ಇಸ್ರೇಲ್ ಆಕ್ರಮಣ ತೀವ್ರಗೊಳಿಸಿರುವ ನಡುವೆ, ಹಮಾಸ್‌ನ ಸಶಸ್ತ್ರ ವಿಭಾಗವು 48 ಇಸ್ರೇಲಿ ಒತ್ತೆಯಾಳುಗಳ ‘ವಿದಾಯ’ ಚಿತ್ರವನ್ನು ಬಿಡುಗಡೆ ಮಾಡಿದೆ.

1986ರಲ್ಲಿ ಲೆಬನಾನ್‌ನಲ್ಲಿ ಕಾಣೆಯಾದ ಇಸ್ರೇಲಿ ವಾಯುಪಡೆಯ ನಾಯಕನನ್ನು ಉಲ್ಲೇಖಿಸಿ, ‘ರಾನ್ ಅರಾದ್’ ಎಂಬ ಶೀರ್ಷಿಕೆಯೊಂದಿಗೆ, ಎಲ್ಲಾ ಜೀವಂತ ಮತ್ತು ಸತ್ತ ಒತ್ತೆಯಾಳುಗಳ ಮುಖಗಳನ್ನು ತೋರಿಸುವ ಕೊಲಾಜ್ ಫೋಟೋವನ್ನು ಕಸ್ಸಮ್ ಬ್ರಿಗೇಡ್ಸ್ ಶನಿವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದೆ.

ದಕ್ಷಿಣ ಲೆಬನಾನ್ ಮೇಲಿನ ದಾಳಿಯ ಸಂದರ್ಭದಲ್ಲಿ ಇಸ್ರೇಲಿ ವಾಯುಪಡೆಯ ನಾಯಕ ಅರಾದ್ ಇದ್ದ ಎಫ್-4 ಫ್ಯಾಂಟಮ್ ವಿಮಾನವು ಬಾಂಬ್ ದಾಳಿಯಿಂದ ಪತನವಾದ ಬಳಿಕ, ಅರಾದ್ ನನ್ನು ಅಮಲ್ ಮೂವ್‌ಮೆಂಟ್ ಕೈಗೆ ಸಿಕ್ಕು ಹಿಜ್ಬುಲ್ಲಾ ಗೆ ಹಸ್ತಾಂತರ ಮಾಡಲಾಗಿತ್ತು. ಅರಾದ್ ಜೀವಿತದ ಬಗ್ಗೆ ನಿರ್ಣಾಯಕ ಪುರಾವೆ ಸಿಕ್ಕಿಲ್ಲದಿದ್ದರೂ, ಆತ ಮೃತಪಟ್ಟಿದ್ದಾರೆ ಎಂದು ನಂಬಲಾಗಿದೆ. ಹಮಾಸ್ ಇದೀಗ ಅದೇ ನಾಮಧೇಯವನ್ನು ಬಳಸಿ ಇಸ್ರೇಲಿ ಒತ್ತೆಯಾಳುಗಳ ಭವಿಷ್ಯದ ಬಗ್ಗೆ ಗಂಭೀರ ಸಂದೇಶ ಕಳುಹಿಸಿದೆ.

“ನೆತನ್ಯಾಹು ಅವರ ನಿರಾಕರಣೆ ಮತ್ತು ಝಮೀರ್ ಅವರ ಶರಣಾಗತಿಯಿಂದಾಗಿ, ಗಾಝಾ ನಗರದಲ್ಲಿ ಸೈನಿಕ ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ ವಿದಾಯ ಚಿತ್ರ” ಎಂದು ಫೋಟೋದೊಂದಿಗೆ ಹಮಾಸ್ ಪ್ರಕಟಣೆ ನೀಡಿದೆ.

ಈ ಮೂಲಕ ಹಮಾಸ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಲ್ಲಾ ಒಪ್ಪಂದಗಳನ್ನು ತಿರಸ್ಕರಿಸಿರುವುದನ್ನು ಹಾಗೂ ಸೇನಾ ಮುಖ್ಯಸ್ಥ ಇಯಾಲ್ ಝಮೀರ್ ನೇತೃತ್ವದಲ್ಲಿ ದಾಳಿಗಳು ತೀವ್ರಗೊಂಡಿರುವುದನ್ನು ಉಲ್ಲೇಖಿಸಿದೆ.

