Homeಅಂತರಾಷ್ಟ್ರೀಯಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ 'ವಿದಾಯ ಚಿತ್ರ' ಬಿಡುಗಡೆ

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

- Advertisement -
- Advertisement -

ಗಾಝಾ ನಗರದಲ್ಲಿ ಇಸ್ರೇಲ್ ಆಕ್ರಮಣ ತೀವ್ರಗೊಳಿಸಿರುವ ನಡುವೆ, ಹಮಾಸ್‌ನ ಸಶಸ್ತ್ರ ವಿಭಾಗವು 48 ಇಸ್ರೇಲಿ ಒತ್ತೆಯಾಳುಗಳ ‘ವಿದಾಯ’ ಚಿತ್ರವನ್ನು ಬಿಡುಗಡೆ ಮಾಡಿದೆ.

1986ರಲ್ಲಿ ಲೆಬನಾನ್‌ನಲ್ಲಿ ಕಾಣೆಯಾದ ಇಸ್ರೇಲಿ ವಾಯುಪಡೆಯ ನಾಯಕನನ್ನು ಉಲ್ಲೇಖಿಸಿ, ‘ರಾನ್ ಅರಾದ್’ ಎಂಬ ಶೀರ್ಷಿಕೆಯೊಂದಿಗೆ, ಎಲ್ಲಾ ಜೀವಂತ ಮತ್ತು ಸತ್ತ ಒತ್ತೆಯಾಳುಗಳ ಮುಖಗಳನ್ನು ತೋರಿಸುವ ಕೊಲಾಜ್ ಫೋಟೋವನ್ನು ಕಸ್ಸಮ್ ಬ್ರಿಗೇಡ್ಸ್ ಶನಿವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದೆ.

ದಕ್ಷಿಣ ಲೆಬನಾನ್ ಮೇಲಿನ ದಾಳಿಯ ಸಂದರ್ಭದಲ್ಲಿ ಇಸ್ರೇಲಿ ವಾಯುಪಡೆಯ ನಾಯಕ ಅರಾದ್ ಇದ್ದ ಎಫ್-4 ಫ್ಯಾಂಟಮ್ ವಿಮಾನವು ಬಾಂಬ್ ದಾಳಿಯಿಂದ ಪತನವಾದ ಬಳಿಕ, ಅರಾದ್ ನನ್ನು ಅಮಲ್ ಮೂವ್‌ಮೆಂಟ್ ಕೈಗೆ ಸಿಕ್ಕು ಹಿಜ್ಬುಲ್ಲಾ ಗೆ ಹಸ್ತಾಂತರ ಮಾಡಲಾಗಿತ್ತು. ಅರಾದ್ ಜೀವಿತದ ಬಗ್ಗೆ ನಿರ್ಣಾಯಕ ಪುರಾವೆ ಸಿಕ್ಕಿಲ್ಲದಿದ್ದರೂ, ಆತ ಮೃತಪಟ್ಟಿದ್ದಾರೆ ಎಂದು ನಂಬಲಾಗಿದೆ. ಹಮಾಸ್ ಇದೀಗ ಅದೇ ನಾಮಧೇಯವನ್ನು ಬಳಸಿ ಇಸ್ರೇಲಿ ಒತ್ತೆಯಾಳುಗಳ ಭವಿಷ್ಯದ ಬಗ್ಗೆ ಗಂಭೀರ ಸಂದೇಶ ಕಳುಹಿಸಿದೆ.

“ನೆತನ್ಯಾಹು ಅವರ ನಿರಾಕರಣೆ ಮತ್ತು ಝಮೀರ್ ಅವರ ಶರಣಾಗತಿಯಿಂದಾಗಿ, ಗಾಝಾ ನಗರದಲ್ಲಿ ಸೈನಿಕ ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ ವಿದಾಯ ಚಿತ್ರ” ಎಂದು ಫೋಟೋದೊಂದಿಗೆ ಹಮಾಸ್ ಪ್ರಕಟಣೆ ನೀಡಿದೆ.

ಈ ಮೂಲಕ ಹಮಾಸ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಲ್ಲಾ ಒಪ್ಪಂದಗಳನ್ನು ತಿರಸ್ಕರಿಸಿರುವುದನ್ನು ಹಾಗೂ ಸೇನಾ ಮುಖ್ಯಸ್ಥ ಇಯಾಲ್ ಝಮೀರ್ ನೇತೃತ್ವದಲ್ಲಿ ದಾಳಿಗಳು ತೀವ್ರಗೊಂಡಿರುವುದನ್ನು ಉಲ್ಲೇಖಿಸಿದೆ.

ಇಸ್ರೇಲ್ ಅಧಿಕಾರಿಗಳ ಪ್ರಕಾರ ಗಾಝಾದಲ್ಲಿ ಒತ್ತೆಯಾಳಾಗಿರುವವರಲ್ಲಿ ಸುಮಾರು 20 ಮಂದಿ ಜೀವಂತವಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಸಂಖ್ಯೆ 20ಕ್ಕಿಂತ ಕಡಿಮೆಯಾಗಿರಬಹುದು ಎಂದು ಹೇಳಿದ್ದಾರೆ.

ನೆತನ್ಯಾಹು ಮತ್ತು ಟ್ರಂಪ್ ಇಬ್ಬರೂ, ಎಲ್ಲಾ ಜೀವಂತ ಮತ್ತು ಮೃತಪಟ್ಟ ಒತ್ತೆಯಾಳುಗಳನ್ನು ಮರಳಿ ತರಲಾಗುವುದು ಹಾಗೂ ಹಮಾಸ್ ಅನ್ನು ಸಂಪೂರ್ಣವಾಗಿ ನಾಶಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ವಾಯು ಹಾಗೂ ಪದಾತಿ ದಳದ ದಾಳಿಗಳು ಬಂಧಿತರ ಜೀವಕ್ಕೆ ನೇರ ಅಪಾಯವಾಗುತ್ತದೆ ಎಂದು ಹಮಾಸ್ ಪುನಃ ಎಚ್ಚರಿಸಿದೆ. ಅವರ ಪ್ರಕಾರ, ಕೆಲ ಒತ್ತೆಯಾಳುಗಳು ಈಗಾಗಲೇ ಇಸ್ರೇಲಿನ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ‘ಒತ್ತೆಯಾಳುಗಳು ಗಾಝಾ ನಗರದ ವಿವಿಧ ಪ್ರದೇಶಗಳಲ್ಲಿದ್ದಾರೆ’ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರಕಟಣೆಯ ನಂತರ ಇಸ್ರೇಲ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಲಕ್ಷಾಂತರ ಜನರು ಮತ್ತೆ ಟೆಲ್ ಅವೀವ್ ಮತ್ತು ಇತರ ಪ್ರಮುಖ ನಗರಗಳಲ್ಲಿ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. ಯುದ್ಧವನ್ನು ಕೊನೆಗೊಳಿಸಿ, ಒತ್ತೆಯಾಳುಗಳನ್ನು ತಕ್ಷಣ ಮತ್ತು ಸುರಕ್ಷಿತವಾಗಿ ಹಿಂತಿರುಗಿಸುವಂತೆ ಒತ್ತಾಯಿಸಲಾಗುತ್ತಿದೆ.

ಈ ತಿಂಗಳ ಆರಂಭದಲ್ಲಿ, ಹಮಾಸ್ ಇಬ್ಬರು ಇಸ್ರೇಲಿ ಒತ್ತೆಯಾಳುಗಳ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಆ ದೃಶ್ಯಗಳಲ್ಲಿ ದುರ್ಬಲ ಸ್ಥಿತಿಯಲ್ಲಿದ್ದ ಬಂಧಿತರಲ್ಲಿ ಒಬ್ಬನು ತನ್ನದೇ ಸಮಾಧಿಯನ್ನು ತೋಡುತ್ತಿರುವುದಾಗಿ ತೋರಿಸಲಾಗಿತ್ತು. ಈ ದೃಶ್ಯಗಳು ಬಂಧಿತರ ಕುಟುಂಬಗಳಲ್ಲಿಯೂ, ಇಸ್ರೇಲಿ ಸರ್ಕಾರದಲ್ಲಿಯೂ ಹಾಗೂ ಅಮೆರಿಕ ಸೇರಿದಂತೆ ಇಸ್ರೇಲ್ ಮಿತ್ರ ರಾಷ್ಟ್ರಗಳಲ್ಲಿಯೂ ಆಕ್ರೋಶ ಹುಟ್ಟಿಸಿತ್ತು.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದ ನಂತರದಿಂದ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕನಿಷ್ಠ 65,208 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದಾರೆ ಮತ್ತು 1,66,271 ಮಂದಿ ಗಾಯಗೊಂಡಿದ್ದಾರೆ. ಮಾರ್ಚ್ 18ರಂದು ಇಸ್ರೇಲ್ ಹಮಾಸ್ ಜೊತೆಗಿನ ಕದನ ವಿರಾಮವನ್ನು ಮುರಿದ ನಂತರದಿಂದಲೇ 12,653 ಜನರು ಮೃತಪಟ್ಟು, 54,230 ಮಂದಿ ಗಾಯಗೊಂಡಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...