ಇಸ್ರೇಲ್ ಅಧಿಕಾರಿಗಳ ಪ್ರಕಾರ ಗಾಝಾದಲ್ಲಿ ಒತ್ತೆಯಾಳಾಗಿರುವವರಲ್ಲಿ ಸುಮಾರು 20 ಮಂದಿ ಜೀವಂತವಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಸಂಖ್ಯೆ 20ಕ್ಕಿಂತ ಕಡಿಮೆಯಾಗಿರಬಹುದು ಎಂದು ಹೇಳಿದ್ದಾರೆ.

ನೆತನ್ಯಾಹು ಮತ್ತು ಟ್ರಂಪ್ ಇಬ್ಬರೂ, ಎಲ್ಲಾ ಜೀವಂತ ಮತ್ತು ಮೃತಪಟ್ಟ ಒತ್ತೆಯಾಳುಗಳನ್ನು ಮರಳಿ ತರಲಾಗುವುದು ಹಾಗೂ ಹಮಾಸ್ ಅನ್ನು ಸಂಪೂರ್ಣವಾಗಿ ನಾಶಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ವಾಯು ಹಾಗೂ ಪದಾತಿ ದಳದ ದಾಳಿಗಳು ಬಂಧಿತರ ಜೀವಕ್ಕೆ ನೇರ ಅಪಾಯವಾಗುತ್ತದೆ ಎಂದು ಹಮಾಸ್ ಪುನಃ ಎಚ್ಚರಿಸಿದೆ. ಅವರ ಪ್ರಕಾರ, ಕೆಲ ಒತ್ತೆಯಾಳುಗಳು ಈಗಾಗಲೇ ಇಸ್ರೇಲಿನ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ‘ಒತ್ತೆಯಾಳುಗಳು ಗಾಝಾ ನಗರದ ವಿವಿಧ ಪ್ರದೇಶಗಳಲ್ಲಿದ್ದಾರೆ’ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರಕಟಣೆಯ ನಂತರ ಇಸ್ರೇಲ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಲಕ್ಷಾಂತರ ಜನರು ಮತ್ತೆ ಟೆಲ್ ಅವೀವ್ ಮತ್ತು ಇತರ ಪ್ರಮುಖ ನಗರಗಳಲ್ಲಿ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. ಯುದ್ಧವನ್ನು ಕೊನೆಗೊಳಿಸಿ, ಒತ್ತೆಯಾಳುಗಳನ್ನು ತಕ್ಷಣ ಮತ್ತು ಸುರಕ್ಷಿತವಾಗಿ ಹಿಂತಿರುಗಿಸುವಂತೆ ಒತ್ತಾಯಿಸಲಾಗುತ್ತಿದೆ.

ಈ ತಿಂಗಳ ಆರಂಭದಲ್ಲಿ, ಹಮಾಸ್ ಇಬ್ಬರು ಇಸ್ರೇಲಿ ಒತ್ತೆಯಾಳುಗಳ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಆ ದೃಶ್ಯಗಳಲ್ಲಿ ದುರ್ಬಲ ಸ್ಥಿತಿಯಲ್ಲಿದ್ದ ಬಂಧಿತರಲ್ಲಿ ಒಬ್ಬನು ತನ್ನದೇ ಸಮಾಧಿಯನ್ನು ತೋಡುತ್ತಿರುವುದಾಗಿ ತೋರಿಸಲಾಗಿತ್ತು. ಈ ದೃಶ್ಯಗಳು ಬಂಧಿತರ ಕುಟುಂಬಗಳಲ್ಲಿಯೂ, ಇಸ್ರೇಲಿ ಸರ್ಕಾರದಲ್ಲಿಯೂ ಹಾಗೂ ಅಮೆರಿಕ ಸೇರಿದಂತೆ ಇಸ್ರೇಲ್ ಮಿತ್ರ ರಾಷ್ಟ್ರಗಳಲ್ಲಿಯೂ ಆಕ್ರೋಶ ಹುಟ್ಟಿಸಿತ್ತು.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದ ನಂತರದಿಂದ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕನಿಷ್ಠ 65,208 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದಾರೆ ಮತ್ತು 1,66,271 ಮಂದಿ ಗಾಯಗೊಂಡಿದ್ದಾರೆ. ಮಾರ್ಚ್ 18ರಂದು ಇಸ್ರೇಲ್ ಹಮಾಸ್ ಜೊತೆಗಿನ ಕದನ ವಿರಾಮವನ್ನು ಮುರಿದ ನಂತರದಿಂದಲೇ 12,653 ಜನರು ಮೃತಪಟ್ಟು, 54,230 ಮಂದಿ ಗಾಯಗೊಂಡಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...